ಅಲ್-ಅಹ್ಜಾಬ್ · 21/73
ಅನುವಾದ ಉಚ್ಚಾರಣೆ — ಸೂರಾ ಅಲ್-ಅಹ್ಜಾಬ್
لَّقَدْ كَانَ لَكُمْ فِي رَسُولِ اللَّهِ أُسْوَةٌ حَسَنَةٌ لِّمَن كَانَ يَرْجُو اللَّهَ وَالْيَوْمَ الْآخِرَ وَذَكَرَ اللَّهَ كَثِيرًا ۝٢١
Laqad kaana lakum fee Rasoolil laahi uswatun hasanatul liman kaana yarjul laaha wal yawmal Aakhira wa azkaral laaha kaseeraa
📖 ಕನ್ನಡ ಅರ್ಥ
ನಿಶ್ಚಯವಾಗಿಯು ನಿಮಗೆ ಅಲ್ಲಾಹನ ಸಂದೇಶವಾಹಕರಲ್ಲಿ ಅತ್ಯುತ್ತಮ ಮಾದರಿಯಿದೆ. ಇದು ಅಲ್ಲಾಹ ಹಾಗೂ ಅಂತ್ಯ ದಿನವನ್ನು ನಿರೀಕ್ಷಿಸುವವನಿಗೆ ಮತ್ತು ಅಲ್ಲಾಹನನ್ನು ಅತಿ ಹೆಚ್ಚು ಸ್ಮರಿಸುವವನಿಗೆ.

🎧 ಆಲಿಸಿ


📜 ಆಯತ್ 19-23 — ಸೂರಾ ಅಲ್-ಅಹ್ಜಾಬ್

19أَشِحَّةً عَلَيْكُمْ ۖ فَإِذَا جَاءَ الْخَوْفُ رَأَيْتَهُمْ يَنظُرُونَ إِلَيْكَ تَدُورُ أَعْيُنُهُمْ كَالَّذِي يُغْشَىٰ عَلَيْهِ مِنَ الْمَوْتِ ۖ فَإِذَا ذَهَبَ الْخَوْفُ سَلَقُوكُم بِأَلْسِنَةٍ حِدَادٍ أَشِحَّةً عَلَى الْخَيْرِ ۚ أُولَٰئِكَ لَمْ يُؤْمِنُوا فَأَحْبَطَ اللَّهُ أَعْمَالَهُمْ ۚ وَكَانَ ذَٰلِكَ عَلَى اللَّهِ يَسِيرًا
ನಿಮ್ಮ ವಿಚಾರದಲ್ಲಿ ಅವರು ಜಿಪುಣರಾಗಿರುತ್ತಾರೆ ಬಳಿಕ ಯುದ್ಧ ಭೀತಿಯು ಎದುರಾದರೆ ನೀವು ಅವರನ್ನು ಮರಣ ಮೂರ್ಛೆಯು ಬಂದAತಹ ವ್ಯಕ್ತಿಯ ಹಾಗೆ ಅವರ ಕಣ್ಣುಗಳು ನಿಮ್ಮೆಡೆಗೆ ಹೊರಳಿಸುತ್ತಿರುವುದಾಗಿ ಕಾಣುವಿರಿ. ನಂತರ ಭೀತಿಯು ನೀಗತೊಡಗಿದರೆ ಸಂಪತ್ತಿನ ಅತಿಯಾಸೆಯುಳ್ಳವರಾಗಿ ಅವರು ತಮ್ಮ ಹರಿತವಾದ ನಾಲಗೆಯಿಂದ ನಿಮ್ಮನ್ನು ಟೀಕಿಸುತ್ತಾರೆ ಇವರು ವಿಶ್ವಾಸವಿರಿಸಲಿಲ್ಲ. ಹಾಗಾಗಿ ಅಲ್ಲಾಹನು ಅವರ ಸಕಲ ಕರ್ಮಗಳನ್ನು ನಿಷ್ಫಲಗೊಳಿಸುವನು. ಮತ್ತು ಇದು ಅಲ್ಲಾಹನಿಗೆ ಅತೀ ಸರಳ ಕಾರ್ಯವಾಗಿದೆ.
20يَحْسَبُونَ الْأَحْزَابَ لَمْ يَذْهَبُوا ۖ وَإِن يَأْتِ الْأَحْزَابُ يَوَدُّوا لَوْ أَنَّهُم بَادُونَ فِي الْأَعْرَابِ يَسْأَلُونَ عَنْ أَنبَائِكُمْ ۖ وَلَوْ كَانُوا فِيكُم مَّا قَاتَلُوا إِلَّا قَلِيلًا
ಶತ್ರು ಪಡೆಗಳು ಇನ್ನೂ ಹೋಗಿಲ್ಲವೆಂದು ಅವರು ಭಾವಿಸುತ್ತಾರೆ ಮತ್ತು ಇನ್ನೇನಾದರೂ ಶತ್ರು ಪಡೆಗಳು ಪುನಃ ಮರಳಿ ಬಂದರೆ ತಾವು ಗ್ರಾಮೀಣರ ಜೊತೆಯಲ್ಲಿದ್ದು ನಿಮ್ಮ ಸುದ್ಧಿಗಳನ್ನು ವಿಚಾರಿಸುತ್ತಿದ್ದೆವು ಎಂದು ಬಯಸತೊಡ ಗುತ್ತಾರೆ ಹಾಗೂ ಅವರು ನಿಮ್ಮ ಜೊತೆಯಲ್ಲಿ ಇರುತ್ತಿದ್ದರೂ ಅಲ್ಪ ಮಾತ್ರ ಯುದ್ಧ ಮಾಡುವರು.
21لَّقَدْ كَانَ لَكُمْ فِي رَسُولِ اللَّهِ أُسْوَةٌ حَسَنَةٌ لِّمَن كَانَ يَرْجُو اللَّهَ وَالْيَوْمَ الْآخِرَ وَذَكَرَ اللَّهَ كَثِيرًا
ನಿಶ್ಚಯವಾಗಿಯು ನಿಮಗೆ ಅಲ್ಲಾಹನ ಸಂದೇಶವಾಹಕರಲ್ಲಿ ಅತ್ಯುತ್ತಮ ಮಾದರಿಯಿದೆ. ಇದು ಅಲ್ಲಾಹ ಹಾಗೂ ಅಂತ್ಯ ದಿನವನ್ನು ನಿರೀಕ್ಷಿಸುವವನಿಗೆ ಮತ್ತು ಅಲ್ಲಾಹನನ್ನು ಅತಿ ಹೆಚ್ಚು ಸ್ಮರಿಸುವವನಿಗೆ.
22وَلَمَّا رَأَى الْمُؤْمِنُونَ الْأَحْزَابَ قَالُوا هَٰذَا مَا وَعَدَنَا اللَّهُ وَرَسُولُهُ وَصَدَقَ اللَّهُ وَرَسُولُهُ ۚ وَمَا زَادَهُمْ إِلَّا إِيمَانًا وَتَسْلِيمًا
ಮತ್ತು ಸತ್ಯವಿಶ್ವಾಸಿಗಳು ಶತ್ರು ಪಡೆಗಳನ್ನು ಕಂಡಾಗ ಹೇಳುತ್ತಾರೆ: ಇದು ನಮಗೆ ಅಲ್ಲಾಹನು ಮತ್ತು ಅವನ ಸಂದೇಶವಾಹಕರು ಮಾಡಿದ ವಾಗ್ದಾನವಾಗಿದೆ. ಅಲ್ಲಾಹನು ಹಾಗೂ ಅವನ ಸಂದೇಶವಾಹಕರು ಸತ್ಯವನ್ನೇ ನುಡಿದಿರುತ್ತಾರೆ ಮತ್ತು ಇದು ಅವರಿಗೆ ಸತ್ಯವಿಶ್ವಾಸ ಹಾಗೂ ಸಮರ್ಪಣೆಯನ್ನು ಇನ್ನಷ್ಟು ಹೆಚ್ಚಿಸಿತು.
23مِّنَ الْمُؤْمِنِينَ رِجَالٌ صَدَقُوا مَا عَاهَدُوا اللَّهَ عَلَيْهِ ۖ فَمِنْهُم مَّن قَضَىٰ نَحْبَهُ وَمِنْهُم مَّن يَنتَظِرُ ۖ وَمَا بَدَّلُوا تَبْدِيلًا
ಸತ್ಯವಿಶ್ವಾಸಿಗಳ ಪೈಕಿ ಕೆಲವರು ತಾವು ಅಲ್ಲಾಹನೊಂದಿಗೆ ಮಾಡಿರುವ ಒಪ್ಪಂದವನ್ನು ನಿಜ ಮಾಡಿ ತೋರಿಸಿರುತ್ತಾರೆ. ಕೆಲವರು ಹುತಾತ್ಮರಾಗುವ ಮೂಲಕ ತಮ್ಮ ಪ್ರತಿಜ್ಞೆಯನ್ನು ಪೂರ್ತಿಕರಿಸಿರುತ್ತಾರೆ ಮತ್ತು ಕೆಲವರು ಅವಕಾಶದ ನಿರೀಕ್ಷೆಯಲ್ಲಿದ್ದಾರೆ ಮತ್ತು ಅವರು ಕರಾರಿನಲ್ಲಿ ಯಾವುದೇ ಬದಲಾವಣೆ ಮಾಡಲಿಲ್ಲ.
ಅಲ್-ಅಹ್ಜಾಬ್ಕುರಾನ್ ಸೂಚಿ
73ಆಯತ್
MedinanRevelation
21ಆಯತ್

ಅನುವಾದ — ಅಲ್-ಅಹ್ಜಾಬ್ 21

ಸೂರಾ ಅಲ್-ಅಹ್ಜಾಬ್ ಆಯತ್ 21 - ಓದಿ, ಆಲಿಸಿ, ಅನುವಾದ, ಕನ್ನಡ : ನಿಶ್ಚಯವಾಗಿಯು ನಿಮಗೆ ಅಲ್ಲಾಹನ ಸಂದೇಶವಾಹಕರಲ್ಲಿ ಅತ್ಯುತ್ತಮ ಮಾದರಿಯಿದೆ. ಇದು ಅಲ್ಲಾಹ ಹಾಗೂ ಅಂತ್ಯ…

ಸೂರಾ ಆಯತ್ 21/73 — ಸೂರಾ ಅಲ್-ಅಹ್ಜಾಬ್ الأحزاب (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಅಹ್ಜಾಬ್ ಆಲಿಸಿ, ಸೂರಾ ಅಲ್-ಅಹ್ಜಾಬ್ ಅನುವಾದ, ಸೂರಾ ಅಲ್-ಅಹ್ಜಾಬ್ mp3, ಸೂರಾ ಅಲ್-ಅಹ್ಜಾಬ್ pdf. ಆಯತ್ 19–23. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Monday, September 7, 2026

Don't forget us in your sincere prayers