ಅಲ್-ಹುಜುರಾತ್ · 14/18
ಅನುವಾದ ಉಚ್ಚಾರಣೆ — ಅಲ್-ಹುಜುರಾತ್
۞ قَالَتِ الْأَعْرَابُ آمَنَّا ۖ قُل لَّمْ تُؤْمِنُوا وَلَٰكِن قُولُوا أَسْلَمْنَا وَلَمَّا يَدْخُلِ الْإِيمَانُ فِي قُلُوبِكُمْ ۖ وَإِن تُطِيعُوا اللَّهَ وَرَسُولَهُ لَا يَلِتْكُم مِّنْ أَعْمَالِكُمْ شَيْئًا ۚ إِنَّ اللَّهَ غَفُورٌ رَّحِيمٌ ۝١٤
Qaalatil-A `raabu aamannaa qul lam tu`minoo wa laakin qoolooo aslamnaa wa lamma yadkhulil eemaanu fee quloobikum wa in tutee`ul laaha wa Rasoolahoo laa yalitkum min a`maalikum shai`aa; innal laaha Ghafoorur Raheem
📖 ಕನ್ನಡ ಅರ್ಥ
ಆ ಹಳ್ಳಿಗರು, ‘‘ನಾವು ವಿಶ್ವಾಸಿಗಳಾದೆವು’’ ಎನ್ನುತ್ತಾರೆ. ಹೇಳಿರಿ; ‘‘ನೀವು ವಿಶ್ವಾಸಿಗಳೇನೂ ಆಗಿಲ್ಲ. ನಾವು ಶರಣಾಗಿರುವೆವು ಎಂದಷ್ಟೆ ಹೇಳಿರಿ. ಏಕೆಂದರೆ ವಿಶ್ವಾಸವು ಇನ್ನೂ ನಿಮ್ಮ ಮನಸ್ಸುಗಳನ್ನು ಪ್ರವೇಶಿಸಿಲ್ಲ. ನೀವು ಅಲ್ಲಾಹ್ ಮತ್ತು ಅವನ ದೂತರ ಆದೇಶಗಳನ್ನು ಪಾಲಿಸಿದರೆ, ನಿಮ್ಮ ಕರ್ಮಗಳಲ್ಲಿ ಏನೂ ಕಡಿತವಾಗದು. ಅಲ್ಲಾಹನು ಖಂಡಿತ ಕ್ಷಮಾಶೀಲನೂ ಕರುಣಾಳುವೂ ಆಗಿದ್ದಾನೆ’’
🎧 ಆಲಿಸಿ

📜 ಆಯತ್ 12-16 — ಅಲ್-ಹುಜುರಾತ್

12يَا أَيُّهَا الَّذِينَ آمَنُوا اجْتَنِبُوا كَثِيرًا مِّنَ الظَّنِّ إِنَّ بَعْضَ الظَّنِّ إِثْمٌ ۖ وَلَا تَجَسَّسُوا وَلَا يَغْتَب بَّعْضُكُم بَعْضًا ۚ أَيُحِبُّ أَحَدُكُمْ أَن يَأْكُلَ لَحْمَ أَخِيهِ مَيْتًا فَكَرِهْتُمُوهُ ۚ وَاتَّقُوا اللَّهَ ۚ إِنَّ اللَّهَ تَوَّابٌ رَّحِيمٌ
ವಿಶ್ವಾಸಿಗಳೇ, ಹೆಚ್ಚಿನ ಸಂಶಯಗಳಿಂದ ದೂರವಿರಿ. ಕೆಲವು ಸಂಶಯಗಳು ಪಾಪಗಳಾಗಿವೆ. ಮತ್ತು ನೀವು ಪರಸ್ಪರ ಬೇಹುಗಾರಿಕೆ ನಡೆಸಬೇಡಿ ಹಾಗೂ ನಿಮ್ಮಲ್ಲಿ ಯಾರೂ ಇನ್ನೊಬ್ಬರನ್ನು ಅವರ ಬೆನ್ನ ಹಿಂದೆ ದೂಷಿಸಬಾರದು. ನಿಮ್ಮಲ್ಲಿ ಯಾರಾದರೂ ತನ್ನ ಮೃತ ಸಹೋದರನ ಮಾಂಸ ತಿನ್ನುವುದನ್ನು ಮೆಚ್ಚುತ್ತಾನೆಯೇ? ಖಂಡಿತ, ಅದು ನಿಮಗೆ ತೀರಾ ಅಪ್ರಿಯವಾಗಿದೆ. ಹಾಗಾದರೆ, ಅಲ್ಲಾಹನಿಗೆ ಅಂಜಿರಿ. ಖಂಡಿತವಾಗಿಯೂ ಅಲ್ಲಾಹನು ಪಶ್ಚಾತ್ತಾಪ ಸ್ವೀಕರಿಸುವವನು ಮತ್ತು ಕರುಣಾಳುವಾಗಿದ್ದಾನೆ
13يَا أَيُّهَا النَّاسُ إِنَّا خَلَقْنَاكُم مِّن ذَكَرٍ وَأُنثَىٰ وَجَعَلْنَاكُمْ شُعُوبًا وَقَبَائِلَ لِتَعَارَفُوا ۚ إِنَّ أَكْرَمَكُمْ عِندَ اللَّهِ أَتْقَاكُمْ ۚ إِنَّ اللَّهَ عَلِيمٌ خَبِيرٌ
ಮಾನವರೇ, ಖಂಡಿತವಾಗಿಯೂ ನಾವು ನಿಮ್ಮೆಲ್ಲರನ್ನೂ ಒಬ್ಬ ಪುರುಷ ಹಾಗೂ ಒಬ್ಬ ಸ್ತ್ರೀಯಿಂದ ಸೃಷ್ಟಿಸಿರುವೆವು. ತರುವಾಯ, ನೀವು ಪರಸ್ಪರ ಗುರುತಿಸುವಂತಾಗಲು ನಿಮ್ಮನ್ನು (ವಿವಿಧ) ಜನಾಂಗಗಳಾಗಿ ಹಾಗೂ ಪಂಗಡಗಳಾಗಿ ರೂಪಿಸಿರುವೆವು. ಅಲ್ಲಾಹನ ದೃಷ್ಟಿಯಲ್ಲಿ ನಿಮ್ಮ ಪೈಕಿ ಅತ್ಯಧಿಕ ಧರ್ಮನಿಷ್ಠನಾಗಿರುವವನೇ ನಿಮ್ಮಲ್ಲಿನ ಅತ್ಯುತ್ತಮನಾಗಿರುವನು. ಅಲ್ಲಾಹನು ಖಂಡಿತವಾಗಿಯೂ ಬಲ್ಲವನು ಹಾಗೂ ಅರಿವು ಉಳ್ಳವನಾಗಿದ್ದಾನೆ
14۞ قَالَتِ الْأَعْرَابُ آمَنَّا ۖ قُل لَّمْ تُؤْمِنُوا وَلَٰكِن قُولُوا أَسْلَمْنَا وَلَمَّا يَدْخُلِ الْإِيمَانُ فِي قُلُوبِكُمْ ۖ وَإِن تُطِيعُوا اللَّهَ وَرَسُولَهُ لَا يَلِتْكُم مِّنْ أَعْمَالِكُمْ شَيْئًا ۚ إِنَّ اللَّهَ غَفُورٌ رَّحِيمٌ
ಆ ಹಳ್ಳಿಗರು, ‘‘ನಾವು ವಿಶ್ವಾಸಿಗಳಾದೆವು’’ ಎನ್ನುತ್ತಾರೆ. ಹೇಳಿರಿ; ‘‘ನೀವು ವಿಶ್ವಾಸಿಗಳೇನೂ ಆಗಿಲ್ಲ. ನಾವು ಶರಣಾಗಿರುವೆವು ಎಂದಷ್ಟೆ ಹೇಳಿರಿ. ಏಕೆಂದರೆ ವಿಶ್ವಾಸವು ಇನ್ನೂ ನಿಮ್ಮ ಮನಸ್ಸುಗಳನ್ನು ಪ್ರವೇಶಿಸಿಲ್ಲ. ನೀವು ಅಲ್ಲಾಹ್ ಮತ್ತು ಅವನ ದೂತರ ಆದೇಶಗಳನ್ನು ಪಾಲಿಸಿದರೆ, ನಿಮ್ಮ ಕರ್ಮಗಳಲ್ಲಿ ಏನೂ ಕಡಿತವಾಗದು. ಅಲ್ಲಾಹನು ಖಂಡಿತ ಕ್ಷಮಾಶೀಲನೂ ಕರುಣಾಳುವೂ ಆಗಿದ್ದಾನೆ’’
15إِنَّمَا الْمُؤْمِنُونَ الَّذِينَ آمَنُوا بِاللَّهِ وَرَسُولِهِ ثُمَّ لَمْ يَرْتَابُوا وَجَاهَدُوا بِأَمْوَالِهِمْ وَأَنفُسِهِمْ فِي سَبِيلِ اللَّهِ ۚ أُولَٰئِكَ هُمُ الصَّادِقُونَ
ನಿಜವಾದ ವಿಶ್ವಾಸಿಗಳು, ಅಲ್ಲಾಹನಲ್ಲಿ ಹಾಗೂ ಅವನ ದೂತರಲ್ಲಿ ನಂಬಿಕೆ ಇಟ್ಟ ಬಳಿಕ ಎಂದೂ ಸಂಶಯಪಡುವುದಿಲ್ಲ ಮತ್ತು ಅವರು ತಮ್ಮ ಸಂಪತ್ತುಗಳನ್ನೂ ತಮ್ಮ ಜೀವಗಳನ್ನೂ ತೊಡಗಿಸಿ ಅಲ್ಲಾಹನ ಮಾರ್ಗದಲ್ಲಿ ಹೋರಾಡುತ್ತಾರೆ. ಅವರೇ ಸತ್ಯವಂತರು
16قُلْ أَتُعَلِّمُونَ اللَّهَ بِدِينِكُمْ وَاللَّهُ يَعْلَمُ مَا فِي السَّمَاوَاتِ وَمَا فِي الْأَرْضِ ۚ وَاللَّهُ بِكُلِّ شَيْءٍ عَلِيمٌ
ಹೇಳಿರಿ; ನೀವೇನು, ನಿಮ್ಮ ಧಾರ್ಮಿಕತೆಯನ್ನು ಅಲ್ಲಾಹನಿಗೆ ತಿಳಿಸಬಯಸುವಿರಾ? ಅಲ್ಲಾಹನಂತು ಆಕಾಶಗಳಲ್ಲಿ ಹಾಗೂ ಭೂಮಿಯಲ್ಲಿರುವ ಎಲ್ಲವನ್ನೂ ಬಲ್ಲವನಾಗಿದ್ದಾನೆ ಮತ್ತು ಅಲ್ಲಾಹನು ಎಲ್ಲ ವಿಷಯಗಳ ಜ್ಞಾನ ಉಳ್ಳವನಾಗಿದ್ದಾನೆ
ಅಲ್-ಹುಜುರಾತ್ಕುರಾನ್ ಸೂಚಿ
18ಆಯತ್
MedinanRevelation
14ಆಯತ್

ಅನುವಾದ — ಅಲ್-ಹುಜುರಾತ್ 14

ಸೂರಾ ಅಲ್-ಹುಜುರಾತ್ ಆಯತ್ 14 - ಓದಿ, ಆಲಿಸಿ, ಅನುವಾದ, ಕನ್ನಡ : ಆ ಹಳ್ಳಿಗರು, ‘‘ನಾವು ವಿಶ್ವಾಸಿಗಳಾದೆವು’’ ಎನ್ನುತ್ತಾರೆ. ಹೇಳಿರಿ; ‘‘ನೀವು ವಿಶ್ವಾಸಿಗಳೇನೂ ಆಗಿಲ್ಲ. ನಾವು…

ಸೂರಾ ಆಯತ್ 14/18 — ಅಲ್-ಹುಜುರಾತ್ الحجرات (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಅಲ್-ಹುಜುರಾತ್ ಆಲಿಸಿ, ಅಲ್-ಹುಜುರಾತ್ ಅನುವಾದ, ಅಲ್-ಹುಜುರಾತ್ mp3, ಅಲ್-ಹುಜುರಾತ್ pdf. ಆಯತ್ 12–16. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Tuesday, August 18, 2026

Don't forget us in your sincere prayers