ಆಲ್-ಇಮ್ರಾನ್ · 158/200
ಅನುವಾದ ಉಚ್ಚಾರಣೆ — ಸೂರಾ ಆಲ್-ಇಮ್ರಾನ್
وَلَئِن مُّتُّمْ أَوْ قُتِلْتُمْ لَإِلَى اللَّهِ تُحْشَرُونَ ۝١٥٨
Wa la`im muttum `aw qutiltumla ilal laahi tuhsharoon
📖 ಕನ್ನಡ ಅರ್ಥ
ನೀವು ಮರಣವನ್ನಪ್ಪಿದರೂ, ಅಥವಾ ಕೊಲ್ಲಲ್ಪಟ್ಟರು ಖಂಡಿತವಾಗಿಯು ಅಲ್ಲಾಹನ ಬಳಿಗೇ ನೀವು ಒಟ್ಟುಗೂಡಿಸಲಾಗುವಿರಿ.

🎧 ಆಲಿಸಿ


📜 ಆಯತ್ 156-160 — ಸೂರಾ ಆಲ್-ಇಮ್ರಾನ್

156يَا أَيُّهَا الَّذِينَ آمَنُوا لَا تَكُونُوا كَالَّذِينَ كَفَرُوا وَقَالُوا لِإِخْوَانِهِمْ إِذَا ضَرَبُوا فِي الْأَرْضِ أَوْ كَانُوا غُزًّى لَّوْ كَانُوا عِندَنَا مَا مَاتُوا وَمَا قُتِلُوا لِيَجْعَلَ اللَّهُ ذَٰلِكَ حَسْرَةً فِي قُلُوبِهِمْ ۗ وَاللَّهُ يُحْيِي وَيُمِيتُ ۗ وَاللَّهُ بِمَا تَعْمَلُونَ بَصِيرٌ
ಓ ಸತ್ಯವಿಶ್ವಸಿಗಳೇ, ತಮ್ಮ ಸಹೋದರರು ಯಾತ್ರೆಗಾಗಿ ಆಥವಾ ಯುದ್ಧಕ್ಕಾಗಿ ಹೊರಟು (ಸಾವನ್ನಪ್ಪಿದರೆ) ಅವರು ನಮ್ಮ ಬಳಿಯಿರುತ್ತಿದ್ದರೆ ಸಾವನ್ನಪ್ಪುತ್ತಿರಲಿಲ್ಲ ಅಥವಾ ಕೊಲ್ಲಲ್ಪಡುತ್ತಿರಲಿಲ್ಲ ಎಂದು ಹೇಳುವ ಅವಿಶ್ವಾಸಿಗಳಂತೆ ನೀವಾಗಬಾರದು. ಅಲ್ಲಾಹನು ಅವರ ಈ ಭಾವನೆಯನ್ನು ಅವರ ಹೃದಯದಲ್ಲಿ ಖೇದಕರ ವಿಷಯವನ್ನಾಗಿಸಲೆಂದಾಗಿದೆ. ಜೀವ ಕೊಡುವವನು, ಮರಣ ನೀಡುವವನು ಅಲ್ಲಾಹನಾಗಿದ್ದಾನೆ. ಮತ್ತು ಅಲ್ಲಾಹನು ನಿಮ್ಮ ಕರ್ಮಗಳನ್ನು ವೀಕ್ಷಿಸುತ್ತಿದ್ದಾನೆ.
157وَلَئِن قُتِلْتُمْ فِي سَبِيلِ اللَّهِ أَوْ مُتُّمْ لَمَغْفِرَةٌ مِّنَ اللَّهِ وَرَحْمَةٌ خَيْرٌ مِّمَّا يَجْمَعُونَ
ಖಂಡಿತವಾಗಿಯು ನೀವು ಅಲ್ಲಾಹನ ಮಾರ್ಗದಲ್ಲಿ ಹುತಾತ್ಮರಾದರೇ ಅಥವಾ ಮರಣವನ್ನಪ್ಪಿದರೇ ನಿಸ್ಸಂಶಯವಾಗಿಯು ಅಲ್ಲಾಹನಿಂದ ಲಭಿಸುವ ಪಾಪವಿಮೋಚನೆ ಮತ್ತು ಕಾರುಣ್ಯವು ಅವರು ಶೇಖರಿಸಿಡುವುದಕ್ಕಿಂತಲೂ ಉತ್ತಮವಾಗಿದೆ.
158وَلَئِن مُّتُّمْ أَوْ قُتِلْتُمْ لَإِلَى اللَّهِ تُحْشَرُونَ
ನೀವು ಮರಣವನ್ನಪ್ಪಿದರೂ, ಅಥವಾ ಕೊಲ್ಲಲ್ಪಟ್ಟರು ಖಂಡಿತವಾಗಿಯು ಅಲ್ಲಾಹನ ಬಳಿಗೇ ನೀವು ಒಟ್ಟುಗೂಡಿಸಲಾಗುವಿರಿ.
159فَبِمَا رَحْمَةٍ مِّنَ اللَّهِ لِنتَ لَهُمْ ۖ وَلَوْ كُنتَ فَظًّا غَلِيظَ الْقَلْبِ لَانفَضُّوا مِنْ حَوْلِكَ ۖ فَاعْفُ عَنْهُمْ وَاسْتَغْفِرْ لَهُمْ وَشَاوِرْهُمْ فِي الْأَمْرِ ۖ فَإِذَا عَزَمْتَ فَتَوَكَّلْ عَلَى اللَّهِ ۚ إِنَّ اللَّهَ يُحِبُّ الْمُتَوَكِّلِينَ
ಅಲ್ಲಾಹನ ಕಾರುಣ್ಯದ ನಿಮಿತ್ತ ನೀವು ಅವರೊಂದಿಗೆ ಸೌಮ್ಯವಾಗಿ ವರ್ತಿಸುತ್ತಿರುವಿರಿ ನೀವೇನಾದರು ಒರಟರು, ಕಠಿಣ ಹೃದಯಿಯು ಅಗಿರುತ್ತಿದ್ದರೆ ಅವರು ನಿಮ್ಮ ಬಳಿಯಿಂದ ಚದುರಿ ಹೋಗುತ್ತಿದ್ದರು. ಆದ್ದರಿಂದ ನೀವು ಅವರಿಗೆ ಕ್ಷಮೆಯನ್ನು ನೀಡಿರಿ ಮತ್ತು ಅವರಿಗಾಗಿ ಪಾಪವಿಮೋಚನೆಯನ್ನು ಬೇಡಿರಿ. ಮತ್ತು ಅವರೊಂದಿಗೆ ಕಾರ್ಯ ನಿರ್ವಹಣೆಯಲ್ಲಿ ಸಮಾಲೋಚನೆಯನ್ನು ನಡೆಸಿರಿ. ಅನಂತರ ನೀವು ಒಂದು ದೃಢ ನಿರ್ಧಾರಕ್ಕೆ ಬಂದರೆ ಅಲ್ಲಾಹನ ಮೇಲೆ ಭರವಸೆಯನ್ನಿಡಿರಿ. ನಿಸ್ಸಂಶಯವಾಗಿಯು ಅಲ್ಲಾಹನು ತನ್ನ ಮೇಲೆ ಭರವಸೆಯನ್ನಿಡುವವರನ್ನು ಇಷ್ಟ ಪಡುತ್ತಾನೆ.
160إِن يَنصُرْكُمُ اللَّهُ فَلَا غَالِبَ لَكُمْ ۖ وَإِن يَخْذُلْكُمْ فَمَن ذَا الَّذِي يَنصُرُكُم مِّن بَعْدِهِ ۗ وَعَلَى اللَّهِ فَلْيَتَوَكَّلِ الْمُؤْمِنُونَ
ಅಲ್ಲಾಹನು ನಿಮಗೆ ಸಹಾಯ ಮಾಡುವುದಾದರೆ ನಿಮ್ಮನ್ನು ಸೋಲಿಸುವವನು ಯಾರಿಲ್ಲ ಇನ್ನು ಅವನು ನಿಮ್ಮನ್ನು ಕೈಬಿಟ್ಟರೆ ಅವನಲ್ಲದೇ ನಿಮಗೆ ಸಹಾಯ ಮಾಡುವವರು ಯಾರಿದ್ದಾರೆ? ಸತ್ಯವಿಶ್ವಾಸಿಗಳು ಅಲ್ಲಾಹನ ಮೇಲೆಯೇ ಭರವಸೆಯಿಡಲಿ.
ಆಲ್-ಇಮ್ರಾನ್ಕುರಾನ್ ಸೂಚಿ
200ಆಯತ್
MedinanRevelation
158ಆಯತ್

ಅನುವಾದ — ಆಲ್-ಇಮ್ರಾನ್ 158

ಸೂರಾ ಆಲ್-ಇಮ್ರಾನ್ ಆಯತ್ 158 - ಓದಿ, ಆಲಿಸಿ, ಅನುವಾದ, ಕನ್ನಡ : ನೀವು ಮರಣವನ್ನಪ್ಪಿದರೂ, ಅಥವಾ ಕೊಲ್ಲಲ್ಪಟ್ಟರು ಖಂಡಿತವಾಗಿಯು ಅಲ್ಲಾಹನ ಬಳಿಗೇ ನೀವು ಒಟ್ಟುಗೂಡಿಸಲಾಗುವಿರಿ.

ಸೂರಾ ಆಯತ್ 158/200 — ಸೂರಾ ಆಲ್-ಇಮ್ರಾನ್ آل عمران (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಆಲ್-ಇಮ್ರಾನ್ ಆಲಿಸಿ, ಸೂರಾ ಆಲ್-ಇಮ್ರಾನ್ ಅನುವಾದ, ಸೂರಾ ಆಲ್-ಇಮ್ರಾನ್ mp3, ಸೂರಾ ಆಲ್-ಇಮ್ರಾನ್ pdf. ಆಯತ್ 156–160. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Tuesday, September 8, 2026

Don't forget us in your sincere prayers