ಅಲ್-ಬಕರಾ · 219/286
ಅನುವಾದ ಉಚ್ಚಾರಣೆ — ಅಲ್-ಬಕರಾ
۞ يَسْأَلُونَكَ عَنِ الْخَمْرِ وَالْمَيْسِرِ ۖ قُلْ فِيهِمَا إِثْمٌ كَبِيرٌ وَمَنَافِعُ لِلنَّاسِ وَإِثْمُهُمَا أَكْبَرُ مِن نَّفْعِهِمَا ۗ وَيَسْأَلُونَكَ مَاذَا يُنفِقُونَ قُلِ الْعَفْوَ ۗ كَذَٰلِكَ يُبَيِّنُ اللَّهُ لَكُمُ الْآيَاتِ لَعَلَّكُمْ تَتَفَكَّرُونَ ۝٢١٩
Yas`aloonaka `anilkhamri walmaisiri qul feehimaaa ismun kabeerunw wa manaafi`u linnaasi wa ismuhumaa akbaru min naf`ihimaa; wa yas`aloonaka maaza yunfiqoona qulil-`afw; kazaalika yubaiyinul laahu lakumul-aayaati la`allakum tatafakkaroon
📖 ಕನ್ನಡ ಅರ್ಥ
ಅವರು ನಿಮ್ಮೊಡನೆ, ಮದ್ಯ ಮತ್ತು ಜೂಜಿನ ಕುರಿತು ವಿಚಾರಿಸುತ್ತಾರೆ. ಹೇಳಿರಿ; ಅವೆರಡರಲ್ಲೂ ದೊಡ್ಡ ಪಾಪವಿದೆ ಮತ್ತು ಜನರಿಗೆ ಕೆಲವು ಲಾಭಗಳೂ ಇವೆ. ಆದರೆ ಅವುಗಳ ಪಾಪವು ಅವುಗಳ ಲಾಭಕ್ಕಿಂತ ದೊಡ್ಡದು. ಹಾಗೆಯೇ ಅವರು ನಿಮ್ಮೊಡನೆ (ಸತ್ಕಾರ್ಯಕ್ಕೆ) ತಾವೇನು ಖರ್ಚು ಮಾಡಬೇಕು ಎಂದು ವಿಚಾರಿಸುತ್ತಾರೆ. ‘‘ಅಗತ್ಯಕ್ಕಿಂತ ಹೆಚ್ಚಿನದನ್ನು (ಖರ್ಚು ಮಾಡಿರಿ)’’ ಎಂದು ಹೇಳಿರಿ. ಇದೇ ರೀತಿ, ನೀವು ಚಿಂತನೆ ನಡೆಸಬೇಕೆಂದು ಅಲ್ಲಾಹನು ನಿಮಗಾಗಿ ತನ್ನ ಆದೇಶಗಳನ್ನು ವಿವರಿಸಿಕೊಡುತ್ತಾನೆ
🎧 ಆಲಿಸಿ

📜 ಆಯತ್ 217-221 — ಅಲ್-ಬಕರಾ

217يَسْأَلُونَكَ عَنِ الشَّهْرِ الْحَرَامِ قِتَالٍ فِيهِ ۖ قُلْ قِتَالٌ فِيهِ كَبِيرٌ ۖ وَصَدٌّ عَن سَبِيلِ اللَّهِ وَكُفْرٌ بِهِ وَالْمَسْجِدِ الْحَرَامِ وَإِخْرَاجُ أَهْلِهِ مِنْهُ أَكْبَرُ عِندَ اللَّهِ ۚ وَالْفِتْنَةُ أَكْبَرُ مِنَ الْقَتْلِ ۗ وَلَا يَزَالُونَ يُقَاتِلُونَكُمْ حَتَّىٰ يَرُدُّوكُمْ عَن دِينِكُمْ إِنِ اسْتَطَاعُوا ۚ وَمَن يَرْتَدِدْ مِنكُمْ عَن دِينِهِ فَيَمُتْ وَهُوَ كَافِرٌ فَأُولَٰئِكَ حَبِطَتْ أَعْمَالُهُمْ فِي الدُّنْيَا وَالْآخِرَةِ ۖ وَأُولَٰئِكَ أَصْحَابُ النَّارِ ۖ هُمْ فِيهَا خَالِدُونَ
(ದೂತರೇ,) ಅವರು ನಿಮ್ಮೊಡನೆ, ಪವಿತ್ರ ತಿಂಗಳಲ್ಲಿ ಯುದ್ಧ ಮಾಡುವ ಕುರಿತು ವಿಚಾರಿಸುತ್ತಾರೆ. ಹೇಳಿರಿ; ಆ ತಿಂಗಳಲ್ಲಿ ಯುದ್ಧ ಮಾಡುವುದು ದೊಡ್ಡ ಅಪರಾಧವಾಗಿದೆ. ಆದರೆ ಅಲ್ಲಾಹನ ಮಾರ್ಗದಿಂದ (ಜನರನ್ನು) ತಡೆಯುವುದು, ಅವನನ್ನು (ಅಲ್ಲಾಹನನ್ನು) ಧಿಕ್ಕರಿಸುವುದು, ಮಸ್ಜಿದುಲ್ ಹರಾಮ್‌ನಿಂದ ಜನರನ್ನು ತಡೆಯುವುದು ಮತ್ತು ಅದರ ನಿವಾಸಿಗಳನ್ನು ಅಲ್ಲಿಂದ ಹೊರದಬ್ಬುವುದು – ಇವೆಲ್ಲಾ ಅಲ್ಲಾಹನ ದೃಷ್ಟಿಯಲ್ಲಿ ಇನ್ನೂ ದೊಡ್ಡ ಪಾಪಗಳಾಗಿವೆ. ಅಶಾಂತಿಯಂತು ಕೊಲೆಗಿಂತಲೂ ಕೆಟ್ಟದು. ಅವರು (ಧಿಕ್ಕಾರಿಗಳು) ತಮಗೆ ಸಾಧ್ಯವಾದರೆ, ನಿಮ್ಮನ್ನು ನಿಮ್ಮ ಧರ್ಮದಿಂದ ವಿಮುಖರಾಗಿಸಿ ಬಿಡುವ ತನಕವೂ ನಿಮ್ಮ ವಿರುದ್ಧ ಯುದ್ಧ ಹೂಡುತ್ತಲೇ ಇರುವರು. ಇನ್ನು ನಿಮ್ಮ ಪೈಕಿ, ಧರ್ಮದಿಂದ ವಿಮುಖನಾದವನ ಮತ್ತು (ಅದೇ ಸ್ಥಿತಿಯಲ್ಲಿ) ಮೃತನಾದವನ ಕರ್ಮಗಳೆಲ್ಲಾ ಈ ಲೋಕದಲ್ಲೂ ಪರಲೋಕದಲ್ಲೂ ವ್ಯರ್ಥವಾಗಿ ಬಿಟ್ಟವು. ಅಂಥವರು ನರಕದವರು ಮತ್ತು ಅವರು ಅಲ್ಲೇ ಸದಾಕಾಲ ಇರುವರು
218إِنَّ الَّذِينَ آمَنُوا وَالَّذِينَ هَاجَرُوا وَجَاهَدُوا فِي سَبِيلِ اللَّهِ أُولَٰئِكَ يَرْجُونَ رَحْمَتَ اللَّهِ ۚ وَاللَّهُ غَفُورٌ رَّحِيمٌ
ವಿಶ್ವಾಸಿಗಳು ಹಾಗೂ ಅಲ್ಲಾಹನ ಮಾರ್ಗದಲ್ಲಿ ವಲಸೆ ಹೋದವರು ಮತ್ತು ಹೋರಾಡಿದವರೇ, ಅಲ್ಲಾಹನ ಅನುಗ್ರಹವನ್ನು ನಿರೀಕ್ಷಿಸುತ್ತಿರುವವರಾಗಿದ್ದಾರೆ. ಅಲ್ಲಾಹನಂತು ಕ್ಷಮಿಸುವವನು ಮತ್ತು ಕರುಣೆ ತೋರುವವನಾಗಿದ್ದಾನೆ
219۞ يَسْأَلُونَكَ عَنِ الْخَمْرِ وَالْمَيْسِرِ ۖ قُلْ فِيهِمَا إِثْمٌ كَبِيرٌ وَمَنَافِعُ لِلنَّاسِ وَإِثْمُهُمَا أَكْبَرُ مِن نَّفْعِهِمَا ۗ وَيَسْأَلُونَكَ مَاذَا يُنفِقُونَ قُلِ الْعَفْوَ ۗ كَذَٰلِكَ يُبَيِّنُ اللَّهُ لَكُمُ الْآيَاتِ لَعَلَّكُمْ تَتَفَكَّرُونَ
ಅವರು ನಿಮ್ಮೊಡನೆ, ಮದ್ಯ ಮತ್ತು ಜೂಜಿನ ಕುರಿತು ವಿಚಾರಿಸುತ್ತಾರೆ. ಹೇಳಿರಿ; ಅವೆರಡರಲ್ಲೂ ದೊಡ್ಡ ಪಾಪವಿದೆ ಮತ್ತು ಜನರಿಗೆ ಕೆಲವು ಲಾಭಗಳೂ ಇವೆ. ಆದರೆ ಅವುಗಳ ಪಾಪವು ಅವುಗಳ ಲಾಭಕ್ಕಿಂತ ದೊಡ್ಡದು. ಹಾಗೆಯೇ ಅವರು ನಿಮ್ಮೊಡನೆ (ಸತ್ಕಾರ್ಯಕ್ಕೆ) ತಾವೇನು ಖರ್ಚು ಮಾಡಬೇಕು ಎಂದು ವಿಚಾರಿಸುತ್ತಾರೆ. ‘‘ಅಗತ್ಯಕ್ಕಿಂತ ಹೆಚ್ಚಿನದನ್ನು (ಖರ್ಚು ಮಾಡಿರಿ)’’ ಎಂದು ಹೇಳಿರಿ. ಇದೇ ರೀತಿ, ನೀವು ಚಿಂತನೆ ನಡೆಸಬೇಕೆಂದು ಅಲ್ಲಾಹನು ನಿಮಗಾಗಿ ತನ್ನ ಆದೇಶಗಳನ್ನು ವಿವರಿಸಿಕೊಡುತ್ತಾನೆ
220فِي الدُّنْيَا وَالْآخِرَةِ ۗ وَيَسْأَلُونَكَ عَنِ الْيَتَامَىٰ ۖ قُلْ إِصْلَاحٌ لَّهُمْ خَيْرٌ ۖ وَإِن تُخَالِطُوهُمْ فَإِخْوَانُكُمْ ۚ وَاللَّهُ يَعْلَمُ الْمُفْسِدَ مِنَ الْمُصْلِحِ ۚ وَلَوْ شَاءَ اللَّهُ لَأَعْنَتَكُمْ ۚ إِنَّ اللَّهَ عَزِيزٌ حَكِيمٌ
ಇಹಲೋಕಕ್ಕೂ ಪರಲೋಕಕ್ಕೂ (ಅವು ಅನ್ವಯಿಸುತ್ತವೆ). (ದೂತರೇ,) ಅವರು ನಿಮ್ಮೊಡನೆ ಅನಾಥರ ಕರಿತು ವಿಚಾರಿಸುತ್ತಾರೆ. ಹೇಳಿರಿ; ಅವರ ಹಿತಾಸಕ್ತಿಯನ್ನು ಪರಿಗಣಿಸುವುದೊಳ್ಳೆಯದು. ಇನ್ನು ನೀವು ಅವರನ್ನು (ಖರ್ಚಿನಲ್ಲಿ) ನಿಮ್ಮ ಜೊತೆ ಸೇರಿಸಿಕೊಳ್ಳುವುದಾದರೆ, ಅವರು ನಿಮ್ಮ ಸಹೋದರರು. ಅಲ್ಲಾಹನಂತು, ಯಾರು ಹಾಳುಗೆಡಹುವವರು ಮತ್ತು ಯಾರು ಸುಧಾರಕರೆಂಬುದನ್ನು ಚೆನ್ನಾಗಿ ಬಲ್ಲನು. ಅಲ್ಲಾಹನು ಬಯಸಿದ್ದರೆ, ನಿಮ್ಮನ್ನು ಇಕ್ಕಟ್ಟಿಗೆ ಸಿಲುಕಿಸಬಹುದಿತ್ತು. ಖಂಡಿತವಾಗಿಯೂ ಅಲ್ಲಾಹನು ಪ್ರಚಂಡನೂ ಯುಕ್ತಿವಂತನೂ ಆಗಿರುವನು
221وَلَا تَنكِحُوا الْمُشْرِكَاتِ حَتَّىٰ يُؤْمِنَّ ۚ وَلَأَمَةٌ مُّؤْمِنَةٌ خَيْرٌ مِّن مُّشْرِكَةٍ وَلَوْ أَعْجَبَتْكُمْ ۗ وَلَا تُنكِحُوا الْمُشْرِكِينَ حَتَّىٰ يُؤْمِنُوا ۚ وَلَعَبْدٌ مُّؤْمِنٌ خَيْرٌ مِّن مُّشْرِكٍ وَلَوْ أَعْجَبَكُمْ ۗ أُولَٰئِكَ يَدْعُونَ إِلَى النَّارِ ۖ وَاللَّهُ يَدْعُو إِلَى الْجَنَّةِ وَالْمَغْفِرَةِ بِإِذْنِهِ ۖ وَيُبَيِّنُ آيَاتِهِ لِلنَّاسِ لَعَلَّهُمْ يَتَذَكَّرُونَ
(ವಿಶ್ವಾಸಿಗಳೇ,) ಬಹುದೇವಾರಾಧಕಿಯರು ವಿಶ್ವಾಸಿನಿಯರಾಗುವ ತನಕ ಅವರನ್ನು ನೀವು ವಿವಾಹವಾಗಬೇಡಿ. ನಿಜವಾಗಿ ವಿಶ್ವಾಸಿ ದಾಸಿಯು, (ಸ್ವತಂತ್ರ) ಬಹು ದೇವರಾಧಕಿಗಿಂತ ಉತ್ತಮಳು – ಆಕೆ ನಿಮಗೆಷ್ಟು ಇಷ್ಟವಿದ್ದರೂ ಸರಿಯೇ. ಹಾಗೆಯೇ, ಬಹುದೇವಾರಾಧಕ ಪುರುಷರು ವಿಶ್ವಾಸಿಗಳಾಗುವ ತನಕ ಅವರನ್ನು ವಿವಾಹವಾಗಬಾರದು. ವಿಶ್ವಾಸಿ ದಾಸನು, (ಸ್ವತಂತ್ರ) ಬಹು ದೇವಾರಾಧಕನಿಗಿಂತ ಉತ್ತಮನು – ಅವನು ನಿಮಗೆಷ್ಟು ಇಷ್ಟವಿದ್ದರೂ ಸರಿಯೇ. ಅವರು (ಬಹುದೇವಾರಾಧಕರು) ನರಕದೆಡೆಗೆ ಕರೆಯುತ್ತಾರೆ. ಆದರೆ ಅಲ್ಲಾಹನು ತನ್ನಿಚ್ಛೆಯಿಂದ ಸ್ವರ್ಗದೆಡೆಗೆ ಮತ್ತು ಕ್ಷಮೆಯೆಡೆಗೆ ಕರೆಯುತ್ತಾನೆ ಮತ್ತು ಅವನು ಜನರಿಗಾಗಿ ತನ್ನ ಆದೇಶಗಳನ್ನು ಸ್ಪಷ್ಟಪಡಿಸುತ್ತಾನೆ – ಅವರು ಉಪದೇಶ ಸ್ವೀಕರಿಸಲೆಂದು
ಅಲ್-ಬಕರಾಕುರಾನ್ ಸೂಚಿ
286ಆಯತ್
MedinanRevelation
219ಆಯತ್

ಅನುವಾದ — ಅಲ್-ಬಕರಾ 219

ಸೂರಾ ಅಲ್-ಬಕರಾ ಆಯತ್ 219 - ಓದಿ, ಆಲಿಸಿ, ಅನುವಾದ, ಕನ್ನಡ : ಅವರು ನಿಮ್ಮೊಡನೆ, ಮದ್ಯ ಮತ್ತು ಜೂಜಿನ ಕುರಿತು ವಿಚಾರಿಸುತ್ತಾರೆ. ಹೇಳಿರಿ; ಅವೆರಡರಲ್ಲೂ ದೊಡ್ಡ…

ಸೂರಾ ಆಯತ್ 219/286 — ಅಲ್-ಬಕರಾ البقرة (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಅಲ್-ಬಕರಾ ಆಲಿಸಿ, ಅಲ್-ಬಕರಾ ಅನುವಾದ, ಅಲ್-ಬಕರಾ mp3, ಅಲ್-ಬಕರಾ pdf. ಆಯತ್ 217–221. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Tuesday, August 18, 2026

Don't forget us in your sincere prayers