ಅಲ್-ಬಕರಾ · 213/286
ಅನುವಾದ ಉಚ್ಚಾರಣೆ — ಅಲ್-ಬಕರಾ
كَانَ النَّاسُ أُمَّةً وَاحِدَةً فَبَعَثَ اللَّهُ النَّبِيِّينَ مُبَشِّرِينَ وَمُنذِرِينَ وَأَنزَلَ مَعَهُمُ الْكِتَابَ بِالْحَقِّ لِيَحْكُمَ بَيْنَ النَّاسِ فِيمَا اخْتَلَفُوا فِيهِ ۚ وَمَا اخْتَلَفَ فِيهِ إِلَّا الَّذِينَ أُوتُوهُ مِن بَعْدِ مَا جَاءَتْهُمُ الْبَيِّنَاتُ بَغْيًا بَيْنَهُمْ ۖ فَهَدَى اللَّهُ الَّذِينَ آمَنُوا لِمَا اخْتَلَفُوا فِيهِ مِنَ الْحَقِّ بِإِذْنِهِ ۗ وَاللَّهُ يَهْدِي مَن يَشَاءُ إِلَىٰ صِرَاطٍ مُّسْتَقِيمٍ ۝٢١٣
Kaanan naasu ummatanw waahidatan fab`asal laahun Nabiyyeena mubashshireena wa munzireena wa anzala ma`ahumul kitaaba bilhaqqi liyahkuma bainan naasi feemakh talafoo feeh; wa makh talafa feehi `illallazeena ootoohu mim ba`di maa jaaa`athumul baiyinaatu baghyam bainahm fahadal laahul lazeena aamanoo limakh talafoo feehi minal haqqi bi iznih; wallaahu yahdee mai yashaaa`u ilaa Siraatim Mustaqeem
📖 ಕನ್ನಡ ಅರ್ಥ
(ಮೂಲತಃ) ಜನರೆಲ್ಲಾ ಒಂದೇ ಸಮುದಾಯವಾಗಿದ್ದರು. ತರುವಾಯ ಅಲ್ಲಾಹನು, ಶುಭವಾರ್ತೆ ನೀಡುವ ಹಾಗೂ ಎಚ್ಚರಿಸುವ ದೂತರನ್ನು ಕಳುಹಿಸಿದನು ಮತ್ತು ಜನರು ಪರಸ್ಪರ ಭಿನ್ನಾಭಿಪ್ರಾಯ ತಾಳಿದ್ದ ವಿಷಯಗಳಲ್ಲಿ ಅವರ ನಡುವೆ ನ್ಯಾಯ ತೀರ್ಮಾನ ಮಾಡಲೆಂದು ಅವರ ಜೊತೆ, ಸತ್ಯವಿರುವ ಗ್ರಂಥವನ್ನಿಳಿಸಿದನು. ಆದರೆ ಯಾರಿಗೆ ಗ್ರಂಥ ನೀಡಲಾಗಿತ್ತೋ ಅದೇ ಜನರು, ತಮ್ಮ ಬಳಿಗೆ ಸ್ಪಷ್ಟ ಪುರಾವೆಗಳು ಬಂದ ಬಳಿಕ, ಪರಸ್ಪರ ವಿದ್ವೇಷದ ಕಾರಣ, ಆ ಕುರಿತು ಭಿನ್ನಾಭಿಪ್ರಾಯ ತಾಳಿದರು. ಕೊನೆಗೆ ಅಲ್ಲಾಹನು ವಿಶ್ವಾಸಿಗಳಿಗೆ, ಸತ್ಯದ ಕುರಿತಾಗಿ ಅವರು ಭಿನ್ನಾಭಿಪ್ರಾಯ ತಾಳಿದ್ದ ವಿಷಯಗಳಲ್ಲಿ ತನ್ನಿಚ್ಛೆಯಿಂದ ಮಾರ್ಗದರ್ಶನ ನೀಡಿದನು. ಅಲ್ಲಾಹನು ತಾನಿಚ್ಛಿಸಿದವರಿಗೆ, ನೇರ ಮಾರ್ಗವನ್ನು ತೋರಿಸಿ ಕೊಡುತ್ತಾನೆ

🎧 ಆಲಿಸಿ


📜 ಆಯತ್ 211-215 — ಅಲ್-ಬಕರಾ

211سَلْ بَنِي إِسْرَائِيلَ كَمْ آتَيْنَاهُم مِّنْ آيَةٍ بَيِّنَةٍ ۗ وَمَن يُبَدِّلْ نِعْمَةَ اللَّهِ مِن بَعْدِ مَا جَاءَتْهُ فَإِنَّ اللَّهَ شَدِيدُ الْعِقَابِ
ನಾವು ಅವರಿಗೆ ಅದೆಷ್ಟು ಸ್ಪಷ್ಟ ಪುರಾವೆಗಳನ್ನು ಒದಗಿಸಿದ್ದೆವೆಂದು, ಇಸ್ರಾಈಲರ ಸಂತತಿಗಳೊಂದಿಗೆ ನೀವು ವಿಚಾರಿಸಿರಿ. ನಿಜವಾಗಿ, ಅಲ್ಲಾಹನ ಅನುಗ್ರಹವು ತನ್ನ ಬಳಿಗೆ ಬಂದ ಬಳಿಕ ಅದನ್ನು (ಶಾಪವಾಗಿ) ಪರಿವರ್ತಿಸಿಕೊಂಡವನು (ತಿಳಿದಿರಲಿ); ಖಂಡಿತವಾಗಿಯೂ ಅಲ್ಲಾಹನು ಬಹಳ ಕಠಿಣ ಶಿಕ್ಷೆ ನೀಡುವವನಾಗಿದ್ದಾನೆ
212زُيِّنَ لِلَّذِينَ كَفَرُوا الْحَيَاةُ الدُّنْيَا وَيَسْخَرُونَ مِنَ الَّذِينَ آمَنُوا ۘ وَالَّذِينَ اتَّقَوْا فَوْقَهُمْ يَوْمَ الْقِيَامَةِ ۗ وَاللَّهُ يَرْزُقُ مَن يَشَاءُ بِغَيْرِ حِسَابٍ
ಧಿಕ್ಕಾರಿಗಳಿಗೆ ಇಹಲೋಕದ ಬದುಕನ್ನು ಚಂದಗಾಣಿಸಲಾಗಿದೆ. ಅವರು ವಿಶ್ವಾಸಿಗಳನ್ನು ಗೇಲಿ ಮಾಡುತ್ತಾರೆ. ನಿಜವಾಗಿ, ಪುನರುತ್ಥಾನದ ದಿನ ಧರ್ಮನಿಷ್ಠರು ಅವರಿಗಿಂತ ಮೇಲಿರುವರು. ಅಲ್ಲಾಹನು ತಾನಿಚ್ಛಿಸಿದವರಿಗೆ ಎಣಿಸಲಾಗದಷ್ಟು ಅನುಗ್ರಹವನ್ನು ನೀಡುತ್ತಾನೆ
213كَانَ النَّاسُ أُمَّةً وَاحِدَةً فَبَعَثَ اللَّهُ النَّبِيِّينَ مُبَشِّرِينَ وَمُنذِرِينَ وَأَنزَلَ مَعَهُمُ الْكِتَابَ بِالْحَقِّ لِيَحْكُمَ بَيْنَ النَّاسِ فِيمَا اخْتَلَفُوا فِيهِ ۚ وَمَا اخْتَلَفَ فِيهِ إِلَّا الَّذِينَ أُوتُوهُ مِن بَعْدِ مَا جَاءَتْهُمُ الْبَيِّنَاتُ بَغْيًا بَيْنَهُمْ ۖ فَهَدَى اللَّهُ الَّذِينَ آمَنُوا لِمَا اخْتَلَفُوا فِيهِ مِنَ الْحَقِّ بِإِذْنِهِ ۗ وَاللَّهُ يَهْدِي مَن يَشَاءُ إِلَىٰ صِرَاطٍ مُّسْتَقِيمٍ
(ಮೂಲತಃ) ಜನರೆಲ್ಲಾ ಒಂದೇ ಸಮುದಾಯವಾಗಿದ್ದರು. ತರುವಾಯ ಅಲ್ಲಾಹನು, ಶುಭವಾರ್ತೆ ನೀಡುವ ಹಾಗೂ ಎಚ್ಚರಿಸುವ ದೂತರನ್ನು ಕಳುಹಿಸಿದನು ಮತ್ತು ಜನರು ಪರಸ್ಪರ ಭಿನ್ನಾಭಿಪ್ರಾಯ ತಾಳಿದ್ದ ವಿಷಯಗಳಲ್ಲಿ ಅವರ ನಡುವೆ ನ್ಯಾಯ ತೀರ್ಮಾನ ಮಾಡಲೆಂದು ಅವರ ಜೊತೆ, ಸತ್ಯವಿರುವ ಗ್ರಂಥವನ್ನಿಳಿಸಿದನು. ಆದರೆ ಯಾರಿಗೆ ಗ್ರಂಥ ನೀಡಲಾಗಿತ್ತೋ ಅದೇ ಜನರು, ತಮ್ಮ ಬಳಿಗೆ ಸ್ಪಷ್ಟ ಪುರಾವೆಗಳು ಬಂದ ಬಳಿಕ, ಪರಸ್ಪರ ವಿದ್ವೇಷದ ಕಾರಣ, ಆ ಕುರಿತು ಭಿನ್ನಾಭಿಪ್ರಾಯ ತಾಳಿದರು. ಕೊನೆಗೆ ಅಲ್ಲಾಹನು ವಿಶ್ವಾಸಿಗಳಿಗೆ, ಸತ್ಯದ ಕುರಿತಾಗಿ ಅವರು ಭಿನ್ನಾಭಿಪ್ರಾಯ ತಾಳಿದ್ದ ವಿಷಯಗಳಲ್ಲಿ ತನ್ನಿಚ್ಛೆಯಿಂದ ಮಾರ್ಗದರ್ಶನ ನೀಡಿದನು. ಅಲ್ಲಾಹನು ತಾನಿಚ್ಛಿಸಿದವರಿಗೆ, ನೇರ ಮಾರ್ಗವನ್ನು ತೋರಿಸಿ ಕೊಡುತ್ತಾನೆ
214أَمْ حَسِبْتُمْ أَن تَدْخُلُوا الْجَنَّةَ وَلَمَّا يَأْتِكُم مَّثَلُ الَّذِينَ خَلَوْا مِن قَبْلِكُم ۖ مَّسَّتْهُمُ الْبَأْسَاءُ وَالضَّرَّاءُ وَزُلْزِلُوا حَتَّىٰ يَقُولَ الرَّسُولُ وَالَّذِينَ آمَنُوا مَعَهُ مَتَىٰ نَصْرُ اللَّهِ ۗ أَلَا إِنَّ نَصْرَ اللَّهِ قَرِيبٌ
ನೀವೇನು (ಸುಲಭವಾಗಿ) ನೀವು ಸ್ವರ್ಗ ಪ್ರವೇಶಿಸುವಿರೆಂದು ಕೊಂಡಿರುವಿರಾ? ನಿಜವಾಗಿ, ನಿಮಗಿಂತ ಹಿಂದೆ ಗತಿಸಿದವರಿಗೆ ಎದುರಾಗಿದ್ದ ಸನ್ನಿವೇಶಗಳು ನಿಮಗಿನ್ನೂ ಎದುರಾಗಿಲ್ಲ. ಅವರು ತೀವ್ರ ಸಂಕಷ್ಟಗಳನ್ನು ಹಾಗೂ ಹಿಂಸೆಯನ್ನು ಅನುಭವಿಸಿದ್ದರು ಮತ್ತು ಅವರನ್ನು ಅದೆಷ್ಟು ನರಳಿಸಲಾಗಿತ್ತೆಂದರೆ, (ಅಂದಿನ) ದೇವದೂತರು ಹಾಗೂ ಅವರ ಜೊತೆಗಿದ್ದ ವಿಶ್ವಾಸಿಗಳು, ‘‘ಯಾವಾಗ ಬಂದೀತು ಅಲ್ಲಾಹನ ಸಹಾಯ?’’ ಎನ್ನುವಂತಾಗಿತ್ತು. ತಿಳಿದಿರಲಿ, ಖಂಡಿತವಾಗಿಯೂ ಅಲ್ಲಾಹನ ಸಹಾಯವು ಹತ್ತಿರವೇ ಇದೆ
215يَسْأَلُونَكَ مَاذَا يُنفِقُونَ ۖ قُلْ مَا أَنفَقْتُم مِّنْ خَيْرٍ فَلِلْوَالِدَيْنِ وَالْأَقْرَبِينَ وَالْيَتَامَىٰ وَالْمَسَاكِينِ وَابْنِ السَّبِيلِ ۗ وَمَا تَفْعَلُوا مِنْ خَيْرٍ فَإِنَّ اللَّهَ بِهِ عَلِيمٌ
(ದೂತರೇ,) ಅವರು ನಿಮ್ಮೊಡನೆ, ತಾವು ಏನನ್ನು ಖರ್ಚು ಮಾಡಬೇಕು ಎಂದು ವಿಚಾರಿಸುತ್ತಾರೆ. ಹೇಳಿರಿ; ನೀವು ಖರ್ಚು ಮಾಡುವ ಸಂಪತ್ತು ತಂದೆ ತಾಯಿಗೆ, ಬಂಧುಗಳಿಗೆ, ಅನಾಥರಿಗೆ ಹಾಗೂ ಬಡವರಿಗೆ ಮತ್ತು ಪ್ರಯಾಣಿಕರಿಗೆ (ತಲುಪಲಿ). ನೀವು ಮಾಡುವ ಪ್ರತಿಯೊಂದು ಸತ್ಕಾರ್ಯವನ್ನೂ ಅಲ್ಲಾಹನು ಖಂಡಿತ ಅರಿತಿರುತ್ತಾನೆ
ಅಲ್-ಬಕರಾಕುರಾನ್ ಸೂಚಿ
286ಆಯತ್
MedinanRevelation
213ಆಯತ್

ಅನುವಾದ — ಅಲ್-ಬಕರಾ 213

ಸೂರಾ ಅಲ್-ಬಕರಾ ಆಯತ್ 213 - ಓದಿ, ಆಲಿಸಿ, ಅನುವಾದ, ಕನ್ನಡ : (ಮೂಲತಃ) ಜನರೆಲ್ಲಾ ಒಂದೇ ಸಮುದಾಯವಾಗಿದ್ದರು. ತರುವಾಯ ಅಲ್ಲಾಹನು, ಶುಭವಾರ್ತೆ ನೀಡುವ ಹಾಗೂ ಎಚ್ಚರಿಸುವ…

ಸೂರಾ ಆಯತ್ 213/286 — ಅಲ್-ಬಕರಾ البقرة (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಅಲ್-ಬಕರಾ ಆಲಿಸಿ, ಅಲ್-ಬಕರಾ ಅನುವಾದ, ಅಲ್-ಬಕರಾ mp3, ಅಲ್-ಬಕರಾ pdf. ಆಯತ್ 211–215. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Tuesday, August 18, 2026

Don't forget us in your sincere prayers