ಅಲ್-ಬಕರಾ · 247/286
ಅನುವಾದ ಉಚ್ಚಾರಣೆ — ಅಲ್-ಬಕರಾ
وَقَالَ لَهُمۡ نَبِيُّهُمۡ إِنَّ ٱللَّهَ قَدۡ بَعَثَ لَكُمۡ طَالُوتَ مَلِكًاۚ قَالُوٓاْ أَنَّىٰ يَكُونُ لَهُ ٱلۡمُلۡكُ عَلَيۡنَا وَنَحۡنُ أَحَقُّ بِٱلۡمُلۡكِ مِنۡهُ وَلَمۡ يُؤۡتَ سَعَةً مِّنَ ٱلۡمَالِۚ قَالَ إِنَّ ٱللَّهَ ٱصۡطَفَىٰهُ عَلَيۡكُمۡ وَزَادَهُۥ بَسۡطَةً فِي ٱلۡعِلۡمِ وَٱلۡجِسۡمِۖ وَٱللَّهُ يُؤۡتِي مُلۡكَهُۥ مَن يَشَآءُۚ وَٱللَّهُ وَٰسِعٌ عَلِيمٌ  ۝٢٤٧
Wa qaala lahum Nabiy yuhum innal laaha qad ba`asa lakum Taaloota malikaa; qaalooo annaa yakoonu lahul mulku `alainaa wa nahnu ahaqqu bilmulki minhu wa lam yu`ta sa`atamminal maal; qaala innallaahas tafaahu `alaikum wa zaadahoo bastatan fil`ilmi waljismi wallaahu yu`tee mulkahoo mai yashaaa`; wallaahu Waasi`un `Aleem
📖 ಕನ್ನಡ ಅರ್ಥ
‘‘ಅಲ್ಲಾಹನು ನಿಮಗಾಗಿ, ತಾಲೂತ್‌ರನ್ನು ದೊರೆಯಾಗಿ ನೇಮಿಸಿದ್ದಾನೆ’’ ಎಂದು ಅವರೊಡನೆ, ಅವರ ಪ್ರವಾದಿಯು ಹೇಳಿದರು. ಆಗ ಅವರು ‘‘ನಮ್ಮ ಮೇಲೆ ಅವನ ದೊರೆತನ ನಡೆಯಲು ಹೇಗೆ ಸಾಧ್ಯ? ದೊರೆತನಕ್ಕಂತು ನಾವೇ ಅವನಿಗಿಂತ ಹೆಚ್ಚು ಅರ್ಹರಾಗಿದ್ದೇವೆ. ಅವನಿಗಂತೂ, ಸಂಪತ್ತಿನಲ್ಲೂ ವೈಶಾಲ್ಯ ನೀಡಲಾಗಿಲ್ಲ’’ ಎಂದರು. ಅವರು (ಪ್ರವಾದಿ) ಹೇಳಿದರು; ‘‘ಖಂಡಿತವಾಗಿಯೂ ಅಲ್ಲಾಹನೇ ನಿಮ್ಮ ಮೇಲೆ ಅವನನ್ನು ಆರಿಸಿಕೊಂಡಿದ್ದಾನೆ ಮತ್ತು ಜ್ಞಾನದಲ್ಲೂ ಶರೀರದಲ್ಲೂ ಅವನಿಗೆ ಹೆಚ್ಚಿನ ಸಾಮರ್ಥ್ಯ ನೀಡಿದ್ದಾನೆ. ಅಲ್ಲಾಹನಂತು ತನ್ನ ಸಾಮ್ರಾಜ್ಯವನ್ನು ತಾನಿಚ್ಛಿಸಿದವರಿಗೆ ನೀಡುತ್ತಾನೆ ಮತ್ತು ಅಲ್ಲಾಹನು ತುಂಬಾ ವಿಶಾಲನೂ ಜ್ಞಾನಿಯೂ ಆಗಿದ್ದಾನೆ’’
🎧 ಆಲಿಸಿ

📜 ಆಯತ್ 245-249 — ಅಲ್-ಬಕರಾ

245مَّن ذَا ٱلَّذِي يُقۡرِضُ ٱللَّهَ قَرۡضًا حَسَنًا فَيُضَٰعِفَهُۥ لَهُۥٓ أَضۡعَافًا كَثِيرَةًۚ وَٱللَّهُ يَقۡبِضُ وَيَبۡصُۜطُ وَإِلَيۡهِ تُرۡجَعُونَ 
ಯಾರಿದ್ದಾರೆ, ಅಲ್ಲಾಹನಿಗೆ ಒಳಿತಿನ ಸಾಲವನ್ನು ನೀಡುವವರು? ಅವನು ಅದನ್ನು ಹಲವು ಪಟ್ಟು ಹೆಚ್ಚಿಸಿ ಅವನಿಗೆ (ಮರಳಿಸುವನು). (ಸಂಪತ್ಸಾಧನಗಳನ್ನು) ಸೀಮಿತಗೊಳಿಸುವವನೂ, ವಿಶಾಲಗೊಳಿಸುವವನೂ ಅಲ್ಲಾಹನೇ. ಕೊನೆಗೆ ನೀವು ಅವನೆಡೆಗೇ ಮರಳಿಸಲ್ಪಡುವಿರಿ
246أَلَمۡ تَرَ إِلَى ٱلۡمَلَإِ مِنۢ بَنِيٓ إِسۡرَٰٓءِيلَ مِنۢ بَعۡدِ مُوسَىٰٓ إِذۡ قَالُواْ لِنَبِيٍّ لَّهُمُ ٱبۡعَثۡ لَنَا مَلِكًا نُّقَٰتِلۡ فِي سَبِيلِ ٱللَّهِۖ قَالَ هَلۡ عَسَيۡتُمۡ إِن كُتِبَ عَلَيۡكُمُ ٱلۡقِتَالُ أَلَّا تُقَٰتِلُواْۖ قَالُواْ وَمَا لَنَآ أَلَّا نُقَٰتِلَ فِي سَبِيلِ ٱللَّهِ وَقَدۡ أُخۡرِجۡنَا مِن دِيَٰرِنَا وَأَبۡنَآئِنَاۖ فَلَمَّا كُتِبَ عَلَيۡهِمُ ٱلۡقِتَالُ تَوَلَّوۡاْ إِلَّا قَلِيلًا مِّنۡهُمۡۚ وَٱللَّهُ عَلِيمُۢ بِٱلظَّٰلِمِينَ 
ಇಸ್ರಾಈಲರ ಸಂತತಿಯಲ್ಲಿನ, ಮೂಸಾರ ಅನಂತರದ ಒಂದು ಪಂಗಡವನ್ನು ನೀವು ಕಾಣಲಿಲ್ಲವೇ? ಅವರು ತಮ್ಮ ಪ್ರವಾದಿಯೊಡನೆ, ‘‘ನಾವು ಅಲ್ಲಾಹನ ಮಾರ್ಗದಲ್ಲಿ ಯುದ್ಧ ಮಾಡುವಂತಾಗಲು, ನಮಗಾಗಿ ಒಬ್ಬ ದೊರೆಯನ್ನು ನೇಮಿಸಿರಿ’’ ಎಂದರು. ‘‘ನಿಮ್ಮ ಮೇಲೆ ಯುದ್ಧವು ಕಡ್ಡಾಯವಾಗಿ ಬಿಟ್ಟಾಗ ನೀವು ಯುದ್ಧ ಮಾಡದೆ ಇರುವುದಿಲ್ಲ ತಾನೇ?’’ ಎಂದು ಅವರು (ಪ್ರವಾದಿ) ಕೇಳಿದರು. ಆಗ ಅವರು, ‘‘ಅಲ್ಲಾಹನ ಮಾರ್ಗದಲ್ಲಿ ಯುದ್ಧ ಮಾಡದೆ ಇರಲು ನಮಗೇನಾಗಿದೆ? ನಮ್ಮನ್ನಂತು ನಮ್ಮ ನೆಲೆಗಳಿಂದ ಹೊರದಬ್ಬಲಾಗಿದೆ ಮತ್ತು ನಮ್ಮ ಮಕ್ಕಳಿಂದ ನಮ್ಮನ್ನು ದೂರಗೊಳಿಸಲಾಗಿದೆ’’ ಎಂದರು. ಕೊನೆಗೆ ಅವರ ಮೇಲೆ ಯುದ್ಧವನ್ನು ಕಡ್ಡಾಯಗೊಳಿಸಲಾದಾಗ ಅವರಲ್ಲಿನ ಕೇವಲ ಕೆಲವರ ಹೊರತು ಉಳಿದವರು ಮುಖ ತಿರುಗಿಸಿಕೊಂಡರು. ಅಲ್ಲಾಹನು ಅಕ್ರಮಿಗಳನ್ನು ಚೆನ್ನಾಗಿ ಬಲ್ಲನು
247وَقَالَ لَهُمۡ نَبِيُّهُمۡ إِنَّ ٱللَّهَ قَدۡ بَعَثَ لَكُمۡ طَالُوتَ مَلِكًاۚ قَالُوٓاْ أَنَّىٰ يَكُونُ لَهُ ٱلۡمُلۡكُ عَلَيۡنَا وَنَحۡنُ أَحَقُّ بِٱلۡمُلۡكِ مِنۡهُ وَلَمۡ يُؤۡتَ سَعَةً مِّنَ ٱلۡمَالِۚ قَالَ إِنَّ ٱللَّهَ ٱصۡطَفَىٰهُ عَلَيۡكُمۡ وَزَادَهُۥ بَسۡطَةً فِي ٱلۡعِلۡمِ وَٱلۡجِسۡمِۖ وَٱللَّهُ يُؤۡتِي مُلۡكَهُۥ مَن يَشَآءُۚ وَٱللَّهُ وَٰسِعٌ عَلِيمٌ 
‘‘ಅಲ್ಲಾಹನು ನಿಮಗಾಗಿ, ತಾಲೂತ್‌ರನ್ನು ದೊರೆಯಾಗಿ ನೇಮಿಸಿದ್ದಾನೆ’’ ಎಂದು ಅವರೊಡನೆ, ಅವರ ಪ್ರವಾದಿಯು ಹೇಳಿದರು. ಆಗ ಅವರು ‘‘ನಮ್ಮ ಮೇಲೆ ಅವನ ದೊರೆತನ ನಡೆಯಲು ಹೇಗೆ ಸಾಧ್ಯ? ದೊರೆತನಕ್ಕಂತು ನಾವೇ ಅವನಿಗಿಂತ ಹೆಚ್ಚು ಅರ್ಹರಾಗಿದ್ದೇವೆ. ಅವನಿಗಂತೂ, ಸಂಪತ್ತಿನಲ್ಲೂ ವೈಶಾಲ್ಯ ನೀಡಲಾಗಿಲ್ಲ’’ ಎಂದರು. ಅವರು (ಪ್ರವಾದಿ) ಹೇಳಿದರು; ‘‘ಖಂಡಿತವಾಗಿಯೂ ಅಲ್ಲಾಹನೇ ನಿಮ್ಮ ಮೇಲೆ ಅವನನ್ನು ಆರಿಸಿಕೊಂಡಿದ್ದಾನೆ ಮತ್ತು ಜ್ಞಾನದಲ್ಲೂ ಶರೀರದಲ್ಲೂ ಅವನಿಗೆ ಹೆಚ್ಚಿನ ಸಾಮರ್ಥ್ಯ ನೀಡಿದ್ದಾನೆ. ಅಲ್ಲಾಹನಂತು ತನ್ನ ಸಾಮ್ರಾಜ್ಯವನ್ನು ತಾನಿಚ್ಛಿಸಿದವರಿಗೆ ನೀಡುತ್ತಾನೆ ಮತ್ತು ಅಲ್ಲಾಹನು ತುಂಬಾ ವಿಶಾಲನೂ ಜ್ಞಾನಿಯೂ ಆಗಿದ್ದಾನೆ’’
248وَقَالَ لَهُمۡ نَبِيُّهُمۡ إِنَّ ءَايَةَ مُلۡكِهِۦٓ أَن يَأۡتِيَكُمُ ٱلتَّابُوتُ فِيهِ سَكِينَةٌ مِّن رَّبِّكُمۡ وَبَقِيَّةٌ مِّمَّا تَرَكَ ءَالُ مُوسَىٰ وَءَالُ هَٰرُونَ تَحۡمِلُهُ ٱلۡمَلَٰٓئِكَةُۚ إِنَّ فِي ذَٰلِكَ لَأٓيَةً لَّكُمۡ إِن كُنتُم مُّؤۡمِنِينَ 
ಅವರೊಡನೆ ಅವರ ಪ್ರವಾದಿ ಹೇಳಿದರು; ‘‘ಖಂಡಿತವಾಗಿಯೂ ಅವನ ಆಳ್ವಿಕೆಯ (ಸಿಂಧುತ್ವಕ್ಕೆ) ಪುರಾವೆಯಾಗಿ, ಆ ಪೆಟ್ಟಿಗೆಯು ನಿಮ್ಮ ಬಳಿಗೆ ಬರುವುದು. ಅದರಲ್ಲಿ ನಿಮ್ಮೊಡೆಯನ ಕಡೆಯಿಂದ ಬಂದ ನೆಮ್ಮದಿಯ ಸಾಧನಗಳಿವೆ ಮತ್ತು ಮೂಸಾರ ಸಂತತಿ ಹಾಗೂ ಹಾರೂನರ ಸಂತತಿಯು ಬಿಟ್ಟು ಹೋದ ಉಳಿಕೆಗಳಿವೆ. ಅದನ್ನು ಮಲಕ್‌ಗಳು ಹೊತ್ತಿದ್ದಾರೆ. ನೀವು ವಿಶ್ವಾಸಿಗಳಾಗಿದ್ದರೆ ಖಂಡಿತವಾಗಿಯೂ ಅದರಲ್ಲಿ ನಿಮಗಾಗಿ ಪುರಾವೆ ಇದೆ’’
249فَلَمَّا فَصَلَ طَالُوتُ بِٱلۡجُنُودِ قَالَ إِنَّ ٱللَّهَ مُبۡتَلِيكُم بِنَهَرٍ فَمَن شَرِبَ مِنۡهُ فَلَيۡسَ مِنِّي وَمَن لَّمۡ يَطۡعَمۡهُ فَإِنَّهُۥ مِنِّيٓ إِلَّا مَنِ ٱغۡتَرَفَ غُرۡفَةَۢ بِيَدِهِۦۚ فَشَرِبُواْ مِنۡهُ إِلَّا قَلِيلًا مِّنۡهُمۡۚ فَلَمَّا جَاوَزَهُۥ هُوَ وَٱلَّذِينَ ءَامَنُواْ مَعَهُۥ قَالُواْ لَا طَاقَةَ لَنَا ٱلۡيَوۡمَ بِجَالُوتَ وَجُنُودِهِۦۚ قَالَ ٱلَّذِينَ يَظُنُّونَ أَنَّهُم مُّلَٰقُواْ ٱللَّهِ كَم مِّن فِئَةٍ قَلِيلَةٍ غَلَبَتۡ فِئَةً كَثِيرَةَۢ بِإِذۡنِ ٱللَّهِۗ وَٱللَّهُ مَعَ ٱلصَّٰبِرِينَ 
ತಾಲೂತ್, ಸೇನೆಯೊಂದಿಗೆ ಹೊರಟಾಗ ಹೇಳಿದರು; ‘‘ಅಲ್ಲಾಹನು ಒಂದು ನದಿಯ ಮೂಲಕ ನಿಮ್ಮನ್ನು ಪರೀಕ್ಷಿಸುವನು. ಅದರ ನೀರು ಕುಡಿಯುವವನು ನನ್ನವನಲ್ಲ. ಅದರ ರುಚಿಯನ್ನೇ ನೋಡದವನು ಮಾತ್ರ ಖಂಡಿತ ನನ್ನವನು – ಯಾರಾದರೂ ತನ್ನ ಕೈಯಿಂದ, ಒಂದು ಬೊಗಸೆಯಷ್ಟು ಮಾತ್ರ ಕುಡಿದರೆ ತಪ್ಪಲ್ಲ’. ಆದರೆ ಅವರಲ್ಲಿನ ಕೇವಲ ಕೆಲವರ ಹೊರತು ಇತರೆಲ್ಲರೂ ಆ ಹೊಳೆಯ ನೀರನ್ನು ಕುಡಿದರು. ಕೊನೆಗೆ, ಆತ (ತಾಲೂತ್) ಮತ್ತು ಆತನ ಜೊತೆಗಿದ್ದ ವಿಶ್ವಾಸಿಗಳು ನದಿಯನ್ನು ದಾಟಿದಾಗ, ಆ ಮಂದಿ, ‘‘ಇಂದು ನಮ್ಮ ಬಳಿ, ಜಾಲೂತ್ ಮತ್ತವನ ಪಡೆಗಳನ್ನು ಎದುರಿಸುವ ಶಕ್ತಿ ಉಳಿದಿಲ್ಲ’’ ಎಂದು ಬಿಟ್ಟರು. ಆದರೆ ತಾವು ಅಲ್ಲಾಹನನ್ನು ಭೇಟಿಯಾಗಲಿಕ್ಕಿದೆ ಎಂಬ ನಿರೀಕ್ಷೆ ಇಟ್ಟುಕೊಂಡಿದ್ದವರು ‘‘ಅದೆಷ್ಟೋ ಬಾರಿ, ಸಣ್ಣ ಪಡೆಗಳು ಅಲ್ಲಾಹನ ಅನುಗ್ರಹದಿಂದ ದೊಡ್ಡ ಪಡೆಗಳನ್ನು ಸೋಲಿಸಿದ್ದುಂಟು. ಅಲ್ಲಾಹನಂತು ಸಹನಶೀಲರ ಜೊತೆಗಿದ್ದಾನೆ’’ ಎಂದರು
ಅಲ್-ಬಕರಾಕುರಾನ್ ಸೂಚಿ
286ಆಯತ್
MedinanRevelation
247ಆಯತ್

ಅನುವಾದ — ಅಲ್-ಬಕರಾ 247

ಸೂರಾ ಆಯತ್ 247/286 — ಅಲ್-ಬಕರಾ البقرة (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಅಲ್-ಬಕರಾ ಆಲಿಸಿ, ಅಲ್-ಬಕರಾ ಅನುವಾದ, ಅಲ್-ಬಕರಾ mp3, ಅಲ್-ಬಕರಾ pdf. ಆಯತ್ 245–249. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Tuesday, August 18, 2026

Don't forget us in your sincere prayers