ಅಲ್-ಬಕರಾ · 248/286
ಅನುವಾದ ಉಚ್ಚಾರಣೆ — ಸೂರಾ ಅಲ್-ಬಕರಾ
وَقَالَ لَهُمْ نَبِيُّهُمْ إِنَّ آيَةَ مُلْكِهِ أَن يَأْتِيَكُمُ التَّابُوتُ فِيهِ سَكِينَةٌ مِّن رَّبِّكُمْ وَبَقِيَّةٌ مِّمَّا تَرَكَ آلُ مُوسَىٰ وَآلُ هَارُونَ تَحْمِلُهُ الْمَلَائِكَةُ ۚ إِنَّ فِي ذَٰلِكَ لَآيَةً لَّكُمْ إِن كُنتُم مُّؤْمِنِينَ ۝٢٤٨
Wa qaala lahum Nabiyyuhum inna Aayata mulkiheee ai yaatiyakumut Taabootu feei sakeenatummir Rabbikum wa baqiyyatummimmaa taraka Aalu Moosa wa Aalu Haaroona tahmiluhul malaaa`ikah; inna fee zaalika la Aayatal lakum in kuntum mu`mineen
📖 ಕನ್ನಡ ಅರ್ಥ
ಅನಂತರ ಅವರ ಪೈಗಂಬರರು ಅವರಿಗೆ ಹೇಳಿದರು; ಅವನ ಅಧಿಪತ್ಯದ ಸಂಕೇತವಾಗಿ ನಿಮ್ಮಲ್ಲಿಗೆ ದೂತರು ಒಂದು ಪೆಟ್ಟಿಗೆಯನ್ನು ಹೊತ್ತು ತರುವರು. ಅದರಲ್ಲಿ ನಿಮ್ಮ ಪ್ರಭುವಿನ ಕಡೆಯ ಮನಶಾಂತಿಯಿರುತ್ತದೆ. ಮತ್ತು ಮೂಸಾ ಹಾಗು ಹಾರೂನರ ಪರಿವಾರವು ಬಿಟ್ಟ ಅವಶೇಷಗಳೂ ಇವೆ. ನಿಸ್ಸಂಶಯವಾಗಿಯು ನೀವು ಸತ್ಯವಿಶ್ವಾಸಿಗಳಾಗಿದ್ದರೆ ಇದು ನಿಮಗೆ ಸ್ಪಷ್ಟ ನಿದರ್ಶನವಾಗಿದೆ.

🎧 ಆಲಿಸಿ


📜 ಆಯತ್ 246-250 — ಸೂರಾ ಅಲ್-ಬಕರಾ

246أَلَمْ تَرَ إِلَى الْمَلَإِ مِن بَنِي إِسْرَائِيلَ مِن بَعْدِ مُوسَىٰ إِذْ قَالُوا لِنَبِيٍّ لَّهُمُ ابْعَثْ لَنَا مَلِكًا نُّقَاتِلْ فِي سَبِيلِ اللَّهِ ۖ قَالَ هَلْ عَسَيْتُمْ إِن كُتِبَ عَلَيْكُمُ الْقِتَالُ أَلَّا تُقَاتِلُوا ۖ قَالُوا وَمَا لَنَا أَلَّا نُقَاتِلَ فِي سَبِيلِ اللَّهِ وَقَدْ أُخْرِجْنَا مِن دِيَارِنَا وَأَبْنَائِنَا ۖ فَلَمَّا كُتِبَ عَلَيْهِمُ الْقِتَالُ تَوَلَّوْا إِلَّا قَلِيلًا مِّنْهُمْ ۗ وَاللَّهُ عَلِيمٌ بِالظَّالِمِينَ
ಮೂಸಾರ ನಂತರ ಇಸ್ರಾಯೀಲ್ ಸಂತತಿಗಳ ಒಂದು ಸಮೂಹದೆಡೆಗೆ ನೀವು ನೋಡಿಲ್ಲವೇ? ಅವರು ತಮ್ಮ ಸಂದೇಶವಾಹಕರಿಗೆ ಹೇಳಿದರು ನಾವು ಅಲ್ಲಾಹನ ಮಾರ್ಗದಲ್ಲಿ ಯುದ್ಧ ಮಾಡಲಿಕ್ಕಾಗಿ ನೀವು ನಮಗಾಗಿ ಒಬ್ಬ ರಾಜನನ್ನು ನಿಯೋಗಿಸಿರಿ ಎಂದು ಹೇಳಿದ ಸಂದರ್ಭ. ಸಂದೇಶವಾಹಕರು ಹೇಳಿದರು; ನಿಮ್ಮ ಮೇಲೆ ಯುದ್ಧವು ಕಡ್ಡಾಯಗೊಳಿಸಿದಾಗ ನೀವು ಯುದ್ಧ ಮಾಡದಿರಲೂ ಸಾಧ್ಯತೆಯಿದೆ ಅವರು ಹೇಳಿದರು. ನಮ್ಮನ್ನು ನಮ್ಮ ಮನೆಗಳಿಂದ ಹಾಗೂ ನಮ್ಮ ಮಕ್ಕಳಿಂದ ದೂರ ಮಾಡಲಾಗಿರುವಾಗ ಅಲ್ಲಾಹನ ಮಾರ್ಗದಲ್ಲಿ ಯುದ್ಧ ಮಾಡದಿರಲು ನಮಗೇನಾಗಿದೆ. ಹಾಗೆಯೇ ಅವರ ಮೇಲೆ ಯುದ್ಧವು ಕಡ್ಡಾಯಗೊಳಿಸಿದಾಗ ಅವರಲ್ಲಿ ಅತ್ಯಲ್ಪ ಮಂದಿಯನ್ನು ಬಿಟ್ಟು ಉಳಿದವರೆಲ್ಲಾ ವಿಮುಖರಾಗಿಬಿಟ್ಟರು ಮತ್ತು ಅಲ್ಲಾಹನು ಅಕ್ರಮಿಗಳನ್ನು ಚೆನ್ನಾಗಿ ಅರಿಯುವವನಾಗಿದ್ದಾನೆ.
247وَقَالَ لَهُمْ نَبِيُّهُمْ إِنَّ اللَّهَ قَدْ بَعَثَ لَكُمْ طَالُوتَ مَلِكًا ۚ قَالُوا أَنَّىٰ يَكُونُ لَهُ الْمُلْكُ عَلَيْنَا وَنَحْنُ أَحَقُّ بِالْمُلْكِ مِنْهُ وَلَمْ يُؤْتَ سَعَةً مِّنَ الْمَالِ ۚ قَالَ إِنَّ اللَّهَ اصْطَفَاهُ عَلَيْكُمْ وَزَادَهُ بَسْطَةً فِي الْعِلْمِ وَالْجِسْمِ ۖ وَاللَّهُ يُؤْتِي مُلْكَهُ مَن يَشَاءُ ۚ وَاللَّهُ وَاسِعٌ عَلِيمٌ
ಅವರೊಂದಿಗೆ ಅವರ ಪೈಗಂಬರರು ಹೇಳಿದರು; ಅಲ್ಲಾಹನು ತಾಲೂತರನ್ನು ನಿಮ್ಮ ರಾಜನಾಗಿ ನೇಮಿಸಿರುವನು. ಅವರು ಹೇಳಿದರು; ನಮ್ಮ ಮೇಲೆ ಅವನಿಗೆ ಆಡಳಿತ ಸಿಗುವುದಾದರೂ ಹೇಗೆ? ಆಡಳಿತಕ್ಕೆ ಅವನಿಗಿಂತ ಹೆಚ್ಚು ಯೋಗ್ಯರು ನಾವಾಗಿದ್ದೇವೆ ಮತ್ತು ಅವನ ಬಳಿ ಸಂಪತ್ತೂ ಇಲ್ಲ. ಪೈಗಂಬರರು ಹೇಳಿದರು; ಕೇಳಿರಿ, ಅಲ್ಲಾಹನು ಅವನನ್ನೇ ನಿಮ್ಮ ಮೇಲೆ ಆಯ್ಕೆ ಮಾಡಿರುವನು ಮತ್ತು ಅವನಿಗೆ ಅಪಾರ ಜ್ಞಾನ, ದೇಹದಾರ್ಢ್ಯವನ್ನು ನೀಡಲಾಗಿದೆ. ಮತ್ತು ಅಲ್ಲಾಹನು ತನ್ನ ಅಧಿಪತ್ಯವನ್ನು ತಾನಿಚ್ಛಿಸಿದವರಿಗೆ ದಯಪಾಲಿಸುತ್ತಾನೆ. ಅಲ್ಲಾಹನು ಅತಿ ವಿಶಾಲನೂ ಸರ್ವಜ್ಞಾನಿಯೂ ಆಗಿದ್ದಾನೆ.
248وَقَالَ لَهُمْ نَبِيُّهُمْ إِنَّ آيَةَ مُلْكِهِ أَن يَأْتِيَكُمُ التَّابُوتُ فِيهِ سَكِينَةٌ مِّن رَّبِّكُمْ وَبَقِيَّةٌ مِّمَّا تَرَكَ آلُ مُوسَىٰ وَآلُ هَارُونَ تَحْمِلُهُ الْمَلَائِكَةُ ۚ إِنَّ فِي ذَٰلِكَ لَآيَةً لَّكُمْ إِن كُنتُم مُّؤْمِنِينَ
ಅನಂತರ ಅವರ ಪೈಗಂಬರರು ಅವರಿಗೆ ಹೇಳಿದರು; ಅವನ ಅಧಿಪತ್ಯದ ಸಂಕೇತವಾಗಿ ನಿಮ್ಮಲ್ಲಿಗೆ ದೂತರು ಒಂದು ಪೆಟ್ಟಿಗೆಯನ್ನು ಹೊತ್ತು ತರುವರು. ಅದರಲ್ಲಿ ನಿಮ್ಮ ಪ್ರಭುವಿನ ಕಡೆಯ ಮನಶಾಂತಿಯಿರುತ್ತದೆ. ಮತ್ತು ಮೂಸಾ ಹಾಗು ಹಾರೂನರ ಪರಿವಾರವು ಬಿಟ್ಟ ಅವಶೇಷಗಳೂ ಇವೆ. ನಿಸ್ಸಂಶಯವಾಗಿಯು ನೀವು ಸತ್ಯವಿಶ್ವಾಸಿಗಳಾಗಿದ್ದರೆ ಇದು ನಿಮಗೆ ಸ್ಪಷ್ಟ ನಿದರ್ಶನವಾಗಿದೆ.
249فَلَمَّا فَصَلَ طَالُوتُ بِالْجُنُودِ قَالَ إِنَّ اللَّهَ مُبْتَلِيكُم بِنَهَرٍ فَمَن شَرِبَ مِنْهُ فَلَيْسَ مِنِّي وَمَن لَّمْ يَطْعَمْهُ فَإِنَّهُ مِنِّي إِلَّا مَنِ اغْتَرَفَ غُرْفَةً بِيَدِهِ ۚ فَشَرِبُوا مِنْهُ إِلَّا قَلِيلًا مِّنْهُمْ ۚ فَلَمَّا جَاوَزَهُ هُوَ وَالَّذِينَ آمَنُوا مَعَهُ قَالُوا لَا طَاقَةَ لَنَا الْيَوْمَ بِجَالُوتَ وَجُنُودِهِ ۚ قَالَ الَّذِينَ يَظُنُّونَ أَنَّهُم مُّلَاقُو اللَّهِ كَم مِّن فِئَةٍ قَلِيلَةٍ غَلَبَتْ فِئَةً كَثِيرَةً بِإِذْنِ اللَّهِ ۗ وَاللَّهُ مَعَ الصَّابِرِينَ
ಹಾಗೆಯೇ ತಾಲೂತ್ ಸೈನ್ಯದೊಂದಿಗೆ ಹೊರಟಾಗ ಹೇಳಿದರು; ಖಂಡಿತವಾಗಿಯೂ ಅಲ್ಲಾಹನು ಒಂದು ನದಿಯ ಮೂಲಕ ನಿಮ್ಮನ್ನು ಪರೀಕ್ಷಿಸುವವನಿದ್ದಾನೆ. ಯಾರು ಅದರಿಂದ ನೀರು ಕುಡಿಯುತ್ತಾನೋ ಅವನು ನನ್ನವನಲ್ಲ ಮತ್ತು ಯಾರು ಅದರ ರುಚಿಯನ್ನು ನೋಡುವುದಿಲ್ಲವೋ ನಿಜವಾಗಿಯು ಅವನು ನನ್ನವನು. ಆದರೆ ಯಾರು ತನ್ನ ಕೈಯಿಂದ ಒಂದು ಬೊಗಸೆಯಷ್ಟು ನೀರು ತೆಗೆಯುತ್ತಾನೋ ಅವನ ಹೊರತು. ಆದರೆ ಅವರ ಪೈಕಿ ಅತ್ಯಲ್ಪ ಮಂದಿಯನ್ನು ಬಿಟ್ಟು ಇತರರೆಲ್ಲರೂ ಅದರಿಂದ ಕುಡಿದರು. ಹಾಗೆಯೇ ಅವರು ಮತ್ತು ಅವರ ಜೊತೆ ವಿಶ್ವಾಸವಿರಿಸಿದವರೂ ಆ ನದಿಯನ್ನು ದಾಟಿದಾಗ ಅವರು ಹೇಳಿದರುÀ; ಇಂದು ನಮಗೆ ಜಾಲೂತ್ ಮತ್ತು ಅವನ ಸೈನ್ಯದೊಂದಿಗೆ ಹೋರಾಡುವ ಯಾವ ಶಕ್ತಿಯೂ ಇಲ್ಲ. ಆದರೆ ಅಲ್ಲಾಹನನ್ನು ಖಂಡಿತವಾಗಿಯು ಭೇಟಿಯಾಗಲಿರುವೆವೆಂದು ದೃಢವಾಗಿ ನಂಬಿದವರು ಹೇಳಿದರು; ಅದೆಷ್ಟೋ ಚಿಕ್ಕ ಚಿಕ್ಕ ಸೈನ್ಯಗಳು ದೊಡ್ಡ ದೊಡ್ಡ ಸೈನ್ಯಗಳನ್ನು ಅಲ್ಲಾಹನ ಅನುಮತಿಯೊಂದಿಗೆ ಸೋಲಿಸಿವೆ ಮತ್ತು ಅಲ್ಲಾಹನು ಸಹನೆ ವಹಿಸುವವರೊಂದಿಗಿದ್ದಾನೆ.
250وَلَمَّا بَرَزُوا لِجَالُوتَ وَجُنُودِهِ قَالُوا رَبَّنَا أَفْرِغْ عَلَيْنَا صَبْرًا وَثَبِّتْ أَقْدَامَنَا وَانصُرْنَا عَلَى الْقَوْمِ الْكَافِرِينَ
ಅವರು ಜಾಲೂತ್ ಮತ್ತು ಅವನ ಸೈನ್ಯವನ್ನು ಎದುರಿಸಲು ಹೊರಟಾಗ ಹೇಳಿದರು; ನಮ್ಮ ಪ್ರಭುವೇ ನಮಗೆ ಸ್ಥೆöÊರ್ಯವನ್ನು ಕರುಣಿಸು ಮತ್ತು ನಮ್ಮ ಪಾದಗಳನ್ನು ಸ್ಥಿರಗೊಳಿಸು ಹಾಗು ಅವಿಶ್ವಾಸಿಗಳ ವಿರುದ್ಧ ನಮಗೆ ಸಹಾಯ ಮಾಡು.
ಅಲ್-ಬಕರಾಕುರಾನ್ ಸೂಚಿ
286ಆಯತ್
MedinanRevelation
248ಆಯತ್

ಅನುವಾದ — ಅಲ್-ಬಕರಾ 248

ಸೂರಾ ಅಲ್-ಬಕರಾ ಆಯತ್ 248 - ಓದಿ, ಆಲಿಸಿ, ಅನುವಾದ, ಕನ್ನಡ : ಅನಂತರ ಅವರ ಪೈಗಂಬರರು ಅವರಿಗೆ ಹೇಳಿದರು; ಅವನ ಅಧಿಪತ್ಯದ ಸಂಕೇತವಾಗಿ ನಿಮ್ಮಲ್ಲಿಗೆ ದೂತರು…

ಸೂರಾ ಆಯತ್ 248/286 — ಸೂರಾ ಅಲ್-ಬಕರಾ البقرة (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಬಕರಾ ಆಲಿಸಿ, ಸೂರಾ ಅಲ್-ಬಕರಾ ಅನುವಾದ, ಸೂರಾ ಅಲ್-ಬಕರಾ mp3, ಸೂರಾ ಅಲ್-ಬಕರಾ pdf. ಆಯತ್ 246–250. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Monday, September 7, 2026

Don't forget us in your sincere prayers