ಅಲ್-ಅಹ್ಕಾಫ್ · 22/35
ಅನುವಾದ ಉಚ್ಚಾರಣೆ — ಸೂರಾ ಅಲ್-ಅಹ್ಕಾಫ್
قَالُوا أَجِئْتَنَا لِتَأْفِكَنَا عَنْ آلِهَتِنَا فَأْتِنَا بِمَا تَعِدُنَا إِن كُنتَ مِنَ الصَّادِقِينَ ۝٢٢
Qaaloo aji`tanaa litaa fikanaa `an aalihatinaa faatinaa bimaa ta`idunaaa in kunta minas saadiqeen
📖 ಕನ್ನಡ ಅರ್ಥ
ಜನರು ಹೇಳಿದರು; ನಮ್ಮ ಆರಾಧ್ಯರಿಂದ ನಮ್ಮನ್ನು ಅಗಲಿಸಲು ನೀನು ನಮ್ಮ ಬಳಿ ಬಂದಿರುವೆಯಾ ? ನೀನು ಸತ್ಯವಂತನಾಗಿದ್ದರೆ ನೀನು ನಮಗೆ ಎಚ್ಚರಿಕೆ ನೀಡುತ್ತಿರುವ ಆ ಶಿಕ್ಷೆಯನ್ನು ನಮ್ಮ ಮೇಲೆ ತಂದುಬಿಡು.

🎧 ಆಲಿಸಿ


📜 ಆಯತ್ 20-24 — ಸೂರಾ ಅಲ್-ಅಹ್ಕಾಫ್

20وَيَوْمَ يُعْرَضُ الَّذِينَ كَفَرُوا عَلَى النَّارِ أَذْهَبْتُمْ طَيِّبَاتِكُمْ فِي حَيَاتِكُمُ الدُّنْيَا وَاسْتَمْتَعْتُم بِهَا فَالْيَوْمَ تُجْزَوْنَ عَذَابَ الْهُونِ بِمَا كُنتُمْ تَسْتَكْبِرُونَ فِي الْأَرْضِ بِغَيْرِ الْحَقِّ وَبِمَا كُنتُمْ تَفْسُقُونَ
ಮತ್ತು ಸತ್ಯನಿಷೇಧಿಗಳನ್ನು ನರಕಾಗ್ನಿಯ ಮುಂದೆ ಹಾಜರುಪಡಿಸುವ ದಿನ (ಅವರಿಗೆ ಹೇಳಲಾಗುವುದು) ನೀವು ನಿಮ್ಮ ಉತ್ತಮ ವಸ್ತುಗಳನ್ನು ಲೌಕಿಕ ಜೀವನದಲ್ಲೇ ಮುಗಿಸಿ ಅವುಗಳಿಂದ ಸುಖ ಅನುಭವಿಸಿರುವಿರಿ. ಆದ್ದರಿಂದ ನೀವು ಭೂಮಿಯಲ್ಲಿ ಯಾವುದೇ ಹಕ್ಕಿಲ್ಲದೆ ಅಹಂಭಾವ ತೋರುತ್ತಿದ್ದುದರ ನಿಮಿತ್ತ ಮತ್ತು ಆಜ್ಞೋಲ್ಲಂಘನೆ ಮಾಡುತ್ತಿದ್ದುದರ ನಿಮಿತ್ತ, ನಿಮಗೆ ನಿಂದ್ಯತೆಯ ಯಾತನೆಯನ್ನು ಪ್ರತಿಫಲವಾಗಿ ನೀಡಲಾಗುವುದು.
21۞ وَاذْكُرْ أَخَا عَادٍ إِذْ أَنذَرَ قَوْمَهُ بِالْأَحْقَافِ وَقَدْ خَلَتِ النُّذُرُ مِن بَيْنِ يَدَيْهِ وَمِنْ خَلْفِهِ أَلَّا تَعْبُدُوا إِلَّا اللَّهَ إِنِّي أَخَافُ عَلَيْكُمْ عَذَابَ يَوْمٍ عَظِيمٍ
(ಓ ಪೈಗಂಬರರೇ) ನೀವು ಆದ್ ಜನಾಂಗದ ಸಹೋದರ(ಹೂದ್‌ರನ್ನು) ಸ್ಮರಿಸಿರಿ. ಅವರು 'ಅಹ್‌ಕಾಫ್'ನಲ್ಲಿದ್ದ ತಮ್ಮ ಜನಾಂಗವನ್ನು ಎಚ್ಚರಿಸಿದ ಸಂದರ್ಭ ನಿಶ್ಚಯವಾಗಿಯು ಅವರಿಗಿಂತ ಮುಂಚೆಯು, ಅವರ ನಂತರವೂ ಮುನ್ನೆಚ್ಚರಿಕೆಗಾ ರರು ಗತಿಸಿದ್ದಾರೆ. ಅವರು ಹೇಳಿದರು; “ನೀವು ಅಲ್ಲಾಹನನ್ನು ಬಿಟ್ಟು ಇತರರನ್ನು ಆರಾಧಿಸಬೇಡಿರಿ. ನಿಸ್ಸಂದೇಹವಾಗಿಯೂ ನಾನು ನಿಮ್ಮ ಮೇಲೆ ಒಂದು ಮಹಾ ದಿನದ ಯಾತನೆಯನ್ನು ಭಯಪಡುತ್ತೇನೆ.
22قَالُوا أَجِئْتَنَا لِتَأْفِكَنَا عَنْ آلِهَتِنَا فَأْتِنَا بِمَا تَعِدُنَا إِن كُنتَ مِنَ الصَّادِقِينَ
ಜನರು ಹೇಳಿದರು; ನಮ್ಮ ಆರಾಧ್ಯರಿಂದ ನಮ್ಮನ್ನು ಅಗಲಿಸಲು ನೀನು ನಮ್ಮ ಬಳಿ ಬಂದಿರುವೆಯಾ ? ನೀನು ಸತ್ಯವಂತನಾಗಿದ್ದರೆ ನೀನು ನಮಗೆ ಎಚ್ಚರಿಕೆ ನೀಡುತ್ತಿರುವ ಆ ಶಿಕ್ಷೆಯನ್ನು ನಮ್ಮ ಮೇಲೆ ತಂದುಬಿಡು.
23قَالَ إِنَّمَا الْعِلْمُ عِندَ اللَّهِ وَأُبَلِّغُكُم مَّا أُرْسِلْتُ بِهِ وَلَٰكِنِّي أَرَاكُمْ قَوْمًا تَجْهَلُونَ
ಪೈಗಂಬರ್ ಹೂದ್ ಹೇಳಿದರು; ಅದರ ಜ್ಞಾನವು ಅಲ್ಲಾಹನ ಬಳಿ ಮಾತ್ರವಿದೆ. ನಾನು ನನಗೆ ಕೊಟ್ಟು ಕಳುಹಿಸಿರುವ ಸಂದೇಶವನ್ನೇ ನಿಮಗೆ ತಲುಪಿಸುತ್ತಿದ್ದೇನೆ. ಆದರೆ ನಾನು ನಿಮ್ಮನ್ನು ಅವಿವೇಕಿ ಜನಾಂಗವಾಗಿ ಕಾಣುತ್ತಿರುವೆನು.
24فَلَمَّا رَأَوْهُ عَارِضًا مُّسْتَقْبِلَ أَوْدِيَتِهِمْ قَالُوا هَٰذَا عَارِضٌ مُّمْطِرُنَا ۚ بَلْ هُوَ مَا اسْتَعْجَلْتُم بِهِ ۖ رِيحٌ فِيهَا عَذَابٌ أَلِيمٌ
ಅನಂತರ ಅವರು ಶಿಕ್ಷೆಯನ್ನು ತಮ್ಮ ಕಣಿವೆಯೆಡೆಗೆ ಬರುತ್ತಿರುವಂತಹ ಒಂದು ಮೋಡವನ್ನಾಗಿ ಕಂಡಾಗ ಹೇಳಿದರು; ಈ ಮೋಡವು ನಮ್ಮ ಮೇಲೆ ಮಳೆಯನ್ನು ವರ್ಷಿಸಲಿದೆ. (ಇಲ್ಲ) ವಸ್ತುತಃ ಈ ಮೋಡವು ನೀವು ಆತುರಪಟ್ಟುಕೊಳ್ಳುತ್ತಿದ್ದಂತಹ ಶಿಕ್ಷೆ ಆಗಿದೆ. ಇದು ಬಿರುಗಾಳಿಯಾಗಿದ್ದು ಅದರಲ್ಲಿ ವೇದನಾಜನಕ ಯಾತನೆಯಿದೆ.
ಅಲ್-ಅಹ್ಕಾಫ್ಕುರಾನ್ ಸೂಚಿ
35ಆಯತ್
MeccanRevelation
22ಆಯತ್

ಅನುವಾದ — ಅಲ್-ಅಹ್ಕಾಫ್ 22

ಸೂರಾ ಅಲ್-ಅಹ್ಕಾಫ್ ಆಯತ್ 22 - ಓದಿ, ಆಲಿಸಿ, ಅನುವಾದ, ಕನ್ನಡ : ಜನರು ಹೇಳಿದರು; ನಮ್ಮ ಆರಾಧ್ಯರಿಂದ ನಮ್ಮನ್ನು ಅಗಲಿಸಲು ನೀನು ನಮ್ಮ ಬಳಿ ಬಂದಿರುವೆಯಾ…

ಸೂರಾ ಆಯತ್ 22/35 — ಸೂರಾ ಅಲ್-ಅಹ್ಕಾಫ್ الأحقاف (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಅಹ್ಕಾಫ್ ಆಲಿಸಿ, ಸೂರಾ ಅಲ್-ಅಹ್ಕಾಫ್ ಅನುವಾದ, ಸೂರಾ ಅಲ್-ಅಹ್ಕಾಫ್ mp3, ಸೂರಾ ಅಲ್-ಅಹ್ಕಾಫ್ pdf. ಆಯತ್ 20–24. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Tuesday, September 8, 2026

Don't forget us in your sincere prayers