ಅಲ್-ಬಕರಾ · 260/286
ಅನುವಾದ ಉಚ್ಚಾರಣೆ — ಅಲ್-ಬಕರಾ
وَإِذْ قَالَ إِبْرَاهِيمُ رَبِّ أَرِنِي كَيْفَ تُحْيِي الْمَوْتَىٰ ۖ قَالَ أَوَلَمْ تُؤْمِن ۖ قَالَ بَلَىٰ وَلَٰكِن لِّيَطْمَئِنَّ قَلْبِي ۖ قَالَ فَخُذْ أَرْبَعَةً مِّنَ الطَّيْرِ فَصُرْهُنَّ إِلَيْكَ ثُمَّ اجْعَلْ عَلَىٰ كُلِّ جَبَلٍ مِّنْهُنَّ جُزْءًا ثُمَّ ادْعُهُنَّ يَأْتِينَكَ سَعْيًا ۚ وَاعْلَمْ أَنَّ اللَّهَ عَزِيزٌ حَكِيمٌ ۝٢٦٠
Wa iz qaala Ibraaheemu Rabbi arinee kaifa tuhyil mawtaa qaala awa lam tu`min qaala balaa wa laakil liyatma`inna qalbee qaala fakhuz arab`atam minal tairi fasurhunna ilaika summaj `al a`alaa kulli jabalim minhunna juz`an sumaad `uhunna yaateenaka sa`yaa; wa`lam annal laaha `Azeezun Hakeem
📖 ಕನ್ನಡ ಅರ್ಥ
ಮತ್ತು ಇಬ್ರಾಹೀಮರು, ‘‘ನನ್ನೊಡೆಯಾ, ನೀನು ಸತ್ತವರನ್ನು ಜೀವಂತ ಗೊಳಿಸುವುದು ಹೇಗೆ ಎಂಬುದನ್ನು ನನಗೆ ತೋರಿಸಿಕೊಡು’’ ಎಂದಾಗ ಅವನು (ಅಲ್ಲಾಹನು) ‘‘ನಿಮಗೆ ನಂಬಿಕೆ ಇಲ್ಲವೇ?’’ ಎಂದು ಕೇಳಿದನು. ಅವರು, ‘‘(ನಂಬಿಕೆ) ಖಂಡಿತ ಇದೆ. ಆದರೂ ನನ್ನ ಮನಸ್ಸಿನ ತೃಪ್ತಿಗಾಗಿ (ಕೇಳುತ್ತಿದ್ದೇನೆ)’’ ಎಂದರು. ಅವನು ಹೇಳಿದನು; ‘‘ನೀವೀಗ ನಾಲ್ಕು ಪಕ್ಷಿಗಳನ್ನು ಹಿಡಿದು ತನ್ನಿರಿ ಮತ್ತು ಅವು ನಿಮ್ಮನ್ನು ಗುರುತಿಸುವಂತೆ ಅವುಗಳನ್ನು ಪಳಗಿಸಿರಿ. ಆ ಬಳಿಕ, (ಅವುಗಳನ್ನು ತುಂಡರಿಸಿ) ಅವುಗಳ ಭಾಗಗಳನ್ನು ಪ್ರತ್ಯೇಕ ಬೆಟ್ಟಗಳ ಮೇಲಿಟ್ಟು, ಅವುಗಳನ್ನು ಕೂಗಿ ಕರೆಯಿರಿ. ಅವು ಓಡೋಡಿ ನಿಮ್ಮ ಬಳಿಗೆ ಬರುವವು. ನಿಮಗೆ ತಿಳಿದಿರಲಿ, ಅಲ್ಲಾಹನು ಮಹಾ ಪ್ರಬಲನು ಮತ್ತು ಯುಕ್ತಿವಂತನಾಗಿದ್ದಾನೆ ’’
🎧 ಆಲಿಸಿ

📜 ಆಯತ್ 258-262 — ಅಲ್-ಬಕರಾ

258أَلَمْ تَرَ إِلَى الَّذِي حَاجَّ إِبْرَاهِيمَ فِي رَبِّهِ أَنْ آتَاهُ اللَّهُ الْمُلْكَ إِذْ قَالَ إِبْرَاهِيمُ رَبِّيَ الَّذِي يُحْيِي وَيُمِيتُ قَالَ أَنَا أُحْيِي وَأُمِيتُ ۖ قَالَ إِبْرَاهِيمُ فَإِنَّ اللَّهَ يَأْتِي بِالشَّمْسِ مِنَ الْمَشْرِقِ فَأْتِ بِهَا مِنَ الْمَغْرِبِ فَبُهِتَ الَّذِي كَفَرَ ۗ وَاللَّهُ لَا يَهْدِي الْقَوْمَ الظَّالِمِينَ
ಇಬ್ರಾಹೀಮರೊಡನೆ ಅವರ ಒಡೆಯನ ಕುರಿತು ಜಗಳಕ್ಕಿಳಿದಾತನನ್ನ್ನು ನೀವು ಕಾಣಲಿಲ್ಲವೇ? ಅಲ್ಲಾಹನು ಆತನಿಗೆ ಸಾಮ್ರಾಜ್ಯವನ್ನು ನೀಡಿದ್ದನು. ‘‘ಜೀವಂತ ಗೊಳಿಸುವವನು ಮತ್ತು ಸಾಯಿಸುವವನೇ ನನ್ನ ದೇವರು’’ ಎಂದು ಇಬ್ರಾಹೀಮರು ಹೇಳಿದಾಗ ಆತನು ‘‘ನಾನೂ ಜೀವ ನೀಡುತ್ತೇನೆ ಮತ್ತು ನಾನೂ ಸಾಯಿಸುತ್ತೇನೆ’’ ಎಂದನು. ಆಗ ಇಬ್ರಾಹೀಮರು ‘‘ಅಲ್ಲಾಹನು ಸೂರ್ಯವನ್ನು ಪೂರ್ವದಿಂದ ಉದಯಿಸುತ್ತಾನೆ ನೀನು ಅದನ್ನು ಪಶ್ಚಿಮದಿಂದ ಉದಯಿಸು’’ ಎಂದರು. ಆ ಧಿಕ್ಕಾರಿ ಬೆಚ್ಚಿಬಿದ್ದನು. ಅಲ್ಲಾಹನು ಅಕ್ರಮಿಗಳ ಪಂಗಡಕ್ಕೆ ಮಾರ್ಗದರ್ಶನ ನೀಡುವುದಿಲ್ಲ
259أَوْ كَالَّذِي مَرَّ عَلَىٰ قَرْيَةٍ وَهِيَ خَاوِيَةٌ عَلَىٰ عُرُوشِهَا قَالَ أَنَّىٰ يُحْيِي هَٰذِهِ اللَّهُ بَعْدَ مَوْتِهَا ۖ فَأَمَاتَهُ اللَّهُ مِائَةَ عَامٍ ثُمَّ بَعَثَهُ ۖ قَالَ كَمْ لَبِثْتَ ۖ قَالَ لَبِثْتُ يَوْمًا أَوْ بَعْضَ يَوْمٍ ۖ قَالَ بَل لَّبِثْتَ مِائَةَ عَامٍ فَانظُرْ إِلَىٰ طَعَامِكَ وَشَرَابِكَ لَمْ يَتَسَنَّهْ ۖ وَانظُرْ إِلَىٰ حِمَارِكَ وَلِنَجْعَلَكَ آيَةً لِّلنَّاسِ ۖ وَانظُرْ إِلَى الْعِظَامِ كَيْفَ نُنشِزُهَا ثُمَّ نَكْسُوهَا لَحْمًا ۚ فَلَمَّا تَبَيَّنَ لَهُ قَالَ أَعْلَمُ أَنَّ اللَّهَ عَلَىٰ كُلِّ شَيْءٍ قَدِيرٌ
ಅಥವಾ, ತನ್ನ ಚಪ್ಪರಗಳ ಮೇಲೆ ಕುಸಿದು ಬಿದ್ದಿದ್ದ (ಸಂಪೂರ್ಣ ಬುಡಮೇಲಾಗಿದ್ದ) ಒಂದು ಊರಿನಿಂದ ಹಾದು ಹೋಗುತ್ತಿದ್ದ ವ್ಯಕ್ತಿಯನ್ನು (ನೀವು ಕಾಣಲಿಲ್ಲವೇ)? ಅವನು ‘‘ಇದು (ಈ ಊರು, ಹೀಗೆ) ಸತ್ತು ಬಿದ್ದ ಬಳಿಕ ಇದನ್ನು ಅಲ್ಲಾಹನು ಹೇಗೆ ತಾನೇ ಮತ್ತೆ ಜೀವಂತಗೊಳಿಸುತ್ತಾನೆ?’’ ಎಂದನು. ಅಲ್ಲಾಹನು ಆತನನ್ನು ನೂರು ವರ್ಷಗಳ ಅವಧಿಗೆ ಸಾಯಿಸಿದನು. ಆ ಬಳಿಕ ಅವನನ್ನು ಮತ್ತೆ ಜೀವಂತಗೊಳಿಸಿ ‘‘ನೀನು (ಸತ್ತ ಸ್ಥಿತಿಯಲ್ಲಿ) ಎಷ್ಟು ಕಾಲ ಇದ್ದೆ ?’’ ಎಂದು ವಿಚಾರಿಸಿದನು. ‘‘ನಾನು ಒಂದು ದಿನ ಅಥವಾ ದಿನದ ಒಂದು ಭಾಗದಷ್ಟು ಕಾಲ ಆ ಸ್ಥಿತಿಯಲ್ಲಿದ್ದೆ ’’ ಎಂದು ಆತನು ಹೇಳಿದನು. ಆಗ ಅವನು (ಅಲ್ಲಾಹನು) ಹೇಳಿದನು; ‘‘ನಿಜವಾಗಿ ನೀನು ನೂರು ವರ್ಷ (ಆ ಸ್ಥಿತಿಯಲ್ಲಿ) ಇದ್ದೆ. ಇದೀಗ ನೀನು ನಿನ್ನ ಆಹಾರ ಮತ್ತು ನಿನ್ನ ಪಾನೀಯವನ್ನು ನೋಡು. ಅವು ಹಳಸಲಾಗಿಲ್ಲ. ಹಾಗೆಯೇ ನಿನ್ನ ಕತ್ತೆಯನ್ನೊಮ್ಮೆ ನೋಡು. ನಾವು ನಿನ್ನನ್ನು ಜನರ ಪಾಲಿಗೆ ಒಂದು ಪುರಾವೆಯಾಗಿಸುವೆವು. ಮತ್ತು (ಆ ಸತ್ತ ಕತ್ತೆಯ) ಎಲುಬುಗಳನ್ನು ನಾವು ಯಾವ ರೀತಿ ಮತ್ತೆ ಜೋಡಿಸುತ್ತೇವೆ ಮತ್ತು ಅವುಗಳಿಗೆ ಯಾವ ರೀತಿ ಮಾಂಸದ ಪೋಷಾಕನ್ನು ತೊಡಿಸುತ್ತೇವೆಂದು ನೋಡು’’. ಕೊನೆಗೆ ಆತನಿಗೆ (ಸತ್ಯವು) ಸ್ಪಷ್ಟವಾದಾಗ ಅವನು ‘‘ಅಲ್ಲಾಹನು ಎಲ್ಲವನ್ನೂ ಮಾಡಲು ಶಕ್ತನೆಂಬುದು ನನಗೆ ತಿಳಿಯಿತು’’ ಎಂದನು
260وَإِذْ قَالَ إِبْرَاهِيمُ رَبِّ أَرِنِي كَيْفَ تُحْيِي الْمَوْتَىٰ ۖ قَالَ أَوَلَمْ تُؤْمِن ۖ قَالَ بَلَىٰ وَلَٰكِن لِّيَطْمَئِنَّ قَلْبِي ۖ قَالَ فَخُذْ أَرْبَعَةً مِّنَ الطَّيْرِ فَصُرْهُنَّ إِلَيْكَ ثُمَّ اجْعَلْ عَلَىٰ كُلِّ جَبَلٍ مِّنْهُنَّ جُزْءًا ثُمَّ ادْعُهُنَّ يَأْتِينَكَ سَعْيًا ۚ وَاعْلَمْ أَنَّ اللَّهَ عَزِيزٌ حَكِيمٌ
ಮತ್ತು ಇಬ್ರಾಹೀಮರು, ‘‘ನನ್ನೊಡೆಯಾ, ನೀನು ಸತ್ತವರನ್ನು ಜೀವಂತ ಗೊಳಿಸುವುದು ಹೇಗೆ ಎಂಬುದನ್ನು ನನಗೆ ತೋರಿಸಿಕೊಡು’’ ಎಂದಾಗ ಅವನು (ಅಲ್ಲಾಹನು) ‘‘ನಿಮಗೆ ನಂಬಿಕೆ ಇಲ್ಲವೇ?’’ ಎಂದು ಕೇಳಿದನು. ಅವರು, ‘‘(ನಂಬಿಕೆ) ಖಂಡಿತ ಇದೆ. ಆದರೂ ನನ್ನ ಮನಸ್ಸಿನ ತೃಪ್ತಿಗಾಗಿ (ಕೇಳುತ್ತಿದ್ದೇನೆ)’’ ಎಂದರು. ಅವನು ಹೇಳಿದನು; ‘‘ನೀವೀಗ ನಾಲ್ಕು ಪಕ್ಷಿಗಳನ್ನು ಹಿಡಿದು ತನ್ನಿರಿ ಮತ್ತು ಅವು ನಿಮ್ಮನ್ನು ಗುರುತಿಸುವಂತೆ ಅವುಗಳನ್ನು ಪಳಗಿಸಿರಿ. ಆ ಬಳಿಕ, (ಅವುಗಳನ್ನು ತುಂಡರಿಸಿ) ಅವುಗಳ ಭಾಗಗಳನ್ನು ಪ್ರತ್ಯೇಕ ಬೆಟ್ಟಗಳ ಮೇಲಿಟ್ಟು, ಅವುಗಳನ್ನು ಕೂಗಿ ಕರೆಯಿರಿ. ಅವು ಓಡೋಡಿ ನಿಮ್ಮ ಬಳಿಗೆ ಬರುವವು. ನಿಮಗೆ ತಿಳಿದಿರಲಿ, ಅಲ್ಲಾಹನು ಮಹಾ ಪ್ರಬಲನು ಮತ್ತು ಯುಕ್ತಿವಂತನಾಗಿದ್ದಾನೆ ’’
261مَّثَلُ الَّذِينَ يُنفِقُونَ أَمْوَالَهُمْ فِي سَبِيلِ اللَّهِ كَمَثَلِ حَبَّةٍ أَنبَتَتْ سَبْعَ سَنَابِلَ فِي كُلِّ سُنبُلَةٍ مِّائَةُ حَبَّةٍ ۗ وَاللَّهُ يُضَاعِفُ لِمَن يَشَاءُ ۗ وَاللَّهُ وَاسِعٌ عَلِيمٌ
ತಮ್ಮ ಸಂಪತ್ತನ್ನು ಅಲ್ಲಾಹನ ಮಾರ್ಗದಲ್ಲಿ ಖರ್ಚು ಮಾಡುವವರ ಉದಾಹರಣೆಯು, ಒಂದೊಂದು ತೆನೆಯಲ್ಲೂ ತಲಾ ನೂರು ಕಾಳುಗಳು ಇರುವ ಏಳೇಳು ತೆನೆಗಳನ್ನು ಮೊಳೆಯಿಸುವ ಒಂದು ಕಾಳಿನಂತಿದೆ. ಅಲ್ಲಾಹನು ತಾನಿಚ್ಛಿಸಿದವರಿಗೆ ಅಭಿವೃದ್ಧಿಯನ್ನು ನೀಡುತ್ತಾನೆ. ಅಲ್ಲಾಹನು ಬಹಳ ವೈಶಾಲ್ಯ ಉಳ್ಳವನೂ ಜ್ಞಾನಿಯೂ ಆಗಿದ್ದಾನೆ
262الَّذِينَ يُنفِقُونَ أَمْوَالَهُمْ فِي سَبِيلِ اللَّهِ ثُمَّ لَا يُتْبِعُونَ مَا أَنفَقُوا مَنًّا وَلَا أَذًى ۙ لَّهُمْ أَجْرُهُمْ عِندَ رَبِّهِمْ وَلَا خَوْفٌ عَلَيْهِمْ وَلَا هُمْ يَحْزَنُونَ
ತಮ್ಮ ಸಂಪತ್ತನ್ನು ಅಲ್ಲಾಹನ ಮಾರ್ಗದಲ್ಲಿ ಖರ್ಚು (ದಾನ) ಮಾಡುವವರು ಮತ್ತು ತಾವು ಖರ್ಚು (ದಾನ) ಮಾಡಿದ ಬೆನ್ನಿಗೇ, (ಫಲಾನುಭವಿಗಳ ಮೇಲೆ) ಋಣಭಾರ ಹೊರಿಸದವರು ಹಾಗೂ (ಅವರನ್ನು)ಪೀಡಿಸದವರು – ಅವರಿಗಾಗಿ ಅವರ ಪ್ರತಿಫಲವು, ಅವರ ಒಡೆಯನ ಬಳಿ ಇದೆ. ಅವರಿಗೆ ಯಾವ ಭಯವೂ ಇರದು ಮತ್ತು ಅವರು ದುಃಖಿಸಲಾರರು
ಅಲ್-ಬಕರಾಕುರಾನ್ ಸೂಚಿ
286ಆಯತ್
MedinanRevelation
260ಆಯತ್

ಅನುವಾದ — ಅಲ್-ಬಕರಾ 260

ಸೂರಾ ಅಲ್-ಬಕರಾ ಆಯತ್ 260 - ಓದಿ, ಆಲಿಸಿ, ಅನುವಾದ, ಕನ್ನಡ : ಮತ್ತು ಇಬ್ರಾಹೀಮರು, ‘‘ನನ್ನೊಡೆಯಾ, ನೀನು ಸತ್ತವರನ್ನು ಜೀವಂತ ಗೊಳಿಸುವುದು ಹೇಗೆ ಎಂಬುದನ್ನು ನನಗೆ…

ಸೂರಾ ಆಯತ್ 260/286 — ಅಲ್-ಬಕರಾ البقرة (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಅಲ್-ಬಕರಾ ಆಲಿಸಿ, ಅಲ್-ಬಕರಾ ಅನುವಾದ, ಅಲ್-ಬಕರಾ mp3, ಅಲ್-ಬಕರಾ pdf. ಆಯತ್ 258–262. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Tuesday, August 18, 2026

Don't forget us in your sincere prayers