ಅಲ್-ಬಕರಾ · 248/286
ಅನುವಾದ ಉಚ್ಚಾರಣೆ — ಅಲ್-ಬಕರಾ
وَقَالَ لَهُمْ نَبِيُّهُمْ إِنَّ آيَةَ مُلْكِهِ أَن يَأْتِيَكُمُ التَّابُوتُ فِيهِ سَكِينَةٌ مِّن رَّبِّكُمْ وَبَقِيَّةٌ مِّمَّا تَرَكَ آلُ مُوسَىٰ وَآلُ هَارُونَ تَحْمِلُهُ الْمَلَائِكَةُ ۚ إِنَّ فِي ذَٰلِكَ لَآيَةً لَّكُمْ إِن كُنتُم مُّؤْمِنِينَ ۝٢٤٨
Wa qaala lahum Nabiyyuhum inna Aayata mulkiheee ai yaatiyakumut Taabootu feei sakeenatummir Rabbikum wa baqiyyatummimmaa taraka Aalu Moosa wa Aalu Haaroona tahmiluhul malaaa`ikah; inna fee zaalika la Aayatal lakum in kuntum mu`mineen
📖 ಕನ್ನಡ ಅರ್ಥ
ಅವರೊಡನೆ ಅವರ ಪ್ರವಾದಿ ಹೇಳಿದರು; ‘‘ಖಂಡಿತವಾಗಿಯೂ ಅವನ ಆಳ್ವಿಕೆಯ (ಸಿಂಧುತ್ವಕ್ಕೆ) ಪುರಾವೆಯಾಗಿ, ಆ ಪೆಟ್ಟಿಗೆಯು ನಿಮ್ಮ ಬಳಿಗೆ ಬರುವುದು. ಅದರಲ್ಲಿ ನಿಮ್ಮೊಡೆಯನ ಕಡೆಯಿಂದ ಬಂದ ನೆಮ್ಮದಿಯ ಸಾಧನಗಳಿವೆ ಮತ್ತು ಮೂಸಾರ ಸಂತತಿ ಹಾಗೂ ಹಾರೂನರ ಸಂತತಿಯು ಬಿಟ್ಟು ಹೋದ ಉಳಿಕೆಗಳಿವೆ. ಅದನ್ನು ಮಲಕ್‌ಗಳು ಹೊತ್ತಿದ್ದಾರೆ. ನೀವು ವಿಶ್ವಾಸಿಗಳಾಗಿದ್ದರೆ ಖಂಡಿತವಾಗಿಯೂ ಅದರಲ್ಲಿ ನಿಮಗಾಗಿ ಪುರಾವೆ ಇದೆ’’
🎧 ಆಲಿಸಿ

📜 ಆಯತ್ 246-250 — ಅಲ್-ಬಕರಾ

246أَلَمْ تَرَ إِلَى الْمَلَإِ مِن بَنِي إِسْرَائِيلَ مِن بَعْدِ مُوسَىٰ إِذْ قَالُوا لِنَبِيٍّ لَّهُمُ ابْعَثْ لَنَا مَلِكًا نُّقَاتِلْ فِي سَبِيلِ اللَّهِ ۖ قَالَ هَلْ عَسَيْتُمْ إِن كُتِبَ عَلَيْكُمُ الْقِتَالُ أَلَّا تُقَاتِلُوا ۖ قَالُوا وَمَا لَنَا أَلَّا نُقَاتِلَ فِي سَبِيلِ اللَّهِ وَقَدْ أُخْرِجْنَا مِن دِيَارِنَا وَأَبْنَائِنَا ۖ فَلَمَّا كُتِبَ عَلَيْهِمُ الْقِتَالُ تَوَلَّوْا إِلَّا قَلِيلًا مِّنْهُمْ ۗ وَاللَّهُ عَلِيمٌ بِالظَّالِمِينَ
ಇಸ್ರಾಈಲರ ಸಂತತಿಯಲ್ಲಿನ, ಮೂಸಾರ ಅನಂತರದ ಒಂದು ಪಂಗಡವನ್ನು ನೀವು ಕಾಣಲಿಲ್ಲವೇ? ಅವರು ತಮ್ಮ ಪ್ರವಾದಿಯೊಡನೆ, ‘‘ನಾವು ಅಲ್ಲಾಹನ ಮಾರ್ಗದಲ್ಲಿ ಯುದ್ಧ ಮಾಡುವಂತಾಗಲು, ನಮಗಾಗಿ ಒಬ್ಬ ದೊರೆಯನ್ನು ನೇಮಿಸಿರಿ’’ ಎಂದರು. ‘‘ನಿಮ್ಮ ಮೇಲೆ ಯುದ್ಧವು ಕಡ್ಡಾಯವಾಗಿ ಬಿಟ್ಟಾಗ ನೀವು ಯುದ್ಧ ಮಾಡದೆ ಇರುವುದಿಲ್ಲ ತಾನೇ?’’ ಎಂದು ಅವರು (ಪ್ರವಾದಿ) ಕೇಳಿದರು. ಆಗ ಅವರು, ‘‘ಅಲ್ಲಾಹನ ಮಾರ್ಗದಲ್ಲಿ ಯುದ್ಧ ಮಾಡದೆ ಇರಲು ನಮಗೇನಾಗಿದೆ? ನಮ್ಮನ್ನಂತು ನಮ್ಮ ನೆಲೆಗಳಿಂದ ಹೊರದಬ್ಬಲಾಗಿದೆ ಮತ್ತು ನಮ್ಮ ಮಕ್ಕಳಿಂದ ನಮ್ಮನ್ನು ದೂರಗೊಳಿಸಲಾಗಿದೆ’’ ಎಂದರು. ಕೊನೆಗೆ ಅವರ ಮೇಲೆ ಯುದ್ಧವನ್ನು ಕಡ್ಡಾಯಗೊಳಿಸಲಾದಾಗ ಅವರಲ್ಲಿನ ಕೇವಲ ಕೆಲವರ ಹೊರತು ಉಳಿದವರು ಮುಖ ತಿರುಗಿಸಿಕೊಂಡರು. ಅಲ್ಲಾಹನು ಅಕ್ರಮಿಗಳನ್ನು ಚೆನ್ನಾಗಿ ಬಲ್ಲನು
247وَقَالَ لَهُمْ نَبِيُّهُمْ إِنَّ اللَّهَ قَدْ بَعَثَ لَكُمْ طَالُوتَ مَلِكًا ۚ قَالُوا أَنَّىٰ يَكُونُ لَهُ الْمُلْكُ عَلَيْنَا وَنَحْنُ أَحَقُّ بِالْمُلْكِ مِنْهُ وَلَمْ يُؤْتَ سَعَةً مِّنَ الْمَالِ ۚ قَالَ إِنَّ اللَّهَ اصْطَفَاهُ عَلَيْكُمْ وَزَادَهُ بَسْطَةً فِي الْعِلْمِ وَالْجِسْمِ ۖ وَاللَّهُ يُؤْتِي مُلْكَهُ مَن يَشَاءُ ۚ وَاللَّهُ وَاسِعٌ عَلِيمٌ
‘‘ಅಲ್ಲಾಹನು ನಿಮಗಾಗಿ, ತಾಲೂತ್‌ರನ್ನು ದೊರೆಯಾಗಿ ನೇಮಿಸಿದ್ದಾನೆ’’ ಎಂದು ಅವರೊಡನೆ, ಅವರ ಪ್ರವಾದಿಯು ಹೇಳಿದರು. ಆಗ ಅವರು ‘‘ನಮ್ಮ ಮೇಲೆ ಅವನ ದೊರೆತನ ನಡೆಯಲು ಹೇಗೆ ಸಾಧ್ಯ? ದೊರೆತನಕ್ಕಂತು ನಾವೇ ಅವನಿಗಿಂತ ಹೆಚ್ಚು ಅರ್ಹರಾಗಿದ್ದೇವೆ. ಅವನಿಗಂತೂ, ಸಂಪತ್ತಿನಲ್ಲೂ ವೈಶಾಲ್ಯ ನೀಡಲಾಗಿಲ್ಲ’’ ಎಂದರು. ಅವರು (ಪ್ರವಾದಿ) ಹೇಳಿದರು; ‘‘ಖಂಡಿತವಾಗಿಯೂ ಅಲ್ಲಾಹನೇ ನಿಮ್ಮ ಮೇಲೆ ಅವನನ್ನು ಆರಿಸಿಕೊಂಡಿದ್ದಾನೆ ಮತ್ತು ಜ್ಞಾನದಲ್ಲೂ ಶರೀರದಲ್ಲೂ ಅವನಿಗೆ ಹೆಚ್ಚಿನ ಸಾಮರ್ಥ್ಯ ನೀಡಿದ್ದಾನೆ. ಅಲ್ಲಾಹನಂತು ತನ್ನ ಸಾಮ್ರಾಜ್ಯವನ್ನು ತಾನಿಚ್ಛಿಸಿದವರಿಗೆ ನೀಡುತ್ತಾನೆ ಮತ್ತು ಅಲ್ಲಾಹನು ತುಂಬಾ ವಿಶಾಲನೂ ಜ್ಞಾನಿಯೂ ಆಗಿದ್ದಾನೆ’’
248وَقَالَ لَهُمْ نَبِيُّهُمْ إِنَّ آيَةَ مُلْكِهِ أَن يَأْتِيَكُمُ التَّابُوتُ فِيهِ سَكِينَةٌ مِّن رَّبِّكُمْ وَبَقِيَّةٌ مِّمَّا تَرَكَ آلُ مُوسَىٰ وَآلُ هَارُونَ تَحْمِلُهُ الْمَلَائِكَةُ ۚ إِنَّ فِي ذَٰلِكَ لَآيَةً لَّكُمْ إِن كُنتُم مُّؤْمِنِينَ
ಅವರೊಡನೆ ಅವರ ಪ್ರವಾದಿ ಹೇಳಿದರು; ‘‘ಖಂಡಿತವಾಗಿಯೂ ಅವನ ಆಳ್ವಿಕೆಯ (ಸಿಂಧುತ್ವಕ್ಕೆ) ಪುರಾವೆಯಾಗಿ, ಆ ಪೆಟ್ಟಿಗೆಯು ನಿಮ್ಮ ಬಳಿಗೆ ಬರುವುದು. ಅದರಲ್ಲಿ ನಿಮ್ಮೊಡೆಯನ ಕಡೆಯಿಂದ ಬಂದ ನೆಮ್ಮದಿಯ ಸಾಧನಗಳಿವೆ ಮತ್ತು ಮೂಸಾರ ಸಂತತಿ ಹಾಗೂ ಹಾರೂನರ ಸಂತತಿಯು ಬಿಟ್ಟು ಹೋದ ಉಳಿಕೆಗಳಿವೆ. ಅದನ್ನು ಮಲಕ್‌ಗಳು ಹೊತ್ತಿದ್ದಾರೆ. ನೀವು ವಿಶ್ವಾಸಿಗಳಾಗಿದ್ದರೆ ಖಂಡಿತವಾಗಿಯೂ ಅದರಲ್ಲಿ ನಿಮಗಾಗಿ ಪುರಾವೆ ಇದೆ’’
249فَلَمَّا فَصَلَ طَالُوتُ بِالْجُنُودِ قَالَ إِنَّ اللَّهَ مُبْتَلِيكُم بِنَهَرٍ فَمَن شَرِبَ مِنْهُ فَلَيْسَ مِنِّي وَمَن لَّمْ يَطْعَمْهُ فَإِنَّهُ مِنِّي إِلَّا مَنِ اغْتَرَفَ غُرْفَةً بِيَدِهِ ۚ فَشَرِبُوا مِنْهُ إِلَّا قَلِيلًا مِّنْهُمْ ۚ فَلَمَّا جَاوَزَهُ هُوَ وَالَّذِينَ آمَنُوا مَعَهُ قَالُوا لَا طَاقَةَ لَنَا الْيَوْمَ بِجَالُوتَ وَجُنُودِهِ ۚ قَالَ الَّذِينَ يَظُنُّونَ أَنَّهُم مُّلَاقُو اللَّهِ كَم مِّن فِئَةٍ قَلِيلَةٍ غَلَبَتْ فِئَةً كَثِيرَةً بِإِذْنِ اللَّهِ ۗ وَاللَّهُ مَعَ الصَّابِرِينَ
ತಾಲೂತ್, ಸೇನೆಯೊಂದಿಗೆ ಹೊರಟಾಗ ಹೇಳಿದರು; ‘‘ಅಲ್ಲಾಹನು ಒಂದು ನದಿಯ ಮೂಲಕ ನಿಮ್ಮನ್ನು ಪರೀಕ್ಷಿಸುವನು. ಅದರ ನೀರು ಕುಡಿಯುವವನು ನನ್ನವನಲ್ಲ. ಅದರ ರುಚಿಯನ್ನೇ ನೋಡದವನು ಮಾತ್ರ ಖಂಡಿತ ನನ್ನವನು – ಯಾರಾದರೂ ತನ್ನ ಕೈಯಿಂದ, ಒಂದು ಬೊಗಸೆಯಷ್ಟು ಮಾತ್ರ ಕುಡಿದರೆ ತಪ್ಪಲ್ಲ’. ಆದರೆ ಅವರಲ್ಲಿನ ಕೇವಲ ಕೆಲವರ ಹೊರತು ಇತರೆಲ್ಲರೂ ಆ ಹೊಳೆಯ ನೀರನ್ನು ಕುಡಿದರು. ಕೊನೆಗೆ, ಆತ (ತಾಲೂತ್) ಮತ್ತು ಆತನ ಜೊತೆಗಿದ್ದ ವಿಶ್ವಾಸಿಗಳು ನದಿಯನ್ನು ದಾಟಿದಾಗ, ಆ ಮಂದಿ, ‘‘ಇಂದು ನಮ್ಮ ಬಳಿ, ಜಾಲೂತ್ ಮತ್ತವನ ಪಡೆಗಳನ್ನು ಎದುರಿಸುವ ಶಕ್ತಿ ಉಳಿದಿಲ್ಲ’’ ಎಂದು ಬಿಟ್ಟರು. ಆದರೆ ತಾವು ಅಲ್ಲಾಹನನ್ನು ಭೇಟಿಯಾಗಲಿಕ್ಕಿದೆ ಎಂಬ ನಿರೀಕ್ಷೆ ಇಟ್ಟುಕೊಂಡಿದ್ದವರು ‘‘ಅದೆಷ್ಟೋ ಬಾರಿ, ಸಣ್ಣ ಪಡೆಗಳು ಅಲ್ಲಾಹನ ಅನುಗ್ರಹದಿಂದ ದೊಡ್ಡ ಪಡೆಗಳನ್ನು ಸೋಲಿಸಿದ್ದುಂಟು. ಅಲ್ಲಾಹನಂತು ಸಹನಶೀಲರ ಜೊತೆಗಿದ್ದಾನೆ’’ ಎಂದರು
250وَلَمَّا بَرَزُوا لِجَالُوتَ وَجُنُودِهِ قَالُوا رَبَّنَا أَفْرِغْ عَلَيْنَا صَبْرًا وَثَبِّتْ أَقْدَامَنَا وَانصُرْنَا عَلَى الْقَوْمِ الْكَافِرِينَ
ಹೀಗೆ, ಜಾಲೂತ್ ಮತ್ತವನ ಸೇನೆಯೊಂದಿಗೆ ಅವರ ಮುಖಾಮುಖಿಯಾದಾಗ, ಅವರು ‘‘ನಮ್ಮೊಡೆಯಾ, ನಮಗೆ ಸಹನೆಯನ್ನು ದಯಪಾಲಿಸು ಹಾಗೂ ನಮ್ಮ ಹೆಜ್ಜೆಗಳನ್ನು ಸ್ಥಿರಗೊಳಿಸು ಮತ್ತು ಧಿಕ್ಕಾರಿ ಸಮೂಹದ ವಿರುದ್ಧ ನಮಗೆ ವಿಜಯ ನೀಡು’’ ಎಂದು ಪ್ರಾರ್ಥಿಸಿದರು
ಅಲ್-ಬಕರಾಕುರಾನ್ ಸೂಚಿ
286ಆಯತ್
MedinanRevelation
248ಆಯತ್

ಅನುವಾದ — ಅಲ್-ಬಕರಾ 248

ಸೂರಾ ಅಲ್-ಬಕರಾ ಆಯತ್ 248 - ಓದಿ, ಆಲಿಸಿ, ಅನುವಾದ, ಕನ್ನಡ : ಅವರೊಡನೆ ಅವರ ಪ್ರವಾದಿ ಹೇಳಿದರು; ‘‘ಖಂಡಿತವಾಗಿಯೂ ಅವನ ಆಳ್ವಿಕೆಯ (ಸಿಂಧುತ್ವಕ್ಕೆ) ಪುರಾವೆಯಾಗಿ, ಆ…

ಸೂರಾ ಆಯತ್ 248/286 — ಅಲ್-ಬಕರಾ البقرة (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಅಲ್-ಬಕರಾ ಆಲಿಸಿ, ಅಲ್-ಬಕರಾ ಅನುವಾದ, ಅಲ್-ಬಕರಾ mp3, ಅಲ್-ಬಕರಾ pdf. ಆಯತ್ 246–250. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Tuesday, August 18, 2026

Don't forget us in your sincere prayers