ಅಲ್-ಬಕರಾ · 25/286
ಅನುವಾದ ಉಚ್ಚಾರಣೆ — ಅಲ್-ಬಕರಾ
وَبَشِّرِ الَّذِينَ آمَنُوا وَعَمِلُوا الصَّالِحَاتِ أَنَّ لَهُمْ جَنَّاتٍ تَجْرِي مِن تَحْتِهَا الْأَنْهَارُ ۖ كُلَّمَا رُزِقُوا مِنْهَا مِن ثَمَرَةٍ رِّزْقًا ۙ قَالُوا هَٰذَا الَّذِي رُزِقْنَا مِن قَبْلُ ۖ وَأُتُوا بِهِ مُتَشَابِهًا ۖ وَلَهُمْ فِيهَا أَزْوَاجٌ مُّطَهَّرَةٌ ۖ وَهُمْ فِيهَا خَالِدُونَ ۝٢٥
Wa bashshiril lazeena aamanoo wa `amilus saalihaati anna lahum jannaatin tajree min tahtihal anhaaru kullamaa riziqoo minhaa min samaratir rizqan qaaloo haazal lazee ruziqnaa min qablu wa utoo bihee mutashaabihaa, wa lahum feehaaa azwaajum mutahhara tunw wa hum feehaa khaalidoon
📖 ಕನ್ನಡ ಅರ್ಥ
ಸತ್ಯದಲ್ಲಿ ನಂಬಿಕೆ ಇಟ್ಟವರಿಗೆ ಹಾಗೂ ಸತ್ಕರ್ಮ ಮಾಡಿದವರಿಗೆ ಸುವಾರ್ತೆ ನೀಡಿರಿ; ಅವರಿಗಾಗಿ (ಸ್ವರ್ಗದಲ್ಲಿ) ತಳದಲ್ಲಿ ನದಿಗಳು ಹರಿಯುವಂತಹ ತೋಟಗಳಿವೆ. ಅವರಿಗೆ ಆ ತೋಟದ ಯಾವುದಾದರೂ ಫಲವನ್ನು ತಿನಿಸಿದಾಗಲೆಲ್ಲ ಅವರು ‘‘ಹಿಂದೆಯೂ ನಮಗೆ ಇದನ್ನೇ ತಿನಿಸಲಾಗಿತ್ತು’’ ಎನ್ನುವರು. ನಿಜವಾಗಿ (ಈ ಹಿಂದೆ) ಅವರಿಗೆ, ಅದಕ್ಕೆ ಹೋಲುವಂತಹದನ್ನು ನೀಡಲಾಗಿತ್ತು. ಅಲ್ಲಿ ಅವರಿಗೆ, ಪಾವನ ಪತ್ನಿಯರಿರುವರು ಮತ್ತು ಅವರು ಅದರಲ್ಲಿ ಸದಾಕಾಲ ಇರುವರು
🎧 ಆಲಿಸಿ

📜 ಆಯತ್ 23-27 — ಅಲ್-ಬಕರಾ

23وَإِن كُنتُمْ فِي رَيْبٍ مِّمَّا نَزَّلْنَا عَلَىٰ عَبْدِنَا فَأْتُوا بِسُورَةٍ مِّن مِّثْلِهِ وَادْعُوا شُهَدَاءَكُم مِّن دُونِ اللَّهِ إِن كُنتُمْ صَادِقِينَ
ನಾವು ನಮ್ಮ ದಾಸನಿಗೆ ಇಳಿಸಿ ಕೊಟ್ಟಿರುವುದರ (ಕುರ್‌ಆನಿನ) ಕುರಿತು ನಿಮಗೆ ಸಂಶಯವಿದ್ದರೆ, ಅಂತಹ ಒಂದು ಅಧ್ಯಾಯವನ್ನಾದರೂ ನೀವು ರಚಿಸಿ ತನ್ನಿರಿ ಮತ್ತು ಅದಕ್ಕಾಗಿ ಅಲ್ಲಾಹನ ಹೊರತು ನಿಮ್ಮೆಲ್ಲ ಸಹಾಯಕರನ್ನೂ ಕರೆಯಿರಿ – ನೀವು ಸತ್ಯವಂತರಾಗಿದ್ದರೆ (ಇಷ್ಟನ್ನು ಮಾಡಿರಿ)
24فَإِن لَّمْ تَفْعَلُوا وَلَن تَفْعَلُوا فَاتَّقُوا النَّارَ الَّتِي وَقُودُهَا النَّاسُ وَالْحِجَارَةُ ۖ أُعِدَّتْ لِلْكَافِرِينَ
ನಿಮಗೆ ಅದನ್ನು ಮಾಡಲಾಗದಿದ್ದರೆ – ಮತ್ತು ಖಂಡಿತ ನಿಮಗೆ ಅದನ್ನು ಮಾಡಲಾಗುವುದಿಲ್ಲ – ಮನುಷ್ಯರು ಮತ್ತು ಕಲ್ಲುಗಳೇ ಇಂಧನವಾಗಿರುವ (ನರಕದ) ಬೆಂಕಿಗೆ ಅಂಜಿರಿ – ಸತ್ಯ ಧಿಕ್ಕಾರಿಗಳಿಗಾಗಿ ಅದನ್ನು ಸಿದ್ಧ ಪಡಿಸಲಾಗಿದೆ
25وَبَشِّرِ الَّذِينَ آمَنُوا وَعَمِلُوا الصَّالِحَاتِ أَنَّ لَهُمْ جَنَّاتٍ تَجْرِي مِن تَحْتِهَا الْأَنْهَارُ ۖ كُلَّمَا رُزِقُوا مِنْهَا مِن ثَمَرَةٍ رِّزْقًا ۙ قَالُوا هَٰذَا الَّذِي رُزِقْنَا مِن قَبْلُ ۖ وَأُتُوا بِهِ مُتَشَابِهًا ۖ وَلَهُمْ فِيهَا أَزْوَاجٌ مُّطَهَّرَةٌ ۖ وَهُمْ فِيهَا خَالِدُونَ
ಸತ್ಯದಲ್ಲಿ ನಂಬಿಕೆ ಇಟ್ಟವರಿಗೆ ಹಾಗೂ ಸತ್ಕರ್ಮ ಮಾಡಿದವರಿಗೆ ಸುವಾರ್ತೆ ನೀಡಿರಿ; ಅವರಿಗಾಗಿ (ಸ್ವರ್ಗದಲ್ಲಿ) ತಳದಲ್ಲಿ ನದಿಗಳು ಹರಿಯುವಂತಹ ತೋಟಗಳಿವೆ. ಅವರಿಗೆ ಆ ತೋಟದ ಯಾವುದಾದರೂ ಫಲವನ್ನು ತಿನಿಸಿದಾಗಲೆಲ್ಲ ಅವರು ‘‘ಹಿಂದೆಯೂ ನಮಗೆ ಇದನ್ನೇ ತಿನಿಸಲಾಗಿತ್ತು’’ ಎನ್ನುವರು. ನಿಜವಾಗಿ (ಈ ಹಿಂದೆ) ಅವರಿಗೆ, ಅದಕ್ಕೆ ಹೋಲುವಂತಹದನ್ನು ನೀಡಲಾಗಿತ್ತು. ಅಲ್ಲಿ ಅವರಿಗೆ, ಪಾವನ ಪತ್ನಿಯರಿರುವರು ಮತ್ತು ಅವರು ಅದರಲ್ಲಿ ಸದಾಕಾಲ ಇರುವರು
26۞ إِنَّ اللَّهَ لَا يَسْتَحْيِي أَن يَضْرِبَ مَثَلًا مَّا بَعُوضَةً فَمَا فَوْقَهَا ۚ فَأَمَّا الَّذِينَ آمَنُوا فَيَعْلَمُونَ أَنَّهُ الْحَقُّ مِن رَّبِّهِمْ ۖ وَأَمَّا الَّذِينَ كَفَرُوا فَيَقُولُونَ مَاذَا أَرَادَ اللَّهُ بِهَٰذَا مَثَلًا ۘ يُضِلُّ بِهِ كَثِيرًا وَيَهْدِي بِهِ كَثِيرًا ۚ وَمَا يُضِلُّ بِهِ إِلَّا الْفَاسِقِينَ
ಅಲ್ಲಾಹನಂತು ಸೊಳ್ಳೆ ಅಥವಾ ಅದಕ್ಕಿಂತಲೂ ಆಚಿನ ವಸ್ತುಗಳನ್ನು ಉದಾಹರಿಸುವುದಕ್ಕೆ ನಾಚುವುದಿಲ್ಲ. ವಿಶ್ವಾಸಿಗಳು, ಅದು ತಮ್ಮ ಒಡೆಯನ ಕಡೆಯಿಂದ ಬಂದಿರುವ ಸತ್ಯ ಎಂಬುದನ್ನು ಅರಿತಿರುತ್ತಾರೆ ಮತ್ತು ಧಿಕ್ಕಾರಿಗಳು, ‘‘ಈ ಉದಾಹರಣೆಯ ಮೂಲಕ ಅಲ್ಲಾಹನು ಬಯಸುವುದೇನನ್ನು?’’ ಎನ್ನುತ್ತಾರೆ. (ನಿಜವಾಗಿ), ಅವನು ಈ ಮೂಲಕ ಅನೇಕರನ್ನು ದಾರಿಗೆಡಿಸಿ ಬಿಡುತ್ತಾನೆ ಮತ್ತು ಅನೇಕರಿಗೆ ಸರಿದಾರಿಯನ್ನು ತೋರುತ್ತಾನೆ ಮತ್ತು ಅವನು ಅವಿಧೇಯರ ಹೊರತು ಇನ್ನಾರನ್ನೂ ಈ ಮೂಲಕ ದಾರಿಗೆಡಿಸುವುದಿಲ್ಲ
27الَّذِينَ يَنقُضُونَ عَهْدَ اللَّهِ مِن بَعْدِ مِيثَاقِهِ وَيَقْطَعُونَ مَا أَمَرَ اللَّهُ بِهِ أَن يُوصَلَ وَيُفْسِدُونَ فِي الْأَرْضِ ۚ أُولَٰئِكَ هُمُ الْخَاسِرُونَ
ಅವರು (ಅವಿಧೇಯರು) ಅಲ್ಲಾಹನೊಂದಿಗೆ ಪಕ್ವವಾದ ಕರಾರು ಮಾಡಿಕೊಂಡ ಬಳಿಕ ಅದನ್ನು ಮುರಿಯುತ್ತಾರೆ ಮತ್ತು ಅಲ್ಲಾಹನು ಜೋಡಿಸಬೇಕೆಂದು ಆದೇಶಿಸಿರುವ ಸಂಬಂಧವನ್ನು ಕಡಿದು ಹಾಕುತ್ತಾರೆ ಮತ್ತು ಭೂಮಿಯಲ್ಲಿ ಅಶಾಂತಿಯನ್ನು ಹಬ್ಬುತ್ತಾರೆ. ಅವರೇ, ನಷ್ಟ ಅನುಭವಿಸುವವರು
ಅಲ್-ಬಕರಾಕುರಾನ್ ಸೂಚಿ
286ಆಯತ್
MedinanRevelation
25ಆಯತ್

ಅನುವಾದ — ಅಲ್-ಬಕರಾ 25

ಸೂರಾ ಅಲ್-ಬಕರಾ ಆಯತ್ 25 - ಓದಿ, ಆಲಿಸಿ, ಅನುವಾದ, ಕನ್ನಡ : ಸತ್ಯದಲ್ಲಿ ನಂಬಿಕೆ ಇಟ್ಟವರಿಗೆ ಹಾಗೂ ಸತ್ಕರ್ಮ ಮಾಡಿದವರಿಗೆ ಸುವಾರ್ತೆ ನೀಡಿರಿ; ಅವರಿಗಾಗಿ (ಸ್ವರ್ಗದಲ್ಲಿ)…

ಸೂರಾ ಆಯತ್ 25/286 — ಅಲ್-ಬಕರಾ البقرة (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಅಲ್-ಬಕರಾ ಆಲಿಸಿ, ಅಲ್-ಬಕರಾ ಅನುವಾದ, ಅಲ್-ಬಕರಾ mp3, ಅಲ್-ಬಕರಾ pdf. ಆಯತ್ 23–27. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Tuesday, August 18, 2026

Don't forget us in your sincere prayers