ಅನ್-ನಿಸಾ · 91/176
ಅನುವಾದ ಉಚ್ಚಾರಣೆ — ಸೂರಾ ಅನ್-ನಿಸಾ
سَتَجِدُونَ آخَرِينَ يُرِيدُونَ أَن يَأْمَنُوكُمْ وَيَأْمَنُوا قَوْمَهُمْ كُلَّ مَا رُدُّوا إِلَى الْفِتْنَةِ أُرْكِسُوا فِيهَا ۚ فَإِن لَّمْ يَعْتَزِلُوكُمْ وَيُلْقُوا إِلَيْكُمُ السَّلَمَ وَيَكُفُّوا أَيْدِيَهُمْ فَخُذُوهُمْ وَاقْتُلُوهُمْ حَيْثُ ثَقِفْتُمُوهُمْ ۚ وَأُولَٰئِكُمْ جَعَلْنَا لَكُمْ عَلَيْهِمْ سُلْطَانًا مُّبِينًا ۝٩١
Satajidoona aakhareena yureedoona ai yaamanookum wa yaamanoo qawmahum kullamaa ruddooo ilal itnati urkisoo feehaa; fa il lam ya`tazilookum wa yulqooo ilai kumus salama wa yakuffooo aidiyahum fakhuzoohum waqtuloohum haisu saqif tumoohum; wa ulaaa`ikum ja`alnaa lakum `alaihim sultaanam mubeenaa
📖 ಕನ್ನಡ ಅರ್ಥ
ಬೇರೊಂದು ಸಮುದಾಯವನ್ನು ನೀವು ಕಾಣುವಿರಿ. ಅವರು ನಿಮ್ಮೊಂದಿಗೂ ಸ್ವತಃ ತಮ್ಮ ಜನರೊಂದಿಗೂ ಅಭಯವನ್ನು ಬಯಸುತ್ತಾರೆ. (ಆದರೆ) ಕ್ಷೆÆÃಭೆಯೆಡೆಗೆ ಅವರನ್ನು ಮರಳಿಸಲಾಗುವಾಗ ಅದರಲ್ಲಿ ಅವರು ಅಧೋಮುಖಿಗಳಾಗಿ ಬೀಳುತ್ತಾರೆ. ಅವರೇನಾದರೂ ನಿಮ್ಮಿಂದ ದೂರ ಸರಿದು ನಿಮ್ಮ ಮುಂದೆ ಶಾಂತಿಯ ಪ್ರಸ್ತಾಪವನ್ನಿಡದಿದ್ದರೆ ಮತ್ತು ತಮ್ಮ ಕೈಗಳನ್ನು ತಡೆಹಿಡಿಯದಿದ್ದರೆ ಅವರನ್ನು ಹಿಡಿಯಿರಿ ಮತ್ತು ಅವರನ್ನು ಕಂಡಲ್ಲಿ ಕೊಂದು ಹಾಕಿರಿ. ನಾವು ಅವರ ವಿರುದ್ಧ ನಿಮಗೆ ಸ್ಪಷ್ಟವಾದ ಅಧಿಕಾರವನ್ನು ನೀಡಿರುತ್ತೇವೆ.

🎧 ಆಲಿಸಿ


📜 ಆಯತ್ 89-93 — ಸೂರಾ ಅನ್-ನಿಸಾ

89وَدُّوا لَوْ تَكْفُرُونَ كَمَا كَفَرُوا فَتَكُونُونَ سَوَاءً ۖ فَلَا تَتَّخِذُوا مِنْهُمْ أَوْلِيَاءَ حَتَّىٰ يُهَاجِرُوا فِي سَبِيلِ اللَّهِ ۚ فَإِن تَوَلَّوْا فَخُذُوهُمْ وَاقْتُلُوهُمْ حَيْثُ وَجَدتُّمُوهُمْ ۖ وَلَا تَتَّخِذُوا مِنْهُمْ وَلِيًّا وَلَا نَصِيرًا
ಅವರು ಸತ್ಯನಿಷೇಧಿಗಳಾಗಿರುವಂತೆ ನೀವು ಸತ್ಯನಿಷೇಧಿಗಳಾಗಿ ಅನಂತರ ಎಲ್ಲರೂ ಸಮಾನರಾಗಬೇಕೆಂದು ಅವರು ಬಯಸುತ್ತಾರೆ. ಅವರು ಅಲ್ಲಾಹನ ಮಾರ್ಗದಲ್ಲಿ ತಮ್ಮ ನಾಡನ್ನು ತ್ಯಜಿಸುವವರಗೆ ನೀವು ಅವರ ಪೈಕಿ ಯಾರನ್ನೂ ಮಿತ್ರರನ್ನಾಗಿ ಮಾಡಿಕೊಳ್ಳಬೇಡಿರಿ. ಇನ್ನು ಅವರು ವಿಮುಖರಾಗುವುದಾದರೆ ನೀವು ಅವರನ್ನು ಹಿಡಿಯಿರಿ ಮತ್ತು ಅವರನ್ನು ಕಂಡಲ್ಲಿ ಕೊಂದು ಹಾಕಿರಿ ಮತ್ತು ನೀವು ಅವರ ಪೈಕಿ ಯಾರನ್ನೂ ನಿಮ್ಮ ಮಿತ್ರರಾಗಿ ಹಾಗೂ ಸಹಾಯಕರಾಗಿ ಮಾಡಿಕೊಳ್ಳಬೇಡಿರಿ.
90إِلَّا الَّذِينَ يَصِلُونَ إِلَىٰ قَوْمٍ بَيْنَكُمْ وَبَيْنَهُم مِّيثَاقٌ أَوْ جَاءُوكُمْ حَصِرَتْ صُدُورُهُمْ أَن يُقَاتِلُوكُمْ أَوْ يُقَاتِلُوا قَوْمَهُمْ ۚ وَلَوْ شَاءَ اللَّهُ لَسَلَّطَهُمْ عَلَيْكُمْ فَلَقَاتَلُوكُمْ ۚ فَإِنِ اعْتَزَلُوكُمْ فَلَمْ يُقَاتِلُوكُمْ وَأَلْقَوْا إِلَيْكُمُ السَّلَمَ فَمَا جَعَلَ اللَّهُ لَكُمْ عَلَيْهِمْ سَبِيلًا
ಆದರೆ ನಿಮ್ಮೊಂದಿಗೆ ಒಪ್ಪಂದ ಮಾಡಿಕೊಂಡಿರುವ ಒಂದು ಸಮೂಹದೊಂದಿಗೆ ಸೇರಿಕೊಂಡವರ ಅಥವಾ ನಿಮ್ಮೊಂದಿಗೆ ಯುದ್ಧ ಮಾಡಲಿಕ್ಕಾಗಲೀ, ಸ್ವತಃ ತಮ್ಮ ಜನರೊಂದಿಗೆ ಯುದ್ಧ ಮಾಡಲಿಕ್ಕಾಗಿ ಇಷ್ಟವಿಲ್ಲದೆ ನಿಮ್ಮ ಬಳಿಗೆ ಬರುವವರ ಹೊರತು. ಅಲ್ಲಾಹನು ಇಚ್ಛಿಸುತ್ತಿದ್ದರೆ ಅವರಿಗೆ ನಿಮ್ಮ ಮೇಲೆ ಪ್ರಾಬಲ್ಯ ನೀಡುತ್ತಿದ್ದನು. ಮತ್ತು ನಿಮ್ಮೆಡೆಗೆ ಶಾಂತಿಯ ಪ್ರಸ್ತಾಪವನ್ನಿಟ್ಟರೆ ಅಲ್ಲಾಹನು ಅವರ ವಿರುದ್ಧ ಯಾವ ಯುದ್ಧ ಮಾರ್ಗವನ್ನೂ ನಿಮಗೆ ಕೊಟ್ಟಿರುವುದಿಲ್ಲ.
91سَتَجِدُونَ آخَرِينَ يُرِيدُونَ أَن يَأْمَنُوكُمْ وَيَأْمَنُوا قَوْمَهُمْ كُلَّ مَا رُدُّوا إِلَى الْفِتْنَةِ أُرْكِسُوا فِيهَا ۚ فَإِن لَّمْ يَعْتَزِلُوكُمْ وَيُلْقُوا إِلَيْكُمُ السَّلَمَ وَيَكُفُّوا أَيْدِيَهُمْ فَخُذُوهُمْ وَاقْتُلُوهُمْ حَيْثُ ثَقِفْتُمُوهُمْ ۚ وَأُولَٰئِكُمْ جَعَلْنَا لَكُمْ عَلَيْهِمْ سُلْطَانًا مُّبِينًا
ಬೇರೊಂದು ಸಮುದಾಯವನ್ನು ನೀವು ಕಾಣುವಿರಿ. ಅವರು ನಿಮ್ಮೊಂದಿಗೂ ಸ್ವತಃ ತಮ್ಮ ಜನರೊಂದಿಗೂ ಅಭಯವನ್ನು ಬಯಸುತ್ತಾರೆ. (ಆದರೆ) ಕ್ಷೆÆÃಭೆಯೆಡೆಗೆ ಅವರನ್ನು ಮರಳಿಸಲಾಗುವಾಗ ಅದರಲ್ಲಿ ಅವರು ಅಧೋಮುಖಿಗಳಾಗಿ ಬೀಳುತ್ತಾರೆ. ಅವರೇನಾದರೂ ನಿಮ್ಮಿಂದ ದೂರ ಸರಿದು ನಿಮ್ಮ ಮುಂದೆ ಶಾಂತಿಯ ಪ್ರಸ್ತಾಪವನ್ನಿಡದಿದ್ದರೆ ಮತ್ತು ತಮ್ಮ ಕೈಗಳನ್ನು ತಡೆಹಿಡಿಯದಿದ್ದರೆ ಅವರನ್ನು ಹಿಡಿಯಿರಿ ಮತ್ತು ಅವರನ್ನು ಕಂಡಲ್ಲಿ ಕೊಂದು ಹಾಕಿರಿ. ನಾವು ಅವರ ವಿರುದ್ಧ ನಿಮಗೆ ಸ್ಪಷ್ಟವಾದ ಅಧಿಕಾರವನ್ನು ನೀಡಿರುತ್ತೇವೆ.
92وَمَا كَانَ لِمُؤْمِنٍ أَن يَقْتُلَ مُؤْمِنًا إِلَّا خَطَأً ۚ وَمَن قَتَلَ مُؤْمِنًا خَطَأً فَتَحْرِيرُ رَقَبَةٍ مُّؤْمِنَةٍ وَدِيَةٌ مُّسَلَّمَةٌ إِلَىٰ أَهْلِهِ إِلَّا أَن يَصَّدَّقُوا ۚ فَإِن كَانَ مِن قَوْمٍ عَدُوٍّ لَّكُمْ وَهُوَ مُؤْمِنٌ فَتَحْرِيرُ رَقَبَةٍ مُّؤْمِنَةٍ ۖ وَإِن كَانَ مِن قَوْمٍ بَيْنَكُمْ وَبَيْنَهُم مِّيثَاقٌ فَدِيَةٌ مُّسَلَّمَةٌ إِلَىٰ أَهْلِهِ وَتَحْرِيرُ رَقَبَةٍ مُّؤْمِنَةٍ ۖ فَمَن لَّمْ يَجِدْ فَصِيَامُ شَهْرَيْنِ مُتَتَابِعَيْنِ تَوْبَةً مِّنَ اللَّهِ ۗ وَكَانَ اللَّهُ عَلِيمًا حَكِيمًا
ಒಬ್ಬ ಸತ್ಯವಿಶ್ವಾಸಿಯನ್ನು ವಧಿಸುವುದು ಪ್ರಮಾದದ ಹೊರತು ಭೂಷಣವಲ್ಲ. ಪ್ರಮಾದವಶಾತ್ ಯಾರಾದರೂ ಒಬ್ಬ ಸತ್ಯವಿಶ್ವಾಸಿಯನ್ನು ವಧಿಸಿಬಿಟ್ಟರೆ ಪ್ರಾಯಶ್ಚಿತವಾಗಿ ಒಬ್ಬ ಸತ್ಯವಿಶ್ವಾಸಿ ಗುಲಾಮನನ್ನು ಬಿಡುಗಡೆಗೊಳಿಸಬೇಕು. ಮತ್ತು ಅವನ (ಹತನಾದವನ) ಕುಟುಂಬದವರಿಗೆ ಪರಿಹಾರ ಧನವನ್ನು ನೀಡಬೇಕು. ಆದರೆ ಅವರು ಕುಟುಂಬದವರು ಅದನ್ನು ದಾನವಾಗಿ ಬಿಟ್ಟುಕೊಡುವುದಾದರೆ ಬೇರೆ ವಿಚಾರ ಮತ್ತು ಕೊಲೆಗೀಡಾದವನು ನಿಮ್ಮ ಶತ್ರು ಸಮೂಹದವನಾಗಿದ್ದು, ಅವನು ವಿಶ್ವಾಸಿಯಾಗಿದ್ದರೆ ಕೇವಲ ಸತ್ಯವಿಶ್ವಾಸಿಯಾದ ಓರ್ವ ಗುಲಾಮನನ್ನು ಬಿಡುಗಡೆ ಗೊಳಿಸುವುದು ಕಡ್ಡಾಯವಾಗಿದೆ. ಇನ್ನು ಅವನು (ಕೊಲೆಗೀಡಾದವನು) ನಿಮ್ಮ ಜೊತೆ ಸಂಧಾನ ಮಾಡಿಕೊಂಡಿರುವ ಸಮೂಹದವನಾಗಿದ್ದರೆ ಪರಿಹಾರಧನ ಕಡ್ಡಾಯವಾಗಿದೆ. ಮತ್ತು ಅವನ ವಾರೀಸುದಾರರಿಗೆ ಅದನ್ನು ನೀಡಬೇಕು. ಮತ್ತು ಒಬ್ಬ ವಿಶ್ವಾಸಿಯಾದ ಗುಲಾಮನನ್ನು ಬಿಡುಗಡೆಗೊಳಿಸಬೇಕಾಗಿದೆ. ಇನ್ನು ಯಾರಿಗಾದರು ಅದರ ಸಾಮರ್ಥ್ಯವಿಲ್ಲದಿದ್ದರೆ ಅವನ ಮೇಲೆ ನಿರಂತರ ಎರಡು ತಿಂಗಳು ಉಪವಾಸ ಆಚರಿಸುವ ಹೊಣೆಯಿದೆ. ಇದು ಅಲ್ಲಾಹನಿಂದ ಕ್ಷಮೆ ಸಿಗಲೆಂದಾಗಿದೆ ಮತ್ತು ಅಲ್ಲಾಹನು ಚೆನ್ನಾಗಿ ಅರಿಯುವವನೂ, ಯುಕ್ತಿಪೂರ್ಣನೂ ಆಗಿದ್ದಾನೆ.
93وَمَن يَقْتُلْ مُؤْمِنًا مُّتَعَمِّدًا فَجَزَاؤُهُ جَهَنَّمُ خَالِدًا فِيهَا وَغَضِبَ اللَّهُ عَلَيْهِ وَلَعَنَهُ وَأَعَدَّ لَهُ عَذَابًا عَظِيمًا
ಯಾರಾದರು ಒಬ್ಬ ಸತ್ಯವಿಶ್ವಾಸಿಯನ್ನು ಉದ್ದೇಶಪೂರ್ವಕವಾಗಿ ಕೊಂದರೆ ಅವನಿಗಿರುವ ಪ್ರತಿಫಲವು ನರಕವೇ ಆಗಿದೆ. ಅವನು ಅದರಲ್ಲಿ ಶಾಶ್ವತವಾಗಿರುವನು. ಅವನ ಮೆಲೆ ಅಲ್ಲಾಹನ ಕ್ರೋಧ ಹಾಗೂ ಶಾಪವಿದೆ. ಅವನನ್ನು ಅಲ್ಲಾಹನು ಶಪಿಸುವನು ಮತ್ತು ಅವನಿಗೋಸ್ಕರ ಅಲ್ಲಾಹನು ಮಹಾಶಿಕ್ಷೆಯನ್ನು ಸಿದ್ಧಗೊಳಿಸಿಟ್ಟಿದ್ದಾನೆ.
ಅನ್-ನಿಸಾಕುರಾನ್ ಸೂಚಿ
176ಆಯತ್
MedinanRevelation
91ಆಯತ್

ಅನುವಾದ — ಅನ್-ನಿಸಾ 91

ಸೂರಾ ಅನ್-ನಿಸಾ ಆಯತ್ 91 - ಓದಿ, ಆಲಿಸಿ, ಅನುವಾದ, ಕನ್ನಡ : ಬೇರೊಂದು ಸಮುದಾಯವನ್ನು ನೀವು ಕಾಣುವಿರಿ. ಅವರು ನಿಮ್ಮೊಂದಿಗೂ ಸ್ವತಃ ತಮ್ಮ ಜನರೊಂದಿಗೂ ಅಭಯವನ್ನು…

ಸೂರಾ ಆಯತ್ 91/176 — ಸೂರಾ ಅನ್-ನಿಸಾ النساء (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅನ್-ನಿಸಾ ಆಲಿಸಿ, ಸೂರಾ ಅನ್-ನಿಸಾ ಅನುವಾದ, ಸೂರಾ ಅನ್-ನಿಸಾ mp3, ಸೂರಾ ಅನ್-ನಿಸಾ pdf. ಆಯತ್ 89–93. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Tuesday, September 8, 2026

Don't forget us in your sincere prayers