ಅಲ್-ಬಕರಾ · 62/286
ಅನುವಾದ ಉಚ್ಚಾರಣೆ — ಅಲ್-ಬಕರಾ
إِنَّ الَّذِينَ آمَنُوا وَالَّذِينَ هَادُوا وَالنَّصَارَىٰ وَالصَّابِئِينَ مَنْ آمَنَ بِاللَّهِ وَالْيَوْمِ الْآخِرِ وَعَمِلَ صَالِحًا فَلَهُمْ أَجْرُهُمْ عِندَ رَبِّهِمْ وَلَا خَوْفٌ عَلَيْهِمْ وَلَا هُمْ يَحْزَنُونَ ٦٢
Transliteration
Innal lazeena aamanoo wallazeena haadoo wan nasaaraa was Saabi`eena man aamana billaahi wal yawmil aakhiri wa `amila saalihan falahum ajruhum `inda Rabbihim wa laa khawfun `alaihim wa laa hum yahzanoon
ಅನುವಾದ (ಕನ್ನಡ ಅರ್ಥ)
📖 ಕನ್ನಡ ಅರ್ಥ
(ಗತಕಾಲದ) ವಿಶ್ವಾಸಿಗಳು, ಯಹೂದಿಗಳು, ಕ್ರೈಸ್ತರು ಮತ್ತು ಸಬಯನರ ಪೈಕಿ ಅಲ್ಲಾಹನಲ್ಲಿ ಮತ್ತು ಅಂತಿಮ ದಿನ (ಪರಲೋಕ)ದಲ್ಲಿ ನಂಬಿಕೆಯಿಟ್ಟ ಹಾಗೂ ಸತ್ಕರ್ಮ ಮಾಡಿದ ಜನರಿಗಾಗಿ, ಅವರ ಒಡೆಯನ ಬಳಿ ಅವರ ಪ್ರತಿಫಲ ಇದ್ದೇ ಇದೆ ಮತ್ತು ಅವರಿಗೆ ಯಾವುದೇ ಭಯವೂ ಇರದು, ದುಃಖವೂ ಇರದು
Additional reference in தமிழ்
🎧 ಆಲಿಸಿ
📜 ಆಯತ್ 60-64 — ಅಲ್-ಬಕರಾ
60۞ وَإِذِ اسْتَسْقَىٰ مُوسَىٰ لِقَوْمِهِ فَقُلْنَا اضْرِب بِّعَصَاكَ الْحَجَرَ ۖ فَانفَجَرَتْ مِنْهُ اثْنَتَا عَشْرَةَ عَيْنًا ۖ قَدْ عَلِمَ كُلُّ أُنَاسٍ مَّشْرَبَهُمْ ۖ كُلُوا وَاشْرَبُوا مِن رِّزْقِ اللَّهِ وَلَا تَعْثَوْا فِي الْأَرْضِ مُفْسِدِينَ
ಮತ್ತು ಮೂಸಾ ತಮ್ಮ ಜನಾಂಗಕ್ಕಾಗಿ ನೀರನ್ನು ಬೇಡಿದಾಗ ನಾವು, ‘‘ನಿಮ್ಮ ಊರುಗೋಲಿನಿಂದ ಆ ಬಂಡೆಗೆ ಹೊಡೆಯಿರಿ’’ ಎಂದೆವು. ಅದರಿಂದ ಹನ್ನೆರಡು ಚಿಲುಮೆಗಳು ಹೊರಟವು. ಎಲ್ಲ ಜನರು (ಎಲ್ಲ ಗೋತ್ರದವರು) ತಾವು ನೀರು ಪಡೆಯಬೇಕಾದ ಸ್ಥಳವನ್ನು ಗುರುತಿಸಿಕೊಂಡರು – ‘‘ಅಲ್ಲಾಹನು ಏನನ್ನು ಅನುಗ್ರಹಿಸಿರುವನೋ ಅದರಿಂದ ಉಣ್ಣಿರಿ ಹಾಗೂ ಕುಡಿಯಿರಿ ಮತ್ತು ಭೂಮಿಯಲ್ಲಿ ಅಶಾಂತಿ ಹರಡುವವರಾಗಿ ತಿರುಗಬೇಡಿ’’ (ಎಂದು ಆಗ ನಿಮಗೆ ಆದೇಶಿಸಲಾಗಿತ್ತು)
61وَإِذْ قُلْتُمْ يَا مُوسَىٰ لَن نَّصْبِرَ عَلَىٰ طَعَامٍ وَاحِدٍ فَادْعُ لَنَا رَبَّكَ يُخْرِجْ لَنَا مِمَّا تُنبِتُ الْأَرْضُ مِن بَقْلِهَا وَقِثَّائِهَا وَفُومِهَا وَعَدَسِهَا وَبَصَلِهَا ۖ قَالَ أَتَسْتَبْدِلُونَ الَّذِي هُوَ أَدْنَىٰ بِالَّذِي هُوَ خَيْرٌ ۚ اهْبِطُوا مِصْرًا فَإِنَّ لَكُم مَّا سَأَلْتُمْ ۗ وَضُرِبَتْ عَلَيْهِمُ الذِّلَّةُ وَالْمَسْكَنَةُ وَبَاءُوا بِغَضَبٍ مِّنَ اللَّهِ ۗ ذَٰلِكَ بِأَنَّهُمْ كَانُوا يَكْفُرُونَ بِآيَاتِ اللَّهِ وَيَقْتُلُونَ النَّبِيِّينَ بِغَيْرِ الْحَقِّ ۗ ذَٰلِكَ بِمَا عَصَوا وَّكَانُوا يَعْتَدُونَ
ಮತ್ತು (ಸ್ಮರಿಸಿರಿ), ‘‘ಓ ಮೂಸಾ, ಒಂದೇ ಆಹಾರದಲ್ಲಿ ತೃಪ್ತಿಪಟ್ಟುಕೊಳ್ಳಲು ನಮ್ಮಿಂದಾಗದು. ನೀವಿನ್ನು ನಮಗಾಗಿ, ಭೂಮಿಯಲ್ಲಿ ಬೆಳೆಯುವ ಹಸಿರು ತರಕಾರಿ, ಸೌತೆ, ಗೋಧಿ, ತೊಗರಿ, ಈರುಳ್ಳಿ (ಇತ್ಯಾದಿ)ಗಳನ್ನು ಒದಗಿಸಬೇಕೆಂದು ನಿಮ್ಮ ದೇವರನ್ನು ಪ್ರಾರ್ಥಿಸಿರಿ’’- ಎಂದು ನೀವು ಹೇಳಿದ್ದಿರಿ. ಆಗ ಅವರು (ಮೂಸಾ) ‘‘ನೀವೇನು ಶ್ರೇಷ್ಠವಾದ ವಸ್ತುಗಳ ಬದಲಿಗೆ ಕೆಳಸ್ತರದ ವಸ್ತುಗಳನ್ನು ಅಪೇಕ್ಷಿಸುವಿರಾ? ಹಾಗಾದರೆ, ನೀವು (ಯಾವುದಾದರೂ ಬೇರೆ) ನಗರಕ್ಕೆ ಹೊರಟು ಹೋಗಿರಿ, ನೀವು ಬೇಡಿದ್ದು ಅಲ್ಲಿ ನಿಮಗೆ ಸಿಗುವುದು’’ಎಂದಿದ್ದರು. ಕೊನೆಗೆ ಅಪಮಾನ ಹಾಗೂ ದಾರಿದ್ರಗಳು ಅವರನ್ನು (ಇಸ್ರಾಈಲರ ಸಂತತಿಗಳನ್ನು) ಆವರಿಸಿಕೊಂಡವು ಮತ್ತು ಅವರು ಅಲ್ಲಾಹನ ಕ್ರೋಧಕ್ಕೆ ಪಾತ್ರರಾಗಿ ಬಿಟ್ಟರು. ಅದು, ಅವರು ಅಲ್ಲಾಹನ ಪುರಾವೆಗಳನ್ನು ಧಿಕ್ಕರಿಸಿದ ಮತ್ತು ಅನ್ಯಾಯವಾಗಿ ಪ್ರವಾದಿಗಳನ್ನು ಕೊಂದುಬಿಟ್ಟ (ಕೃತ್ಯದ) ಫಲವಾಗಿತ್ತು. ಹಾಗೆಯೇ ಅದು, ಅವರ ಅವಿಧೇಯತೆಯ ಹಾಗೂ ಎಲ್ಲೆ ಮೀರಿದ ನಡವಳಿಕೆಯ ಪರಿಣಾಮವಾಗಿತ್ತು
62إِنَّ الَّذِينَ آمَنُوا وَالَّذِينَ هَادُوا وَالنَّصَارَىٰ وَالصَّابِئِينَ مَنْ آمَنَ بِاللَّهِ وَالْيَوْمِ الْآخِرِ وَعَمِلَ صَالِحًا فَلَهُمْ أَجْرُهُمْ عِندَ رَبِّهِمْ وَلَا خَوْفٌ عَلَيْهِمْ وَلَا هُمْ يَحْزَنُونَ
(ಗತಕಾಲದ) ವಿಶ್ವಾಸಿಗಳು, ಯಹೂದಿಗಳು, ಕ್ರೈಸ್ತರು ಮತ್ತು ಸಬಯನರ ಪೈಕಿ ಅಲ್ಲಾಹನಲ್ಲಿ ಮತ್ತು ಅಂತಿಮ ದಿನ (ಪರಲೋಕ)ದಲ್ಲಿ ನಂಬಿಕೆಯಿಟ್ಟ ಹಾಗೂ ಸತ್ಕರ್ಮ ಮಾಡಿದ ಜನರಿಗಾಗಿ, ಅವರ ಒಡೆಯನ ಬಳಿ ಅವರ ಪ್ರತಿಫಲ ಇದ್ದೇ ಇದೆ ಮತ್ತು ಅವರಿಗೆ ಯಾವುದೇ ಭಯವೂ ಇರದು, ದುಃಖವೂ ಇರದು
63وَإِذْ أَخَذْنَا مِيثَاقَكُمْ وَرَفَعْنَا فَوْقَكُمُ الطُّورَ خُذُوا مَا آتَيْنَاكُم بِقُوَّةٍ وَاذْكُرُوا مَا فِيهِ لَعَلَّكُمْ تَتَّقُونَ
ಮತ್ತು ನಾವು ತೂರ್ ಪರ್ವತವನ್ನು ನಿಮ್ಮ (ಇಸ್ರಾಈಲರ ಸಂತತಿಗಳ) ಮೇಲೆ ಎತ್ತರಿಸಿ, ನಿಮ್ಮಿಂದ ಕರಾರು ಪಡೆದ ಸಂದರ್ಭದಲ್ಲಿ -‘‘ನಾವು ನಿಮಗೆ ಕೊಡುತ್ತಿರುವುದನ್ನು (ಮಾರ್ಗದರ್ಶಕ ಗ್ರಂಥವನ್ನು) ನೀವು ಭದ್ರವಾಗಿ ಹಿಡಿದುಕೊಳ್ಳಿರಿ ಮತ್ತು ಇದರಲ್ಲಿರುವ ವಿಷಯಗಳನ್ನು ನೆನಪಿಟ್ಟುಕೊಳ್ಳಿರಿ, ನೀವು ಧರ್ಮನಿಷ್ಠರಾಗಬಹುದು’’ (ಎಂದು ನಾವು ಹೇಳಿದ್ದೆವು)
64ثُمَّ تَوَلَّيْتُم مِّن بَعْدِ ذَٰلِكَ ۖ فَلَوْلَا فَضْلُ اللَّهِ عَلَيْكُمْ وَرَحْمَتُهُ لَكُنتُم مِّنَ الْخَاسِرِينَ
ಆ ಬಳಿಕ ನೀವು, ವಿಮುಖರಾಗಿ ಬಿಟ್ಟಿರಿ. ಒಂದು ವೇಳೆ ನಿಮ್ಮ ಮೇಲೆ ಅಲ್ಲಾಹನ ಅನುಗ್ರಹ ಮತ್ತು ಕರುಣೆ ಇಲ್ಲದೆ ಇದ್ದಿದ್ದರೆ, (ಅಂದೇ) ನೀವು ಸೋತವರ ಸಾಲಿಗೆ ಸೇರಿ ಬಿಡುತ್ತಿದ್ದಿರಿ
ಅಲ್-ಬಕರಾಕುರಾನ್ ಸೂಚಿ
286ಆಯತ್
MedinanRevelation
62ಆಯತ್
ಅನುವಾದ — ಅಲ್-ಬಕರಾ 62
ಸೂರಾ ಅಲ್-ಬಕರಾ ಆಯತ್ 62 - ಓದಿ, ಆಲಿಸಿ, ಅನುವಾದ, ಕನ್ನಡ : (ಗತಕಾಲದ) ವಿಶ್ವಾಸಿಗಳು, ಯಹೂದಿಗಳು, ಕ್ರೈಸ್ತರು ಮತ್ತು ಸಬಯನರ ಪೈಕಿ ಅಲ್ಲಾಹನಲ್ಲಿ ಮತ್ತು ಅಂತಿಮ…ಸೂರಾ ಆಯತ್ 62/286 — ಅಲ್-ಬಕರಾ البقرة (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಅಲ್-ಬಕರಾ ಆಲಿಸಿ, ಅಲ್-ಬಕರಾ ಅನುವಾದ, ಅಲ್-ಬಕರಾ mp3, ಅಲ್-ಬಕರಾ pdf. ಆಯತ್ 60–64. ಕನ್ನಡ ಅರ್ಥ: தமிழ்.
العربية
English
Bahasa Indonesia
Türkçe
Русский
فارسی
Français
اردو
বাংলা
Deutsch
Español
中文
हिन्दी
Português
Italiano
ภาษาไทย
Polski
Nederlands
Shqip
Kiswahili
O'zbek
தமிழ்
Melayu
Bosanski
Soomaali
Azərbaycan
کوردی
한국어
日本語
Svenska
Dansk
Norsk
پښتو
മലയാളം
සිංහල
Tamazight
Hausa
አማርኛ
Български
Тоҷикӣ
Қазақша
Filipino
سنڌي
Yorùbá
Fulfulde
Татарча
ئۇيغۇرچە
Кыргызча
ਪੰਜਾਬੀ
Jawa
తెలుగు
မြန်မာ
ગુજરાતી
Oromo
मराठी
Tiếng Việt
Malagasy
Нохчийн
Wolof
ދިވެހި
ಕನ್ನಡ
Українська
Ελληνικά
ქართული
ខ្មែរ
دری
Qafar af
Maranao
नेपाली
ಪವಿತ್ರ ಕುರಾನ್
Tuesday, August 18, 2026
Don't forget us in your sincere prayers








