ಅಲ್-ಬಕರಾ · 276/286
ಅನುವಾದ ಉಚ್ಚಾರಣೆ — ಸೂರಾ ಅಲ್-ಬಕರಾ
يَمْحَقُ اللَّهُ الرِّبَا وَيُرْبِي الصَّدَقَاتِ ۗ وَاللَّهُ لَا يُحِبُّ كُلَّ كَفَّارٍ أَثِيمٍ ۝٢٧٦
Yamhaqul laahur ribaa wa yurbis sadaqaat; wallaahu laa yuhibbu kulla kaffaarin aseem
📖 ಕನ್ನಡ ಅರ್ಥ
ಅಲ್ಲಾಹನು ಬಡ್ಡಿಯನ್ನು ಅಳಿಸುತ್ತಾನೆ ಮತ್ತು ದಾನ ಧರ್ಮವನ್ನು ಬೆಳೆಸುತ್ತಾನೆ ಮತ್ತು ಅಲ್ಲಾಹನು ಯಾವೊಬ್ಬ ಕೃತಘ್ನನನ್ನೂ, ಪಾಪಿಯನ್ನೂ ಮೆಚ್ಚುವುದಿಲ್ಲ.

🎧 ಆಲಿಸಿ


📜 ಆಯತ್ 274-278 — ಸೂರಾ ಅಲ್-ಬಕರಾ

274الَّذِينَ يُنفِقُونَ أَمْوَالَهُم بِاللَّيْلِ وَالنَّهَارِ سِرًّا وَعَلَانِيَةً فَلَهُمْ أَجْرُهُمْ عِندَ رَبِّهِمْ وَلَا خَوْفٌ عَلَيْهِمْ وَلَا هُمْ يَحْزَنُونَ
ಯಾರು ಹಗಲು, ರಾತ್ರಿ ರಹಸ್ಯವಾಗಿಯು, ಬಹಿರಂಗವಾಗಿಯು ತಮ್ಮ ಸಂಪತ್ತನ್ನು ಖರ್ಚು ಮಾಡುತ್ತಾರೋ ಅವರಿಗೆ ಅವರ ಪ್ರಭುವಿನ ಬಳಿ ಪ್ರತಿಫಲವಿದೆ. (ಪುನರುತ್ಥಾನದ ದಿನ) ಅವರು ಭಯಪಡಬೇಕಾಗಿಲ್ಲ ಮತ್ತು (ಇಹಲೋಕದ ಬಗ್ಗೆ) ದುಖ್ಖಿಃಸಬೇಕಾಗಿಯೂ ಇಲ್ಲ.
275الَّذِينَ يَأْكُلُونَ الرِّبَا لَا يَقُومُونَ إِلَّا كَمَا يَقُومُ الَّذِي يَتَخَبَّطُهُ الشَّيْطَانُ مِنَ الْمَسِّ ۚ ذَٰلِكَ بِأَنَّهُمْ قَالُوا إِنَّمَا الْبَيْعُ مِثْلُ الرِّبَا ۗ وَأَحَلَّ اللَّهُ الْبَيْعَ وَحَرَّمَ الرِّبَا ۚ فَمَن جَاءَهُ مَوْعِظَةٌ مِّن رَّبِّهِ فَانتَهَىٰ فَلَهُ مَا سَلَفَ وَأَمْرُهُ إِلَى اللَّهِ ۖ وَمَنْ عَادَ فَأُولَٰئِكَ أَصْحَابُ النَّارِ ۖ هُمْ فِيهَا خَالِدُونَ
ಬಡ್ಡಿ ತಿನ್ನುವವರು ಶೈತಾನನು ಬಾಧಿಸಿ ಗರಬಡಿದು ಎದ್ದೇಳುವವನ ಹಾಗೆಯೇ (ಪುನರುತ್ಥಾನದ ದಿನ) ಎದ್ದೇಳುವರು. ಇದು (ಇದರ ಕಾರಣ ಅವರು) ವ್ಯಾಪಾರವು ಸಹ ಬಡ್ಡಿಯಂತೆಯೇ ಎಂದು ಹೇಳಿದುದರಿಂದಾಗಿದೆ. ವಸ್ತುತಃ ಅಲ್ಲಾಹನು ವ್ಯಾಪಾರವನ್ನು ಧರ್ಮ ಸಮ್ಮತಗೊಳಿಸಿದ್ದಾನೆ ಮತ್ತು ಬಡ್ಡಿಯನ್ನು ನಿಷಿದ್ಧಗೊಳಿಸಿದ್ದಾನೆ. ಆದ್ದರಿಂದ ಯಾರು ತನ್ನ ಬಳಿಗೆ ಬಂದಿರುವ ಅಲ್ಲಾಹನ ಉಪದೇಶವನ್ನು ಕೇಳಿ (ಬಡ್ಡಿಯನ್ನು) ಸ್ಥಗಿತಗೊಳಿಸಿದರೆ ಅವನು ಮುಂಚೆ ಪಡೆದುದು ಅವನಿಗಿದೆ. ಅವನ ವಿಷಯವು ಅಲ್ಲಾಹನ ಕಡೆಯಿರುತ್ತದೆ. ಮತ್ತು ಯಾರು (ಬಡ್ಡಿಯೆಡೆಗೆ) ಮರಳುತ್ತಾನೋ ಅವನು ನರಕವಾಸಿಯಾಗಿದ್ದಾನೆ. ಅಂತಹವರು ಅದರಲ್ಲಿ ಶಾಶ್ವತವಾಗಿರುವವರು.
276يَمْحَقُ اللَّهُ الرِّبَا وَيُرْبِي الصَّدَقَاتِ ۗ وَاللَّهُ لَا يُحِبُّ كُلَّ كَفَّارٍ أَثِيمٍ
ಅಲ್ಲಾಹನು ಬಡ್ಡಿಯನ್ನು ಅಳಿಸುತ್ತಾನೆ ಮತ್ತು ದಾನ ಧರ್ಮವನ್ನು ಬೆಳೆಸುತ್ತಾನೆ ಮತ್ತು ಅಲ್ಲಾಹನು ಯಾವೊಬ್ಬ ಕೃತಘ್ನನನ್ನೂ, ಪಾಪಿಯನ್ನೂ ಮೆಚ್ಚುವುದಿಲ್ಲ.
277إِنَّ الَّذِينَ آمَنُوا وَعَمِلُوا الصَّالِحَاتِ وَأَقَامُوا الصَّلَاةَ وَآتَوُا الزَّكَاةَ لَهُمْ أَجْرُهُمْ عِندَ رَبِّهِمْ وَلَا خَوْفٌ عَلَيْهِمْ وَلَا هُمْ يَحْزَنُونَ
ನಿಸ್ಸಂದೇಹವಾಗಿಯು ಯಾರು ಸತ್ಯವಿಶ್ವಾಸ ಹೊಂದಿ (ಪ್ರವಾದಿಚರ್ಯೆಯ ಪ್ರಕಾರ) ಸತ್ಕರ್ಮಗಳನ್ನು ಮಾಡುತ್ತಾರೋ, ನಮಾಝ್ ಸಂಸ್ಥಾಪಿಸುತ್ತಾರೋ ಮತ್ತು ಝಕಾತ್ ನೀಡುತ್ತಾರೋ ಅವರ ಪ್ರತಿಫಲವು ಅವರ ಪ್ರಭುವಿನ ಬಳಿ ಸುರಕ್ಷಿತವಾಗಿದೆ. ಅವರಿಗೆ ಯಾವುದೇ ಯಾತನೆಯ ಭಯವಿರುವುದಿಲ್ಲ. ಮತ್ತು ಇಹಲೋಕದಲ್ಲಿ ಸಿಗದಿರುವುದರ ಬಗ್ಗೆ ದುಖಿಃಸಬೇಕಾಗಿಯೂ ಇಲ್ಲ.
278يَا أَيُّهَا الَّذِينَ آمَنُوا اتَّقُوا اللَّهَ وَذَرُوا مَا بَقِيَ مِنَ الرِّبَا إِن كُنتُم مُّؤْمِنِينَ
ಓ ಸತ್ಯವಿಶ್ವಸಿಗಳೇ, ನೀವು ಅಲ್ಲಾಹನನ್ನು ಭಯಪಡಿರಿ ಮತ್ತು ಬಾಕಿಯಿರುವ ಬಡ್ಡಿಯನ್ನು ಬಿಟ್ಟು ಬಿಡಿರಿ. ನೀವು ಸತ್ಯವಿಶ್ವಾಸಿಗಳಾಗಿದ್ದರೆ.
ಅಲ್-ಬಕರಾಕುರಾನ್ ಸೂಚಿ
286ಆಯತ್
MedinanRevelation
276ಆಯತ್

ಅನುವಾದ — ಅಲ್-ಬಕರಾ 276

ಸೂರಾ ಅಲ್-ಬಕರಾ ಆಯತ್ 276 - ಓದಿ, ಆಲಿಸಿ, ಅನುವಾದ, ಕನ್ನಡ : ಅಲ್ಲಾಹನು ಬಡ್ಡಿಯನ್ನು ಅಳಿಸುತ್ತಾನೆ ಮತ್ತು ದಾನ ಧರ್ಮವನ್ನು ಬೆಳೆಸುತ್ತಾನೆ ಮತ್ತು ಅಲ್ಲಾಹನು ಯಾವೊಬ್ಬ…

ಸೂರಾ ಆಯತ್ 276/286 — ಸೂರಾ ಅಲ್-ಬಕರಾ البقرة (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಬಕರಾ ಆಲಿಸಿ, ಸೂರಾ ಅಲ್-ಬಕರಾ ಅನುವಾದ, ಸೂರಾ ಅಲ್-ಬಕರಾ mp3, ಸೂರಾ ಅಲ್-ಬಕರಾ pdf. ಆಯತ್ 274–278. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Monday, September 7, 2026

Don't forget us in your sincere prayers