ಮುಹಮ್ಮದ್ · 17/38
ಅನುವಾದ ಉಚ್ಚಾರಣೆ — ಮುಹಮ್ಮದ್
وَٱلَّذِينَ ٱهۡتَدَوۡاْ زَادَهُمۡ هُدًى وَءَاتَىٰهُمۡ تَقۡوَىٰهُمۡ  ۝١٧
Wallazeenah tadaw zaadahum hudanw wa aataahum taqwaahum
📖 ಕನ್ನಡ ಅರ್ಥ
ಸನ್ಮಾರ್ಗವನ್ನು ಅನುಸರಿಸುವವರಿಗೆ ಅಲ್ಲಾಹನು ಇನ್ನಷ್ಟು ಮಾರ್ಗದರ್ಶನ ನೀಡುತ್ತಾನೆ ಮತ್ತು ಅವರಿಗೆ ಧರ್ಮನಿಷ್ಠೆಯನ್ನೂ ದಯಪಾಲಿಸುತ್ತಾನೆ
🎧 ಆಲಿಸಿ

📜 ಆಯತ್ 15-19 — ಮುಹಮ್ಮದ್

15مَّثَلُ ٱلۡجَنَّةِ ٱلَّتِي وُعِدَ ٱلۡمُتَّقُونَۖ فِيهَآ أَنۡهَٰرٌ مِّن مَّآءٍ غَيۡرِ ءَاسِنٍ وَأَنۡهَٰرٌ مِّن لَّبَنٍ لَّمۡ يَتَغَيَّرۡ طَعۡمُهُۥ وَأَنۡهَٰرٌ مِّنۡ خَمۡرٍ لَّذَّةٍ لِّلشَّٰرِبِينَ وَأَنۡهَٰرٌ مِّنۡ عَسَلٍ مُّصَفًّىۖ وَلَهُمۡ فِيهَا مِن كُلِّ ٱلثَّمَرَٰتِ وَمَغۡفِرَةٌ مِّن رَّبِّهِمۡۖ كَمَنۡ هُوَ خَٰلِدٌ فِي ٱلنَّارِ وَسُقُواْ مَآءً حَمِيمًا فَقَطَّعَ أَمۡعَآءَهُمۡ 
ಧರ್ಮನಿಷ್ಠರಿಗೆ ವಾಗ್ದಾನ ಮಾಡಲಾಗಿರುವ ಸ್ವರ್ಗವು (ಹೀಗಿರುತ್ತದೆ); ಅದರಲ್ಲಿ ಎಂದೂ ಮಲಿನವಾಗದ ನೀರಿರುವ ನದಿಗಳಿರುವವು ಹಾಗೂ ರುಚಿ ಬದಲಾಗದ ಹಾಲಿನ ನದಿಗಳು, ಕುಡಿಯುವವರಿಗೆ ತುಂಬಾ ಸ್ವಾದಿಷ್ಟವಾಗಿರುವ ಮದಿರೆಯ ನದಿಗಳು ಮತ್ತು ಶುದ್ಧ ಜೇನಿನ ನದಿಗಳಿರುವವು. ಅಲ್ಲಿ ಅವರಿಗಾಗಿ ಎಲ್ಲ ಬಗೆಯ ಫಲಗಳಿರುವವು ಮತ್ತು ಅವರ ಒಡೆಯನ ಕಡೆಯಿಂದ ಕ್ಷಮಾದಾನ ಸಿಗುವುದು. ಇಂಥವರು (ಸ್ವರ್ಗವಾಸಿಗಳು), ಸದಾಕಾಲ ನರಕದಲ್ಲೇ ಇರುವ ಹಾಗೂ ಕರುಳುಗಳನ್ನು ಚೂರು ಚೂರಾಗಿಸುವಂತಹ ಕುದಿಯುವ ನೀರನ್ನು ಕುಡಿಸಲಾಗುವ ವ್ಯಕ್ತಿಗೆ ಸಮನಾಗಬಲ್ಲರೇ
16وَمِنۡهُم مَّن يَسۡتَمِعُ إِلَيۡكَ حَتَّىٰٓ إِذَا خَرَجُواْ مِنۡ عِندِكَ قَالُواْ لِلَّذِينَ أُوتُواْ ٱلۡعِلۡمَ مَاذَا قَالَ ءَانِفًاۚ أُوْلَٰٓئِكَ ٱلَّذِينَ طَبَعَ ٱللَّهُ عَلَىٰ قُلُوبِهِمۡ وَٱتَّبَعُوٓاْ أَهۡوَآءَهُمۡ 
(ದೂತರೇ,) ಅವರಲ್ಲಿ ಕೆಲವರು, ನಿಮ್ಮ ಮಾತನ್ನು ಆಲಿಸುತ್ತಾರೆ. ತರುವಾಯ ನಿಮ್ಮ ಬಳಿಯಿಂದ ಹೊರಟು ಹೋದ ಬಳಿಕ, ಜ್ಞಾನ ನೀಡಲಾಗಿರುವವರೊಡನೆ, (ಏನನ್ನೂ ಕೇಳದವರಂತೆ) ‘‘ಆತ ಈಗ ತಾನೇ ಹೇಳಿದ್ದೇನನ್ನು?’’ ಎಂದು ಕೇಳುತ್ತಾರೆ. ಅಲ್ಲಾಹನು ಅಂಥವರ ಮನಸ್ಸುಗಳಿಗೆ ಮುದ್ರೆ ಒತ್ತಿರುತ್ತಾನೆ ಮತ್ತು ಅವರು ತಮ್ಮ ಸ್ವೇಚ್ಛೆಯನ್ನೇ ಅನುಸರಿಸುತ್ತಾರೆ
17وَٱلَّذِينَ ٱهۡتَدَوۡاْ زَادَهُمۡ هُدًى وَءَاتَىٰهُمۡ تَقۡوَىٰهُمۡ 
ಸನ್ಮಾರ್ಗವನ್ನು ಅನುಸರಿಸುವವರಿಗೆ ಅಲ್ಲಾಹನು ಇನ್ನಷ್ಟು ಮಾರ್ಗದರ್ಶನ ನೀಡುತ್ತಾನೆ ಮತ್ತು ಅವರಿಗೆ ಧರ್ಮನಿಷ್ಠೆಯನ್ನೂ ದಯಪಾಲಿಸುತ್ತಾನೆ
18فَهَلۡ يَنظُرُونَ إِلَّا ٱلسَّاعَةَ أَن تَأۡتِيَهُم بَغۡتَةًۖ فَقَدۡ جَآءَ أَشۡرَاطُهَاۚ فَأَنَّىٰ لَهُمۡ إِذَا جَآءَتۡهُمۡ ذِكۡرَىٰهُمۡ 
ಅವರು ಕಾಯುತ್ತಿರುವುದು ಲೋಕಾಂತ್ಯದ ಕ್ಷಣವು ಹಠಾತ್ತನೆ ತಮ್ಮ ಮೇಲೆ ಬಂದೆರಗುವುದಕ್ಕೆ ತಾನೇ? ಅದರ ಮುನ್ಸೂಚನೆಗಳು ಈಗಾಗಲೇ ಬಂದಿವೆ. ಅದು ಬಂದು ಬಿಟ್ಟ ಬಳಿಕ ಅವರಿಗೆ ಉಪದೇಶ ಸ್ವೀಕರಿಸುವ ಅವಕಾಶವೇ ಎಲ್ಲಿರುವುದು
19فَٱعۡلَمۡ أَنَّهُۥ لَآ إِلَٰهَ إِلَّا ٱللَّهُ وَٱسۡتَغۡفِرۡ لِذَنۢبِكَ وَلِلۡمُؤۡمِنِينَ وَٱلۡمُؤۡمِنَٰتِۗ وَٱللَّهُ يَعۡلَمُ مُتَقَلَّبَكُمۡ وَمَثۡوَىٰكُمۡ 
ನಿಮಗೆ ತಿಳಿದಿರಲಿ. ಆ ಅಲ್ಲಾಹನ ಹೊರತು ಬೇರೆ ದೇವರಿಲ್ಲ. ನೀವು ನಿಮ್ಮ ಹಾಗೂ ಎಲ್ಲ ವಿಶ್ವಾಸಿ ಪುರುಷರ ಹಾಗೂ ವಿಶ್ವಾಸಿ ಸ್ತ್ರೀಯರ ಪರವಾಗಿ ಕ್ಷಮೆ ಬೇಡಿರಿ. ನೀವು ನಡೆದಾಡುವ ಸ್ಥಳಗಳನ್ನೂ ನೀವು ವಿರಮಿಸುವ ಸ್ಥಳಗಳನ್ನೂ ಅಲ್ಲಾಹನು ಚೆನ್ನಾಗಿ ಬಲ್ಲನು
ಮುಹಮ್ಮದ್ಕುರಾನ್ ಸೂಚಿ
38ಆಯತ್
MedinanRevelation
17ಆಯತ್

ಅನುವಾದ — ಮುಹಮ್ಮದ್ 17

ಸೂರಾ ಆಯತ್ 17/38 — ಮುಹಮ್ಮದ್ محمد (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಮುಹಮ್ಮದ್ ಆಲಿಸಿ, ಮುಹಮ್ಮದ್ ಅನುವಾದ, ಮುಹಮ್ಮದ್ mp3, ಮುಹಮ್ಮದ್ pdf. ಆಯತ್ 15–19. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Tuesday, August 18, 2026

Don't forget us in your sincere prayers