ಅಲ್-ಬಕರಾ · 61/286
ಅನುವಾದ ಉಚ್ಚಾರಣೆ — ಸೂರಾ ಅಲ್-ಬಕರಾ
وَإِذْ قُلْتُمْ يَا مُوسَىٰ لَن نَّصْبِرَ عَلَىٰ طَعَامٍ وَاحِدٍ فَادْعُ لَنَا رَبَّكَ يُخْرِجْ لَنَا مِمَّا تُنبِتُ الْأَرْضُ مِن بَقْلِهَا وَقِثَّائِهَا وَفُومِهَا وَعَدَسِهَا وَبَصَلِهَا ۖ قَالَ أَتَسْتَبْدِلُونَ الَّذِي هُوَ أَدْنَىٰ بِالَّذِي هُوَ خَيْرٌ ۚ اهْبِطُوا مِصْرًا فَإِنَّ لَكُم مَّا سَأَلْتُمْ ۗ وَضُرِبَتْ عَلَيْهِمُ الذِّلَّةُ وَالْمَسْكَنَةُ وَبَاءُوا بِغَضَبٍ مِّنَ اللَّهِ ۗ ذَٰلِكَ بِأَنَّهُمْ كَانُوا يَكْفُرُونَ بِآيَاتِ اللَّهِ وَيَقْتُلُونَ النَّبِيِّينَ بِغَيْرِ الْحَقِّ ۗ ذَٰلِكَ بِمَا عَصَوا وَّكَانُوا يَعْتَدُونَ ۝٦١
Wa iz qultum yaa Moosaa lan nasbira `alaa ta`aaminw waahidin fad`u lanaa rabbaka yukhrij lanaa mimmaa tumbitul ardu mimbaqlihaa wa qis saaa`ihaa wa foomihaa wa `adasihaa wa basalihaa qaala atastabdiloonal lazee huwa adnaa billazee huwa khayr; ihbitoo misran fa inna lakum maa sa altum; wa duribat `alaihimuz zillatu walmaskanatu wa baaa`oo bighadabim minal laah; zaalika bi annahum kaano yakfuroona bi aayaatil laahi wa yaqtuloonan Nabiyyeena bighairil haqq; zaalika bimaa `asaw wa kaanoo ya`tadoon
📖 ಕನ್ನಡ ಅರ್ಥ
ಓ ಮೂಸಾ(ಅ) ನಾವು ಒಂದೇ ಬಗೆಯ ಆಹಾರವನ್ನು ಸಹಿಸಲಾರೆವು ಆದ್ದರಿಂದ ಭೂಮಿಯ ಉತ್ಪಾದನೆಗಳಾದ ಸೊಪ್ಪು, ಸೌತೆ, ಗೋಧಿ, ಚನ್ನಂಗಿ ಬೇಳೆ, ಈರುಳ್ಳಿ ಇತ್ಯಾದಿಗಳನ್ನು ನಮಗೆ ಉತ್ಪಾದಿಸಿ ಕೊಡಲು ತಾವು ತಮ್ಮ ಪ್ರಭುವಿನೊಂದಿಗೆ ಪ್ರಾರ್ಥಿಸಿರಿ ಎಂದು ಹೇಳಿದ ಸಂದರ್ಭವನ್ನು ಸ್ಮರಿಸಿರಿ. ಆಗ ಮೂಸಾ(ಅ) ಹೇಳಿದರು ಉತ್ತಮವಾದುದರ ಬದಲಿಗೆ ನಿಕೃಷ್ಟವಾದುದ್ದನ್ನು ಬೇಡುವಿರಾ? ಸರಿ ಹಾಗಾದರೆ ನೀವು ಯಾವುದೇ ಪಟ್ಟಣದಲ್ಲಿ ಹೋಗಿ ವಾಸಿಸಿರಿ. ಅಲ್ಲಿ ನಿಮಗೆ ನೀವು ಬೇಡಿದ ಎಲ್ಲವು ಸಿಗುವುದು. ಮತ್ತು (ಇಂತಹ ಹಟಮಾರಿತನದಿಂದಾಗಿ) ಅವರ ಮೇಲೆ ನಿಂದ್ಯತೆಯನ್ನು, ದಾರಿದ್ರö್ಯವನ್ನು ಹೇರಲಾಯಿತು ಮತ್ತು ಅವರು ಅಲ್ಲಾಹನ ಕ್ರೋಧವನ್ನು ಹೊತ್ತುಕೊಂಡು ಮರಳಿದರು. ಏಕೆಂದರೆ ಅವರು ಅಲ್ಲಾಹನ ಸೂಕ್ತಿಗಳನ್ನು ನಿಷೇಧಿಸುತ್ತಿದ್ದರು, ಮತ್ತು ಅನ್ಯಾಯವಾಗಿ ಪೈಗಂಬರರನ್ನು ವಧಿಸುತಿದ್ದರು. ಇದು ಅವರು ಧಿಕ್ಕಾರ ತೋರಿದುದರ ಹಾಗೂ ಮಿತಿಮೀರಿ ಹೋದುದರ ನಿಮಿತ್ತವಾಗಿತ್ತು.

🎧 ಆಲಿಸಿ


📜 ಆಯತ್ 59-63 — ಸೂರಾ ಅಲ್-ಬಕರಾ

59فَبَدَّلَ الَّذِينَ ظَلَمُوا قَوْلًا غَيْرَ الَّذِي قِيلَ لَهُمْ فَأَنزَلْنَا عَلَى الَّذِينَ ظَلَمُوا رِجْزًا مِّنَ السَّمَاءِ بِمَا كَانُوا يَفْسُقُونَ
ಬಳಿಕ ಆ ಅಕ್ರಮಿಗಳು ತಮಗೆ ಹೇಳಲಾದ ಮಾತನ್ನು ಬದಲಿಸಿ ಹೇಳಿದರು. ನಾವು ಆ ಅಕ್ರಮಿಗಳ ಮೇಲೆ ಅವರು ಆಜ್ಞೆಯ ಉಲ್ಲಂಘನೆ ಮಾಡುತ್ತಿದ್ದುದ್ದರ ನಿಮಿತ್ತ ಆಕಾಶದಿಂದ ಯಾತನೆಯನ್ನೆರಗಿಸಿದೆವು.
60۞ وَإِذِ اسْتَسْقَىٰ مُوسَىٰ لِقَوْمِهِ فَقُلْنَا اضْرِب بِّعَصَاكَ الْحَجَرَ ۖ فَانفَجَرَتْ مِنْهُ اثْنَتَا عَشْرَةَ عَيْنًا ۖ قَدْ عَلِمَ كُلُّ أُنَاسٍ مَّشْرَبَهُمْ ۖ كُلُوا وَاشْرَبُوا مِن رِّزْقِ اللَّهِ وَلَا تَعْثَوْا فِي الْأَرْضِ مُفْسِدِينَ
ಮೂಸಾ(ಅ) ತಮ್ಮ ಜನರಿಗೋಸ್ಕರ ನೀರನ್ನು ಬೇಡಿದ ಸಂದರ್ಭವನ್ನು ಸ್ಮರಿಸಿರಿ. ನಾವು ಹೇಳಿದೆವು; ನೀವು ನಿಮ್ಮ ಕೋಲಿನಿಂದ ಆ ಬಂಡೆಯ ಮೇಲೆ ಹೊಡೆಯಿರಿ. ಆಗ ಅದರಿಂದ ಹನ್ನೆರಡು ಚಿಲುಮೆಗಳು ಚಿಮ್ಮಿದವು ಮತ್ತು ಪ್ರತಿಯೊಂದು ಪಂಗಡವು ತಮ್ಮ ತಮ್ಮ ನೀರು ಪಡೆಯುವ ಘಟಕವನ್ನು ಅರಿತುಕೊಂಡಿತು. ನೀವು ಅಲ್ಲಾಹನು ನೀಡಿರುವ ಆಹಾರದಿಂದ ತಿನ್ನಿರಿ ಹಾಗೂ ಕುಡಿಯಿರಿ. ಮತ್ತು ನೀವು ಭೂಮಿಯಲ್ಲಿ ಕ್ಷೋಭೆಯನ್ನು ಹರಡದಿರಿ.
61وَإِذْ قُلْتُمْ يَا مُوسَىٰ لَن نَّصْبِرَ عَلَىٰ طَعَامٍ وَاحِدٍ فَادْعُ لَنَا رَبَّكَ يُخْرِجْ لَنَا مِمَّا تُنبِتُ الْأَرْضُ مِن بَقْلِهَا وَقِثَّائِهَا وَفُومِهَا وَعَدَسِهَا وَبَصَلِهَا ۖ قَالَ أَتَسْتَبْدِلُونَ الَّذِي هُوَ أَدْنَىٰ بِالَّذِي هُوَ خَيْرٌ ۚ اهْبِطُوا مِصْرًا فَإِنَّ لَكُم مَّا سَأَلْتُمْ ۗ وَضُرِبَتْ عَلَيْهِمُ الذِّلَّةُ وَالْمَسْكَنَةُ وَبَاءُوا بِغَضَبٍ مِّنَ اللَّهِ ۗ ذَٰلِكَ بِأَنَّهُمْ كَانُوا يَكْفُرُونَ بِآيَاتِ اللَّهِ وَيَقْتُلُونَ النَّبِيِّينَ بِغَيْرِ الْحَقِّ ۗ ذَٰلِكَ بِمَا عَصَوا وَّكَانُوا يَعْتَدُونَ
ಓ ಮೂಸಾ(ಅ) ನಾವು ಒಂದೇ ಬಗೆಯ ಆಹಾರವನ್ನು ಸಹಿಸಲಾರೆವು ಆದ್ದರಿಂದ ಭೂಮಿಯ ಉತ್ಪಾದನೆಗಳಾದ ಸೊಪ್ಪು, ಸೌತೆ, ಗೋಧಿ, ಚನ್ನಂಗಿ ಬೇಳೆ, ಈರುಳ್ಳಿ ಇತ್ಯಾದಿಗಳನ್ನು ನಮಗೆ ಉತ್ಪಾದಿಸಿ ಕೊಡಲು ತಾವು ತಮ್ಮ ಪ್ರಭುವಿನೊಂದಿಗೆ ಪ್ರಾರ್ಥಿಸಿರಿ ಎಂದು ಹೇಳಿದ ಸಂದರ್ಭವನ್ನು ಸ್ಮರಿಸಿರಿ. ಆಗ ಮೂಸಾ(ಅ) ಹೇಳಿದರು ಉತ್ತಮವಾದುದರ ಬದಲಿಗೆ ನಿಕೃಷ್ಟವಾದುದ್ದನ್ನು ಬೇಡುವಿರಾ? ಸರಿ ಹಾಗಾದರೆ ನೀವು ಯಾವುದೇ ಪಟ್ಟಣದಲ್ಲಿ ಹೋಗಿ ವಾಸಿಸಿರಿ. ಅಲ್ಲಿ ನಿಮಗೆ ನೀವು ಬೇಡಿದ ಎಲ್ಲವು ಸಿಗುವುದು. ಮತ್ತು (ಇಂತಹ ಹಟಮಾರಿತನದಿಂದಾಗಿ) ಅವರ ಮೇಲೆ ನಿಂದ್ಯತೆಯನ್ನು, ದಾರಿದ್ರö್ಯವನ್ನು ಹೇರಲಾಯಿತು ಮತ್ತು ಅವರು ಅಲ್ಲಾಹನ ಕ್ರೋಧವನ್ನು ಹೊತ್ತುಕೊಂಡು ಮರಳಿದರು. ಏಕೆಂದರೆ ಅವರು ಅಲ್ಲಾಹನ ಸೂಕ್ತಿಗಳನ್ನು ನಿಷೇಧಿಸುತ್ತಿದ್ದರು, ಮತ್ತು ಅನ್ಯಾಯವಾಗಿ ಪೈಗಂಬರರನ್ನು ವಧಿಸುತಿದ್ದರು. ಇದು ಅವರು ಧಿಕ್ಕಾರ ತೋರಿದುದರ ಹಾಗೂ ಮಿತಿಮೀರಿ ಹೋದುದರ ನಿಮಿತ್ತವಾಗಿತ್ತು.
62إِنَّ الَّذِينَ آمَنُوا وَالَّذِينَ هَادُوا وَالنَّصَارَىٰ وَالصَّابِئِينَ مَنْ آمَنَ بِاللَّهِ وَالْيَوْمِ الْآخِرِ وَعَمِلَ صَالِحًا فَلَهُمْ أَجْرُهُمْ عِندَ رَبِّهِمْ وَلَا خَوْفٌ عَلَيْهِمْ وَلَا هُمْ يَحْزَنُونَ
ಯಾರು (ಬಾಹ್ಯವಾಗಿ) ವಿಶ್ವಾಸವಿಟ್ಟಿರುವರೋ ಯಹೂದರು, ಕ್ರೆöÊಸ್ತರು, ಸಾಬಿಯರು ಯಾರೇ ಆಗಿರಲಿ (ಅವರು ವಾಸ್ತವದಲ್ಲಿ) ಅಲ್ಲಾಹನಲ್ಲೂ ಅಂತ್ಯ ದಿನದಲ್ಲೂ ವಿಶ್ವಾಸವಿಟ್ಟು ಸತ್ಕರ್ಮವನ್ನು ಕೈಗೊಂಡರೆ ನಿಶ್ಚಯವಾಗಿಯೂ ಅವರಿಗೆ ಅವರ ಪ್ರತಿಫಲವು ಅವರ ಪ್ರಭುವಿನ ಬಳಿ ಇದೆ. ಮತ್ತು ಅವರ ಮೇಲೆ ಭಯವಾಗಲಿ ಮತ್ತು ಅವರಿಗೆ ವ್ಯಥೆಯಾಗಲಿ ಬಾದಿಸದು.
63وَإِذْ أَخَذْنَا مِيثَاقَكُمْ وَرَفَعْنَا فَوْقَكُمُ الطُّورَ خُذُوا مَا آتَيْنَاكُم بِقُوَّةٍ وَاذْكُرُوا مَا فِيهِ لَعَلَّكُمْ تَتَّقُونَ
ನಾವು ನಿಮ್ಮ ಮೇಲೆ ತೂರ್ ಪರ್ವತವನ್ನು ಎತ್ತಿ ಹಿಡಿದು ನಿಮ್ಮಿಂದ (ಯಹೂದರಿಂದ) ಸಧೃಢ ಕರಾರನ್ನು ಪಡೆದುಕೊಂಡ ಸಂಧರ್ಭವನ್ನು ಸ್ಮರಿಸಿರಿ. ಆಗ ನಾವು ಹೇಳಿದೆವು ನಿಮಗೆ ದಯಪಾಲಿಸಿದ (ತೌರಾತ್ ಗ್ರಂಥವನ್ನು) ಸಧೃಢತೆಯಿಂದ ಹಿಡಿದುಕೊಳ್ಳಿರಿ. ಅದರಲ್ಲಿರುವ ವಿಷಯಗಳನ್ನು ಸ್ಮರಿಸಿರಿ. ನೀವು ರಕ್ಷಣೆ ಹೊಂದಬಹುದು.
ಅಲ್-ಬಕರಾಕುರಾನ್ ಸೂಚಿ
286ಆಯತ್
MedinanRevelation
61ಆಯತ್

ಅನುವಾದ — ಅಲ್-ಬಕರಾ 61

ಸೂರಾ ಅಲ್-ಬಕರಾ ಆಯತ್ 61 - ಓದಿ, ಆಲಿಸಿ, ಅನುವಾದ, ಕನ್ನಡ : ಓ ಮೂಸಾ(ಅ) ನಾವು ಒಂದೇ ಬಗೆಯ ಆಹಾರವನ್ನು ಸಹಿಸಲಾರೆವು ಆದ್ದರಿಂದ ಭೂಮಿಯ ಉತ್ಪಾದನೆಗಳಾದ…

ಸೂರಾ ಆಯತ್ 61/286 — ಸೂರಾ ಅಲ್-ಬಕರಾ البقرة (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಬಕರಾ ಆಲಿಸಿ, ಸೂರಾ ಅಲ್-ಬಕರಾ ಅನುವಾದ, ಸೂರಾ ಅಲ್-ಬಕರಾ mp3, ಸೂರಾ ಅಲ್-ಬಕರಾ pdf. ಆಯತ್ 59–63. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Monday, September 7, 2026

Don't forget us in your sincere prayers