ಅಲ್-ಬಕರಾ · 215/286
ಅನುವಾದ ಉಚ್ಚಾರಣೆ — ಸೂರಾ ಅಲ್-ಬಕರಾ
يَسْأَلُونَكَ مَاذَا يُنفِقُونَ ۖ قُلْ مَا أَنفَقْتُم مِّنْ خَيْرٍ فَلِلْوَالِدَيْنِ وَالْأَقْرَبِينَ وَالْيَتَامَىٰ وَالْمَسَاكِينِ وَابْنِ السَّبِيلِ ۗ وَمَا تَفْعَلُوا مِنْ خَيْرٍ فَإِنَّ اللَّهَ بِهِ عَلِيمٌ ۝٢١٥
Yas`aloonaka maazaa yunfiqoona qul maaa anfaqtum min khairin falil waalidaini wal aqrabeena walyataamaa wal masaakeeni wabnis sabeel; wa maa taf`aloo min khairin fa innal laaha bihee `Aleem
📖 ಕನ್ನಡ ಅರ್ಥ
ಓ ಪೈಗಂಬರರೇ, ಏನನ್ನು ಖರ್ಚು ಮಾಡಬೇಕೆಂದು ಜನರು ನಿಮ್ಮೊಡನೆ ಕೇಳುತ್ತಾರೆ. ಹೇಳಿರಿ; ನೀವು ಖರ್ಚು ಮಾಡಿದಂತಹ ಸಂಪತ್ತು (ದಾನಧರ್ಮ) ಮಾತಾಪಿತರಿಗೂ, ಆಪ್ತಸಂಬAಧಿಕರಿಗೂ, ಅನಾಥರಿಗೂ, ನಿರ್ಗತಿಕರಿಗೂ, ವಿಪ್ಪತ್ತಿಗೀಡಾದ ಪ್ರಯಾಣಿಕರಿಗೂ, ತಲುಪಲಿ ಮತ್ತು ನೀವು ಯಾವುದೇ ಒಳಿತನ್ನು ಮಾಡಿರಲಿ, ಖಂಡಿತವಾಗಿಯು ಅಲ್ಲಾಹನು ಅದರ ಕುರಿತು ಅರಿಯುಳ್ಳವನಾಗಿದ್ದಾನೆ.

🎧 ಆಲಿಸಿ


📜 ಆಯತ್ 213-217 — ಸೂರಾ ಅಲ್-ಬಕರಾ

213كَانَ النَّاسُ أُمَّةً وَاحِدَةً فَبَعَثَ اللَّهُ النَّبِيِّينَ مُبَشِّرِينَ وَمُنذِرِينَ وَأَنزَلَ مَعَهُمُ الْكِتَابَ بِالْحَقِّ لِيَحْكُمَ بَيْنَ النَّاسِ فِيمَا اخْتَلَفُوا فِيهِ ۚ وَمَا اخْتَلَفَ فِيهِ إِلَّا الَّذِينَ أُوتُوهُ مِن بَعْدِ مَا جَاءَتْهُمُ الْبَيِّنَاتُ بَغْيًا بَيْنَهُمْ ۖ فَهَدَى اللَّهُ الَّذِينَ آمَنُوا لِمَا اخْتَلَفُوا فِيهِ مِنَ الْحَقِّ بِإِذْنِهِ ۗ وَاللَّهُ يَهْدِي مَن يَشَاءُ إِلَىٰ صِرَاطٍ مُّسْتَقِيمٍ
ಮನುಷ್ಯರು ಒಂದೇ ಸಮುದಾಯವಾಗಿದ್ದರು(ಕಾಲಕ್ರಮೇಣ ಅವರಲ್ಲಿ ಭಿನ್ನಭಿಪ್ರಾಯ ಉಂಟಾದಾಗ) ಅಲ್ಲಾಹನು ಸುವಾರ್ತೆ ನೀಡುವವರನ್ನಾಗಿಯು ಎಚ್ಚರಿಕೆ ಕೊಡುವವರನ್ನಾಗಿಯು ಪೈಗಂಬರರÀನ್ನು ನಿಯೋಗಿಸಿದನು ಮತ್ತು ಜನರು ನಡುವಿನ ಭಿನ್ನತೆಯ ವಿಷಯಗಳಲ್ಲಿ ತೀರ್ಪುನೀಡಲೆಂದು ಅವರ ಜೊತೆ ಸತ್ಯದೊಂದಿಗೆ ಗ್ರಂಥಗಳನ್ನು ಅವತೀರ್ಣಗೊಳಿಸಿದನು. ಆದರೆ ಗ್ರಂಥ ನೀಡಲಾದವರು ತಮ್ಮಲ್ಲಿಗೆ ಸುಸ್ಪಷ್ಟ ಪುರಾವೆಗಳು ಬಂದ ಬಳಿಕವೂ ಪರಸ್ಪರ ಹಟ ಹಾಗು ಹಗೆತನದ ಕಾರಣದಿಂದ ಅದರಲ್ಲಿ ಭಿನ್ನತೆಯನ್ನುಂಟು ಮಾಡಿದ್ದರು. ಆದ್ದರಿಂದ ಅಲ್ಲಾಹನು ಅವರು ಯಾವ ಸತ್ಯದಲ್ಲಿ ಭಿನ್ನತೆ ಹೊಂದಿದ್ದರೋ ಆ ಸತ್ಯದೆಡೆಗೆ ತನ್ನ ಇಚ್ಛೆ ಪ್ರಕಾರ ಸತ್ಯವಿಶ್ವಾಸಿಗಳಿಗೆ ಮಾರ್ಗದರ್ಶನ ಮಾಡಿದನು ಮತ್ತು ಅಲ್ಲಾಹನು ತಾನಿಚ್ಛಿಸಿದವರನ್ನು ಋಜುವಾದ ಮಾರ್ಗದೆಡೆಗೆ ಮುನ್ನಡೆಸುತ್ತಾನೆ.
214أَمْ حَسِبْتُمْ أَن تَدْخُلُوا الْجَنَّةَ وَلَمَّا يَأْتِكُم مَّثَلُ الَّذِينَ خَلَوْا مِن قَبْلِكُم ۖ مَّسَّتْهُمُ الْبَأْسَاءُ وَالضَّرَّاءُ وَزُلْزِلُوا حَتَّىٰ يَقُولَ الرَّسُولُ وَالَّذِينَ آمَنُوا مَعَهُ مَتَىٰ نَصْرُ اللَّهِ ۗ أَلَا إِنَّ نَصْرَ اللَّهِ قَرِيبٌ
(ಓ ಸತ್ಯವಿಶ್ವಾಸಿಗಳೇ) ನಿಮ್ಮ ಪೂರ್ವಿಕರಿಗೆ ಬಂದAತಹಾ ಸ್ಥಿತಿಯು (ಪರೀಕ್ಷೆ) ನಿಮಗೂ ಬರದೆ ಸ್ವರ್ಗವನ್ನು ಪ್ರವೇಶಿಸಬಿಡಬಹುದೆಂದು ನೀವು ಭಾವಿಸಿಕೊಂಡಿದ್ದೀರಾ? ವಸ್ತುತಃ ಅವರನ್ನು, ದಟ್ಟ ದಾರಿದ್ರö್ಯವೂ, ರೋಗರುಜಿನವೂ ಬಾಧಿಸಿಬಿಟ್ಟಿದ್ದವು. ಮತ್ತು ಸಂದೇಶವಾಹಕರು ಹಾಗೂ ಅವರ ಜೊತೆಯಿದ್ದಂತಹ ಸತ್ಯವಿಶ್ವಾಸಿಗಳು ಅಲ್ಲಾಹನ ಸಹಾಯವು ಯಾವಾಗ ಬರುತ್ತದೆ? ಎಂದು ಹೇಳುವಷ್ಟರ ಮಟ್ಟಿಗೆ ಅವರು ಕಂಪಿಸಲ್ಪಟ್ಟರು. ತಿಳಿದುಕೊಳ್ಳಿರಿ! ನಿಶ್ಚಯವಾಗಿಯು ಅಲ್ಲಾಹನ ಸಹಾಯವು ಸಮೀಪದಲ್ಲೇ ಇದೆ.
215يَسْأَلُونَكَ مَاذَا يُنفِقُونَ ۖ قُلْ مَا أَنفَقْتُم مِّنْ خَيْرٍ فَلِلْوَالِدَيْنِ وَالْأَقْرَبِينَ وَالْيَتَامَىٰ وَالْمَسَاكِينِ وَابْنِ السَّبِيلِ ۗ وَمَا تَفْعَلُوا مِنْ خَيْرٍ فَإِنَّ اللَّهَ بِهِ عَلِيمٌ
ಓ ಪೈಗಂಬರರೇ, ಏನನ್ನು ಖರ್ಚು ಮಾಡಬೇಕೆಂದು ಜನರು ನಿಮ್ಮೊಡನೆ ಕೇಳುತ್ತಾರೆ. ಹೇಳಿರಿ; ನೀವು ಖರ್ಚು ಮಾಡಿದಂತಹ ಸಂಪತ್ತು (ದಾನಧರ್ಮ) ಮಾತಾಪಿತರಿಗೂ, ಆಪ್ತಸಂಬAಧಿಕರಿಗೂ, ಅನಾಥರಿಗೂ, ನಿರ್ಗತಿಕರಿಗೂ, ವಿಪ್ಪತ್ತಿಗೀಡಾದ ಪ್ರಯಾಣಿಕರಿಗೂ, ತಲುಪಲಿ ಮತ್ತು ನೀವು ಯಾವುದೇ ಒಳಿತನ್ನು ಮಾಡಿರಲಿ, ಖಂಡಿತವಾಗಿಯು ಅಲ್ಲಾಹನು ಅದರ ಕುರಿತು ಅರಿಯುಳ್ಳವನಾಗಿದ್ದಾನೆ.
216كُتِبَ عَلَيْكُمُ الْقِتَالُ وَهُوَ كُرْهٌ لَّكُمْ ۖ وَعَسَىٰ أَن تَكْرَهُوا شَيْئًا وَهُوَ خَيْرٌ لَّكُمْ ۖ وَعَسَىٰ أَن تُحِبُّوا شَيْئًا وَهُوَ شَرٌّ لَّكُمْ ۗ وَاللَّهُ يَعْلَمُ وَأَنتُمْ لَا تَعْلَمُونَ
ಧರ್ಮ ಯುದ್ಧವು ನಿಮಗೆ ಅನಿಷ್ಟಕರವಾಗಿದ್ದರೂ, ನಿಮಗದನ್ನು ಶಾಸನಗೊಳಿಸಲಾಗಿದೆ. ನೀವು ಒಂದು ವಸ್ತುವನ್ನು ಅಸಹ್ಯ ಪಡುತ್ತೀರಾ ಆದರೆ ಅದು ನಿಮ್ಮ ಪಾಲಿಗೆ ಒಳಿತಾಗಿರಬಹುದು. ಮತ್ತು ನೀವು ಒಂದು ವಸ್ತುವನ್ನು ಇಷ್ಟಪಡುತ್ತೀರಾದರೆ ಅದು ನಿಮ್ಮ ಪಾಲಿಗೆ ಹಾನಿಕರವಾಗಿರಬಹುದು. ಅಲ್ಲಾಹನು ಅರಿಯುತ್ತಾನೆ. ಮತ್ತು ನೀವು ಅರಿಯದವರಾಗಿದ್ದೀರಿ.
217يَسْأَلُونَكَ عَنِ الشَّهْرِ الْحَرَامِ قِتَالٍ فِيهِ ۖ قُلْ قِتَالٌ فِيهِ كَبِيرٌ ۖ وَصَدٌّ عَن سَبِيلِ اللَّهِ وَكُفْرٌ بِهِ وَالْمَسْجِدِ الْحَرَامِ وَإِخْرَاجُ أَهْلِهِ مِنْهُ أَكْبَرُ عِندَ اللَّهِ ۚ وَالْفِتْنَةُ أَكْبَرُ مِنَ الْقَتْلِ ۗ وَلَا يَزَالُونَ يُقَاتِلُونَكُمْ حَتَّىٰ يَرُدُّوكُمْ عَن دِينِكُمْ إِنِ اسْتَطَاعُوا ۚ وَمَن يَرْتَدِدْ مِنكُمْ عَن دِينِهِ فَيَمُتْ وَهُوَ كَافِرٌ فَأُولَٰئِكَ حَبِطَتْ أَعْمَالُهُمْ فِي الدُّنْيَا وَالْآخِرَةِ ۖ وَأُولَٰئِكَ أَصْحَابُ النَّارِ ۖ هُمْ فِيهَا خَالِدُونَ
ಆದರಣೀಯ ತಿಂಗಳಲ್ಲಿ ಯುದ್ಧ ಮಾಡುವುದರ ಕುರಿತು ಅವರು ನಿಮ್ಮೊಡನೆ ಕೇಳುತ್ತಾರೆ? ಹೇಳಿರಿ! ಅವುಗಳಲ್ಲಿ ಯುದ್ಧ ಮಾಡುವುದು ಮಹಾ ಅಪರಾಧವಾಗಿರುತ್ತದೆ. ಆದರೆ ಜನರನ್ನು ಅಲ್ಲಾಹನ ಮಾರ್ಗದಿಂದ ತಡೆಯುವುದು ಹಾಗೂ ಅವನಲ್ಲಿ ಅವಿಶ್ವಾಸ ತಾಳುವುದು ಮತ್ತು ಮಸ್ಜಿದುಲ್ ಹರಾಮ್‌ನಿಂದ ತಡೆಯುವುದು ಮತ್ತು ಅಲ್ಲಿನ (ಮಕ್ಕಾ) ನಿವಾಸಿಗಳನ್ನು ಅಲ್ಲಿಂದ ಹೊರ ಹಾಕುವುದು ಅಲ್ಲಾಹನ ಬಳಿ ಅದಕ್ಕಿಂತಲೂ ಗಂಭೀರ ಅಪರಾಧವಾಗಿರುತ್ತದೆ ಮತ್ತು ಕ್ಷೆÆÃಭೆ ಕೊಲೆಗಿಂತಲೂ ಗಂಭೀರ ಅಪರಾಧವಾಗಿರುತ್ತದೆ. ತಿಳಿದಿರಲೀ ! ಎಲ್ಲಿಯವರೆಗೆ ಅಂದರೆ ಅವರಿಗೆ ಸಾಧ್ಯವಾಗುವುದಾದರೆ ನಿಮ್ಮನ್ನು ನಿಮ್ಮ ಧರ್ಮದಿಂದ ವಿಮುಖಗೊಳಿಸುವವರೆಗೂ ಅವರು ನಿಮ್ಮೊಂದಿಗೆ ಯುದ್ಧ ಮಾಡುತ್ತಲೇ ಇರುವರು. ಮತ್ತು ನಿಮ್ಮ ಪೈಕಿ ಯಾರು ತನ್ನ ಧರ್ಮದಿಂದ ವಿಮುಖನಾಗಿ ಸತ್ಯನಿಷೇಧಿಯಾಗಿರುವ ಸ್ಥಿತಿಯಲ್ಲಿ ಮರಣ ಹೊಂದುತ್ತಾರೋ ಅಂತಹವರ ಕರ್ಮಗಳು ಇಹಲೋಕದಲ್ಲೂ, ಪರಲೋಕದಲ್ಲೂ ವ್ಯರ್ಥವಾಗಿಬಿಡುವುವು ಮತ್ತು ಅವರು ನರಕಾಗ್ನಿಯವರಾಗಿರುವರು ಮತ್ತು ನರಕದಲ್ಲೇ ಶಾಶ್ವತರಾಗಿರುವರು.
ಅಲ್-ಬಕರಾಕುರಾನ್ ಸೂಚಿ
286ಆಯತ್
MedinanRevelation
215ಆಯತ್

ಅನುವಾದ — ಅಲ್-ಬಕರಾ 215

ಸೂರಾ ಅಲ್-ಬಕರಾ ಆಯತ್ 215 - ಓದಿ, ಆಲಿಸಿ, ಅನುವಾದ, ಕನ್ನಡ : ಓ ಪೈಗಂಬರರೇ, ಏನನ್ನು ಖರ್ಚು ಮಾಡಬೇಕೆಂದು ಜನರು ನಿಮ್ಮೊಡನೆ ಕೇಳುತ್ತಾರೆ. ಹೇಳಿರಿ; ನೀವು…

ಸೂರಾ ಆಯತ್ 215/286 — ಸೂರಾ ಅಲ್-ಬಕರಾ البقرة (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಬಕರಾ ಆಲಿಸಿ, ಸೂರಾ ಅಲ್-ಬಕರಾ ಅನುವಾದ, ಸೂರಾ ಅಲ್-ಬಕರಾ mp3, ಸೂರಾ ಅಲ್-ಬಕರಾ pdf. ಆಯತ್ 213–217. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Wednesday, September 9, 2026

Don't forget us in your sincere prayers