ಅಲ್-ಬಕರಾ · 111/286
ಅನುವಾದ ಉಚ್ಚಾರಣೆ — ಅಲ್-ಬಕರಾ
وَقَالُوا لَن يَدْخُلَ الْجَنَّةَ إِلَّا مَن كَانَ هُودًا أَوْ نَصَارَىٰ ۗ تِلْكَ أَمَانِيُّهُمْ ۗ قُلْ هَاتُوا بُرْهَانَكُمْ إِن كُنتُمْ صَادِقِينَ ۝١١١
Wa qaaloo lai yadkhulal jannata illaa man kaana Hoodan aw Nasaaraa; tilka ammniyyuhum; qul haatoo burhaa nakum in kuntum saadiqeen
📖 ಕನ್ನಡ ಅರ್ಥ
ಯಹೂದಿಯಾದವನ ಅಥವಾ ಕ್ರೈಸ್ತನಾದವನ ಹೊರತು ಬೇರಾರೂ ಸ್ವರ್ಗವನ್ನು ಪ್ರವೇಶಿಸಲಾರನೆಂದು ಅವರು ಹೇಳುತ್ತಾರೆ. ಅದು ಕೇವಲ ಅವರ ಆಶೆಯಾಗಿದೆ. ‘‘ನೀವು ಸತ್ಯವಂತರಾಗಿದ್ದರೆ ನಿಮ್ಮ ಪುರಾವೆಯನ್ನು ತನ್ನಿರಿ’’ ಎಂದು ಅವರೊಡನೆ ಹೇಳಿರಿ
🎧 ಆಲಿಸಿ

📜 ಆಯತ್ 109-113 — ಅಲ್-ಬಕರಾ

109وَدَّ كَثِيرٌ مِّنْ أَهْلِ الْكِتَابِ لَوْ يَرُدُّونَكُم مِّن بَعْدِ إِيمَانِكُمْ كُفَّارًا حَسَدًا مِّنْ عِندِ أَنفُسِهِم مِّن بَعْدِ مَا تَبَيَّنَ لَهُمُ الْحَقُّ ۖ فَاعْفُوا وَاصْفَحُوا حَتَّىٰ يَأْتِيَ اللَّهُ بِأَمْرِهِ ۗ إِنَّ اللَّهَ عَلَىٰ كُلِّ شَيْءٍ قَدِيرٌ
ಗ್ರಂಥದವರಲ್ಲಿ ಹೆಚ್ಚಿನವರು, ನೀವು ವಿಶ್ವಾಸಿಗಳಾದ ಬಳಿಕ ನಿಮ್ಮನ್ನು ಮತ್ತೆ ಧಿಕ್ಕಾರದೆಡೆಗೆ ಮರಳಿಸಬಯಸಿದ್ದರು. ಸತ್ಯವು ಅವರಿಗೆ ಸ್ಪಷ್ಟವಾದ ಬಳಿಕವೂ ಅವರು ತಮ್ಮೊಳಗಿನ ಅಸೂಯೆಯಿಂದಾಗಿ (ಹೀಗೆ ಮಾಡುತ್ತಿದ್ದಾರೆ). ನೀವು ಮಾತ್ರ, ಈ ಕುರಿತು ಅಲ್ಲಾಹನು ತನ್ನ ಆದೇಶವನ್ನು ಪ್ರಕಟಿಸುವ ತನಕವೂ (ಅವರನ್ನು) ಕ್ಷಮಿಸುತ್ತಲೂ (ಅವರ ತಪ್ಪನ್ನು) ಕಡೆಗಣಿಸುತ್ತಲೂ ಇರಿ. ಅಲ್ಲಾಹನು ಖಂಡಿತ ಎಲ್ಲವನ್ನು ಮಾಡಬಲ್ಲವನಾಗಿದ್ದಾನೆ
110وَأَقِيمُوا الصَّلَاةَ وَآتُوا الزَّكَاةَ ۚ وَمَا تُقَدِّمُوا لِأَنفُسِكُم مِّنْ خَيْرٍ تَجِدُوهُ عِندَ اللَّهِ ۗ إِنَّ اللَّهَ بِمَا تَعْمَلُونَ بَصِيرٌ
ಮತ್ತು ನೀವು ನಮಾಝನ್ನು ಪಾಲಿಸಿರಿ ಮತ್ತು ಝಕಾತ್‌ಅನ್ನು ಪಾವತಿಸಿರಿ. ನೀವು ನಿಮಗಾಗಿ ಮುಂದೆ ಕಳಿಸುವ ಎಲ್ಲ ಸತ್ಕಾರ್ಯಗಳನ್ನು ಅಲ್ಲಾಹನ ಬಳಿ ಕಾಣುವಿರಿ. ನೀವು ಮಾಡುತ್ತಿರುವುದನ್ನೆಲ್ಲಾ ಅಲ್ಲಾಹನು ಖಂಡಿತ ನೋಡುತ್ತಿದ್ದಾನೆ
111وَقَالُوا لَن يَدْخُلَ الْجَنَّةَ إِلَّا مَن كَانَ هُودًا أَوْ نَصَارَىٰ ۗ تِلْكَ أَمَانِيُّهُمْ ۗ قُلْ هَاتُوا بُرْهَانَكُمْ إِن كُنتُمْ صَادِقِينَ
ಯಹೂದಿಯಾದವನ ಅಥವಾ ಕ್ರೈಸ್ತನಾದವನ ಹೊರತು ಬೇರಾರೂ ಸ್ವರ್ಗವನ್ನು ಪ್ರವೇಶಿಸಲಾರನೆಂದು ಅವರು ಹೇಳುತ್ತಾರೆ. ಅದು ಕೇವಲ ಅವರ ಆಶೆಯಾಗಿದೆ. ‘‘ನೀವು ಸತ್ಯವಂತರಾಗಿದ್ದರೆ ನಿಮ್ಮ ಪುರಾವೆಯನ್ನು ತನ್ನಿರಿ’’ ಎಂದು ಅವರೊಡನೆ ಹೇಳಿರಿ
112بَلَىٰ مَنْ أَسْلَمَ وَجْهَهُ لِلَّهِ وَهُوَ مُحْسِنٌ فَلَهُ أَجْرُهُ عِندَ رَبِّهِ وَلَا خَوْفٌ عَلَيْهِمْ وَلَا هُمْ يَحْزَنُونَ
ನಿಜವಾಗಿ, ತನ್ನನ್ನು ಅಲ್ಲಾಹನಿಗೆ ಶರಣಾಗಿಸಿಕೊಂಡು, ಸತ್ಕರ್ಮಗಳನ್ನು ಮಾಡುತ್ತಲಿದ್ದವನ ಪ್ರತಿಫಲವು ಅವನ ಒಡೆಯನ ಬಳಿ ಇದೆ. ಅಂಥವರಿಗೆ ಯಾವ ಭಯವೂ ಇರದು. ಯಾವ ವ್ಯಥೆಯೂ ಇರದು
113وَقَالَتِ الْيَهُودُ لَيْسَتِ النَّصَارَىٰ عَلَىٰ شَيْءٍ وَقَالَتِ النَّصَارَىٰ لَيْسَتِ الْيَهُودُ عَلَىٰ شَيْءٍ وَهُمْ يَتْلُونَ الْكِتَابَ ۗ كَذَٰلِكَ قَالَ الَّذِينَ لَا يَعْلَمُونَ مِثْلَ قَوْلِهِمْ ۚ فَاللَّهُ يَحْكُمُ بَيْنَهُمْ يَوْمَ الْقِيَامَةِ فِيمَا كَانُوا فِيهِ يَخْتَلِفُونَ
ಕ್ರೈಸ್ತರ ಬಳಿ ಏನೂ (ಯಾವ ಸತ್ಯವೂ) ಇಲ್ಲವೆಂದು ಯಹೂದಿಗಳು ಹೇಳುತ್ತಾರೆ ಮತ್ತು ಯಹೂದಿಗಳ ಬಳಿ ಏನೂ ಇಲ್ಲವೆಂದು ಕ್ರೈಸ್ತರು ಹೇಳುತ್ತಾರೆ. ಹಾಗೆಂದು, ಅವರು (ಇಬ್ಬರೂ) ಗ್ರಂಥವನ್ನು ಓದುವವರಾಗಿದ್ದಾರೆ. ತಿಳುವಳಿಕೆ ಇಲ್ಲದವರೂ ಇದೇ ರೀತಿ, ಅವರು ಆಡುತ್ತಿರುವಂತಹ ಮಾತನ್ನೇ ಆಡುತ್ತಾರೆ. ಅವರು ಭಿನ್ನತೆಗೊಳಗಾಗಿದ್ದ ವಿಷಯಗಳಲ್ಲಿ ಪುನರುತ್ಥಾನ ದಿನ, ಅಲ್ಲಾಹನೇ ಅವರ ನಡುವೆ ತೀರ್ಪು ನೀಡುವನು
ಅಲ್-ಬಕರಾಕುರಾನ್ ಸೂಚಿ
286ಆಯತ್
MedinanRevelation
111ಆಯತ್

ಅನುವಾದ — ಅಲ್-ಬಕರಾ 111

ಸೂರಾ ಅಲ್-ಬಕರಾ ಆಯತ್ 111 - ಓದಿ, ಆಲಿಸಿ, ಅನುವಾದ, ಕನ್ನಡ : ಯಹೂದಿಯಾದವನ ಅಥವಾ ಕ್ರೈಸ್ತನಾದವನ ಹೊರತು ಬೇರಾರೂ ಸ್ವರ್ಗವನ್ನು ಪ್ರವೇಶಿಸಲಾರನೆಂದು ಅವರು ಹೇಳುತ್ತಾರೆ. ಅದು…

ಸೂರಾ ಆಯತ್ 111/286 — ಅಲ್-ಬಕರಾ البقرة (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಅಲ್-ಬಕರಾ ಆಲಿಸಿ, ಅಲ್-ಬಕರಾ ಅನುವಾದ, ಅಲ್-ಬಕರಾ mp3, ಅಲ್-ಬಕರಾ pdf. ಆಯತ್ 109–113. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Tuesday, August 18, 2026

Don't forget us in your sincere prayers