ಅಲ್-ಬಕರಾ · 257/286
ಅನುವಾದ ಉಚ್ಚಾರಣೆ — ಅಲ್-ಬಕರಾ
اللَّهُ وَلِيُّ الَّذِينَ آمَنُوا يُخْرِجُهُم مِّنَ الظُّلُمَاتِ إِلَى النُّورِ ۖ وَالَّذِينَ كَفَرُوا أَوْلِيَاؤُهُمُ الطَّاغُوتُ يُخْرِجُونَهُم مِّنَ النُّورِ إِلَى الظُّلُمَاتِ ۗ أُولَٰئِكَ أَصْحَابُ النَّارِ ۖ هُمْ فِيهَا خَالِدُونَ ۝٢٥٧
Allaahu waliyyul lazeena aamanoo yukhrijuhum minaz zulumaati ilan noori wallazeena kafarooo awliyaaa`uhumut Taaghootu yukhrijoonahum minan noori ilaz zulumaat; ulaaa`ika Ashaabun Naari hum feehaa khaalidoon
📖 ಕನ್ನಡ ಅರ್ಥ
ಅಲ್ಲಾಹನು ವಿಶ್ವಾಸಿಗಳ ಪೋಷಕನಾಗಿದ್ದಾನೆ. ಅವನು ಅವರನ್ನು ಕತ್ತಲುಗಳಿಂದ ಹೊರತೆಗೆದು ಬೆಳಕಿನೆಡೆಗೆ ನಡೆಸುತ್ತಾನೆ ಮತ್ತು ಸತ್ಯವನ್ನು ಧಿಕ್ಕರಿಸಿದವರ ಪಾಲಿಗೆ, ಮಿಥ್ಯ ಶಕ್ತಿಗಳೇ ಪರಮಮಿತ್ರರು. ಅವು ಅವರನ್ನು ಬೆಳಕಿನಿಂದ ಹೊರತೆಗೆದು ಕತ್ತಲುಗಳೆಡೆಗೆ ನಡೆಸುತ್ತವೆ. ಅವರು ನರಕದವರು. ಅವರು ಸದಾಕಾಲ ಅಲ್ಲೇ ಇರುವರು
🎧 ಆಲಿಸಿ

📜 ಆಯತ್ 255-259 — ಅಲ್-ಬಕರಾ

255اللَّهُ لَا إِلَٰهَ إِلَّا هُوَ الْحَيُّ الْقَيُّومُ ۚ لَا تَأْخُذُهُ سِنَةٌ وَلَا نَوْمٌ ۚ لَّهُ مَا فِي السَّمَاوَاتِ وَمَا فِي الْأَرْضِ ۗ مَن ذَا الَّذِي يَشْفَعُ عِندَهُ إِلَّا بِإِذْنِهِ ۚ يَعْلَمُ مَا بَيْنَ أَيْدِيهِمْ وَمَا خَلْفَهُمْ ۖ وَلَا يُحِيطُونَ بِشَيْءٍ مِّنْ عِلْمِهِ إِلَّا بِمَا شَاءَ ۚ وَسِعَ كُرْسِيُّهُ السَّمَاوَاتِ وَالْأَرْضَ ۖ وَلَا يَئُودُهُ حِفْظُهُمَا ۚ وَهُوَ الْعَلِيُّ الْعَظِيمُ
ಅಲ್ಲಾಹ್ – ಅವನ ಹೊರತು ಪೂಜೆಗೆ ಅರ್ಹರು ಬೇರಾರೂ ಇಲ್ಲ. ಅವನು ಸದಾ ಜೀವಂತನು, ಎಲ್ಲರ ನಿಯಂತ್ರಕನು. ತೂಕಡಿಕೆಯಾಗಲಿ ನಿದ್ದೆಯಾಗಲಿ ಅವನನ್ನು ಬಾಧಿಸುವುದಿಲ್ಲ. ಆಕಾಶಗಳಲ್ಲಿರುವ ಮತ್ತು ಭೂಮಿಯಲ್ಲಿರುವ ಎಲ್ಲವೂ ಅವನದೇ. ಅವನ ಮುಂದೆ, ಅವನ ಅಪ್ಪಣೆ ಇಲ್ಲದೆ ಶಿಫಾರಸು ಮಾಡಬಲ್ಲವರು ಯಾರು? ಅವರ (ಜನರ) ಮುಂದಿರುವ ಮತ್ತು ಅವರ ಹಿಂದಿರುವ ಎಲ್ಲವನ್ನೂ ಅವನು ಬಲ್ಲನು. ಅವನ ಜ್ಞಾನದ ಯಾವ ಅಂಶವನ್ನೂ ಗ್ರಹಿಸಲು ಅವರಿಗೆ ಸಾಧ್ಯವಿಲ್ಲ – ಅವನೇ ಇಚ್ಛಿಸುವಷ್ಟರ ಹೊರತು. ಅವನ ಅಧಿಕಾರ ಪೀಠವು ಆಕಾಶಗಳನ್ನು ಮತ್ತು ಭೂಮಿಯನ್ನು ಆವರಿಸಿದೆ. ಅವುಗಳ ಸಂರಕ್ಷಣೆಯ ಕೆಲಸವು ಅವನನ್ನು ದಣಿಸುವುದಿಲ್ಲ. ಮತ್ತು ಅವನು ಅತ್ಯುನ್ನತನೂ, ಮಹಾನನೂ ಆಗಿದ್ದಾನೆ
256لَا إِكْرَاهَ فِي الدِّينِ ۖ قَد تَّبَيَّنَ الرُّشْدُ مِنَ الْغَيِّ ۚ فَمَن يَكْفُرْ بِالطَّاغُوتِ وَيُؤْمِن بِاللَّهِ فَقَدِ اسْتَمْسَكَ بِالْعُرْوَةِ الْوُثْقَىٰ لَا انفِصَامَ لَهَا ۗ وَاللَّهُ سَمِيعٌ عَلِيمٌ
ಧರ್ಮದಲ್ಲಿ ಬಲವಂತವಿಲ್ಲ. ಖಂಡಿತವಾಗಿಯೂ ಸರಿದಾರಿಯು ತಪ್ಪು ದಾರಿಗಳಿಂದ ಪ್ರತ್ಯೇಕವಾಗಿದೆ. ಎಲ್ಲ ಮಿಥ್ಯ ಶಕ್ತಿಗಳನ್ನು ಧಿಕ್ಕರಿಸಿ ಅಲ್ಲಾಹನಲ್ಲಿ ನಂಬಿಕೆ ಇಟ್ಟವನು ಬಲಿಷ್ಠ ಆಶ್ರಯವೊಂದನ್ನು ಅವಲಂಬಿಸಿದನು. ಅದು ಎಂದಿಗೂ ಮುರಿಯದ ಆಶ್ರಯವಾಗಿದೆ ಮತ್ತು ಅಲ್ಲಾಹನು ಎಲ್ಲವನ್ನೂ ಕೇಳುವವನೂ ಎಲ್ಲವನ್ನೂ ಬಲ್ಲವನೂ ಆಗಿದ್ದಾನೆ
257اللَّهُ وَلِيُّ الَّذِينَ آمَنُوا يُخْرِجُهُم مِّنَ الظُّلُمَاتِ إِلَى النُّورِ ۖ وَالَّذِينَ كَفَرُوا أَوْلِيَاؤُهُمُ الطَّاغُوتُ يُخْرِجُونَهُم مِّنَ النُّورِ إِلَى الظُّلُمَاتِ ۗ أُولَٰئِكَ أَصْحَابُ النَّارِ ۖ هُمْ فِيهَا خَالِدُونَ
ಅಲ್ಲಾಹನು ವಿಶ್ವಾಸಿಗಳ ಪೋಷಕನಾಗಿದ್ದಾನೆ. ಅವನು ಅವರನ್ನು ಕತ್ತಲುಗಳಿಂದ ಹೊರತೆಗೆದು ಬೆಳಕಿನೆಡೆಗೆ ನಡೆಸುತ್ತಾನೆ ಮತ್ತು ಸತ್ಯವನ್ನು ಧಿಕ್ಕರಿಸಿದವರ ಪಾಲಿಗೆ, ಮಿಥ್ಯ ಶಕ್ತಿಗಳೇ ಪರಮಮಿತ್ರರು. ಅವು ಅವರನ್ನು ಬೆಳಕಿನಿಂದ ಹೊರತೆಗೆದು ಕತ್ತಲುಗಳೆಡೆಗೆ ನಡೆಸುತ್ತವೆ. ಅವರು ನರಕದವರು. ಅವರು ಸದಾಕಾಲ ಅಲ್ಲೇ ಇರುವರು
258أَلَمْ تَرَ إِلَى الَّذِي حَاجَّ إِبْرَاهِيمَ فِي رَبِّهِ أَنْ آتَاهُ اللَّهُ الْمُلْكَ إِذْ قَالَ إِبْرَاهِيمُ رَبِّيَ الَّذِي يُحْيِي وَيُمِيتُ قَالَ أَنَا أُحْيِي وَأُمِيتُ ۖ قَالَ إِبْرَاهِيمُ فَإِنَّ اللَّهَ يَأْتِي بِالشَّمْسِ مِنَ الْمَشْرِقِ فَأْتِ بِهَا مِنَ الْمَغْرِبِ فَبُهِتَ الَّذِي كَفَرَ ۗ وَاللَّهُ لَا يَهْدِي الْقَوْمَ الظَّالِمِينَ
ಇಬ್ರಾಹೀಮರೊಡನೆ ಅವರ ಒಡೆಯನ ಕುರಿತು ಜಗಳಕ್ಕಿಳಿದಾತನನ್ನ್ನು ನೀವು ಕಾಣಲಿಲ್ಲವೇ? ಅಲ್ಲಾಹನು ಆತನಿಗೆ ಸಾಮ್ರಾಜ್ಯವನ್ನು ನೀಡಿದ್ದನು. ‘‘ಜೀವಂತ ಗೊಳಿಸುವವನು ಮತ್ತು ಸಾಯಿಸುವವನೇ ನನ್ನ ದೇವರು’’ ಎಂದು ಇಬ್ರಾಹೀಮರು ಹೇಳಿದಾಗ ಆತನು ‘‘ನಾನೂ ಜೀವ ನೀಡುತ್ತೇನೆ ಮತ್ತು ನಾನೂ ಸಾಯಿಸುತ್ತೇನೆ’’ ಎಂದನು. ಆಗ ಇಬ್ರಾಹೀಮರು ‘‘ಅಲ್ಲಾಹನು ಸೂರ್ಯವನ್ನು ಪೂರ್ವದಿಂದ ಉದಯಿಸುತ್ತಾನೆ ನೀನು ಅದನ್ನು ಪಶ್ಚಿಮದಿಂದ ಉದಯಿಸು’’ ಎಂದರು. ಆ ಧಿಕ್ಕಾರಿ ಬೆಚ್ಚಿಬಿದ್ದನು. ಅಲ್ಲಾಹನು ಅಕ್ರಮಿಗಳ ಪಂಗಡಕ್ಕೆ ಮಾರ್ಗದರ್ಶನ ನೀಡುವುದಿಲ್ಲ
259أَوْ كَالَّذِي مَرَّ عَلَىٰ قَرْيَةٍ وَهِيَ خَاوِيَةٌ عَلَىٰ عُرُوشِهَا قَالَ أَنَّىٰ يُحْيِي هَٰذِهِ اللَّهُ بَعْدَ مَوْتِهَا ۖ فَأَمَاتَهُ اللَّهُ مِائَةَ عَامٍ ثُمَّ بَعَثَهُ ۖ قَالَ كَمْ لَبِثْتَ ۖ قَالَ لَبِثْتُ يَوْمًا أَوْ بَعْضَ يَوْمٍ ۖ قَالَ بَل لَّبِثْتَ مِائَةَ عَامٍ فَانظُرْ إِلَىٰ طَعَامِكَ وَشَرَابِكَ لَمْ يَتَسَنَّهْ ۖ وَانظُرْ إِلَىٰ حِمَارِكَ وَلِنَجْعَلَكَ آيَةً لِّلنَّاسِ ۖ وَانظُرْ إِلَى الْعِظَامِ كَيْفَ نُنشِزُهَا ثُمَّ نَكْسُوهَا لَحْمًا ۚ فَلَمَّا تَبَيَّنَ لَهُ قَالَ أَعْلَمُ أَنَّ اللَّهَ عَلَىٰ كُلِّ شَيْءٍ قَدِيرٌ
ಅಥವಾ, ತನ್ನ ಚಪ್ಪರಗಳ ಮೇಲೆ ಕುಸಿದು ಬಿದ್ದಿದ್ದ (ಸಂಪೂರ್ಣ ಬುಡಮೇಲಾಗಿದ್ದ) ಒಂದು ಊರಿನಿಂದ ಹಾದು ಹೋಗುತ್ತಿದ್ದ ವ್ಯಕ್ತಿಯನ್ನು (ನೀವು ಕಾಣಲಿಲ್ಲವೇ)? ಅವನು ‘‘ಇದು (ಈ ಊರು, ಹೀಗೆ) ಸತ್ತು ಬಿದ್ದ ಬಳಿಕ ಇದನ್ನು ಅಲ್ಲಾಹನು ಹೇಗೆ ತಾನೇ ಮತ್ತೆ ಜೀವಂತಗೊಳಿಸುತ್ತಾನೆ?’’ ಎಂದನು. ಅಲ್ಲಾಹನು ಆತನನ್ನು ನೂರು ವರ್ಷಗಳ ಅವಧಿಗೆ ಸಾಯಿಸಿದನು. ಆ ಬಳಿಕ ಅವನನ್ನು ಮತ್ತೆ ಜೀವಂತಗೊಳಿಸಿ ‘‘ನೀನು (ಸತ್ತ ಸ್ಥಿತಿಯಲ್ಲಿ) ಎಷ್ಟು ಕಾಲ ಇದ್ದೆ ?’’ ಎಂದು ವಿಚಾರಿಸಿದನು. ‘‘ನಾನು ಒಂದು ದಿನ ಅಥವಾ ದಿನದ ಒಂದು ಭಾಗದಷ್ಟು ಕಾಲ ಆ ಸ್ಥಿತಿಯಲ್ಲಿದ್ದೆ ’’ ಎಂದು ಆತನು ಹೇಳಿದನು. ಆಗ ಅವನು (ಅಲ್ಲಾಹನು) ಹೇಳಿದನು; ‘‘ನಿಜವಾಗಿ ನೀನು ನೂರು ವರ್ಷ (ಆ ಸ್ಥಿತಿಯಲ್ಲಿ) ಇದ್ದೆ. ಇದೀಗ ನೀನು ನಿನ್ನ ಆಹಾರ ಮತ್ತು ನಿನ್ನ ಪಾನೀಯವನ್ನು ನೋಡು. ಅವು ಹಳಸಲಾಗಿಲ್ಲ. ಹಾಗೆಯೇ ನಿನ್ನ ಕತ್ತೆಯನ್ನೊಮ್ಮೆ ನೋಡು. ನಾವು ನಿನ್ನನ್ನು ಜನರ ಪಾಲಿಗೆ ಒಂದು ಪುರಾವೆಯಾಗಿಸುವೆವು. ಮತ್ತು (ಆ ಸತ್ತ ಕತ್ತೆಯ) ಎಲುಬುಗಳನ್ನು ನಾವು ಯಾವ ರೀತಿ ಮತ್ತೆ ಜೋಡಿಸುತ್ತೇವೆ ಮತ್ತು ಅವುಗಳಿಗೆ ಯಾವ ರೀತಿ ಮಾಂಸದ ಪೋಷಾಕನ್ನು ತೊಡಿಸುತ್ತೇವೆಂದು ನೋಡು’’. ಕೊನೆಗೆ ಆತನಿಗೆ (ಸತ್ಯವು) ಸ್ಪಷ್ಟವಾದಾಗ ಅವನು ‘‘ಅಲ್ಲಾಹನು ಎಲ್ಲವನ್ನೂ ಮಾಡಲು ಶಕ್ತನೆಂಬುದು ನನಗೆ ತಿಳಿಯಿತು’’ ಎಂದನು
ಅಲ್-ಬಕರಾಕುರಾನ್ ಸೂಚಿ
286ಆಯತ್
MedinanRevelation
257ಆಯತ್

ಅನುವಾದ — ಅಲ್-ಬಕರಾ 257

ಸೂರಾ ಅಲ್-ಬಕರಾ ಆಯತ್ 257 - ಓದಿ, ಆಲಿಸಿ, ಅನುವಾದ, ಕನ್ನಡ : ಅಲ್ಲಾಹನು ವಿಶ್ವಾಸಿಗಳ ಪೋಷಕನಾಗಿದ್ದಾನೆ. ಅವನು ಅವರನ್ನು ಕತ್ತಲುಗಳಿಂದ ಹೊರತೆಗೆದು ಬೆಳಕಿನೆಡೆಗೆ ನಡೆಸುತ್ತಾನೆ ಮತ್ತು…

ಸೂರಾ ಆಯತ್ 257/286 — ಅಲ್-ಬಕರಾ البقرة (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಅಲ್-ಬಕರಾ ಆಲಿಸಿ, ಅಲ್-ಬಕರಾ ಅನುವಾದ, ಅಲ್-ಬಕರಾ mp3, ಅಲ್-ಬಕರಾ pdf. ಆಯತ್ 255–259. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Tuesday, August 18, 2026

Don't forget us in your sincere prayers