ಅಲ್-ಬಕರಾ · 266/286
ಅನುವಾದ ಉಚ್ಚಾರಣೆ — ಸೂರಾ ಅಲ್-ಬಕರಾ
أَيَوَدُّ أَحَدُكُمْ أَن تَكُونَ لَهُ جَنَّةٌ مِّن نَّخِيلٍ وَأَعْنَابٍ تَجْرِي مِن تَحْتِهَا الْأَنْهَارُ لَهُ فِيهَا مِن كُلِّ الثَّمَرَاتِ وَأَصَابَهُ الْكِبَرُ وَلَهُ ذُرِّيَّةٌ ضُعَفَاءُ فَأَصَابَهَا إِعْصَارٌ فِيهِ نَارٌ فَاحْتَرَقَتْ ۗ كَذَٰلِكَ يُبَيِّنُ اللَّهُ لَكُمُ الْآيَاتِ لَعَلَّكُمْ تَتَفَكَّرُونَ ۝٢٦٦
Ayawaddu ahadukum an takoona lahoo jannatum min nakheelinw wa a`naabin tajree min tahtihal anhaaru lahoo feehaa min kullis samaraati wa asaabahul kibaru wa lahoo zurriyyatun du`afaaa`u fa asaabahaaa i`saarun feehi naarun fahtaraqat; kazaalika yubaiyinul laahu lakumul aayaati la`allakum tatafakkaroon
📖 ಕನ್ನಡ ಅರ್ಥ
ನಿಮ್ಮಲ್ಲೊಬ್ಬನಿಗೆ ಖರ್ಜೂರದ ಮರಗಳು ಮತ್ತು ದ್ರಾಕ್ಷಿ ಬಳ್ಳಿಗಳಿರುವ ಒಂದು ತೋಟವಿದ್ದು, ಅದರ ತಳಭಾಗದಲ್ಲಿ ಕಾಲುವೆಗಳು ಹರಿಯುತ್ತಿವೆ, ಅದರಲ್ಲಿ ಅವನಿಗೆ ಎಲ್ಲಾ ವಿಧದ ಫಲಗಳಿವೆ, ಅವನಿಗೆ ವೃದ್ಧಾಪ್ಯವು ಬಾಧಿಸಿದೆ, ಅವನ ಚಿಕ್ಕ ಚಿಕ್ಕ ಮಕ್ಕಳೂ ಇದ್ದಾರೆ. ಆಗ ಅಗ್ನಿ ಮಾರುತವೊಂದು ಅದಕ್ಕೆ ತಗುಲಿ ಅದು ಸುಟ್ಟು ಹೋಗುವುದನ್ನು ನಿಮ್ಮಲ್ಲಿ ಯಾರಾದರೂ ಆಶಿಸುವರೇ? ನೀವು ಚಿಂತಿಸಿ ಗ್ರಹಿಸುವುದಕ್ಕಾಗಿ ಅಲ್ಲಾಹನು ನಿಮಗೆ ಈ ರೀತಿ ದೃಷ್ಟಾಂತಗಳನ್ನು ವಿವರಿಸಿ ಕೊಡುತ್ತಾನೆ(ಇದೇ ಪ್ರಕಾರ ಯಾವೊಬ್ಬನು ತನ್ನ ಪುಣ್ಯಗಳು ವ್ಯರ್ಥವಾಗುವುದನ್ನು ಬಯಸುತ್ತಾನೆಯೇ).

🎧 ಆಲಿಸಿ


📜 ಆಯತ್ 264-268 — ಸೂರಾ ಅಲ್-ಬಕರಾ

264يَا أَيُّهَا الَّذِينَ آمَنُوا لَا تُبْطِلُوا صَدَقَاتِكُم بِالْمَنِّ وَالْأَذَىٰ كَالَّذِي يُنفِقُ مَالَهُ رِئَاءَ النَّاسِ وَلَا يُؤْمِنُ بِاللَّهِ وَالْيَوْمِ الْآخِرِ ۖ فَمَثَلُهُ كَمَثَلِ صَفْوَانٍ عَلَيْهِ تُرَابٌ فَأَصَابَهُ وَابِلٌ فَتَرَكَهُ صَلْدًا ۖ لَّا يَقْدِرُونَ عَلَىٰ شَيْءٍ مِّمَّا كَسَبُوا ۗ وَاللَّهُ لَا يَهْدِي الْقَوْمَ الْكَافِرِينَ
ಓ ಸತ್ಯವಿಶ್ವಾಸಿಗಳೇ, ಔದಾರ್ಯವಾಗಿ ಹೇಳಿಕೊಂಡಾಗಲಿ ಮನ ನೋಯಿಸಿಯಾಗಲಿ ನೀವು ನಿಮ್ಮ ದಾನ ಧರ್ಮಗಳನ್ನು ನಿಷ್ಫಲಗೊಳಿಸಬೇಡಿರಿ. ಅಲ್ಲಾಹನಲ್ಲೂ, ಅಂತ್ಯದಿನದಲ್ಲೂ ವಿಶ್ವಾಸವಿಡದೆÀ ಜನರಿಗೆ ತೋರಿಸಲು ಖರ್ಚು ಮಾಡುವ ಒಬ್ಬನ ಹಾಗೆ ನಿಮ್ಮ ದಾನ ಧರ್ಮಗಳನ್ನು ನಿಷ್ಫಲಗೊಳಿಸಬೇಡಿರಿ. ಅವನ ಉಪಮೆಯು ಒಂದು ನುಣುಪಾದ ಬಂಡೆಯ ಮೇಲಿನ ಮಣ್ಣಿನಂತಿದೆ ಅವನು ಆ ಮಣ್ಣಿನಲ್ಲಿ ಬಿತ್ತಿ ಫಸಲನ್ನು ನಿರೀಕ್ಷಿಸುತ್ತಾನೆ. ಆದರೆ ಅದರ ಮೇಲೆ ಧಾರಾಕಾರವಾದ ಮಳೆ ಸುರಿದರೆ ಮಣ್ಣು ಕೊಚ್ಚಿ ಹೋಗಿ ಬಂಡೆ ಬರಿದಾಗಿ ಬಿಡುತ್ತದೆ. ಈ ರೀತಿ (ತೋರಿಕೆಗೆ) ಖರ್ಚು ಮಾಡುವರು ತಮ್ಮ ಪುಣ್ಯ ಕಾರ್ಯಗಳ ಸ್ವಲ್ಪ ಪ್ರತಿಫಲವನ್ನು ಪಡೆಯಲಾರರು. ಮತ್ತು ಅಲ್ಲಾಹನು ಸತ್ಯನಿಷೇಧಿ ಜನರಿಗೆ ಸನ್ಮಾರ್ಗವನ್ನು ನೀಡುವುದಿಲ್ಲ.
265وَمَثَلُ الَّذِينَ يُنفِقُونَ أَمْوَالَهُمُ ابْتِغَاءَ مَرْضَاتِ اللَّهِ وَتَثْبِيتًا مِّنْ أَنفُسِهِمْ كَمَثَلِ جَنَّةٍ بِرَبْوَةٍ أَصَابَهَا وَابِلٌ فَآتَتْ أُكُلَهَا ضِعْفَيْنِ فَإِن لَّمْ يُصِبْهَا وَابِلٌ فَطَلٌّ ۗ وَاللَّهُ بِمَا تَعْمَلُونَ بَصِيرٌ
ಅಲ್ಲಾಹನ ಸಂಪ್ರೀತಿಯನ್ನರಸಿ ಹಾಗೂ ಸದೃಢತೆಯೊಂದಿಗೆ ಸಂಪತ್ತನ್ನು ಖರ್ಚು ಮಾಡುವವರ ಉಪಮೆಯು ಎತ್ತರ ಪ್ರದೇಶದಲ್ಲಿರುವ ಒಂದು ತೋಟದಂತಿದೆ. ಅದರ ಮೇಲೆ ಧಾರಾಕಾರವಾದ ಮಳೆಯು ಸುರಿದಾಗ ಅದು ತನ್ನ ಫಲವನ್ನು ಇಮ್ಮಡಿಗೊಳಿಸಿತು. ಇನ್ನು ಅದರ ಮೇಲೆ ಧಾರಾಕಾರವಾದ ಮಳೆ ಸುರಿಯದೆ ತುಂತುರು ಮಳೆ ಸುರಿದರೂ ಅದಕ್ಕೆ ಸಾಕಾಗುವುದು. ಅಲ್ಲಾಹನು ನಿಮ್ಮ ಕರ್ಮವನ್ನು ವೀಕ್ಷಿಸುತ್ತಿದ್ದಾನೆ.
266أَيَوَدُّ أَحَدُكُمْ أَن تَكُونَ لَهُ جَنَّةٌ مِّن نَّخِيلٍ وَأَعْنَابٍ تَجْرِي مِن تَحْتِهَا الْأَنْهَارُ لَهُ فِيهَا مِن كُلِّ الثَّمَرَاتِ وَأَصَابَهُ الْكِبَرُ وَلَهُ ذُرِّيَّةٌ ضُعَفَاءُ فَأَصَابَهَا إِعْصَارٌ فِيهِ نَارٌ فَاحْتَرَقَتْ ۗ كَذَٰلِكَ يُبَيِّنُ اللَّهُ لَكُمُ الْآيَاتِ لَعَلَّكُمْ تَتَفَكَّرُونَ
ನಿಮ್ಮಲ್ಲೊಬ್ಬನಿಗೆ ಖರ್ಜೂರದ ಮರಗಳು ಮತ್ತು ದ್ರಾಕ್ಷಿ ಬಳ್ಳಿಗಳಿರುವ ಒಂದು ತೋಟವಿದ್ದು, ಅದರ ತಳಭಾಗದಲ್ಲಿ ಕಾಲುವೆಗಳು ಹರಿಯುತ್ತಿವೆ, ಅದರಲ್ಲಿ ಅವನಿಗೆ ಎಲ್ಲಾ ವಿಧದ ಫಲಗಳಿವೆ, ಅವನಿಗೆ ವೃದ್ಧಾಪ್ಯವು ಬಾಧಿಸಿದೆ, ಅವನ ಚಿಕ್ಕ ಚಿಕ್ಕ ಮಕ್ಕಳೂ ಇದ್ದಾರೆ. ಆಗ ಅಗ್ನಿ ಮಾರುತವೊಂದು ಅದಕ್ಕೆ ತಗುಲಿ ಅದು ಸುಟ್ಟು ಹೋಗುವುದನ್ನು ನಿಮ್ಮಲ್ಲಿ ಯಾರಾದರೂ ಆಶಿಸುವರೇ? ನೀವು ಚಿಂತಿಸಿ ಗ್ರಹಿಸುವುದಕ್ಕಾಗಿ ಅಲ್ಲಾಹನು ನಿಮಗೆ ಈ ರೀತಿ ದೃಷ್ಟಾಂತಗಳನ್ನು ವಿವರಿಸಿ ಕೊಡುತ್ತಾನೆ(ಇದೇ ಪ್ರಕಾರ ಯಾವೊಬ್ಬನು ತನ್ನ ಪುಣ್ಯಗಳು ವ್ಯರ್ಥವಾಗುವುದನ್ನು ಬಯಸುತ್ತಾನೆಯೇ).
267يَا أَيُّهَا الَّذِينَ آمَنُوا أَنفِقُوا مِن طَيِّبَاتِ مَا كَسَبْتُمْ وَمِمَّا أَخْرَجْنَا لَكُم مِّنَ الْأَرْضِ ۖ وَلَا تَيَمَّمُوا الْخَبِيثَ مِنْهُ تُنفِقُونَ وَلَسْتُم بِآخِذِيهِ إِلَّا أَن تُغْمِضُوا فِيهِ ۚ وَاعْلَمُوا أَنَّ اللَّهَ غَنِيٌّ حَمِيدٌ
ಓ ಸತ್ಯವಿಶ್ವಾಸಿಗಳೇ, ನೀವು ಸಂಪಾದಿಸಿದ ಉತ್ತಮ ವಸ್ತುಗಳನ್ನು ಮತ್ತು ಭೂಮಿಯಿಂದ ನಾವು ನಿಮಗೆ ಉತ್ಪಾದಿಸಿ ಕೊಟ್ಟಿರುವ ವಸ್ತುಗಳಿಂದ ಖರ್ಚು ಮಾಡಿರಿ. ಅವುಗಳಿಂದ ಕೆಟ್ಟ ವಸ್ತುಗಳನ್ನು ಖರ್ಚು ಮಾಡಲು ನೀವು ಉದ್ದೇಶಿಸಬಾರದು (ಅವುಗಳನ್ನು ನಿಮಗೆ ನೀಡಲಾದರೆ) ಅವುಗಳನ್ನು ಸ್ವತಃ (ಮೋಸ ಅಥÀವಾ ಅಲಕ್ಷö್ಯದಿಂದ) ಕಣ್ಣು ಮುಚ್ಚಿಕೊಂಡÀಲ್ಲದೇ ಸ್ವೀಕರಿಸಲಾರಿರಿ. ಅಲ್ಲಾಹನು ನಿರಪೇಕ್ಷನೂ, ಸ್ತುತ್ಯರ್ಹನೂ ಆಗಿದ್ದಾನೆಂದು ನೀವು ತಿಳಿದುಕೊಳ್ಳಿರಿ.
268الشَّيْطَانُ يَعِدُكُمُ الْفَقْرَ وَيَأْمُرُكُم بِالْفَحْشَاءِ ۖ وَاللَّهُ يَعِدُكُم مَّغْفِرَةً مِّنْهُ وَفَضْلًا ۗ وَاللَّهُ وَاسِعٌ عَلِيمٌ
ಶೈತಾನನು ನಿಮಗೆ ದಾರಿದ್ರö್ಯದ ಭೀತಿ ಹುಟ್ಟಿಸಿ ಅಶ್ಲೀಲತೆಯ (ಜಿಪುಣತೆಯ) ಆದೇಶ ನೀಡುತ್ತಾನೆ. ಮತ್ತು ಅಲ್ಲಾಹನು ನಿಮಗೆ ತನ್ನ ವತಿಯಿಂದ ಪಾಪವಿಮೋಚನೆ ಹಾಗೂ ಅನುಗ್ರಹದ (ಸಂಮೃದ್ಧಿಯ) ವಾಗ್ದಾನ ಮಾಡುತ್ತಾನೆ. ಅಲ್ಲಾಹನು ವಿಶಾಲನೂ, ಜ್ಞಾನವುಳ್ಳವನೂ ಆಗಿದ್ದಾನೆ.
ಅಲ್-ಬಕರಾಕುರಾನ್ ಸೂಚಿ
286ಆಯತ್
MedinanRevelation
266ಆಯತ್

ಅನುವಾದ — ಅಲ್-ಬಕರಾ 266

ಸೂರಾ ಅಲ್-ಬಕರಾ ಆಯತ್ 266 - ಓದಿ, ಆಲಿಸಿ, ಅನುವಾದ, ಕನ್ನಡ : ನಿಮ್ಮಲ್ಲೊಬ್ಬನಿಗೆ ಖರ್ಜೂರದ ಮರಗಳು ಮತ್ತು ದ್ರಾಕ್ಷಿ ಬಳ್ಳಿಗಳಿರುವ ಒಂದು ತೋಟವಿದ್ದು, ಅದರ ತಳಭಾಗದಲ್ಲಿ…

ಸೂರಾ ಆಯತ್ 266/286 — ಸೂರಾ ಅಲ್-ಬಕರಾ البقرة (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಬಕರಾ ಆಲಿಸಿ, ಸೂರಾ ಅಲ್-ಬಕರಾ ಅನುವಾದ, ಸೂರಾ ಅಲ್-ಬಕರಾ mp3, ಸೂರಾ ಅಲ್-ಬಕರಾ pdf. ಆಯತ್ 264–268. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Tuesday, September 8, 2026

Don't forget us in your sincere prayers