ಮುಹಮ್ಮದ್ · 14/38
ಅನುವಾದ ಉಚ್ಚಾರಣೆ — ಮುಹಮ್ಮದ್
أَفَمَن كَانَ عَلَىٰ بَيِّنَةٍ مِّن رَّبِّهِ كَمَن زُيِّنَ لَهُ سُوءُ عَمَلِهِ وَاتَّبَعُوا أَهْوَاءَهُم ۝١٤
Afaman kaana `alaa baiyinatim mir Rabbihee kaman zuyyina lahoo sooo`u `amalihee wattaba`ooo ahwaaa`ahum
📖 ಕನ್ನಡ ಅರ್ಥ
ತನ್ನ ಒಡೆಯನ ಕಡೆಯಿಂದ (ತೋರಲಾದ) ಸ್ಪಷ್ಟವಾದ ಮಾರ್ಗದಲ್ಲಿರುವವನು, ಯಾರಿಗೆ ತನ್ನ ದುಷ್ಟ ಕರ್ಮಗಳನ್ನು ಚಂದಗಾಣಿಸಲಾಗಿದೆಯೋ ಅವನಂತಾಗಬಲ್ಲನೇ? ಅವರಂತು ತಮ್ಮ ಸ್ವೇಚ್ಛೆಗಳನ್ನಷ್ಟೇ ಅನುಸರಿಸುತ್ತಾರೆ
🎧 ಆಲಿಸಿ

📜 ಆಯತ್ 12-16 — ಮುಹಮ್ಮದ್

12إِنَّ اللَّهَ يُدْخِلُ الَّذِينَ آمَنُوا وَعَمِلُوا الصَّالِحَاتِ جَنَّاتٍ تَجْرِي مِن تَحْتِهَا الْأَنْهَارُ ۖ وَالَّذِينَ كَفَرُوا يَتَمَتَّعُونَ وَيَأْكُلُونَ كَمَا تَأْكُلُ الْأَنْعَامُ وَالنَّارُ مَثْوًى لَّهُمْ
ವಿಶ್ವಾಸಿಗಳಾಗಿದ್ದು ಸತ್ಕರ್ಮಗಳನ್ನು ಮಾಡುತ್ತಿದ್ದವರನ್ನು ಅಲ್ಲಾಹನು ಖಂಡಿತವಾಗಿಯೂ, ತಳದಲ್ಲಿ ನದಿಗಳು ಹರಿಯುತ್ತಿರುವ ಸ್ವರ್ಗ ತೋಟಗಳೊಳಗೆ ಸೇರಿಸುವನು. ಧಿಕ್ಕಾರಿಗಳು ಮೋಜು ಮಾಡುತ್ತಿದ್ದಾರೆ ಮತ್ತು ಜಾನುವಾರುಗಳು ತಿಂದಂತೆ ತಿನ್ನುತ್ತಿದ್ದಾರೆ. ನರಕವೇ ಅವರ ನೆಲೆಯಾಗಿರುವುದು
13وَكَأَيِّن مِّن قَرْيَةٍ هِيَ أَشَدُّ قُوَّةً مِّن قَرْيَتِكَ الَّتِي أَخْرَجَتْكَ أَهْلَكْنَاهُمْ فَلَا نَاصِرَ لَهُمْ
ನಿಮ್ಮನ್ನು ಹೊರಹಾಕಿದ ನಿಮ್ಮ ನಾಡಿಗಿಂತ ಬಲಿಷ್ಠವಾಗಿದ್ದ ಅದೆಷ್ಟೋ ನಾಡುಗಳಿದ್ದವು. ನಾವು ಅವರನ್ನು (ಆ ನಾಡುಗಳ ಜನರನ್ನು) ನಾಶ ಮಾಡಿದೆವು. ಅವರಿಗೆ ನೆರವಾಗುವವರು ಯಾರೂ ಇರಲಿಲ್ಲ
14أَفَمَن كَانَ عَلَىٰ بَيِّنَةٍ مِّن رَّبِّهِ كَمَن زُيِّنَ لَهُ سُوءُ عَمَلِهِ وَاتَّبَعُوا أَهْوَاءَهُم
ತನ್ನ ಒಡೆಯನ ಕಡೆಯಿಂದ (ತೋರಲಾದ) ಸ್ಪಷ್ಟವಾದ ಮಾರ್ಗದಲ್ಲಿರುವವನು, ಯಾರಿಗೆ ತನ್ನ ದುಷ್ಟ ಕರ್ಮಗಳನ್ನು ಚಂದಗಾಣಿಸಲಾಗಿದೆಯೋ ಅವನಂತಾಗಬಲ್ಲನೇ? ಅವರಂತು ತಮ್ಮ ಸ್ವೇಚ್ಛೆಗಳನ್ನಷ್ಟೇ ಅನುಸರಿಸುತ್ತಾರೆ
15مَّثَلُ الْجَنَّةِ الَّتِي وُعِدَ الْمُتَّقُونَ ۖ فِيهَا أَنْهَارٌ مِّن مَّاءٍ غَيْرِ آسِنٍ وَأَنْهَارٌ مِّن لَّبَنٍ لَّمْ يَتَغَيَّرْ طَعْمُهُ وَأَنْهَارٌ مِّنْ خَمْرٍ لَّذَّةٍ لِّلشَّارِبِينَ وَأَنْهَارٌ مِّنْ عَسَلٍ مُّصَفًّى ۖ وَلَهُمْ فِيهَا مِن كُلِّ الثَّمَرَاتِ وَمَغْفِرَةٌ مِّن رَّبِّهِمْ ۖ كَمَنْ هُوَ خَالِدٌ فِي النَّارِ وَسُقُوا مَاءً حَمِيمًا فَقَطَّعَ أَمْعَاءَهُمْ
ಧರ್ಮನಿಷ್ಠರಿಗೆ ವಾಗ್ದಾನ ಮಾಡಲಾಗಿರುವ ಸ್ವರ್ಗವು (ಹೀಗಿರುತ್ತದೆ); ಅದರಲ್ಲಿ ಎಂದೂ ಮಲಿನವಾಗದ ನೀರಿರುವ ನದಿಗಳಿರುವವು ಹಾಗೂ ರುಚಿ ಬದಲಾಗದ ಹಾಲಿನ ನದಿಗಳು, ಕುಡಿಯುವವರಿಗೆ ತುಂಬಾ ಸ್ವಾದಿಷ್ಟವಾಗಿರುವ ಮದಿರೆಯ ನದಿಗಳು ಮತ್ತು ಶುದ್ಧ ಜೇನಿನ ನದಿಗಳಿರುವವು. ಅಲ್ಲಿ ಅವರಿಗಾಗಿ ಎಲ್ಲ ಬಗೆಯ ಫಲಗಳಿರುವವು ಮತ್ತು ಅವರ ಒಡೆಯನ ಕಡೆಯಿಂದ ಕ್ಷಮಾದಾನ ಸಿಗುವುದು. ಇಂಥವರು (ಸ್ವರ್ಗವಾಸಿಗಳು), ಸದಾಕಾಲ ನರಕದಲ್ಲೇ ಇರುವ ಹಾಗೂ ಕರುಳುಗಳನ್ನು ಚೂರು ಚೂರಾಗಿಸುವಂತಹ ಕುದಿಯುವ ನೀರನ್ನು ಕುಡಿಸಲಾಗುವ ವ್ಯಕ್ತಿಗೆ ಸಮನಾಗಬಲ್ಲರೇ
16وَمِنْهُم مَّن يَسْتَمِعُ إِلَيْكَ حَتَّىٰ إِذَا خَرَجُوا مِنْ عِندِكَ قَالُوا لِلَّذِينَ أُوتُوا الْعِلْمَ مَاذَا قَالَ آنِفًا ۚ أُولَٰئِكَ الَّذِينَ طَبَعَ اللَّهُ عَلَىٰ قُلُوبِهِمْ وَاتَّبَعُوا أَهْوَاءَهُمْ
(ದೂತರೇ,) ಅವರಲ್ಲಿ ಕೆಲವರು, ನಿಮ್ಮ ಮಾತನ್ನು ಆಲಿಸುತ್ತಾರೆ. ತರುವಾಯ ನಿಮ್ಮ ಬಳಿಯಿಂದ ಹೊರಟು ಹೋದ ಬಳಿಕ, ಜ್ಞಾನ ನೀಡಲಾಗಿರುವವರೊಡನೆ, (ಏನನ್ನೂ ಕೇಳದವರಂತೆ) ‘‘ಆತ ಈಗ ತಾನೇ ಹೇಳಿದ್ದೇನನ್ನು?’’ ಎಂದು ಕೇಳುತ್ತಾರೆ. ಅಲ್ಲಾಹನು ಅಂಥವರ ಮನಸ್ಸುಗಳಿಗೆ ಮುದ್ರೆ ಒತ್ತಿರುತ್ತಾನೆ ಮತ್ತು ಅವರು ತಮ್ಮ ಸ್ವೇಚ್ಛೆಯನ್ನೇ ಅನುಸರಿಸುತ್ತಾರೆ
ಮುಹಮ್ಮದ್ಕುರಾನ್ ಸೂಚಿ
38ಆಯತ್
MedinanRevelation
14ಆಯತ್

ಅನುವಾದ — ಮುಹಮ್ಮದ್ 14

ಸೂರಾ ಮುಹಮ್ಮದ್ ಆಯತ್ 14 - ಓದಿ, ಆಲಿಸಿ, ಅನುವಾದ, ಕನ್ನಡ : ತನ್ನ ಒಡೆಯನ ಕಡೆಯಿಂದ (ತೋರಲಾದ) ಸ್ಪಷ್ಟವಾದ ಮಾರ್ಗದಲ್ಲಿರುವವನು, ಯಾರಿಗೆ ತನ್ನ ದುಷ್ಟ ಕರ್ಮಗಳನ್ನು…

ಸೂರಾ ಆಯತ್ 14/38 — ಮುಹಮ್ಮದ್ محمد (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಮುಹಮ್ಮದ್ ಆಲಿಸಿ, ಮುಹಮ್ಮದ್ ಅನುವಾದ, ಮುಹಮ್ಮದ್ mp3, ಮುಹಮ್ಮದ್ pdf. ಆಯತ್ 12–16. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Tuesday, August 18, 2026

Don't forget us in your sincere prayers