ಅಲ್-ಮಾಇದಾ · 95/120
ಅನುವಾದ ಉಚ್ಚಾರಣೆ — ಸೂರಾ ಅಲ್-ಮಾಇದಾ
يَا أَيُّهَا الَّذِينَ آمَنُوا لَا تَقْتُلُوا الصَّيْدَ وَأَنتُمْ حُرُمٌ ۚ وَمَن قَتَلَهُ مِنكُم مُّتَعَمِّدًا فَجَزَاءٌ مِّثْلُ مَا قَتَلَ مِنَ النَّعَمِ يَحْكُمُ بِهِ ذَوَا عَدْلٍ مِّنكُمْ هَدْيًا بَالِغَ الْكَعْبَةِ أَوْ كَفَّارَةٌ طَعَامُ مَسَاكِينَ أَوْ عَدْلُ ذَٰلِكَ صِيَامًا لِّيَذُوقَ وَبَالَ أَمْرِهِ ۗ عَفَا اللَّهُ عَمَّا سَلَفَ ۚ وَمَنْ عَادَ فَيَنتَقِمُ اللَّهُ مِنْهُ ۗ وَاللَّهُ عَزِيزٌ ذُو انتِقَامٍ ٩٥
Transliteration
Yaaa aiyuhal lazeena aamanoo laa taqtuslus saida wa antum hurum; wa man qatalahoo minkum mut`am midan fajazaaa`um mislu maa qatala minanna`ami yahkumu bihee zawaa `adlim minkum hadyam baalighal Ka`bati aw kaffaaratun ta`aamu masaakeena aw `adlu zaalika Siyaamal liyazooqa wabaala amrih; `afal laahu `ammaa salaf; wa man `aada fayanta qimul laahu minh; wallaahu `azeezun zuntiqaam
ಅನುವಾದ (ಕನ್ನಡ ಅರ್ಥ)
📖 ಕನ್ನಡ ಅರ್ಥ
ಓ ಸತ್ಯವಿಶ್ವಾಸಿಗಳೇ, ನೀವು ಇಹ್ರಾಮ್ನಲ್ಲಿರುವಾಗ ಬೇಟೆ ಪ್ರಾಣಿಯನ್ನು ಕೊಲ್ಲಬೇಡಿರಿ. ನಿಮ್ಮ ಪೈಕಿ ಯಾರಾದರೂ ಉದ್ದೇಶಪೂರ್ವಕವಾಗಿ ಅದನ್ನು ಕೊಂದರೆ ಅವನು ಅದಕ್ಕೆ ಸಮಾನವಾದ ಪ್ರಾಣಿಯನ್ನು ಪ್ರಾಯಶ್ಚಿತ್ತವಾಗಿ ನೀಡುವುದು ಕಡ್ಡಾಯವಾಗಿದೆ. ನಿಮ್ಮ ಪೈಕಿ ಇಬ್ಬರು ನ್ಯಾಯಸಮ್ಮತ ವ್ಯಕ್ತಿಗಳು ಇದರ ತೀರ್ಮಾನ ಮಾಡಲಿ, ಪ್ರಾಯಶ್ಚಿತ್ತವು ಕಾಬಾಲಯಕ್ಕೆ ಹರಕೆಯ ರೂಪದಲ್ಲಿ ತಲುಪಿಸಬೇಕಾಗಿದೆ ಅಥವಾ ಪ್ರಾಯಶ್ಚಿತ್ತವನ್ನು ದರಿದ್ರರಿಗೆ ಆಹಾರವಾಗಿ ನೀಡಲಿ ಮತ್ತು ಅದಕ್ಕೆ ಸಮಾನವಾಗಿ ಉಪವಾಸ ಆಚರಿಸಲಿ. ಇದು ಅವನು ಮಾಡಿದ ಕೃತ್ಯದ ಪರಿಣಾಮವನ್ನು ಸ್ವತಃ ಅವನು ಅನುಭವಿಸಲೆಂದಾಗಿದೆ. ಈ ಮುಂಚೆ ಮಾಡಿರುವುದನ್ನು ಅಲ್ಲಾಹು ಕ್ಷಮಿಸಿರುತ್ತಾನೆ ಮತ್ತು ಯಾರು ಪುನಃ ಅಂತಹದೇ ಕೃತ್ಯವನ್ನು ಎಸಗುತ್ತಾನೋ ಅಲ್ಲಾಹನು ಪ್ರತೀಕಾರ ಶಿಕ್ಷಾಕ್ರಮವನ್ನು ಕೈಗೊಳ್ಳುವನು. ಅಲ್ಲಾಹನು ಪ್ರತಾಪಶಾಲಿಯೂ, ಶಿಕ್ಷಾಕ್ರಮ ಕೈಗೊಳ್ಳುವವನೂ ಆಗಿದ್ದಾನೆ.
Additional reference in தமிழ்
🎧 ಆಲಿಸಿ
📜 ಆಯತ್ 93-97 — ಸೂರಾ ಅಲ್-ಮಾಇದಾ
93لَيْسَ عَلَى الَّذِينَ آمَنُوا وَعَمِلُوا الصَّالِحَاتِ جُنَاحٌ فِيمَا طَعِمُوا إِذَا مَا اتَّقَوا وَّآمَنُوا وَعَمِلُوا الصَّالِحَاتِ ثُمَّ اتَّقَوا وَّآمَنُوا ثُمَّ اتَّقَوا وَّأَحْسَنُوا ۗ وَاللَّهُ يُحِبُّ الْمُحْسِنِينَ
ಸತ್ಯವಿಶ್ವಾಸವಿರಿಸಿ ಸತ್ಕರ್ಮಗೈದವರ ಮೇಲೆ ಅವರು ಈ ಹಿಂದೆ ಸೇವಿಸಿದುದರಲ್ಲಿ ಅವರ ಮೇಲೆ ಯಾವ ದೋಷವಿಲ್ಲ ಅವರು ಇನ್ನು ಮುಂದೆ ನಿಷಿದ್ಧ ವಸ್ತುಗಳನ್ನು ವರ್ಜಿಸಿದರೆ ನಂತರ ಅವರು ಭಯಭಕ್ತಿ ಪಾಲಿಸಿದರೆ ಮತ್ತು ಸತ್ಯ ವಿಶ್ವಾಸವಿರಿಸಿದರೆ ಆ ಬಳಿಕವೂ ಅವರು ಭಯಭಕ್ತಿ ಪಾಲಿಸಿದರೆ ಮತ್ತು ಸತ್ಕರ್ಮಗಳನ್ನೆಸಗಿದರೆ ಅಲ್ಲಾಹನು ಇಂತಹ ಸದಾಚಾರಿಗಳನ್ನು ಇಷ್ಟಪಡುತ್ತಾನೆ.
94يَا أَيُّهَا الَّذِينَ آمَنُوا لَيَبْلُوَنَّكُمُ اللَّهُ بِشَيْءٍ مِّنَ الصَّيْدِ تَنَالُهُ أَيْدِيكُمْ وَرِمَاحُكُمْ لِيَعْلَمَ اللَّهُ مَن يَخَافُهُ بِالْغَيْبِ ۚ فَمَنِ اعْتَدَىٰ بَعْدَ ذَٰلِكَ فَلَهُ عَذَابٌ أَلِيمٌ
ಓ ಸತ್ಯವಿಶ್ವಾಸಿಗಳೇ, ನಿಮ್ಮ ಕೈಗಳು ಹಾಗೂ ಭರ್ಚಿಗಳಿಂದ ಬೇಟೆಯಾಡುವ ಪ್ರಾಣಿಗಳ ಮೂಲಕ ಅಲ್ಲಾಹನು ನಿಮ್ಮನ್ನು ಖಂಡಿತ ಪರೀಕ್ಷಿಸುವನು. ಇದು ಅಲ್ಲಾಹನು ಯಾರು ತನ್ನನ್ನು ಅಗೋಚರವಾಗಿ ಭಯಪಡುತ್ತಾನೆಂದು ತಿಳಿಯಲೆಂದಾಗಿದೆ. ಆದ್ದರಿಂದ ಯಾರು ಇದರ ನಂತರ ಹದ್ದು ಮೀರುತ್ತಾನೋ ಅವನಿಗೆ ಯಾತನಾಮಯವಾದ ಶಿಕ್ಷೆಯಿದೆ.
95يَا أَيُّهَا الَّذِينَ آمَنُوا لَا تَقْتُلُوا الصَّيْدَ وَأَنتُمْ حُرُمٌ ۚ وَمَن قَتَلَهُ مِنكُم مُّتَعَمِّدًا فَجَزَاءٌ مِّثْلُ مَا قَتَلَ مِنَ النَّعَمِ يَحْكُمُ بِهِ ذَوَا عَدْلٍ مِّنكُمْ هَدْيًا بَالِغَ الْكَعْبَةِ أَوْ كَفَّارَةٌ طَعَامُ مَسَاكِينَ أَوْ عَدْلُ ذَٰلِكَ صِيَامًا لِّيَذُوقَ وَبَالَ أَمْرِهِ ۗ عَفَا اللَّهُ عَمَّا سَلَفَ ۚ وَمَنْ عَادَ فَيَنتَقِمُ اللَّهُ مِنْهُ ۗ وَاللَّهُ عَزِيزٌ ذُو انتِقَامٍ
ಓ ಸತ್ಯವಿಶ್ವಾಸಿಗಳೇ, ನೀವು ಇಹ್ರಾಮ್ನಲ್ಲಿರುವಾಗ ಬೇಟೆ ಪ್ರಾಣಿಯನ್ನು ಕೊಲ್ಲಬೇಡಿರಿ. ನಿಮ್ಮ ಪೈಕಿ ಯಾರಾದರೂ ಉದ್ದೇಶಪೂರ್ವಕವಾಗಿ ಅದನ್ನು ಕೊಂದರೆ ಅವನು ಅದಕ್ಕೆ ಸಮಾನವಾದ ಪ್ರಾಣಿಯನ್ನು ಪ್ರಾಯಶ್ಚಿತ್ತವಾಗಿ ನೀಡುವುದು ಕಡ್ಡಾಯವಾಗಿದೆ. ನಿಮ್ಮ ಪೈಕಿ ಇಬ್ಬರು ನ್ಯಾಯಸಮ್ಮತ ವ್ಯಕ್ತಿಗಳು ಇದರ ತೀರ್ಮಾನ ಮಾಡಲಿ, ಪ್ರಾಯಶ್ಚಿತ್ತವು ಕಾಬಾಲಯಕ್ಕೆ ಹರಕೆಯ ರೂಪದಲ್ಲಿ ತಲುಪಿಸಬೇಕಾಗಿದೆ ಅಥವಾ ಪ್ರಾಯಶ್ಚಿತ್ತವನ್ನು ದರಿದ್ರರಿಗೆ ಆಹಾರವಾಗಿ ನೀಡಲಿ ಮತ್ತು ಅದಕ್ಕೆ ಸಮಾನವಾಗಿ ಉಪವಾಸ ಆಚರಿಸಲಿ. ಇದು ಅವನು ಮಾಡಿದ ಕೃತ್ಯದ ಪರಿಣಾಮವನ್ನು ಸ್ವತಃ ಅವನು ಅನುಭವಿಸಲೆಂದಾಗಿದೆ. ಈ ಮುಂಚೆ ಮಾಡಿರುವುದನ್ನು ಅಲ್ಲಾಹು ಕ್ಷಮಿಸಿರುತ್ತಾನೆ ಮತ್ತು ಯಾರು ಪುನಃ ಅಂತಹದೇ ಕೃತ್ಯವನ್ನು ಎಸಗುತ್ತಾನೋ ಅಲ್ಲಾಹನು ಪ್ರತೀಕಾರ ಶಿಕ್ಷಾಕ್ರಮವನ್ನು ಕೈಗೊಳ್ಳುವನು. ಅಲ್ಲಾಹನು ಪ್ರತಾಪಶಾಲಿಯೂ, ಶಿಕ್ಷಾಕ್ರಮ ಕೈಗೊಳ್ಳುವವನೂ ಆಗಿದ್ದಾನೆ.
96أُحِلَّ لَكُمْ صَيْدُ الْبَحْرِ وَطَعَامُهُ مَتَاعًا لَّكُمْ وَلِلسَّيَّارَةِ ۖ وَحُرِّمَ عَلَيْكُمْ صَيْدُ الْبَرِّ مَا دُمْتُمْ حُرُمًا ۗ وَاتَّقُوا اللَّهَ الَّذِي إِلَيْهِ تُحْشَرُونَ
ನಿಮ್ಮ ಪ್ರಯೋಜನಕ್ಕಾಗಿ ಮತ್ತು ಪ್ರಯಾಣಿಕರ ಪ್ರಯೋಜನಕ್ಕಾಗಿ ಸಮುದ್ರದಲ್ಲಿ ಬೇಟೆಯಾಡುವುದನ್ನೂ ಮತ್ತು ಅದನ್ನು ತಿನ್ನುವುದನ್ನೂ ಧರ್ಮಸಮ್ಮತಗೊಳಿಸಲಾಗಿದೆ. ಮತ್ತು ನೀವು ಇಹ್ರಾಮ್ನ ಸ್ಥಿತಿಯಲ್ಲಿರುವಾಗ ನೆಲದ ಬೇಟೆಯನ್ನು ನಿಮಗೆ ನಿಷಿದ್ಧಗೊಳಿಸಲಾಗಿದೆ. ಯಾರೆಡೆಗೆ ನೀವು ಒಟ್ಟುಗೂಡಿಸಲ್ಪಡುವಿರೋ ಆ ಅಲ್ಲಾಹುನನ್ನು ಭಯಪಡಿರಿ.
97۞ جَعَلَ اللَّهُ الْكَعْبَةَ الْبَيْتَ الْحَرَامَ قِيَامًا لِّلنَّاسِ وَالشَّهْرَ الْحَرَامَ وَالْهَدْيَ وَالْقَلَائِدَ ۚ ذَٰلِكَ لِتَعْلَمُوا أَنَّ اللَّهَ يَعْلَمُ مَا فِي السَّمَاوَاتِ وَمَا فِي الْأَرْضِ وَأَنَّ اللَّهَ بِكُلِّ شَيْءٍ عَلِيمٌ
ಆದರಣೀಯ ಗೃಹವಾದ ಕಾಬಾವನ್ನು, ಅಲ್ಲಾಹನು ಜನರ ಶಾಂತಿಯ ಕೇಂದ್ರವನ್ನಾಗಿ ಮಾಡಿದ್ದಾನೆ. ಮತ್ತು ಗೌರವಾನ್ವಿತ ತಿಂಗಳನ್ನು ಹರಮ್ನಲ್ಲಿ ಬಲಿನೀಡಲಾಗುವ ಪ್ರಾಣಿಯನ್ನೂ, ಕೊರಳಲ್ಲಿ ಪಟ್ಟಿ ಹಾಕಲಾದ (ಕಾಬಾದ ಕಡೆ ಒಯ್ಯುವ) ಪ್ರಾಣಿಗಳನ್ನೂ ಸಹ. ಇದು ನಿಸ್ಸಂಶಯವಾಗಿಯು ಅಲ್ಲಾಹನು ಆಕಾಶಗಳಲ್ಲಿ ಮತ್ತು ಭೂಮಿಯಲ್ಲಿರುವ ಸಕಲ ಜ್ಞಾನವನ್ನು ಹೊಂದಿದ್ದಾನೆAದೂ, ಮತ್ತು ಅವನು ಎಲ್ಲಾ ವಸ್ತುಗಳನ್ನು ಚೆನ್ನಾಗಿ ಅರಿತಿರುವನೆಂದೂ ನೀವು ತಿಳಿದುಕೊಳ್ಳಲೆಂದಾಗಿದೆ.
ಅಲ್-ಮಾಇದಾಕುರಾನ್ ಸೂಚಿ
120ಆಯತ್
MedinanRevelation
95ಆಯತ್
ಅನುವಾದ — ಅಲ್-ಮಾಇದಾ 95
ಸೂರಾ ಅಲ್-ಮಾಇದಾ ಆಯತ್ 95 - ಓದಿ, ಆಲಿಸಿ, ಅನುವಾದ, ಕನ್ನಡ : ಓ ಸತ್ಯವಿಶ್ವಾಸಿಗಳೇ, ನೀವು ಇಹ್ರಾಮ್ನಲ್ಲಿರುವಾಗ ಬೇಟೆ ಪ್ರಾಣಿಯನ್ನು ಕೊಲ್ಲಬೇಡಿರಿ. ನಿಮ್ಮ ಪೈಕಿ ಯಾರಾದರೂ…ಸೂರಾ ಆಯತ್ 95/120 — ಸೂರಾ ಅಲ್-ಮಾಇದಾ المائدة (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಮಾಇದಾ ಆಲಿಸಿ, ಸೂರಾ ಅಲ್-ಮಾಇದಾ ಅನುವಾದ, ಸೂರಾ ಅಲ್-ಮಾಇದಾ mp3, ಸೂರಾ ಅಲ್-ಮಾಇದಾ pdf. ಆಯತ್ 93–97. ಕನ್ನಡ ಅರ್ಥ: தமிழ்.
العربية
English
Bahasa Indonesia
Türkçe
Русский
فارسی
Français
اردو
বাংলা
Deutsch
Español
中文
हिन्दी
Português
Italiano
ภาษาไทย
Polski
Nederlands
Shqip
Kiswahili
O'zbek
தமிழ்
Melayu
Bosanski
Soomaali
Azərbaycan
کوردی
한국어
日本語
Svenska
Dansk
Norsk
پښتو
മലയാളം
සිංහල
Tamazight
Hausa
አማርኛ
Български
Тоҷикӣ
Қазақша
Filipino
سنڌي
Yorùbá
Fulfulde
Татарча
ئۇيغۇرچە
Кыргызча
ਪੰਜਾਬੀ
Jawa
తెలుగు
မြန်မာ
ગુજરાતી
Oromo
मराठी
Tiếng Việt
Malagasy
Нохчийн
Wolof
ދިވެހި
ಕನ್ನಡ
Українська
Ελληνικά
ქართული
ខ្មែរ
دری
Qafar af
Maranao
नेपाली
ಪವಿತ್ರ ಕುರಾನ್
Monday, September 7, 2026
Don't forget us in your sincere prayers








