ಅಲ್-ಬಕರಾ · 215/286
ಅನುವಾದ ಉಚ್ಚಾರಣೆ — ಅಲ್-ಬಕರಾ
يَسْأَلُونَكَ مَاذَا يُنفِقُونَ ۖ قُلْ مَا أَنفَقْتُم مِّنْ خَيْرٍ فَلِلْوَالِدَيْنِ وَالْأَقْرَبِينَ وَالْيَتَامَىٰ وَالْمَسَاكِينِ وَابْنِ السَّبِيلِ ۗ وَمَا تَفْعَلُوا مِنْ خَيْرٍ فَإِنَّ اللَّهَ بِهِ عَلِيمٌ ۝٢١٥
Yas`aloonaka maazaa yunfiqoona qul maaa anfaqtum min khairin falil waalidaini wal aqrabeena walyataamaa wal masaakeeni wabnis sabeel; wa maa taf`aloo min khairin fa innal laaha bihee `Aleem
📖 ಕನ್ನಡ ಅರ್ಥ
(ದೂತರೇ,) ಅವರು ನಿಮ್ಮೊಡನೆ, ತಾವು ಏನನ್ನು ಖರ್ಚು ಮಾಡಬೇಕು ಎಂದು ವಿಚಾರಿಸುತ್ತಾರೆ. ಹೇಳಿರಿ; ನೀವು ಖರ್ಚು ಮಾಡುವ ಸಂಪತ್ತು ತಂದೆ ತಾಯಿಗೆ, ಬಂಧುಗಳಿಗೆ, ಅನಾಥರಿಗೆ ಹಾಗೂ ಬಡವರಿಗೆ ಮತ್ತು ಪ್ರಯಾಣಿಕರಿಗೆ (ತಲುಪಲಿ). ನೀವು ಮಾಡುವ ಪ್ರತಿಯೊಂದು ಸತ್ಕಾರ್ಯವನ್ನೂ ಅಲ್ಲಾಹನು ಖಂಡಿತ ಅರಿತಿರುತ್ತಾನೆ
🎧 ಆಲಿಸಿ

📜 ಆಯತ್ 213-217 — ಅಲ್-ಬಕರಾ

213كَانَ النَّاسُ أُمَّةً وَاحِدَةً فَبَعَثَ اللَّهُ النَّبِيِّينَ مُبَشِّرِينَ وَمُنذِرِينَ وَأَنزَلَ مَعَهُمُ الْكِتَابَ بِالْحَقِّ لِيَحْكُمَ بَيْنَ النَّاسِ فِيمَا اخْتَلَفُوا فِيهِ ۚ وَمَا اخْتَلَفَ فِيهِ إِلَّا الَّذِينَ أُوتُوهُ مِن بَعْدِ مَا جَاءَتْهُمُ الْبَيِّنَاتُ بَغْيًا بَيْنَهُمْ ۖ فَهَدَى اللَّهُ الَّذِينَ آمَنُوا لِمَا اخْتَلَفُوا فِيهِ مِنَ الْحَقِّ بِإِذْنِهِ ۗ وَاللَّهُ يَهْدِي مَن يَشَاءُ إِلَىٰ صِرَاطٍ مُّسْتَقِيمٍ
(ಮೂಲತಃ) ಜನರೆಲ್ಲಾ ಒಂದೇ ಸಮುದಾಯವಾಗಿದ್ದರು. ತರುವಾಯ ಅಲ್ಲಾಹನು, ಶುಭವಾರ್ತೆ ನೀಡುವ ಹಾಗೂ ಎಚ್ಚರಿಸುವ ದೂತರನ್ನು ಕಳುಹಿಸಿದನು ಮತ್ತು ಜನರು ಪರಸ್ಪರ ಭಿನ್ನಾಭಿಪ್ರಾಯ ತಾಳಿದ್ದ ವಿಷಯಗಳಲ್ಲಿ ಅವರ ನಡುವೆ ನ್ಯಾಯ ತೀರ್ಮಾನ ಮಾಡಲೆಂದು ಅವರ ಜೊತೆ, ಸತ್ಯವಿರುವ ಗ್ರಂಥವನ್ನಿಳಿಸಿದನು. ಆದರೆ ಯಾರಿಗೆ ಗ್ರಂಥ ನೀಡಲಾಗಿತ್ತೋ ಅದೇ ಜನರು, ತಮ್ಮ ಬಳಿಗೆ ಸ್ಪಷ್ಟ ಪುರಾವೆಗಳು ಬಂದ ಬಳಿಕ, ಪರಸ್ಪರ ವಿದ್ವೇಷದ ಕಾರಣ, ಆ ಕುರಿತು ಭಿನ್ನಾಭಿಪ್ರಾಯ ತಾಳಿದರು. ಕೊನೆಗೆ ಅಲ್ಲಾಹನು ವಿಶ್ವಾಸಿಗಳಿಗೆ, ಸತ್ಯದ ಕುರಿತಾಗಿ ಅವರು ಭಿನ್ನಾಭಿಪ್ರಾಯ ತಾಳಿದ್ದ ವಿಷಯಗಳಲ್ಲಿ ತನ್ನಿಚ್ಛೆಯಿಂದ ಮಾರ್ಗದರ್ಶನ ನೀಡಿದನು. ಅಲ್ಲಾಹನು ತಾನಿಚ್ಛಿಸಿದವರಿಗೆ, ನೇರ ಮಾರ್ಗವನ್ನು ತೋರಿಸಿ ಕೊಡುತ್ತಾನೆ
214أَمْ حَسِبْتُمْ أَن تَدْخُلُوا الْجَنَّةَ وَلَمَّا يَأْتِكُم مَّثَلُ الَّذِينَ خَلَوْا مِن قَبْلِكُم ۖ مَّسَّتْهُمُ الْبَأْسَاءُ وَالضَّرَّاءُ وَزُلْزِلُوا حَتَّىٰ يَقُولَ الرَّسُولُ وَالَّذِينَ آمَنُوا مَعَهُ مَتَىٰ نَصْرُ اللَّهِ ۗ أَلَا إِنَّ نَصْرَ اللَّهِ قَرِيبٌ
ನೀವೇನು (ಸುಲಭವಾಗಿ) ನೀವು ಸ್ವರ್ಗ ಪ್ರವೇಶಿಸುವಿರೆಂದು ಕೊಂಡಿರುವಿರಾ? ನಿಜವಾಗಿ, ನಿಮಗಿಂತ ಹಿಂದೆ ಗತಿಸಿದವರಿಗೆ ಎದುರಾಗಿದ್ದ ಸನ್ನಿವೇಶಗಳು ನಿಮಗಿನ್ನೂ ಎದುರಾಗಿಲ್ಲ. ಅವರು ತೀವ್ರ ಸಂಕಷ್ಟಗಳನ್ನು ಹಾಗೂ ಹಿಂಸೆಯನ್ನು ಅನುಭವಿಸಿದ್ದರು ಮತ್ತು ಅವರನ್ನು ಅದೆಷ್ಟು ನರಳಿಸಲಾಗಿತ್ತೆಂದರೆ, (ಅಂದಿನ) ದೇವದೂತರು ಹಾಗೂ ಅವರ ಜೊತೆಗಿದ್ದ ವಿಶ್ವಾಸಿಗಳು, ‘‘ಯಾವಾಗ ಬಂದೀತು ಅಲ್ಲಾಹನ ಸಹಾಯ?’’ ಎನ್ನುವಂತಾಗಿತ್ತು. ತಿಳಿದಿರಲಿ, ಖಂಡಿತವಾಗಿಯೂ ಅಲ್ಲಾಹನ ಸಹಾಯವು ಹತ್ತಿರವೇ ಇದೆ
215يَسْأَلُونَكَ مَاذَا يُنفِقُونَ ۖ قُلْ مَا أَنفَقْتُم مِّنْ خَيْرٍ فَلِلْوَالِدَيْنِ وَالْأَقْرَبِينَ وَالْيَتَامَىٰ وَالْمَسَاكِينِ وَابْنِ السَّبِيلِ ۗ وَمَا تَفْعَلُوا مِنْ خَيْرٍ فَإِنَّ اللَّهَ بِهِ عَلِيمٌ
(ದೂತರೇ,) ಅವರು ನಿಮ್ಮೊಡನೆ, ತಾವು ಏನನ್ನು ಖರ್ಚು ಮಾಡಬೇಕು ಎಂದು ವಿಚಾರಿಸುತ್ತಾರೆ. ಹೇಳಿರಿ; ನೀವು ಖರ್ಚು ಮಾಡುವ ಸಂಪತ್ತು ತಂದೆ ತಾಯಿಗೆ, ಬಂಧುಗಳಿಗೆ, ಅನಾಥರಿಗೆ ಹಾಗೂ ಬಡವರಿಗೆ ಮತ್ತು ಪ್ರಯಾಣಿಕರಿಗೆ (ತಲುಪಲಿ). ನೀವು ಮಾಡುವ ಪ್ರತಿಯೊಂದು ಸತ್ಕಾರ್ಯವನ್ನೂ ಅಲ್ಲಾಹನು ಖಂಡಿತ ಅರಿತಿರುತ್ತಾನೆ
216كُتِبَ عَلَيْكُمُ الْقِتَالُ وَهُوَ كُرْهٌ لَّكُمْ ۖ وَعَسَىٰ أَن تَكْرَهُوا شَيْئًا وَهُوَ خَيْرٌ لَّكُمْ ۖ وَعَسَىٰ أَن تُحِبُّوا شَيْئًا وَهُوَ شَرٌّ لَّكُمْ ۗ وَاللَّهُ يَعْلَمُ وَأَنتُمْ لَا تَعْلَمُونَ
ನಿಮಗೆ ಯುದ್ಧವನ್ನು ಕಡ್ಡಾಯಗೊಳಿಸಲಾಗಿದೆ ಮತ್ತು ಅದು ನಿಮಗೆ ಅಪ್ರಿಯವಾಗಿದೆ. ಆದರೆ ನಿಮಗೆ ಅಪ್ರಿಯವಾಗಿರುವ ಸಂಗತಿಯೊಂದು ನಿಮ್ಮ ಪಾಲಿಗೆ ಹಿತಕರವಾಗಿರಲೂ ಬಹುದು. ಹಾಗೆಯೇ, ನೀವು ತುಂಬಾ ಪ್ರೀತಿಸುವ ಸಂಗತಿಯೊಂದು ನಿಮ್ಮ ಪಾಲಿಗೆ ಕೆಟ್ಟದಾಗಿರಲೂಬಹುದು. ಅಲ್ಲಾಹನಿಗೆ ತಿಳಿದಿದೆ ಮತ್ತು ನಿಮಗೆ ತಿಳಿದಿಲ್ಲ
217يَسْأَلُونَكَ عَنِ الشَّهْرِ الْحَرَامِ قِتَالٍ فِيهِ ۖ قُلْ قِتَالٌ فِيهِ كَبِيرٌ ۖ وَصَدٌّ عَن سَبِيلِ اللَّهِ وَكُفْرٌ بِهِ وَالْمَسْجِدِ الْحَرَامِ وَإِخْرَاجُ أَهْلِهِ مِنْهُ أَكْبَرُ عِندَ اللَّهِ ۚ وَالْفِتْنَةُ أَكْبَرُ مِنَ الْقَتْلِ ۗ وَلَا يَزَالُونَ يُقَاتِلُونَكُمْ حَتَّىٰ يَرُدُّوكُمْ عَن دِينِكُمْ إِنِ اسْتَطَاعُوا ۚ وَمَن يَرْتَدِدْ مِنكُمْ عَن دِينِهِ فَيَمُتْ وَهُوَ كَافِرٌ فَأُولَٰئِكَ حَبِطَتْ أَعْمَالُهُمْ فِي الدُّنْيَا وَالْآخِرَةِ ۖ وَأُولَٰئِكَ أَصْحَابُ النَّارِ ۖ هُمْ فِيهَا خَالِدُونَ
(ದೂತರೇ,) ಅವರು ನಿಮ್ಮೊಡನೆ, ಪವಿತ್ರ ತಿಂಗಳಲ್ಲಿ ಯುದ್ಧ ಮಾಡುವ ಕುರಿತು ವಿಚಾರಿಸುತ್ತಾರೆ. ಹೇಳಿರಿ; ಆ ತಿಂಗಳಲ್ಲಿ ಯುದ್ಧ ಮಾಡುವುದು ದೊಡ್ಡ ಅಪರಾಧವಾಗಿದೆ. ಆದರೆ ಅಲ್ಲಾಹನ ಮಾರ್ಗದಿಂದ (ಜನರನ್ನು) ತಡೆಯುವುದು, ಅವನನ್ನು (ಅಲ್ಲಾಹನನ್ನು) ಧಿಕ್ಕರಿಸುವುದು, ಮಸ್ಜಿದುಲ್ ಹರಾಮ್‌ನಿಂದ ಜನರನ್ನು ತಡೆಯುವುದು ಮತ್ತು ಅದರ ನಿವಾಸಿಗಳನ್ನು ಅಲ್ಲಿಂದ ಹೊರದಬ್ಬುವುದು – ಇವೆಲ್ಲಾ ಅಲ್ಲಾಹನ ದೃಷ್ಟಿಯಲ್ಲಿ ಇನ್ನೂ ದೊಡ್ಡ ಪಾಪಗಳಾಗಿವೆ. ಅಶಾಂತಿಯಂತು ಕೊಲೆಗಿಂತಲೂ ಕೆಟ್ಟದು. ಅವರು (ಧಿಕ್ಕಾರಿಗಳು) ತಮಗೆ ಸಾಧ್ಯವಾದರೆ, ನಿಮ್ಮನ್ನು ನಿಮ್ಮ ಧರ್ಮದಿಂದ ವಿಮುಖರಾಗಿಸಿ ಬಿಡುವ ತನಕವೂ ನಿಮ್ಮ ವಿರುದ್ಧ ಯುದ್ಧ ಹೂಡುತ್ತಲೇ ಇರುವರು. ಇನ್ನು ನಿಮ್ಮ ಪೈಕಿ, ಧರ್ಮದಿಂದ ವಿಮುಖನಾದವನ ಮತ್ತು (ಅದೇ ಸ್ಥಿತಿಯಲ್ಲಿ) ಮೃತನಾದವನ ಕರ್ಮಗಳೆಲ್ಲಾ ಈ ಲೋಕದಲ್ಲೂ ಪರಲೋಕದಲ್ಲೂ ವ್ಯರ್ಥವಾಗಿ ಬಿಟ್ಟವು. ಅಂಥವರು ನರಕದವರು ಮತ್ತು ಅವರು ಅಲ್ಲೇ ಸದಾಕಾಲ ಇರುವರು
ಅಲ್-ಬಕರಾಕುರಾನ್ ಸೂಚಿ
286ಆಯತ್
MedinanRevelation
215ಆಯತ್

ಅನುವಾದ — ಅಲ್-ಬಕರಾ 215

ಸೂರಾ ಅಲ್-ಬಕರಾ ಆಯತ್ 215 - ಓದಿ, ಆಲಿಸಿ, ಅನುವಾದ, ಕನ್ನಡ : (ದೂತರೇ,) ಅವರು ನಿಮ್ಮೊಡನೆ, ತಾವು ಏನನ್ನು ಖರ್ಚು ಮಾಡಬೇಕು ಎಂದು ವಿಚಾರಿಸುತ್ತಾರೆ. ಹೇಳಿರಿ;…

ಸೂರಾ ಆಯತ್ 215/286 — ಅಲ್-ಬಕರಾ البقرة (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಅಲ್-ಬಕರಾ ಆಲಿಸಿ, ಅಲ್-ಬಕರಾ ಅನುವಾದ, ಅಲ್-ಬಕರಾ mp3, ಅಲ್-ಬಕರಾ pdf. ಆಯತ್ 213–217. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Tuesday, August 18, 2026

Don't forget us in your sincere prayers