ಅಲ್-ಬಕರಾ · 59/286
ಅನುವಾದ ಉಚ್ಚಾರಣೆ — ಅಲ್-ಬಕರಾ
فَبَدَّلَ الَّذِينَ ظَلَمُوا قَوْلًا غَيْرَ الَّذِي قِيلَ لَهُمْ فَأَنزَلْنَا عَلَى الَّذِينَ ظَلَمُوا رِجْزًا مِّنَ السَّمَاءِ بِمَا كَانُوا يَفْسُقُونَ ۝٥٩
Fabaddalal lazeena zalamoo qawlan ghairal lazee qeela lahum fa anzalnaa `alal lazeena zalamoo rijzam minas samaaa`i bimaa kaanoo yafsuqoon
📖 ಕನ್ನಡ ಅರ್ಥ
ಆದರೆ ಅಕ್ರಮಿಗಳು, ತಮಗೆ ಹೇಳಲಾಗಿದ್ದ ಮಾತನ್ನು ಬೇರೆಯೇ ಮಾತಾಗಿ ಬದಲಿಸಿಕೊಂಡರು. ಕೊನೆಗೆ ನಾವು ಅಕ್ರಮಿಗಳ ಅವಿಧೇಯತೆಯ ಫಲವಾಗಿ ಅವರ ಮೇಲೆ ಆಕಾಶದಿಂದ ಒಂದು ಶಿಕ್ಷೆಯನ್ನು ಇಳಿಸಿದೆವು
🎧 ಆಲಿಸಿ

📜 ಆಯತ್ 57-61 — ಅಲ್-ಬಕರಾ

57وَظَلَّلْنَا عَلَيْكُمُ الْغَمَامَ وَأَنزَلْنَا عَلَيْكُمُ الْمَنَّ وَالسَّلْوَىٰ ۖ كُلُوا مِن طَيِّبَاتِ مَا رَزَقْنَاكُمْ ۖ وَمَا ظَلَمُونَا وَلَٰكِن كَانُوا أَنفُسَهُمْ يَظْلِمُونَ
ಮತ್ತು ನಾವು ನಿಮಗೆ ಮೋಡದ ನೆರಳನ್ನು ಒದಗಿಸಿದೆವು ಹಾಗೂ ನಾವು ಒದಗಿಸಿದ ಶುದ್ಧ ಆಹಾರದಿಂದ ಉಣ್ಣಿರೆಂದು ‘ಮನ್ನ್’ ಮತ್ತು ‘ಸಲ್ವಾ’ಗಳನ್ನು ನಿಮಗೆ ಇಳಿಸಿಕೊಟ್ಟೆವು. ಅವರು (ನಿಮ್ಮ ಪೂರ್ವಜರು) ನಮ್ಮ ಮೇಲೇನೂ ಅಕ್ರಮವೆಸಗಲಿಲ್ಲ. ನಿಜವಾಗಿ ಅವರು ಸ್ವತಃ ತಮ್ಮ ಮೇಲೆಯೇ ಅಕ್ರಮವೆಸಗಿಕೊಂಡರು
58وَإِذْ قُلْنَا ادْخُلُوا هَٰذِهِ الْقَرْيَةَ فَكُلُوا مِنْهَا حَيْثُ شِئْتُمْ رَغَدًا وَادْخُلُوا الْبَابَ سُجَّدًا وَقُولُوا حِطَّةٌ نَّغْفِرْ لَكُمْ خَطَايَاكُمْ ۚ وَسَنَزِيدُ الْمُحْسِنِينَ
ಮತ್ತು ನಾವು ಹೇಳಿದೆವು; ‘‘ಈ ನಾಡನ್ನು (ಜೆರುಸಲೇಮನ್ನು) ಪ್ರವೇಶಿಸಿರಿ ಹಾಗೂ ನಿಮ್ಮಿಚ್ಛೆಯಂತೆ, ಅದರ ಯಾವುದೇ ಭಾಗದಿಂದ ಧಾರಾಳ ಉಣ್ಣಿರಿ ಹಾಗೂ ವಿನಯಪೂರ್ವಕ ಬಾಗಿಕೊಂಡು ಅದರ ದ್ವಾರದೊಳಗೆ ಪ್ರವೇಶಿಸಿರಿ ಮತ್ತು ‘ಹಿತ್ತಃ’ (ನಮ್ಮನ್ನು ಕ್ಷಮಿಸು) ಎಂದು ಹೇಳುತ್ತಲಿರಿ – ನಾವು ನಿಮ್ಮ ಪಾಪಗಳನ್ನು ಕ್ಷಮಿಸಿಬಿಡುವೆವು ಮತ್ತು ನಾವು ಸತ್ಕರ್ಮಿಗಳಿಗೆ ಮತ್ತಷ್ಟು ನೀಡುವೆವು’’
59فَبَدَّلَ الَّذِينَ ظَلَمُوا قَوْلًا غَيْرَ الَّذِي قِيلَ لَهُمْ فَأَنزَلْنَا عَلَى الَّذِينَ ظَلَمُوا رِجْزًا مِّنَ السَّمَاءِ بِمَا كَانُوا يَفْسُقُونَ
ಆದರೆ ಅಕ್ರಮಿಗಳು, ತಮಗೆ ಹೇಳಲಾಗಿದ್ದ ಮಾತನ್ನು ಬೇರೆಯೇ ಮಾತಾಗಿ ಬದಲಿಸಿಕೊಂಡರು. ಕೊನೆಗೆ ನಾವು ಅಕ್ರಮಿಗಳ ಅವಿಧೇಯತೆಯ ಫಲವಾಗಿ ಅವರ ಮೇಲೆ ಆಕಾಶದಿಂದ ಒಂದು ಶಿಕ್ಷೆಯನ್ನು ಇಳಿಸಿದೆವು
60۞ وَإِذِ اسْتَسْقَىٰ مُوسَىٰ لِقَوْمِهِ فَقُلْنَا اضْرِب بِّعَصَاكَ الْحَجَرَ ۖ فَانفَجَرَتْ مِنْهُ اثْنَتَا عَشْرَةَ عَيْنًا ۖ قَدْ عَلِمَ كُلُّ أُنَاسٍ مَّشْرَبَهُمْ ۖ كُلُوا وَاشْرَبُوا مِن رِّزْقِ اللَّهِ وَلَا تَعْثَوْا فِي الْأَرْضِ مُفْسِدِينَ
ಮತ್ತು ಮೂಸಾ ತಮ್ಮ ಜನಾಂಗಕ್ಕಾಗಿ ನೀರನ್ನು ಬೇಡಿದಾಗ ನಾವು, ‘‘ನಿಮ್ಮ ಊರುಗೋಲಿನಿಂದ ಆ ಬಂಡೆಗೆ ಹೊಡೆಯಿರಿ’’ ಎಂದೆವು. ಅದರಿಂದ ಹನ್ನೆರಡು ಚಿಲುಮೆಗಳು ಹೊರಟವು. ಎಲ್ಲ ಜನರು (ಎಲ್ಲ ಗೋತ್ರದವರು) ತಾವು ನೀರು ಪಡೆಯಬೇಕಾದ ಸ್ಥಳವನ್ನು ಗುರುತಿಸಿಕೊಂಡರು – ‘‘ಅಲ್ಲಾಹನು ಏನನ್ನು ಅನುಗ್ರಹಿಸಿರುವನೋ ಅದರಿಂದ ಉಣ್ಣಿರಿ ಹಾಗೂ ಕುಡಿಯಿರಿ ಮತ್ತು ಭೂಮಿಯಲ್ಲಿ ಅಶಾಂತಿ ಹರಡುವವರಾಗಿ ತಿರುಗಬೇಡಿ’’ (ಎಂದು ಆಗ ನಿಮಗೆ ಆದೇಶಿಸಲಾಗಿತ್ತು)
61وَإِذْ قُلْتُمْ يَا مُوسَىٰ لَن نَّصْبِرَ عَلَىٰ طَعَامٍ وَاحِدٍ فَادْعُ لَنَا رَبَّكَ يُخْرِجْ لَنَا مِمَّا تُنبِتُ الْأَرْضُ مِن بَقْلِهَا وَقِثَّائِهَا وَفُومِهَا وَعَدَسِهَا وَبَصَلِهَا ۖ قَالَ أَتَسْتَبْدِلُونَ الَّذِي هُوَ أَدْنَىٰ بِالَّذِي هُوَ خَيْرٌ ۚ اهْبِطُوا مِصْرًا فَإِنَّ لَكُم مَّا سَأَلْتُمْ ۗ وَضُرِبَتْ عَلَيْهِمُ الذِّلَّةُ وَالْمَسْكَنَةُ وَبَاءُوا بِغَضَبٍ مِّنَ اللَّهِ ۗ ذَٰلِكَ بِأَنَّهُمْ كَانُوا يَكْفُرُونَ بِآيَاتِ اللَّهِ وَيَقْتُلُونَ النَّبِيِّينَ بِغَيْرِ الْحَقِّ ۗ ذَٰلِكَ بِمَا عَصَوا وَّكَانُوا يَعْتَدُونَ
ಮತ್ತು (ಸ್ಮರಿಸಿರಿ), ‘‘ಓ ಮೂಸಾ, ಒಂದೇ ಆಹಾರದಲ್ಲಿ ತೃಪ್ತಿಪಟ್ಟುಕೊಳ್ಳಲು ನಮ್ಮಿಂದಾಗದು. ನೀವಿನ್ನು ನಮಗಾಗಿ, ಭೂಮಿಯಲ್ಲಿ ಬೆಳೆಯುವ ಹಸಿರು ತರಕಾರಿ, ಸೌತೆ, ಗೋಧಿ, ತೊಗರಿ, ಈರುಳ್ಳಿ (ಇತ್ಯಾದಿ)ಗಳನ್ನು ಒದಗಿಸಬೇಕೆಂದು ನಿಮ್ಮ ದೇವರನ್ನು ಪ್ರಾರ್ಥಿಸಿರಿ’’- ಎಂದು ನೀವು ಹೇಳಿದ್ದಿರಿ. ಆಗ ಅವರು (ಮೂಸಾ) ‘‘ನೀವೇನು ಶ್ರೇಷ್ಠವಾದ ವಸ್ತುಗಳ ಬದಲಿಗೆ ಕೆಳಸ್ತರದ ವಸ್ತುಗಳನ್ನು ಅಪೇಕ್ಷಿಸುವಿರಾ? ಹಾಗಾದರೆ, ನೀವು (ಯಾವುದಾದರೂ ಬೇರೆ) ನಗರಕ್ಕೆ ಹೊರಟು ಹೋಗಿರಿ, ನೀವು ಬೇಡಿದ್ದು ಅಲ್ಲಿ ನಿಮಗೆ ಸಿಗುವುದು’’ಎಂದಿದ್ದರು. ಕೊನೆಗೆ ಅಪಮಾನ ಹಾಗೂ ದಾರಿದ್ರಗಳು ಅವರನ್ನು (ಇಸ್ರಾಈಲರ ಸಂತತಿಗಳನ್ನು) ಆವರಿಸಿಕೊಂಡವು ಮತ್ತು ಅವರು ಅಲ್ಲಾಹನ ಕ್ರೋಧಕ್ಕೆ ಪಾತ್ರರಾಗಿ ಬಿಟ್ಟರು. ಅದು, ಅವರು ಅಲ್ಲಾಹನ ಪುರಾವೆಗಳನ್ನು ಧಿಕ್ಕರಿಸಿದ ಮತ್ತು ಅನ್ಯಾಯವಾಗಿ ಪ್ರವಾದಿಗಳನ್ನು ಕೊಂದುಬಿಟ್ಟ (ಕೃತ್ಯದ) ಫಲವಾಗಿತ್ತು. ಹಾಗೆಯೇ ಅದು, ಅವರ ಅವಿಧೇಯತೆಯ ಹಾಗೂ ಎಲ್ಲೆ ಮೀರಿದ ನಡವಳಿಕೆಯ ಪರಿಣಾಮವಾಗಿತ್ತು
ಅಲ್-ಬಕರಾಕುರಾನ್ ಸೂಚಿ
286ಆಯತ್
MedinanRevelation
59ಆಯತ್

ಅನುವಾದ — ಅಲ್-ಬಕರಾ 59

ಸೂರಾ ಅಲ್-ಬಕರಾ ಆಯತ್ 59 - ಓದಿ, ಆಲಿಸಿ, ಅನುವಾದ, ಕನ್ನಡ : ಆದರೆ ಅಕ್ರಮಿಗಳು, ತಮಗೆ ಹೇಳಲಾಗಿದ್ದ ಮಾತನ್ನು ಬೇರೆಯೇ ಮಾತಾಗಿ ಬದಲಿಸಿಕೊಂಡರು. ಕೊನೆಗೆ ನಾವು…

ಸೂರಾ ಆಯತ್ 59/286 — ಅಲ್-ಬಕರಾ البقرة (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಅಲ್-ಬಕರಾ ಆಲಿಸಿ, ಅಲ್-ಬಕರಾ ಅನುವಾದ, ಅಲ್-ಬಕರಾ mp3, ಅಲ್-ಬಕರಾ pdf. ಆಯತ್ 57–61. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Tuesday, August 18, 2026

Don't forget us in your sincere prayers