ಅಲ್-ಬಕರಾ · 251/286
ಅನುವಾದ ಉಚ್ಚಾರಣೆ — ಸೂರಾ ಅಲ್-ಬಕರಾ
فَهَزَمُوهُم بِإِذْنِ اللَّهِ وَقَتَلَ دَاوُودُ جَالُوتَ وَآتَاهُ اللَّهُ الْمُلْكَ وَالْحِكْمَةَ وَعَلَّمَهُ مِمَّا يَشَاءُ ۗ وَلَوْلَا دَفْعُ اللَّهِ النَّاسَ بَعْضَهُم بِبَعْضٍ لَّفَسَدَتِ الْأَرْضُ وَلَٰكِنَّ اللَّهَ ذُو فَضْلٍ عَلَى الْعَالَمِينَ ٢٥١
Transliteration
Fahazamoohum bi iznillaahi wa qatala Daawoodu jaaloota wa aataahul laahulmulka Wal Hikmata wa `allamahoo mimmaa yashaaa`; wa law laa daf`ullaahin naasa ba`dahum biba`dil lafasadatil ardu wa laakinnal laaha zoo fadlin `alal`aalameen
ಅನುವಾದ (ಕನ್ನಡ ಅರ್ಥ)
📖 ಕನ್ನಡ ಅರ್ಥ
ಹಾಗೆಯೇ ಅವರು ಅಲ್ಲಾಹನ ಅಪ್ಪಣೆಯಿಂದ ಅವರನ್ನು (ಜಾಲೂತ್ ಸೈನ್ಯವನ್ನು ಬೆನ್ನಟ್ಟಿ) ಸೋಲಿಸಿದರು ಹಾಗೂ ದಾವೂದರು ಜಾಲೂತನನ್ನು ಕೊಂದು ಹಾಕಿದರು. ಮತ್ತು ಅಲ್ಲಾಹನು ಅವರಿಗೆ ಅಧಿಪತ್ಯವನ್ನೂ, ಸುಜ್ಞಾನವನ್ನೂ ದಯಪಾಲಿಸಿದನು ಮತ್ತು ತಾನಿಚ್ಛಿಸಿದ್ದನ್ನು ಕಲಿಸಿದನು. ಮತ್ತು ಅಲ್ಲಾಹನು ಜನರ ಪೈಕಿ ಕೆಲವರನ್ನು ಇನ್ನು ಕೆಲವರ ಮೂಲಕ ತಡೆಯದಿರುತ್ತಿದ್ದರೆ ಖಂಡಿತವಾಗಿಯು ಭೂಮಿಯು ಕ್ಷೆÆÃಭೆಗೊಳಗಾಗುತ್ತಿತ್ತು. ಆದರೆ ಅಲ್ಲಾಹನು ಸರ್ವಲೋಕದವರ ಮೇಲೆ ಮಹಾ ಅನುಗ್ರಹ ದಾತನಾಗಿದ್ದಾನೆ.
Additional reference in தமிழ்
🎧 ಆಲಿಸಿ
📜 ಆಯತ್ 249-253 — ಸೂರಾ ಅಲ್-ಬಕರಾ
249فَلَمَّا فَصَلَ طَالُوتُ بِالْجُنُودِ قَالَ إِنَّ اللَّهَ مُبْتَلِيكُم بِنَهَرٍ فَمَن شَرِبَ مِنْهُ فَلَيْسَ مِنِّي وَمَن لَّمْ يَطْعَمْهُ فَإِنَّهُ مِنِّي إِلَّا مَنِ اغْتَرَفَ غُرْفَةً بِيَدِهِ ۚ فَشَرِبُوا مِنْهُ إِلَّا قَلِيلًا مِّنْهُمْ ۚ فَلَمَّا جَاوَزَهُ هُوَ وَالَّذِينَ آمَنُوا مَعَهُ قَالُوا لَا طَاقَةَ لَنَا الْيَوْمَ بِجَالُوتَ وَجُنُودِهِ ۚ قَالَ الَّذِينَ يَظُنُّونَ أَنَّهُم مُّلَاقُو اللَّهِ كَم مِّن فِئَةٍ قَلِيلَةٍ غَلَبَتْ فِئَةً كَثِيرَةً بِإِذْنِ اللَّهِ ۗ وَاللَّهُ مَعَ الصَّابِرِينَ
ಹಾಗೆಯೇ ತಾಲೂತ್ ಸೈನ್ಯದೊಂದಿಗೆ ಹೊರಟಾಗ ಹೇಳಿದರು; ಖಂಡಿತವಾಗಿಯೂ ಅಲ್ಲಾಹನು ಒಂದು ನದಿಯ ಮೂಲಕ ನಿಮ್ಮನ್ನು ಪರೀಕ್ಷಿಸುವವನಿದ್ದಾನೆ. ಯಾರು ಅದರಿಂದ ನೀರು ಕುಡಿಯುತ್ತಾನೋ ಅವನು ನನ್ನವನಲ್ಲ ಮತ್ತು ಯಾರು ಅದರ ರುಚಿಯನ್ನು ನೋಡುವುದಿಲ್ಲವೋ ನಿಜವಾಗಿಯು ಅವನು ನನ್ನವನು. ಆದರೆ ಯಾರು ತನ್ನ ಕೈಯಿಂದ ಒಂದು ಬೊಗಸೆಯಷ್ಟು ನೀರು ತೆಗೆಯುತ್ತಾನೋ ಅವನ ಹೊರತು. ಆದರೆ ಅವರ ಪೈಕಿ ಅತ್ಯಲ್ಪ ಮಂದಿಯನ್ನು ಬಿಟ್ಟು ಇತರರೆಲ್ಲರೂ ಅದರಿಂದ ಕುಡಿದರು. ಹಾಗೆಯೇ ಅವರು ಮತ್ತು ಅವರ ಜೊತೆ ವಿಶ್ವಾಸವಿರಿಸಿದವರೂ ಆ ನದಿಯನ್ನು ದಾಟಿದಾಗ ಅವರು ಹೇಳಿದರುÀ; ಇಂದು ನಮಗೆ ಜಾಲೂತ್ ಮತ್ತು ಅವನ ಸೈನ್ಯದೊಂದಿಗೆ ಹೋರಾಡುವ ಯಾವ ಶಕ್ತಿಯೂ ಇಲ್ಲ. ಆದರೆ ಅಲ್ಲಾಹನನ್ನು ಖಂಡಿತವಾಗಿಯು ಭೇಟಿಯಾಗಲಿರುವೆವೆಂದು ದೃಢವಾಗಿ ನಂಬಿದವರು ಹೇಳಿದರು; ಅದೆಷ್ಟೋ ಚಿಕ್ಕ ಚಿಕ್ಕ ಸೈನ್ಯಗಳು ದೊಡ್ಡ ದೊಡ್ಡ ಸೈನ್ಯಗಳನ್ನು ಅಲ್ಲಾಹನ ಅನುಮತಿಯೊಂದಿಗೆ ಸೋಲಿಸಿವೆ ಮತ್ತು ಅಲ್ಲಾಹನು ಸಹನೆ ವಹಿಸುವವರೊಂದಿಗಿದ್ದಾನೆ.
250وَلَمَّا بَرَزُوا لِجَالُوتَ وَجُنُودِهِ قَالُوا رَبَّنَا أَفْرِغْ عَلَيْنَا صَبْرًا وَثَبِّتْ أَقْدَامَنَا وَانصُرْنَا عَلَى الْقَوْمِ الْكَافِرِينَ
ಅವರು ಜಾಲೂತ್ ಮತ್ತು ಅವನ ಸೈನ್ಯವನ್ನು ಎದುರಿಸಲು ಹೊರಟಾಗ ಹೇಳಿದರು; ನಮ್ಮ ಪ್ರಭುವೇ ನಮಗೆ ಸ್ಥೆöÊರ್ಯವನ್ನು ಕರುಣಿಸು ಮತ್ತು ನಮ್ಮ ಪಾದಗಳನ್ನು ಸ್ಥಿರಗೊಳಿಸು ಹಾಗು ಅವಿಶ್ವಾಸಿಗಳ ವಿರುದ್ಧ ನಮಗೆ ಸಹಾಯ ಮಾಡು.
251فَهَزَمُوهُم بِإِذْنِ اللَّهِ وَقَتَلَ دَاوُودُ جَالُوتَ وَآتَاهُ اللَّهُ الْمُلْكَ وَالْحِكْمَةَ وَعَلَّمَهُ مِمَّا يَشَاءُ ۗ وَلَوْلَا دَفْعُ اللَّهِ النَّاسَ بَعْضَهُم بِبَعْضٍ لَّفَسَدَتِ الْأَرْضُ وَلَٰكِنَّ اللَّهَ ذُو فَضْلٍ عَلَى الْعَالَمِينَ
ಹಾಗೆಯೇ ಅವರು ಅಲ್ಲಾಹನ ಅಪ್ಪಣೆಯಿಂದ ಅವರನ್ನು (ಜಾಲೂತ್ ಸೈನ್ಯವನ್ನು ಬೆನ್ನಟ್ಟಿ) ಸೋಲಿಸಿದರು ಹಾಗೂ ದಾವೂದರು ಜಾಲೂತನನ್ನು ಕೊಂದು ಹಾಕಿದರು. ಮತ್ತು ಅಲ್ಲಾಹನು ಅವರಿಗೆ ಅಧಿಪತ್ಯವನ್ನೂ, ಸುಜ್ಞಾನವನ್ನೂ ದಯಪಾಲಿಸಿದನು ಮತ್ತು ತಾನಿಚ್ಛಿಸಿದ್ದನ್ನು ಕಲಿಸಿದನು. ಮತ್ತು ಅಲ್ಲಾಹನು ಜನರ ಪೈಕಿ ಕೆಲವರನ್ನು ಇನ್ನು ಕೆಲವರ ಮೂಲಕ ತಡೆಯದಿರುತ್ತಿದ್ದರೆ ಖಂಡಿತವಾಗಿಯು ಭೂಮಿಯು ಕ್ಷೆÆÃಭೆಗೊಳಗಾಗುತ್ತಿತ್ತು. ಆದರೆ ಅಲ್ಲಾಹನು ಸರ್ವಲೋಕದವರ ಮೇಲೆ ಮಹಾ ಅನುಗ್ರಹ ದಾತನಾಗಿದ್ದಾನೆ.
252تِلْكَ آيَاتُ اللَّهِ نَتْلُوهَا عَلَيْكَ بِالْحَقِّ ۚ وَإِنَّكَ لَمِنَ الْمُرْسَلِينَ
ಇವು ಅಲ್ಲಾಹನ ಪಾಠವಾಗಿದೆ. ಸತ್ಯದೊಂದಿಗೆ ಇವುಗಳನ್ನು ನಾವು ನಿಮ್ಮ ಮುಂದೆ ಓದಿ ಹೇಳುತ್ತೇವೆ ನಿಸ್ಸಂದೇಹವಾಗಿಯು ನೀವು ಸಂದೇಶವಾಹಕರಲ್ಲಿ ಒಬ್ಬರಾಗಿರುವಿರಿ.
253۞ تِلْكَ الرُّسُلُ فَضَّلْنَا بَعْضَهُمْ عَلَىٰ بَعْضٍ ۘ مِّنْهُم مَّن كَلَّمَ اللَّهُ ۖ وَرَفَعَ بَعْضَهُمْ دَرَجَاتٍ ۚ وَآتَيْنَا عِيسَى ابْنَ مَرْيَمَ الْبَيِّنَاتِ وَأَيَّدْنَاهُ بِرُوحِ الْقُدُسِ ۗ وَلَوْ شَاءَ اللَّهُ مَا اقْتَتَلَ الَّذِينَ مِن بَعْدِهِم مِّن بَعْدِ مَا جَاءَتْهُمُ الْبَيِّنَاتُ وَلَٰكِنِ اخْتَلَفُوا فَمِنْهُم مَّنْ آمَنَ وَمِنْهُم مَّن كَفَرَ ۚ وَلَوْ شَاءَ اللَّهُ مَا اقْتَتَلُوا وَلَٰكِنَّ اللَّهَ يَفْعَلُ مَا يُرِيدُ
ನಾವು ಆ ಸಂದೇಶವಾಹಕರಲ್ಲಿ ಕೆಲವರಿಗೆ ಇನ್ನು ಕೆಲವರಿಗಿಂತ ಶ್ರೇಷ್ಠತೆಯನ್ನು ದಯಪಾಲಿಸಿದೆವು. ಅವರ ಪೈಕಿ ಅಲ್ಲಾಹನು ಸಂಭಾಷಣೆ ನಡೆಸಿದವರು ಇದ್ದಾರೆ ಮತ್ತು ಅವನು ಅವರಲ್ಲಿ ಕೆಲವರಿಗೆ ಪದವಿಗಳನ್ನು ನೀಡಿ ಉನ್ನತಗೊಳಿಸಿದನು ಮತ್ತು ಮರ್ಯಮರ ಪುತ್ರ ಈಸಾರಿಗೆ ನಾವು ಸುಸ್ಪಷ್ಟ ಪುರಾವೆಗಳನ್ನು ದಯಪಾಲಿಸಿದೆವು ಹಾಗೂ ಅವರನ್ನು ಪವಿತ್ರಾತ್ಮನ ಮೂಲಕ ಬಲಪಡಿಸಿದೆವು ಮತ್ತು ಅಲ್ಲಾಹನು ಇಚ್ಛಿಸಿರುತ್ತಿದ್ದರೆ ತಮ್ಮಲ್ಲಿಗೆ ಸುಸ್ಪಷ್ಟ ಪುರಾವೆಗಳು ಬಂದ ಬಳಿಕವೂ ಅವರ ನಂತರದವರು ಪರಸ್ಪರ ಕಾದಾಡುತ್ತಿರಲಿಲ್ಲ. ಆದರೆ ಅವರು ಭಿನ್ನತೆ ತೋರಿದರು. ಹೀಗೆ ಅವರಲ್ಲಿ ಕೆಲವರು ಸತ್ಯ ವಿಶ್ವಾಸವಿರಿಸಿದರು ಇನ್ನು ಕೆಲವರು ಸತ್ಯನಿಷೇಧ ಕೈಗೊಂಡರು ಮತ್ತು ಅಲ್ಲಾಹನು ಇಚ್ಛಿಸಿರುತ್ತಿದ್ದರೆ ಅವರು ಪರಸ್ಪರ ಕಾದಾಡುತ್ತಿರಲಿಲ್ಲ. ಆದರೆ ಅಲ್ಲಾಹನು ತಾನಿಚ್ಛಿಸಿದ್ದನ್ನು ಮಾಡುತ್ತಾನೆ.
ಅಲ್-ಬಕರಾಕುರಾನ್ ಸೂಚಿ
286ಆಯತ್
MedinanRevelation
251ಆಯತ್
ಅನುವಾದ — ಅಲ್-ಬಕರಾ 251
ಸೂರಾ ಅಲ್-ಬಕರಾ ಆಯತ್ 251 - ಓದಿ, ಆಲಿಸಿ, ಅನುವಾದ, ಕನ್ನಡ : ಹಾಗೆಯೇ ಅವರು ಅಲ್ಲಾಹನ ಅಪ್ಪಣೆಯಿಂದ ಅವರನ್ನು (ಜಾಲೂತ್ ಸೈನ್ಯವನ್ನು ಬೆನ್ನಟ್ಟಿ) ಸೋಲಿಸಿದರು ಹಾಗೂ…ಸೂರಾ ಆಯತ್ 251/286 — ಸೂರಾ ಅಲ್-ಬಕರಾ البقرة (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಬಕರಾ ಆಲಿಸಿ, ಸೂರಾ ಅಲ್-ಬಕರಾ ಅನುವಾದ, ಸೂರಾ ಅಲ್-ಬಕರಾ mp3, ಸೂರಾ ಅಲ್-ಬಕರಾ pdf. ಆಯತ್ 249–253. ಕನ್ನಡ ಅರ್ಥ: தமிழ்.
العربية
English
Bahasa Indonesia
Türkçe
Русский
فارسی
Français
اردو
বাংলা
Deutsch
Español
中文
हिन्दी
Português
Italiano
ภาษาไทย
Polski
Nederlands
Shqip
Kiswahili
O'zbek
தமிழ்
Melayu
Bosanski
Soomaali
Azərbaycan
کوردی
한국어
日本語
Svenska
Dansk
Norsk
پښتو
മലയാളം
සිංහල
Tamazight
Hausa
አማርኛ
Български
Тоҷикӣ
Қазақша
Filipino
سنڌي
Yorùbá
Fulfulde
Татарча
ئۇيغۇرچە
Кыргызча
ਪੰਜਾਬੀ
Jawa
తెలుగు
မြန်မာ
ગુજરાતી
Oromo
मराठी
Tiếng Việt
Malagasy
Нохчийн
Wolof
ދިވެހި
ಕನ್ನಡ
Українська
Ελληνικά
ქართული
ខ្មែរ
دری
Qafar af
Maranao
नेपाली
ಪವಿತ್ರ ಕುರಾನ್
Tuesday, September 8, 2026
Don't forget us in your sincere prayers








