ಅಲ್-ಬಕರಾ · 257/286
ಅನುವಾದ ಉಚ್ಚಾರಣೆ — ಸೂರಾ ಅಲ್-ಬಕರಾ
اللَّهُ وَلِيُّ الَّذِينَ آمَنُوا يُخْرِجُهُم مِّنَ الظُّلُمَاتِ إِلَى النُّورِ ۖ وَالَّذِينَ كَفَرُوا أَوْلِيَاؤُهُمُ الطَّاغُوتُ يُخْرِجُونَهُم مِّنَ النُّورِ إِلَى الظُّلُمَاتِ ۗ أُولَٰئِكَ أَصْحَابُ النَّارِ ۖ هُمْ فِيهَا خَالِدُونَ ۝٢٥٧
Allaahu waliyyul lazeena aamanoo yukhrijuhum minaz zulumaati ilan noori wallazeena kafarooo awliyaaa`uhumut Taaghootu yukhrijoonahum minan noori ilaz zulumaat; ulaaa`ika Ashaabun Naari hum feehaa khaalidoon
📖 ಕನ್ನಡ ಅರ್ಥ
ಸತ್ಯವಿಶ್ವಾಸಿಗಳ ರಕ್ಷಕ ಮಿತ್ರನು ಅಲ್ಲಾಹನಾಗಿದ್ದಾನೆ. ಅವನು ಅವರನ್ನು ಅಂಧಕಾರಗಳಿAದ ಪ್ರಕಾಶದೆಡೆಗೆ ಹೊರತರುತ್ತಾನೆ. ಮತ್ತು ಸತ್ಯ ನಿಷೇಧಿಗಳ ಮಿತ್ರರು ಮಿಥ್ಯಾರಾಧ್ಯರಾಗಿದ್ದಾರೆ. ಅವರು ಅವರನ್ನು ಪ್ರಕಾಶದಿಂದ ಅಂಧಕಾರಗಳೆಡೆಗೆ ಕೊಂಡೊಯ್ಯುತ್ತಾರೆ. ಅವರು ನರಕವಾಸಿಗಳು. ಅವರು ಅದರಲ್ಲಿ ಶಾಶ್ವತರಾಗಿರುವರು.

🎧 ಆಲಿಸಿ


📜 ಆಯತ್ 255-259 — ಸೂರಾ ಅಲ್-ಬಕರಾ

255اللَّهُ لَا إِلَٰهَ إِلَّا هُوَ الْحَيُّ الْقَيُّومُ ۚ لَا تَأْخُذُهُ سِنَةٌ وَلَا نَوْمٌ ۚ لَّهُ مَا فِي السَّمَاوَاتِ وَمَا فِي الْأَرْضِ ۗ مَن ذَا الَّذِي يَشْفَعُ عِندَهُ إِلَّا بِإِذْنِهِ ۚ يَعْلَمُ مَا بَيْنَ أَيْدِيهِمْ وَمَا خَلْفَهُمْ ۖ وَلَا يُحِيطُونَ بِشَيْءٍ مِّنْ عِلْمِهِ إِلَّا بِمَا شَاءَ ۚ وَسِعَ كُرْسِيُّهُ السَّمَاوَاتِ وَالْأَرْضَ ۖ وَلَا يَئُودُهُ حِفْظُهُمَا ۚ وَهُوَ الْعَلِيُّ الْعَظِيمُ
ಅಲ್ಲಾಹ್ ಅವನ ಹೊರತು ಅನ್ಯ ನೈಜ ಆರಾಧ್ಯನಿಲ್ಲ. ಅವನು ಚಿರಂತನನು, ಸರ್ವ ನಿಯಂತ್ರಕನು. ಅವನಿಗೆ ತೂಕಡಿಕೆಯಾಗಲೀ, ನಿದ್ರೆಯಾಗಲೀ ಬಾಧಿಸದು. ಭೂಮಿ ಆಕಾಶಗಳಲ್ಲಿರುವುದೆಲ್ಲವೂ ಅವನ ಒಡೆತನದಲ್ಲ್ಲಿವೆ. ಅವನ ಅಪ್ಪಣೆಯಿಲ್ಲದೆ ಅವನ ಸನ್ನಿಧಿಯಲ್ಲಿ ಶಿಫಾರಸ್ಸು ಮಾಡುವವನಾರಿದ್ದಾನೆ? ಅವರ (ಮನುಷ್ಯರ) ಮುಂದಿರುವುದನ್ನೂ, ಅವರ ಹಿಂದಿರುವುದನ್ನೂ ಅವನು ಅರಿಯುತ್ತಾನೆ. ಅವನು ಇಚ್ಛಿಸಿರುವುದರ ಹೊರತು ಅವನ ಜ್ಞಾನದಿಂದ ಯಾವುದನ್ನೂ ಅವರು ಪಡೆಯಲಾರರು; ಅವನ 'ಕುರ್ಸಿ'ಯು ಭೂಮಿ ಆಕಾಶಗಳನ್ನು ಆವರಿಸಿದೆ ಅವೆರಡರ ಸಂರಕ್ಷಣೆಯಿAದ ಅವನು ದಣಿಯುವುದಿಲ್ಲ, ಮತ್ತು ಅವನು ಅತ್ಯುನ್ನತನೂ, ಮಹಾನನೂ ಆಗಿರುತ್ತಾನೆ.
256لَا إِكْرَاهَ فِي الدِّينِ ۖ قَد تَّبَيَّنَ الرُّشْدُ مِنَ الْغَيِّ ۚ فَمَن يَكْفُرْ بِالطَّاغُوتِ وَيُؤْمِن بِاللَّهِ فَقَدِ اسْتَمْسَكَ بِالْعُرْوَةِ الْوُثْقَىٰ لَا انفِصَامَ لَهَا ۗ وَاللَّهُ سَمِيعٌ عَلِيمٌ
ಧರ್ಮ ಸ್ವೀಕಾರದ ವಿಷಯದಲ್ಲಿ ಯಾವುದೇ ಬಲವಂತವಿಲ್ಲ. ಸನ್ಮಾರ್ಗವೂ ದುರ್ಮಾರ್ಗದಿಂದ ಪೂರ್ಣ ಬೇರ್ಪಟ್ಟು ಪ್ರತ್ಯೇಕವಾಗಿದೆ. ಆದ್ದರಿಂದ ಯಾರು ಮಿಥ್ಯಾರಾಧ್ಯರನ್ನು ತಿರಸ್ಕರಿಸಿ ಅಲ್ಲಾಹನಲ್ಲಿ ವಿಶ್ವಾಸವಿಡುತ್ತಾನೋ ಅವನು ಎಂದಿಗೂ ಮುರಿಯದ ಸದೃಢ ಆಶ್ರಯವನ್ನು ಅವಲಂಬಿಸಿದನು. ಅಲ್ಲಾಹನು ಸರ್ವವನ್ನಾಲಿಸುವವನೂ, ಸರ್ವಜ್ಞಾನಿಯೂ ಆಗಿದ್ದಾನೆ.
257اللَّهُ وَلِيُّ الَّذِينَ آمَنُوا يُخْرِجُهُم مِّنَ الظُّلُمَاتِ إِلَى النُّورِ ۖ وَالَّذِينَ كَفَرُوا أَوْلِيَاؤُهُمُ الطَّاغُوتُ يُخْرِجُونَهُم مِّنَ النُّورِ إِلَى الظُّلُمَاتِ ۗ أُولَٰئِكَ أَصْحَابُ النَّارِ ۖ هُمْ فِيهَا خَالِدُونَ
ಸತ್ಯವಿಶ್ವಾಸಿಗಳ ರಕ್ಷಕ ಮಿತ್ರನು ಅಲ್ಲಾಹನಾಗಿದ್ದಾನೆ. ಅವನು ಅವರನ್ನು ಅಂಧಕಾರಗಳಿAದ ಪ್ರಕಾಶದೆಡೆಗೆ ಹೊರತರುತ್ತಾನೆ. ಮತ್ತು ಸತ್ಯ ನಿಷೇಧಿಗಳ ಮಿತ್ರರು ಮಿಥ್ಯಾರಾಧ್ಯರಾಗಿದ್ದಾರೆ. ಅವರು ಅವರನ್ನು ಪ್ರಕಾಶದಿಂದ ಅಂಧಕಾರಗಳೆಡೆಗೆ ಕೊಂಡೊಯ್ಯುತ್ತಾರೆ. ಅವರು ನರಕವಾಸಿಗಳು. ಅವರು ಅದರಲ್ಲಿ ಶಾಶ್ವತರಾಗಿರುವರು.
258أَلَمْ تَرَ إِلَى الَّذِي حَاجَّ إِبْرَاهِيمَ فِي رَبِّهِ أَنْ آتَاهُ اللَّهُ الْمُلْكَ إِذْ قَالَ إِبْرَاهِيمُ رَبِّيَ الَّذِي يُحْيِي وَيُمِيتُ قَالَ أَنَا أُحْيِي وَأُمِيتُ ۖ قَالَ إِبْرَاهِيمُ فَإِنَّ اللَّهَ يَأْتِي بِالشَّمْسِ مِنَ الْمَشْرِقِ فَأْتِ بِهَا مِنَ الْمَغْرِبِ فَبُهِتَ الَّذِي كَفَرَ ۗ وَاللَّهُ لَا يَهْدِي الْقَوْمَ الظَّالِمِينَ
ಅಲ್ಲಾಹನು ಅಧಿಪತ್ಯ ನೀಡಿದ ಕಾರಣದಿಂದ (ಪೈಗಂಬರ್) ಇಬ್ರಾಹೀಮ ರೊಂದಿಗೆ ಅವರ ಪ್ರಭುವಿನ ವಿಚಾರದಲ್ಲಿ ವಾಗ್ವಾದ ನಡೆಸಿದವನ ಕಡೆಗೆ ನೀವು ನೋಡಲಿಲ್ಲವೇ? ನನ್ನ ಪ್ರಭು ಜೀವ ಮತ್ತು ಮರಣ ನೀಡುವವನಾಗಿರುವನು ಎಂದು ಇಬ್ರಾಹೀಮ್(ಅ) ಹೇಳಿದಾಗ ನಾನೂ ಜೀವ ಮತ್ತು ಮರಣವನ್ನು ಕೊಡುತ್ತೇನೆ ಎಂದು ಅವನು ಹೇಳಿದನು. ಆಗ (ಪೈಗಂಬರ್) ಇಬ್ರಾಹೀಮ್ ಹೇಳಿದರು; ಅಲ್ಲಾಹನು ಪೂರ್ವದಿಂದ ಸೂರ್ಯನನ್ನು ತರುತ್ತಾನೆ. ನೀನದನ್ನು ಪಶ್ಚಿಮದಿಂದ ತಾ. ಆಗ ಆ ಸತ್ಯನಿಷೇಧಿ ದಿಗ್ಭçಮೆಗೊಂಡನು ಮತ್ತು ಅಲ್ಲ್ಲಾಹನು ಅಕ್ರಮಿ ಜನರಿಗೆ ಸನ್ಮಾರ್ಗವನ್ನು ಕರುಣಿಸುವುದಿಲ್ಲ.
259أَوْ كَالَّذِي مَرَّ عَلَىٰ قَرْيَةٍ وَهِيَ خَاوِيَةٌ عَلَىٰ عُرُوشِهَا قَالَ أَنَّىٰ يُحْيِي هَٰذِهِ اللَّهُ بَعْدَ مَوْتِهَا ۖ فَأَمَاتَهُ اللَّهُ مِائَةَ عَامٍ ثُمَّ بَعَثَهُ ۖ قَالَ كَمْ لَبِثْتَ ۖ قَالَ لَبِثْتُ يَوْمًا أَوْ بَعْضَ يَوْمٍ ۖ قَالَ بَل لَّبِثْتَ مِائَةَ عَامٍ فَانظُرْ إِلَىٰ طَعَامِكَ وَشَرَابِكَ لَمْ يَتَسَنَّهْ ۖ وَانظُرْ إِلَىٰ حِمَارِكَ وَلِنَجْعَلَكَ آيَةً لِّلنَّاسِ ۖ وَانظُرْ إِلَى الْعِظَامِ كَيْفَ نُنشِزُهَا ثُمَّ نَكْسُوهَا لَحْمًا ۚ فَلَمَّا تَبَيَّنَ لَهُ قَالَ أَعْلَمُ أَنَّ اللَّهَ عَلَىٰ كُلِّ شَيْءٍ قَدِيرٌ
ಅಥವಾ ಛಾವಣಿಗಳೊಂದಿಗೆ ಕುಸಿದು ಬಿದ್ದಿದ್ದಂತಹ ನಾಡೊಂದನ್ನು ಹಾದು ಹೋಗುತ್ತಿದ್ದ ವ್ಯಕ್ತಿಯ ದೃಷ್ಟಾಂತವನ್ನು ನೀವು ನೋಡಲಿಲ್ಲವೇ? ಅವನು ಹೇಳಿದನು. ಇದರ ನಿರ್ಜೀವಾವಸ್ಥೆಯ ಬಳಿಕ ಅಲ್ಲಾಹನು ಇದನ್ನು ಹೇಗೆ ಜೀವಂತಗೊಳಿಸುವನು? ಆಗ ಅವನನ್ನು ಅಲ್ಲಾಹನು ನೂರು ವರ್ಷಗಳವರೆಗೆ ಮರಣಗೊಳಿಸಿದನು. ಅನಂತರ ಅವನನ್ನು ಎಬ್ಬಿಸಿ ಕೇಳಿದನು; ನಿನ್ನ ಮೇಲೆ ಎಷ್ಟು ಕಾಲ ಸರಿದಿದೆ? ಒಂದು ದಿನ ಅಥವಾ ದಿನದ ಸ್ವಲ್ಪ ಸಮಯ ಎಂದನು. ಅಲ್ಲಾಹನು ಹೇಳಿದನು; ಹಾಗಲ್ಲ! ವಸ್ತುತಃ ನೀನು ನೂರು ವರ್ಷಗಳ ಕಾಲ ಈ ಸ್ಥಿತಿಯಲಿದ್ದೆ ಇನ್ನು ನೀನು ನಿನ್ನ ಆಹಾರ ಪಾನೀಯದೆಡೆಗೆ ನೋಡು. ಒಂದಿಷ್ಟೂ ಹಾಳಾಗಿರುವುದಿಲ್ಲ. ಮತ್ತು ನಿನ್ನ ಕತ್ತೆಯೆಡೆಗೂ ನೋಡು(ಅದರ ಅಸ್ಥಿಪಂಜರವೂ ಶಿಥಿಲವಾಗಿ ಹೋಗಿದೆ). ನಾವು ನಿನ್ನನ್ನು ಜನರಿಗೆ ಒಂದು ನಿದರ್ಶನವನ್ನಾಗಿ ಮಾಡುತ್ತೇವೆ. ನೀನು ಎಲುಬುಗಳೆಡೆಗೆ ನೋಡು ನಾವು ಅವುಗಳನ್ನು ಹೇಗೆ ಸೃಷ್ಟಿಸುತ್ತೇವೆ ಅನಂತರ ಅವುಗಳಿಗೆ ಮಾಂಸವನ್ನು ಹೊದಿಸುತ್ತೇವೆಂದು. ಹಾಗೇಯೇ, ಅವನಿಗೆ ಎಲ್ಲವೂ ಸ್ಪಷ್ಟವಾದಾಗ ನಿಸ್ಸಂಶಯವಾಗಿಯು ಅಲ್ಲಾಹನು ಸಕಲ ಸಂಗತಿಗಳ ಮೇಲೆ ಸಾಮರ್ಥ್ಯವುಳ್ಳವನೆಂದು ನಾನು ಖಂಡಿತವಾಗಿ ಅರಿತಿದ್ದೇನೆ ಎಂದು ಹೇಳಿದನು.
ಅಲ್-ಬಕರಾಕುರಾನ್ ಸೂಚಿ
286ಆಯತ್
MedinanRevelation
257ಆಯತ್

ಅನುವಾದ — ಅಲ್-ಬಕರಾ 257

ಸೂರಾ ಅಲ್-ಬಕರಾ ಆಯತ್ 257 - ಓದಿ, ಆಲಿಸಿ, ಅನುವಾದ, ಕನ್ನಡ : ಸತ್ಯವಿಶ್ವಾಸಿಗಳ ರಕ್ಷಕ ಮಿತ್ರನು ಅಲ್ಲಾಹನಾಗಿದ್ದಾನೆ. ಅವನು ಅವರನ್ನು ಅಂಧಕಾರಗಳಿAದ ಪ್ರಕಾಶದೆಡೆಗೆ ಹೊರತರುತ್ತಾನೆ. ಮತ್ತು…

ಸೂರಾ ಆಯತ್ 257/286 — ಸೂರಾ ಅಲ್-ಬಕರಾ البقرة (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಬಕರಾ ಆಲಿಸಿ, ಸೂರಾ ಅಲ್-ಬಕರಾ ಅನುವಾದ, ಸೂರಾ ಅಲ್-ಬಕರಾ mp3, ಸೂರಾ ಅಲ್-ಬಕರಾ pdf. ಆಯತ್ 255–259. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Monday, September 7, 2026

Don't forget us in your sincere prayers