ಅಲ್-ಬಕರಾ · 250/286
ಅನುವಾದ ಉಚ್ಚಾರಣೆ — ಅಲ್-ಬಕರಾ
وَلَمَّا بَرَزُوا لِجَالُوتَ وَجُنُودِهِ قَالُوا رَبَّنَا أَفْرِغْ عَلَيْنَا صَبْرًا وَثَبِّتْ أَقْدَامَنَا وَانصُرْنَا عَلَى الْقَوْمِ الْكَافِرِينَ ۝٢٥٠
Wa lammaa barazoo liJaaloota wa junoodihee qaaloo Rabbanaaa afrigh `alainaa sabranw wa sabbit aqdaamanaa wansurnaa `alal qawmil kaafireen
📖 ಕನ್ನಡ ಅರ್ಥ
ಹೀಗೆ, ಜಾಲೂತ್ ಮತ್ತವನ ಸೇನೆಯೊಂದಿಗೆ ಅವರ ಮುಖಾಮುಖಿಯಾದಾಗ, ಅವರು ‘‘ನಮ್ಮೊಡೆಯಾ, ನಮಗೆ ಸಹನೆಯನ್ನು ದಯಪಾಲಿಸು ಹಾಗೂ ನಮ್ಮ ಹೆಜ್ಜೆಗಳನ್ನು ಸ್ಥಿರಗೊಳಿಸು ಮತ್ತು ಧಿಕ್ಕಾರಿ ಸಮೂಹದ ವಿರುದ್ಧ ನಮಗೆ ವಿಜಯ ನೀಡು’’ ಎಂದು ಪ್ರಾರ್ಥಿಸಿದರು
🎧 ಆಲಿಸಿ

📜 ಆಯತ್ 248-252 — ಅಲ್-ಬಕರಾ

248وَقَالَ لَهُمْ نَبِيُّهُمْ إِنَّ آيَةَ مُلْكِهِ أَن يَأْتِيَكُمُ التَّابُوتُ فِيهِ سَكِينَةٌ مِّن رَّبِّكُمْ وَبَقِيَّةٌ مِّمَّا تَرَكَ آلُ مُوسَىٰ وَآلُ هَارُونَ تَحْمِلُهُ الْمَلَائِكَةُ ۚ إِنَّ فِي ذَٰلِكَ لَآيَةً لَّكُمْ إِن كُنتُم مُّؤْمِنِينَ
ಅವರೊಡನೆ ಅವರ ಪ್ರವಾದಿ ಹೇಳಿದರು; ‘‘ಖಂಡಿತವಾಗಿಯೂ ಅವನ ಆಳ್ವಿಕೆಯ (ಸಿಂಧುತ್ವಕ್ಕೆ) ಪುರಾವೆಯಾಗಿ, ಆ ಪೆಟ್ಟಿಗೆಯು ನಿಮ್ಮ ಬಳಿಗೆ ಬರುವುದು. ಅದರಲ್ಲಿ ನಿಮ್ಮೊಡೆಯನ ಕಡೆಯಿಂದ ಬಂದ ನೆಮ್ಮದಿಯ ಸಾಧನಗಳಿವೆ ಮತ್ತು ಮೂಸಾರ ಸಂತತಿ ಹಾಗೂ ಹಾರೂನರ ಸಂತತಿಯು ಬಿಟ್ಟು ಹೋದ ಉಳಿಕೆಗಳಿವೆ. ಅದನ್ನು ಮಲಕ್‌ಗಳು ಹೊತ್ತಿದ್ದಾರೆ. ನೀವು ವಿಶ್ವಾಸಿಗಳಾಗಿದ್ದರೆ ಖಂಡಿತವಾಗಿಯೂ ಅದರಲ್ಲಿ ನಿಮಗಾಗಿ ಪುರಾವೆ ಇದೆ’’
249فَلَمَّا فَصَلَ طَالُوتُ بِالْجُنُودِ قَالَ إِنَّ اللَّهَ مُبْتَلِيكُم بِنَهَرٍ فَمَن شَرِبَ مِنْهُ فَلَيْسَ مِنِّي وَمَن لَّمْ يَطْعَمْهُ فَإِنَّهُ مِنِّي إِلَّا مَنِ اغْتَرَفَ غُرْفَةً بِيَدِهِ ۚ فَشَرِبُوا مِنْهُ إِلَّا قَلِيلًا مِّنْهُمْ ۚ فَلَمَّا جَاوَزَهُ هُوَ وَالَّذِينَ آمَنُوا مَعَهُ قَالُوا لَا طَاقَةَ لَنَا الْيَوْمَ بِجَالُوتَ وَجُنُودِهِ ۚ قَالَ الَّذِينَ يَظُنُّونَ أَنَّهُم مُّلَاقُو اللَّهِ كَم مِّن فِئَةٍ قَلِيلَةٍ غَلَبَتْ فِئَةً كَثِيرَةً بِإِذْنِ اللَّهِ ۗ وَاللَّهُ مَعَ الصَّابِرِينَ
ತಾಲೂತ್, ಸೇನೆಯೊಂದಿಗೆ ಹೊರಟಾಗ ಹೇಳಿದರು; ‘‘ಅಲ್ಲಾಹನು ಒಂದು ನದಿಯ ಮೂಲಕ ನಿಮ್ಮನ್ನು ಪರೀಕ್ಷಿಸುವನು. ಅದರ ನೀರು ಕುಡಿಯುವವನು ನನ್ನವನಲ್ಲ. ಅದರ ರುಚಿಯನ್ನೇ ನೋಡದವನು ಮಾತ್ರ ಖಂಡಿತ ನನ್ನವನು – ಯಾರಾದರೂ ತನ್ನ ಕೈಯಿಂದ, ಒಂದು ಬೊಗಸೆಯಷ್ಟು ಮಾತ್ರ ಕುಡಿದರೆ ತಪ್ಪಲ್ಲ’. ಆದರೆ ಅವರಲ್ಲಿನ ಕೇವಲ ಕೆಲವರ ಹೊರತು ಇತರೆಲ್ಲರೂ ಆ ಹೊಳೆಯ ನೀರನ್ನು ಕುಡಿದರು. ಕೊನೆಗೆ, ಆತ (ತಾಲೂತ್) ಮತ್ತು ಆತನ ಜೊತೆಗಿದ್ದ ವಿಶ್ವಾಸಿಗಳು ನದಿಯನ್ನು ದಾಟಿದಾಗ, ಆ ಮಂದಿ, ‘‘ಇಂದು ನಮ್ಮ ಬಳಿ, ಜಾಲೂತ್ ಮತ್ತವನ ಪಡೆಗಳನ್ನು ಎದುರಿಸುವ ಶಕ್ತಿ ಉಳಿದಿಲ್ಲ’’ ಎಂದು ಬಿಟ್ಟರು. ಆದರೆ ತಾವು ಅಲ್ಲಾಹನನ್ನು ಭೇಟಿಯಾಗಲಿಕ್ಕಿದೆ ಎಂಬ ನಿರೀಕ್ಷೆ ಇಟ್ಟುಕೊಂಡಿದ್ದವರು ‘‘ಅದೆಷ್ಟೋ ಬಾರಿ, ಸಣ್ಣ ಪಡೆಗಳು ಅಲ್ಲಾಹನ ಅನುಗ್ರಹದಿಂದ ದೊಡ್ಡ ಪಡೆಗಳನ್ನು ಸೋಲಿಸಿದ್ದುಂಟು. ಅಲ್ಲಾಹನಂತು ಸಹನಶೀಲರ ಜೊತೆಗಿದ್ದಾನೆ’’ ಎಂದರು
250وَلَمَّا بَرَزُوا لِجَالُوتَ وَجُنُودِهِ قَالُوا رَبَّنَا أَفْرِغْ عَلَيْنَا صَبْرًا وَثَبِّتْ أَقْدَامَنَا وَانصُرْنَا عَلَى الْقَوْمِ الْكَافِرِينَ
ಹೀಗೆ, ಜಾಲೂತ್ ಮತ್ತವನ ಸೇನೆಯೊಂದಿಗೆ ಅವರ ಮುಖಾಮುಖಿಯಾದಾಗ, ಅವರು ‘‘ನಮ್ಮೊಡೆಯಾ, ನಮಗೆ ಸಹನೆಯನ್ನು ದಯಪಾಲಿಸು ಹಾಗೂ ನಮ್ಮ ಹೆಜ್ಜೆಗಳನ್ನು ಸ್ಥಿರಗೊಳಿಸು ಮತ್ತು ಧಿಕ್ಕಾರಿ ಸಮೂಹದ ವಿರುದ್ಧ ನಮಗೆ ವಿಜಯ ನೀಡು’’ ಎಂದು ಪ್ರಾರ್ಥಿಸಿದರು
251فَهَزَمُوهُم بِإِذْنِ اللَّهِ وَقَتَلَ دَاوُودُ جَالُوتَ وَآتَاهُ اللَّهُ الْمُلْكَ وَالْحِكْمَةَ وَعَلَّمَهُ مِمَّا يَشَاءُ ۗ وَلَوْلَا دَفْعُ اللَّهِ النَّاسَ بَعْضَهُم بِبَعْضٍ لَّفَسَدَتِ الْأَرْضُ وَلَٰكِنَّ اللَّهَ ذُو فَضْلٍ عَلَى الْعَالَمِينَ
ಕೊನೆಗೆ ಅವರು (ತಾಲೂತರ ಪಡೆ) ಅಲ್ಲಾಹನ ಅನುಗ್ರಹದಿಂದ ಅವರನ್ನು (ಜಾಲೂತನ ಪಡೆಯನ್ನು) ಸೋಲಿಸಿ ಬಿಟ್ಟರು ಮತ್ತು ದಾವೂದರು ಜಾಲೂತನನ್ನು ಕೊಂದರು. ಆ ಬಳಿಕ ಅಲ್ಲಾಹನು ಅವರಿಗೆ (ದಾವೂದರಿಗೆ) ಸಾಮ್ರಾಜ್ಯವನ್ನು ಮತ್ತು ಯುಕ್ತಿಯನ್ನು ನೀಡಿದನು ಮತ್ತು ತಾನಿಚ್ಛಿಸಿದ್ದನ್ನು ಅವರಿಗೆ ಕಲಿಸಿಕೊಟ್ಟನು. ಈ ರೀತಿ ಅಲ್ಲಾಹನು ಕೆಲವರನ್ನು ಮತ್ತೆ ಕೆಲವರ ಮೂಲಕ ತೊಲಗಿಸದೆ ಇದ್ದಿದ್ದರೆ, ಭೂಮಿಯಲ್ಲಿ ಖಂಡಿತ ವಿನಾಶ ಮೆರೆಯುತ್ತಿತ್ತು. ನಿಜವಾಗಿ ಅಲ್ಲಾಹನು ಸಕಲ ಲೋಕಗಳ ಪಾಲಿಗೆ ಉದಾರನಾಗಿದ್ದಾನೆ
252تِلْكَ آيَاتُ اللَّهِ نَتْلُوهَا عَلَيْكَ بِالْحَقِّ ۚ وَإِنَّكَ لَمِنَ الْمُرْسَلِينَ
(ದೂತರೇ,) ಇವು, ನಾವು ನಿಮಗೆ ಸರಿಯಾಗಿ ಓದಿ ಕೇಳಿಸುತ್ತಿರುವ ಅಲ್ಲಾಹನ ವಚನಗಳು. ಮತ್ತು ನೀವು ನಿಸ್ಸಂದೇಹವಾಗಿ ಅಲ್ಲಾಹನ ಒಬ್ಬ ದೂತರಾಗಿರುವಿರಿ
ಅಲ್-ಬಕರಾಕುರಾನ್ ಸೂಚಿ
286ಆಯತ್
MedinanRevelation
250ಆಯತ್

ಅನುವಾದ — ಅಲ್-ಬಕರಾ 250

ಸೂರಾ ಅಲ್-ಬಕರಾ ಆಯತ್ 250 - ಓದಿ, ಆಲಿಸಿ, ಅನುವಾದ, ಕನ್ನಡ : ಹೀಗೆ, ಜಾಲೂತ್ ಮತ್ತವನ ಸೇನೆಯೊಂದಿಗೆ ಅವರ ಮುಖಾಮುಖಿಯಾದಾಗ, ಅವರು ‘‘ನಮ್ಮೊಡೆಯಾ, ನಮಗೆ ಸಹನೆಯನ್ನು…

ಸೂರಾ ಆಯತ್ 250/286 — ಅಲ್-ಬಕರಾ البقرة (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಅಲ್-ಬಕರಾ ಆಲಿಸಿ, ಅಲ್-ಬಕರಾ ಅನುವಾದ, ಅಲ್-ಬಕರಾ mp3, ಅಲ್-ಬಕರಾ pdf. ಆಯತ್ 248–252. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Tuesday, August 18, 2026

Don't forget us in your sincere prayers