ಅಲ್-ಬಕರಾ · 263/286
ಅನುವಾದ ಉಚ್ಚಾರಣೆ — ಅಲ್-ಬಕರಾ
۞ قَوۡلٌ مَّعۡرُوفٌ وَمَغۡفِرَةٌ خَيۡرٌ مِّن صَدَقَةٍ يَتۡبَعُهَآ أَذًىۗ وَٱللَّهُ غَنِيٌّ حَلِيمٌ  ۝٢٦٣
Qawlum ma`roofunw wa maghfiratun khairum min sadaqatiny yatba`uhaaa azaa; wallaahu Ghaniyyun Haleem
📖 ಕನ್ನಡ ಅರ್ಥ
ಒಂದು ಒಳ್ಳೆಯ ಮಾತು ಮತ್ತು ಕ್ಷಮಾಯಾಚನೆಯು, ದಾನ ನೀಡಿ ಪೀಡಿಸುವುದಕ್ಕಿಂತ ಉತ್ತಮ. ಅಲ್ಲಾಹನಂತು ಸಕಲ ಅಪೇಕ್ಷೆಗಳಿಂದ ಮುಕ್ತನೂ ಅಪಾರ ಸಂಯಮಿಯೂ ಆಗಿದ್ದಾನೆ
🎧 ಆಲಿಸಿ

📜 ಆಯತ್ 261-265 — ಅಲ್-ಬಕರಾ

261مَّثَلُ ٱلَّذِينَ يُنفِقُونَ أَمۡوَٰلَهُمۡ فِي سَبِيلِ ٱللَّهِ كَمَثَلِ حَبَّةٍ أَنۢبَتَتۡ سَبۡعَ سَنَابِلَ فِي كُلِّ سُنۢبُلَةٍ مِّاْئَةُ حَبَّةٍۗ وَٱللَّهُ يُضَٰعِفُ لِمَن يَشَآءُۚ وَٱللَّهُ وَٰسِعٌ عَلِيمٌ 
ತಮ್ಮ ಸಂಪತ್ತನ್ನು ಅಲ್ಲಾಹನ ಮಾರ್ಗದಲ್ಲಿ ಖರ್ಚು ಮಾಡುವವರ ಉದಾಹರಣೆಯು, ಒಂದೊಂದು ತೆನೆಯಲ್ಲೂ ತಲಾ ನೂರು ಕಾಳುಗಳು ಇರುವ ಏಳೇಳು ತೆನೆಗಳನ್ನು ಮೊಳೆಯಿಸುವ ಒಂದು ಕಾಳಿನಂತಿದೆ. ಅಲ್ಲಾಹನು ತಾನಿಚ್ಛಿಸಿದವರಿಗೆ ಅಭಿವೃದ್ಧಿಯನ್ನು ನೀಡುತ್ತಾನೆ. ಅಲ್ಲಾಹನು ಬಹಳ ವೈಶಾಲ್ಯ ಉಳ್ಳವನೂ ಜ್ಞಾನಿಯೂ ಆಗಿದ್ದಾನೆ
262ٱلَّذِينَ يُنفِقُونَ أَمۡوَٰلَهُمۡ فِي سَبِيلِ ٱللَّهِ ثُمَّ لَا يُتۡبِعُونَ مَآ أَنفَقُواْ مَنًّا وَلَآ أَذًى لَّهُمۡ أَجۡرُهُمۡ عِندَ رَبِّهِمۡ وَلَا خَوۡفٌ عَلَيۡهِمۡ وَلَا هُمۡ يَحۡزَنُونَ 
ತಮ್ಮ ಸಂಪತ್ತನ್ನು ಅಲ್ಲಾಹನ ಮಾರ್ಗದಲ್ಲಿ ಖರ್ಚು (ದಾನ) ಮಾಡುವವರು ಮತ್ತು ತಾವು ಖರ್ಚು (ದಾನ) ಮಾಡಿದ ಬೆನ್ನಿಗೇ, (ಫಲಾನುಭವಿಗಳ ಮೇಲೆ) ಋಣಭಾರ ಹೊರಿಸದವರು ಹಾಗೂ (ಅವರನ್ನು)ಪೀಡಿಸದವರು – ಅವರಿಗಾಗಿ ಅವರ ಪ್ರತಿಫಲವು, ಅವರ ಒಡೆಯನ ಬಳಿ ಇದೆ. ಅವರಿಗೆ ಯಾವ ಭಯವೂ ಇರದು ಮತ್ತು ಅವರು ದುಃಖಿಸಲಾರರು
263۞ قَوۡلٌ مَّعۡرُوفٌ وَمَغۡفِرَةٌ خَيۡرٌ مِّن صَدَقَةٍ يَتۡبَعُهَآ أَذًىۗ وَٱللَّهُ غَنِيٌّ حَلِيمٌ 
ಒಂದು ಒಳ್ಳೆಯ ಮಾತು ಮತ್ತು ಕ್ಷಮಾಯಾಚನೆಯು, ದಾನ ನೀಡಿ ಪೀಡಿಸುವುದಕ್ಕಿಂತ ಉತ್ತಮ. ಅಲ್ಲಾಹನಂತು ಸಕಲ ಅಪೇಕ್ಷೆಗಳಿಂದ ಮುಕ್ತನೂ ಅಪಾರ ಸಂಯಮಿಯೂ ಆಗಿದ್ದಾನೆ
264يَٰٓأَيُّهَا ٱلَّذِينَ ءَامَنُواْ لَا تُبۡطِلُواْ صَدَقَٰتِكُم بِٱلۡمَنِّ وَٱلۡأَذَىٰ كَٱلَّذِي يُنفِقُ مَالَهُۥ رِئَآءَ ٱلنَّاسِ وَلَا يُؤۡمِنُ بِٱللَّهِ وَٱلۡيَوۡمِ ٱلۡأٓخِرِۖ فَمَثَلُهُۥ كَمَثَلِ صَفۡوَانٍ عَلَيۡهِ تُرَابٌ فَأَصَابَهُۥ وَابِلٌ فَتَرَكَهُۥ صَلۡدًاۖ لَّا يَقۡدِرُونَ عَلَىٰ شَيۡءٍ مِّمَّا كَسَبُواْۗ وَٱللَّهُ لَا يَهۡدِي ٱلۡقَوۡمَ ٱلۡكَٰفِرِينَ 
ವಿಶ್ವಾಸಿಗಳೇ, ಜನರಿಗೆ ತೋರಿಸುವುದಕ್ಕಾಗಿ ತನ್ನ ಸಂಪತ್ತನ್ನು ಖರ್ಚು ಮಾಡುವವನಂತೆ ಮತ್ತು ಅಲ್ಲಾಹನಲ್ಲಾಗಲಿ, ಅಂತಿಮ ದಿನದಲ್ಲಾಗಲಿ ನಂಬಿಕೆ ಇಲ್ಲದವನಂತೆ, ನೀವು ಋಣಭಾರ ಹೊರಿಸುವ ಹಾಗೂ ಪೀಡಿಸುವ ಮೂಲಕ ನಿಮ್ಮ ದಾನಗಳನ್ನು ವ್ಯರ್ಥಗೊಳಿಸಬೇಡಿ. ಅಂಥವನ ಉದಾಹರಣೆಯು, ಮಣ್ಣು ಮುಚ್ಚಿದ, ನುಣುಪಾದ ಬಂಡೆಯಂತಿದೆ. ಅದರ ಮೇಲೆ ಸುರಿಯುವ ಬಿರುಸಾದ ಮಳೆಯು ಅದನ್ನು ಶುಭ್ರಗೊಳಿಸಿಬಿಡುತ್ತದೆ. ತಮ್ಮ ಯಾವ ಸಂಪಾದನೆಯ ಮೇಲೂ ಅವರಿಗೆ ನಿಯಂತ್ರಣವಿಲ್ಲ. ಅಲ್ಲಾಹನು, ಧಿಕ್ಕಾರಿಗಳಿಗೆ ಸರಿದಾರಿಯನ್ನು ತೋರಿಸುವುದಿಲ್ಲ
265وَمَثَلُ ٱلَّذِينَ يُنفِقُونَ أَمۡوَٰلَهُمُ ٱبۡتِغَآءَ مَرۡضَاتِ ٱللَّهِ وَتَثۡبِيتًا مِّنۡ أَنفُسِهِمۡ كَمَثَلِ جَنَّةِۭ بِرَبۡوَةٍ أَصَابَهَا وَابِلٌ فَـَٔاتَتۡ أُكُلَهَا ضِعۡفَيۡنِ فَإِن لَّمۡ يُصِبۡهَا وَابِلٌ فَطَلٌّۗ وَٱللَّهُ بِمَا تَعۡمَلُونَ بَصِيرٌ 
ಇನ್ನು, ಅಲ್ಲಾಹನ ಮೆಚ್ಚುಗೆಯನ್ನರಸಿ ಹಾಗೂ ಸ್ಥಿರಚಿತ್ತದೊಂದಿಗೆ ತಮ್ಮ ಸಂಪತ್ತನ್ನು ಖರ್ಚು ಮಾಡುವವರ ಉದಾಹರಣೆಯು, ಎತ್ತರದ ನೆಲದಲ್ಲಿರುವ ಒಂದು ತೋಟದಂತಿದೆ. ಅದರ ಮೇಲೆ ಬಿರುಸಾದ ಮಳೆ ಸುರಿದಾಗ, ಅದು ಎರಡು ಪಟ್ಟು ಫಲ ನೀಡುತ್ತದೆ. ಬಿರುಸಾದ ಮಳೆ ಸುರಿಯದಿದ್ದರೆ, ಕೇವಲ ಜಿನುಗು ಮಳೆಯೂ ಅದಕ್ಕೆ ಸಾಕಾಗಿ ಬಿಡುತ್ತದೆ. ಅಲ್ಲಾಹನಂತು, ನೀವು ಮಾಡುತ್ತಿರುವ ಎಲ್ಲವನ್ನೂ ನೋಡುತ್ತಿದ್ದಾನೆ
ಅಲ್-ಬಕರಾಕುರಾನ್ ಸೂಚಿ
286ಆಯತ್
MedinanRevelation
263ಆಯತ್

ಅನುವಾದ — ಅಲ್-ಬಕರಾ 263

ಸೂರಾ ಆಯತ್ 263/286 — ಅಲ್-ಬಕರಾ البقرة (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಅಲ್-ಬಕರಾ ಆಲಿಸಿ, ಅಲ್-ಬಕರಾ ಅನುವಾದ, ಅಲ್-ಬಕರಾ mp3, ಅಲ್-ಬಕರಾ pdf. ಆಯತ್ 261–265. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Tuesday, August 18, 2026

Don't forget us in your sincere prayers