ಅಲ್-ಫತ್ಹ್ · 27/29
ಅನುವಾದ ಉಚ್ಚಾರಣೆ — ಅಲ್-ಫತ್ಹ್
لَّقَدۡ صَدَقَ ٱللَّهُ رَسُولَهُ ٱلرُّءۡيَا بِٱلۡحَقِّۖ لَتَدۡخُلُنَّ ٱلۡمَسۡجِدَ ٱلۡحَرَامَ إِن شَآءَ ٱللَّهُ ءَامِنِينَ مُحَلِّقِينَ رُءُوسَكُمۡ وَمُقَصِّرِينَ لَا تَخَافُونَۖ فَعَلِمَ مَا لَمۡ تَعۡلَمُواْ فَجَعَلَ مِن دُونِ ذَٰلِكَ فَتۡحًا قَرِيبًا  ۝٢٧
Laqad sadaqal laahu Rasoolahur ru`yaa bilhaqq, latadkhulunnal Masjidal-Haraama in shaaa`al laahu aamineena muhalliqeena ru`oosakum wa muqassireena laa takhaafoona fa`alima maa lam ta`lamoo faja`ala min dooni zaalika fathan qareebaa
📖 ಕನ್ನಡ ಅರ್ಥ
ಅಲ್ಲಾಹನು ನಿಜಕ್ಕೂ ತನ್ನ ದೂತರಿಗೆ ಸತ್ಯಕ್ಕನುಸಾರವಾದ ಕನಸನ್ನೇ ತೋರಿಸಿದ್ದನು; ಅಲ್ಲಾಹನಿಚ್ಛಿಸಿದರೆ ನೀವು ಖಂಡಿತ ಶಾಂತಿಯೊಂದಿಗೆ, ಮಸ್ಜಿದುಲ್ ಹರಾಮನ್ನು ಪ್ರವೇಶಿಸುವಿರಿ. (ಕೆಲವರು) ತಲೆಬೋಳಿಸಿಕೊಂಡು ಹಾಗೂ (ಕೆಲವರು) ಕೂದಲು ಕತ್ತರಿಸಿಕೊಂಡು (ಪ್ರವೇಶಿಸುವರು). ನಿಮಗೆ ಯಾವ ಭಯವೂ ಇರದು. ನಿಮಗೆ ತಿಳಿದಿಲ್ಲದ ಸಂಗತಿಗಳನ್ನು ಅವನು ತಿಳಿದಿರುವನು. ಇದು (ಮಕ್ಕಃ ವಿಜಯ) ಮಾತ್ರವಲ್ಲದೆ, ಬೇರೊಂದು ವಿಜಯವನ್ನೂ ಅವನು ಈಗಾಗಲೇ ನಿಮಗೆ ನೀಡಿರುವನು
🎧 ಆಲಿಸಿ

📜 ಆಯತ್ 25-29 — ಅಲ್-ಫತ್ಹ್

25هُمُ ٱلَّذِينَ كَفَرُواْ وَصَدُّوكُمۡ عَنِ ٱلۡمَسۡجِدِ ٱلۡحَرَامِ وَٱلۡهَدۡيَ مَعۡكُوفًا أَن يَبۡلُغَ مَحِلَّهُۥۚ وَلَوۡلَا رِجَالٌ مُّؤۡمِنُونَ وَنِسَآءٌ مُّؤۡمِنَٰتٌ لَّمۡ تَعۡلَمُوهُمۡ أَن تَطَـُٔوهُمۡ فَتُصِيبَكُم مِّنۡهُم مَّعَرَّةُۢ بِغَيۡرِ عِلۡمٍۖ لِّيُدۡخِلَ ٱللَّهُ فِي رَحۡمَتِهِۦ مَن يَشَآءُۚ لَوۡ تَزَيَّلُواْ لَعَذَّبۡنَا ٱلَّذِينَ كَفَرُواْ مِنۡهُمۡ عَذَابًا أَلِيمًا 
ಅವರೇ ಧಿಕ್ಕರಿಸಿದವರು ಹಾಗೂ ನಿಮ್ಮನ್ನು ಮಸ್ಜಿದುಲ್ ಹರಾಮ್‌ಗೆ ಹೋಗದಂತೆ ತಡೆದವರು ಹಾಗೂ ಬಲಿಗಾಗಿ ನಿಲ್ಲಿಸಲಾಗಿದ್ದ ಪ್ರಾಣಿಗಳು ಅವುಗಳ ನೆಲೆಯನ್ನು ತಲುಪದಂತೆ ತಡೆದವರು. ಒಂದು ವೇಳೆ (ಮಕ್ಕಃದಲ್ಲಿ) ನೀವು ನಿಮಗೆ ಪರಿಚಯವಿಲ್ಲದ ವಿಶ್ವಾಸಿ ಪುರುಷರು ಮತ್ತು ಸ್ತ್ರೀಯರನ್ನು ನಾಶ ಮಾಡಿ, ಆ ಮೂಲಕ, ನಿಮಗೆ ಅರಿವಿಲ್ಲದೆ ಒಂದು ದೊಡ್ಡ ಪ್ರಮಾದ ಎಸಗಿ ಬಿಡುವ ಸಾಧ್ಯತೆ ಇಲ್ಲದಿರುತ್ತಿದ್ದರೆ (ಯುದ್ಧವನ್ನು ಸಮ್ಮತಿಸಲಾಗುತ್ತಿತ್ತು). ಅಲ್ಲಾಹನು ತಾನಿಚ್ಛಿಸಿದವರನ್ನು ತನ್ನ ಕೃಪೆಯೊಳಗೆ ಸೇರಿಸುವಂತಾಗಲು (ಅದನ್ನು ವಿಳಂಬಿಸಲಾಯಿತು). ಒಂದು ವೇಳೆ (ವಿಶ್ವಾಸಿಗಳು ಹಾಗೂ ಧಿಕ್ಕಾರಿಗಳು) ಸಂಪೂರ್ಣ ಬೇರ್ಪಟ್ಟಿದ್ದರೆ ನಾವು ಅವರ ಪೈಕಿ ಧಿಕ್ಕಾರಿಗಳಿಗೆ ಕಠಿಣ ಶಿಕ್ಷೆಯನ್ನು ನೀಡುತ್ತಿದ್ದೆವು
26إِذۡ جَعَلَ ٱلَّذِينَ كَفَرُواْ فِي قُلُوبِهِمُ ٱلۡحَمِيَّةَ حَمِيَّةَ ٱلۡجَٰهِلِيَّةِ فَأَنزَلَ ٱللَّهُ سَكِينَتَهُۥ عَلَىٰ رَسُولِهِۦ وَعَلَى ٱلۡمُؤۡمِنِينَ وَأَلۡزَمَهُمۡ كَلِمَةَ ٱلتَّقۡوَىٰ وَكَانُوٓاْ أَحَقَّ بِهَا وَأَهۡلَهَاۚ وَكَانَ ٱللَّهُ بِكُلِّ شَيۡءٍ عَلِيمًا 
ಧಿಕ್ಕಾರಿಗಳು ತಮ್ಮ ಮನಗಳಲ್ಲಿ ಉದ್ಧಟತನವನ್ನು (ಮಾತ್ರವಲ್ಲ,) ಅಜ್ಞಾನದ ಉದ್ಧಟತನವನ್ನು ಬೆಳೆಸಿಕೊಂಡಾಗ, ಅಲ್ಲಾಹನು ತನ್ನ ದೂತರಿಗೆ ಹಾಗೂ ವಿಶ್ವಾಸಿಗಳಿಗೆ ಮನಃ ಶಾಂತಿಯನ್ನು ಇಳಿಸಿಕೊಟ್ಟನು ಮತ್ತು ಅವರನ್ನು ಧರ್ಮನಿಷ್ಠೆಯ ಮಾತಿನಲ್ಲಿ ಸ್ಥಿರಗೊಳಿಸಿದನು. ಅವರು ಅದಕ್ಕೆ ಹೆಚ್ಚು ಅರ್ಹರು ಹಾಗೂ ಯೋಗ್ಯರಾಗಿದ್ದರು. ಮತ್ತು ಅಲ್ಲಾಹನು ಎಲ್ಲವನ್ನೂ ಬಲ್ಲವನಾಗಿದ್ದಾನೆ
27لَّقَدۡ صَدَقَ ٱللَّهُ رَسُولَهُ ٱلرُّءۡيَا بِٱلۡحَقِّۖ لَتَدۡخُلُنَّ ٱلۡمَسۡجِدَ ٱلۡحَرَامَ إِن شَآءَ ٱللَّهُ ءَامِنِينَ مُحَلِّقِينَ رُءُوسَكُمۡ وَمُقَصِّرِينَ لَا تَخَافُونَۖ فَعَلِمَ مَا لَمۡ تَعۡلَمُواْ فَجَعَلَ مِن دُونِ ذَٰلِكَ فَتۡحًا قَرِيبًا 
ಅಲ್ಲಾಹನು ನಿಜಕ್ಕೂ ತನ್ನ ದೂತರಿಗೆ ಸತ್ಯಕ್ಕನುಸಾರವಾದ ಕನಸನ್ನೇ ತೋರಿಸಿದ್ದನು; ಅಲ್ಲಾಹನಿಚ್ಛಿಸಿದರೆ ನೀವು ಖಂಡಿತ ಶಾಂತಿಯೊಂದಿಗೆ, ಮಸ್ಜಿದುಲ್ ಹರಾಮನ್ನು ಪ್ರವೇಶಿಸುವಿರಿ. (ಕೆಲವರು) ತಲೆಬೋಳಿಸಿಕೊಂಡು ಹಾಗೂ (ಕೆಲವರು) ಕೂದಲು ಕತ್ತರಿಸಿಕೊಂಡು (ಪ್ರವೇಶಿಸುವರು). ನಿಮಗೆ ಯಾವ ಭಯವೂ ಇರದು. ನಿಮಗೆ ತಿಳಿದಿಲ್ಲದ ಸಂಗತಿಗಳನ್ನು ಅವನು ತಿಳಿದಿರುವನು. ಇದು (ಮಕ್ಕಃ ವಿಜಯ) ಮಾತ್ರವಲ್ಲದೆ, ಬೇರೊಂದು ವಿಜಯವನ್ನೂ ಅವನು ಈಗಾಗಲೇ ನಿಮಗೆ ನೀಡಿರುವನು
28هُوَ ٱلَّذِيٓ أَرۡسَلَ رَسُولَهُۥ بِٱلۡهُدَىٰ وَدِينِ ٱلۡحَقِّ لِيُظۡهِرَهُۥ عَلَى ٱلدِّينِ كُلِّهِۦۚ وَكَفَىٰ بِٱللَّهِ شَهِيدًا 
ಅವನೇ, ತನ್ನ ದೂತರನ್ನು ಮಾರ್ಗದರ್ಶನ ಹಾಗೂ ಸತ್ಯಧರ್ಮದೊಂದಿಗೆ ಕಳಿಸಿರುವವನು – ಅದನ್ನು ಇತರೆಲ್ಲ ಧರ್ಮಗಳೆದುರು ವಿಜಯಿಯಾಗಿಸಲಿಕ್ಕಾಗಿ. ಇದಕ್ಕೆ ಸಾಕ್ಷಿಯಾಗಿ ಅಲ್ಲಾಹನೇ ಸಾಕು
29مُّحَمَّدٌ رَّسُولُ ٱللَّهِۚ وَٱلَّذِينَ مَعَهُۥٓ أَشِدَّآءُ عَلَى ٱلۡكُفَّارِ رُحَمَآءُ بَيۡنَهُمۡۖ تَرَىٰهُمۡ رُكَّعًا سُجَّدًا يَبۡتَغُونَ فَضۡلًا مِّنَ ٱللَّهِ وَرِضۡوَٰنًاۖ سِيمَاهُمۡ فِي وُجُوهِهِم مِّنۡ أَثَرِ ٱلسُّجُودِۚ ذَٰلِكَ مَثَلُهُمۡ فِي ٱلتَّوۡرَىٰةِۚ وَمَثَلُهُمۡ فِي ٱلۡإِنجِيلِ كَزَرۡعٍ أَخۡرَجَ شَطۡـَٔهُۥ فَـَٔازَرَهُۥ فَٱسۡتَغۡلَظَ فَٱسۡتَوَىٰ عَلَىٰ سُوقِهِۦ يُعۡجِبُ ٱلزُّرَّاعَ لِيَغِيظَ بِهِمُ ٱلۡكُفَّارَۗ وَعَدَ ٱللَّهُ ٱلَّذِينَ ءَامَنُواْ وَعَمِلُواْ ٱلصَّٰلِحَٰتِ مِنۡهُم مَّغۡفِرَةً وَأَجۡرًا عَظِيمَۢا 
ಮುಹಮ್ಮದರು ಅಲ್ಲಾಹನ ದೂತರು. ಅವರ ಜೊತೆಗಿರುವವರು ಧಿಕ್ಕಾರಿಗಳ ಪಾಲಿಗೆ ಕಠೋರರೂ ಪರಸ್ಪರ ಕರುಣಾಳುಗಳೂ ಆಗಿರುತ್ತಾರೆ. ಅವರು (ಅಲ್ಲಾಹನ ಮುಂದೆ) ಬಾಗುತ್ತಲೂ ಸಾಷ್ಟಾಂಗ ವೆರಗುತ್ತಲೂ ಇರುವುದನ್ನು ಮತ್ತು ಅಲ್ಲಾಹನ ಅನುಗ್ರಹ ಹಾಗೂ ಅವನ ಮೆಚ್ಚುಗೆಯನ್ನು ಅರಸುತ್ತಲಿರುವುದನ್ನು ನೀವು ಕಾಣುವಿರಿ. ಅವರ ಲಕ್ಷಣವೇನೆಂದರೆ, ಸಾಷ್ಟಾಂಗವಂದನೆಯ ಪ್ರಭಾವವು ಅವರ ಮುಖಗಳಲ್ಲಿರುವುದು. ತೌರಾತ್‌ನಲ್ಲಿ ಅವರ ಲಕ್ಷಣವು ಹೀಗೆಯೇ ಇದೆ ಮತ್ತು ಇಂಜೀಲ್‌ನಲ್ಲಿ ಅವರ ಲಕ್ಷಣವು ಹೀಗಿದೆ; ತನ್ನ ತೆನೆಯನ್ನು ಮೊಳೆಯಿಸುವ ಒಂದು ಹೊಲದಂತೆ. ಅದು ಅದನ್ನು ಬಲಪಡಿಸುತ್ತಿರುತ್ತದೆ. ಕೊನೆಗೆ ಅದು ಬಲಿಷ್ಠವಾಗಿ ಸ್ವತಃ ತನ್ನ ಕಾಂಡದ ಮೇಲೆ ನಿಲ್ಲುತ್ತದೆ. ಅದನ್ನು ಕಂಡು ಕೃಷಿಕರಿಗೆ ಸಂತಸವಾಗುತ್ತದೆ. ಧಿಕ್ಕಾರಿಗಳು ಉರಿದು ಬೀಳಲೆಂದು (ವಿಶ್ವಾಸಿಗಳನ್ನು ಈ ರೀತಿ ಬೆಳೆಸಲಾಗುತ್ತದೆ). ವಿಶ್ವಾಸಿಗಳಾಗಿದ್ದು ಸತ್ಕರ್ಮಗಳನ್ನು ಮಾಡುವವರಿಗೆ ಅಲ್ಲಾಹನು ಕ್ಷಮೆ ಹಾಗೂ ಮಹಾ ಪ್ರತಿಫಲದ ಭರವಸೆ ನೀಡಿರುವನು
ಅಲ್-ಫತ್ಹ್ಕುರಾನ್ ಸೂಚಿ
29ಆಯತ್
MedinanRevelation
27ಆಯತ್

ಅನುವಾದ — ಅಲ್-ಫತ್ಹ್ 27

ಸೂರಾ ಆಯತ್ 27/29 — ಅಲ್-ಫತ್ಹ್ الفتح (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಅಲ್-ಫತ್ಹ್ ಆಲಿಸಿ, ಅಲ್-ಫತ್ಹ್ ಅನುವಾದ, ಅಲ್-ಫತ್ಹ್ mp3, ಅಲ್-ಫತ್ಹ್ pdf. ಆಯತ್ 25–29. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Tuesday, August 18, 2026

Don't forget us in your sincere prayers