ಅಲ್-ಹಶ್ರ್ · 10/24
ಅನುವಾದ ಉಚ್ಚಾರಣೆ — ಅಲ್-ಹಶ್ರ್
وَالَّذِينَ جَاءُوا مِن بَعْدِهِمْ يَقُولُونَ رَبَّنَا اغْفِرْ لَنَا وَلِإِخْوَانِنَا الَّذِينَ سَبَقُونَا بِالْإِيمَانِ وَلَا تَجْعَلْ فِي قُلُوبِنَا غِلًّا لِّلَّذِينَ آمَنُوا رَبَّنَا إِنَّكَ رَءُوفٌ رَّحِيمٌ ۝١٠
Wallazeena jaaa`oo min ba`dihim yaqooloona Rabbanagh fir lanaa wa li ikhwaani nal lazeena sabqoonaa bil eemaani wa laa taj`al fee quloobinaa ghillalil lazeena aamanoo rabbannaaa innaka Ra`oofur Raheem
📖 ಕನ್ನಡ ಅರ್ಥ
ಹಾಗೆಯೇ (ಈ ಸಂಪತ್ತು) ಅವರಿಗಿಂತ (ವಲಸಿಗರಿಗಿಂತ) ಮುನ್ನ, ವಲಸೆಯ ಸ್ಥಾನ (ಮದೀನ)ದಲ್ಲಿ ನೆಲೆಸಿದ್ದ ಹಾಗೂ ವಿಶ್ವಾಸಿಗಳಾಗಿದ್ದವರಿಗೆ (ಅನ್ಸಾರ್‌ಗಳಿಗೆ) ಸೇರಿದೆ. ಅವರು ತಮ್ಮ ಬಳಿಗೆ ವಲಸೆ ಬಂದವರನ್ನು ಪ್ರೀತಿಸುತ್ತಾರೆ, ಅವರಿಗೆ ಏನನ್ನು ನೀಡಲಾಯಿತೋ ಆ ಕುರಿತು ಅವರು ತಮ್ಮ ಮನದಲ್ಲಿ ಆಸೆ ಪಡುವುದಿಲ್ಲ ಮತ್ತು ಸ್ವತಃ ತಾವು ಕಷ್ಟದಲ್ಲಿದ್ದರೂ ಅವರಿಗೆ (ವಲಸಿಗರಿಗೆ) ಪ್ರಾಶಸ್ತ್ಯ ನೀಡುತ್ತಾರೆ. ಮನಸ್ಸಿನ ಸಣ್ಣ ತನದಿಂದ ರಕ್ಷಿಸಲ್ಪಟ್ಟವರೇ ವಿಜಯಿಗಳು
🎧 ಆಲಿಸಿ

📜 ಆಯತ್ 8-12 — ಅಲ್-ಹಶ್ರ್

8لِلْفُقَرَاءِ الْمُهَاجِرِينَ الَّذِينَ أُخْرِجُوا مِن دِيَارِهِمْ وَأَمْوَالِهِمْ يَبْتَغُونَ فَضْلًا مِّنَ اللَّهِ وَرِضْوَانًا وَيَنصُرُونَ اللَّهَ وَرَسُولَهُ ۚ أُولَٰئِكَ هُمُ الصَّادِقُونَ
ಹಳ್ಳಿಯವರಿಂದ ಅಲ್ಲಾಹನು ತನ್ನ ದೂತರಿಗೆ ಕೊಡಿಸಿದ ಸಂಪತ್ತು ಅಲ್ಲಾಹನಿಗೆ, ದೂತರಿಗೆ, ಬಂಧುಗಳಿಗೆ, ಅನಾಥರಿಗೆ, ಬಡವರಿಗೆ ಮತ್ತು ಪ್ರಯಾಣಿಕರಿಗೆ ಸೇರಿದೆ. ಸಂಪತ್ತು ಕೇವಲ ನಿಮ್ಮ ಶ್ರೀಮಂತರ ನಡುವೆ ಸೀಮಿತವಾಗಿ ಉಳಿಯಬಾರದೆಂದು (ಇದನ್ನು ವಿಧಿಸಲಾಗಿದೆ). ದೂತರು ನಿಮಗೆ ನೀಡಿದ್ದನ್ನು ಸ್ವೀಕರಿಸಿ ಕೊಳ್ಳಿರಿ ಮತ್ತು ಯಾವುದರಿಂದ ಅವರು ನಿಮ್ಮನ್ನು ತಡೆಯುತ್ತಾರೋ ಅದರಿಂದ ದೂರವಿರಿ ಮತ್ತು ಅಲ್ಲಾಹನಿಗೆ ಅಂಜಿರಿ. ಖಂಡಿತವಾಗಿಯೂ ಅಲ್ಲಾಹನು ಕಠಿಣ ಶಿಕ್ಷೆ ನೀಡುವವನಾಗಿದ್ದಾನೆ
9وَالَّذِينَ تَبَوَّءُوا الدَّارَ وَالْإِيمَانَ مِن قَبْلِهِمْ يُحِبُّونَ مَنْ هَاجَرَ إِلَيْهِمْ وَلَا يَجِدُونَ فِي صُدُورِهِمْ حَاجَةً مِّمَّا أُوتُوا وَيُؤْثِرُونَ عَلَىٰ أَنفُسِهِمْ وَلَوْ كَانَ بِهِمْ خَصَاصَةٌ ۚ وَمَن يُوقَ شُحَّ نَفْسِهِ فَأُولَٰئِكَ هُمُ الْمُفْلِحُونَ
(ಮತ್ತು ಈ ಸಂಪತ್ತು), ತಮ್ಮ ಮನೆ ಮತ್ತು ಸೊತ್ತುಗಳಿಂದ ದೂರಗೊಳಿಸಲಾದ ಬಡ ಮುಹಾಜಿರ್‌ಗಳಿಗೆ (ವಲಸಿಗರಿಗೆ) ಸೇರಿದೆ. ಅವರು ಅಲ್ಲಾಹನ ಅನುಗ್ರಹವನ್ನು ಮತ್ತು ಅವನ ಮೆಚ್ಚುಗೆಯನ್ನು ಅರಸುತ್ತಿರುತ್ತಾರೆ ಮತ್ತು ಅವರು ಅಲ್ಲಾಹ್ ಮತ್ತವನ ದೂತರ ಸಹಾಯಕರಾಗಿರುತ್ತಾರೆ. ಅವರೇ ಸತ್ಯವಂತರು
10وَالَّذِينَ جَاءُوا مِن بَعْدِهِمْ يَقُولُونَ رَبَّنَا اغْفِرْ لَنَا وَلِإِخْوَانِنَا الَّذِينَ سَبَقُونَا بِالْإِيمَانِ وَلَا تَجْعَلْ فِي قُلُوبِنَا غِلًّا لِّلَّذِينَ آمَنُوا رَبَّنَا إِنَّكَ رَءُوفٌ رَّحِيمٌ
ಹಾಗೆಯೇ (ಈ ಸಂಪತ್ತು) ಅವರಿಗಿಂತ (ವಲಸಿಗರಿಗಿಂತ) ಮುನ್ನ, ವಲಸೆಯ ಸ್ಥಾನ (ಮದೀನ)ದಲ್ಲಿ ನೆಲೆಸಿದ್ದ ಹಾಗೂ ವಿಶ್ವಾಸಿಗಳಾಗಿದ್ದವರಿಗೆ (ಅನ್ಸಾರ್‌ಗಳಿಗೆ) ಸೇರಿದೆ. ಅವರು ತಮ್ಮ ಬಳಿಗೆ ವಲಸೆ ಬಂದವರನ್ನು ಪ್ರೀತಿಸುತ್ತಾರೆ, ಅವರಿಗೆ ಏನನ್ನು ನೀಡಲಾಯಿತೋ ಆ ಕುರಿತು ಅವರು ತಮ್ಮ ಮನದಲ್ಲಿ ಆಸೆ ಪಡುವುದಿಲ್ಲ ಮತ್ತು ಸ್ವತಃ ತಾವು ಕಷ್ಟದಲ್ಲಿದ್ದರೂ ಅವರಿಗೆ (ವಲಸಿಗರಿಗೆ) ಪ್ರಾಶಸ್ತ್ಯ ನೀಡುತ್ತಾರೆ. ಮನಸ್ಸಿನ ಸಣ್ಣ ತನದಿಂದ ರಕ್ಷಿಸಲ್ಪಟ್ಟವರೇ ವಿಜಯಿಗಳು
11۞ أَلَمْ تَرَ إِلَى الَّذِينَ نَافَقُوا يَقُولُونَ لِإِخْوَانِهِمُ الَّذِينَ كَفَرُوا مِنْ أَهْلِ الْكِتَابِ لَئِنْ أُخْرِجْتُمْ لَنَخْرُجَنَّ مَعَكُمْ وَلَا نُطِيعُ فِيكُمْ أَحَدًا أَبَدًا وَإِن قُوتِلْتُمْ لَنَنصُرَنَّكُمْ وَاللَّهُ يَشْهَدُ إِنَّهُمْ لَكَاذِبُونَ
ಹಾಗೆಯೇ ಅದು, ಅವರ ನಂತರ ಬಂದವರಿಗೂ (ಸೇರಿದೆ). ‘‘ ನಮ್ಮೊಡೆಯಾ, ನಮ್ಮನ್ನು ಹಾಗೂ ನಮಗಿಂತ ಮುನ್ನ ವಿಶ್ವಾಸಿಗಳಾಗಿದ್ದ ನಮ್ಮ ಸಹೋದರರನ್ನು ಕ್ಷಮಿಸು. ವಿಶ್ವಾಸಿಗಳ ಕುರಿತು ನಮ್ಮ ಮನಸ್ಸುಗಳಲ್ಲಿ ಯಾವುದೇ ದುರ್ಭಾವನೆಯನ್ನು ಬೆಳೆಸಬೇಡ. ನಮ್ಮೊಡೆಯಾ ನೀನು ತುಂಬಾ ವಾತ್ಸಲ್ಯಮಯಿ ಹಾಗೂ ಕರುಣಾಳುವಾಗಿರುವೆ’’ ಎಂದು ಅವರು ಪ್ರಾರ್ಥಿಸುತ್ತಾರೆ
12لَئِنْ أُخْرِجُوا لَا يَخْرُجُونَ مَعَهُمْ وَلَئِن قُوتِلُوا لَا يَنصُرُونَهُمْ وَلَئِن نَّصَرُوهُمْ لَيُوَلُّنَّ الْأَدْبَارَ ثُمَّ لَا يُنصَرُونَ
ನೀವು ಕಪಟಿಗಳನ್ನು ನೋಡಲಿಲ್ಲವೇ? ಅವರು, ಗ್ರಂಥದವರ ಪೈಕಿ ತಮ್ಮ ಧಿಕ್ಕಾರಿ ಸಹೋದರರೊಡನೆ ‘‘ಒಂದು ವೇಳೆ ನಿಮ್ಮನ್ನು (ನಾಡಿನಿಂದ) ಹೊರ ಹಾಕಲಾದರೆ ನಾವು ಕೂಡಾ ನಿಮ್ಮ ಜೊತೆ ಹೊರಡುವೆವು ಮತ್ತು ನಿಮ್ಮ ವಿಷಯದಲ್ಲಿ ನಾವೆಂದೂ ಯಾರನ್ನೂ ಅನುಸರಿಸಲಾರೆವು – ಮತ್ತು ನಿಮ್ಮ ವಿರುದ್ಧ ಯುದ್ಧ ನಡೆದರೆ ನಾವು ನಿಮಗೆ ನೆರವಾಗುವೆವು ’’ ಎಂದು ಹೇಳುತ್ತಾರೆ. ಅವರು ಸುಳ್ಳು ಹೇಳುತ್ತಿದ್ದಾರೆಂಬುದಕ್ಕೆ ಅಲ್ಲಾಹನೇ ಸಾಕ್ಷಿಯಾಗಿದ್ದಾನೆ
ಅಲ್-ಹಶ್ರ್ಕುರಾನ್ ಸೂಚಿ
24ಆಯತ್
MedinanRevelation
10ಆಯತ್

ಅನುವಾದ — ಅಲ್-ಹಶ್ರ್ 10

ಸೂರಾ ಅಲ್-ಹಶ್ರ್ ಆಯತ್ 10 - ಓದಿ, ಆಲಿಸಿ, ಅನುವಾದ, ಕನ್ನಡ : ಹಾಗೆಯೇ (ಈ ಸಂಪತ್ತು) ಅವರಿಗಿಂತ (ವಲಸಿಗರಿಗಿಂತ) ಮುನ್ನ, ವಲಸೆಯ ಸ್ಥಾನ (ಮದೀನ)ದಲ್ಲಿ ನೆಲೆಸಿದ್ದ…

ಸೂರಾ ಆಯತ್ 10/24 — ಅಲ್-ಹಶ್ರ್ الحشر (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಅಲ್-ಹಶ್ರ್ ಆಲಿಸಿ, ಅಲ್-ಹಶ್ರ್ ಅನುವಾದ, ಅಲ್-ಹಶ್ರ್ mp3, ಅಲ್-ಹಶ್ರ್ pdf. ಆಯತ್ 8–12. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Tuesday, August 18, 2026

Don't forget us in your sincere prayers