ಅಲ್-ಹಶ್ರ್ · 4/24
ಅನುವಾದ ಉಚ್ಚಾರಣೆ — ಸೂರಾ ಅಲ್-ಹಶ್ರ್
ذَٰلِكَ بِأَنَّهُمْ شَاقُّوا اللَّهَ وَرَسُولَهُ ۖ وَمَن يُشَاقِّ اللَّهَ فَإِنَّ اللَّهَ شَدِيدُ الْعِقَابِ ۝٤
Zaalika bi annahum shaaqqul laaha wa Rasoolahoo wa many yushaaaqqil laaha fa innal laaha shadeedul-`iqaab
📖 ಕನ್ನಡ ಅರ್ಥ
ಇದೇಕೆಂದರೆ ಅವರು ಅಲ್ಲಾಹನನ್ನೂ. ಅವನ ಸಂದೇಶವಾಹಕರನ್ನೂ ವಿರೋಧಿಸಿದುದರ ನಿಮಿತ್ತವಾಗಿದೆ, ಮತ್ತು ಯಾರು ಅಲ್ಲಾಹನನ್ನು ವಿರೋಧಿಸುತ್ತಾನೋ ಖಂಡಿತವಾಗಿಯೂ ಅಲ್ಲಾಹನು ಅವರಿಗೆ ಅತ್ಯುಗ್ರ ಯಾತನೆಯನ್ನು ನೀಡುವವನಾಗಿದ್ದಾನೆ.

🎧 ಆಲಿಸಿ


📜 ಆಯತ್ 2-6 — ಸೂರಾ ಅಲ್-ಹಶ್ರ್

2هُوَ الَّذِي أَخْرَجَ الَّذِينَ كَفَرُوا مِنْ أَهْلِ الْكِتَابِ مِن دِيَارِهِمْ لِأَوَّلِ الْحَشْرِ ۚ مَا ظَنَنتُمْ أَن يَخْرُجُوا ۖ وَظَنُّوا أَنَّهُم مَّانِعَتُهُمْ حُصُونُهُم مِّنَ اللَّهِ فَأَتَاهُمُ اللَّهُ مِنْ حَيْثُ لَمْ يَحْتَسِبُوا ۖ وَقَذَفَ فِي قُلُوبِهِمُ الرُّعْبَ ۚ يُخْرِبُونَ بُيُوتَهُم بِأَيْدِيهِمْ وَأَيْدِي الْمُؤْمِنِينَ فَاعْتَبِرُوا يَا أُولِي الْأَبْصَارِ
ಗ್ರಂಥದವರ ಪೈಕಿ ಸತ್ಯನಿಷೇಧಿಗಳನ್ನು ಪ್ರಥಮ ಗಡಿಪಾರಿನ ಸಂದರ್ಭದಲ್ಲಿ ಅವರ ಮನೆಗಳಿಂದ ಹೊರಹಾಕಿದವನು ಅವನೇ ಆಗಿದ್ದಾನೆ. ಅವರು ಹೊರಬರುವರೆಂದು ನೀವು ಊಹಿಸಿಯೇ ಇರಲಿಲ್ಲ ಮತ್ತು ಸ್ವತಃ ಅವರು ತಮ್ಮನ್ನು ತಮ್ಮ ಕೋಟೆಗಳು ಅಲ್ಲಾಹನಿಂದ ರಕ್ಷಿಸಿಕೊಳ್ಳಬಲ್ಲವೆಂದು ಭಾವಿಸಿಕೊಂಡಿದ್ದರು. ಆದರೆ ಅವರು ಊಹಿಸಿರದಂತಹ ಕಡೆಯಿಂದ ಅಲ್ಲಾಹನು ಅವರ ಕಡೆಗೆ ಬಂದನು ಹಾಗೂ ಅವರ ಹೃದಯಗಳಲ್ಲಿ ಭೀತಿಯನ್ನು ಹುಟ್ಟಿಸಿದನು.. ಅವರು ಸ್ವತಃ ತಮ್ಮ ಕೈಗಳಿಂದ ಹಾಗೂ ಸತ್ಯ ವಿಶ್ವಾಸಿಗಳ ಕೈಗಳಿಂದ ತಮ್ಮ ಮನೆಗಳನ್ನು ಕೆಡವಿ ನಾಶ ಮಾಡುತ್ತಿದ್ದರು. ಆದ್ದರಿಂದ ಓ ದೃಷ್ಟಿಯುಳ್ಳವರೇ ನೀವು ಪಾಠ ಕಲಿಯಿರಿ.
3وَلَوْلَا أَن كَتَبَ اللَّهُ عَلَيْهِمُ الْجَلَاءَ لَعَذَّبَهُمْ فِي الدُّنْيَا ۖ وَلَهُمْ فِي الْآخِرَةِ عَذَابُ النَّارِ
ಅಲ್ಲಾಹನು ಅವರ ಮೇಲೆ ಗಡಿಪಾರನ್ನು ವಿಧಿಸದಿರುತ್ತಿದ್ದರೆ ಖಂಡಿತ ಅವನು ಅವರನ್ನು ಇಹಲೋಕದಲ್ಲೇ ಶಿಕ್ಷಿಸುತ್ತಿದ್ದನು ಮತ್ತು ಅವರಿಗೆ ಪರಲೋಕದಲ್ಲಿ ನರಕಯಾತನೆ ಇದೆ.
4ذَٰلِكَ بِأَنَّهُمْ شَاقُّوا اللَّهَ وَرَسُولَهُ ۖ وَمَن يُشَاقِّ اللَّهَ فَإِنَّ اللَّهَ شَدِيدُ الْعِقَابِ
ಇದೇಕೆಂದರೆ ಅವರು ಅಲ್ಲಾಹನನ್ನೂ. ಅವನ ಸಂದೇಶವಾಹಕರನ್ನೂ ವಿರೋಧಿಸಿದುದರ ನಿಮಿತ್ತವಾಗಿದೆ, ಮತ್ತು ಯಾರು ಅಲ್ಲಾಹನನ್ನು ವಿರೋಧಿಸುತ್ತಾನೋ ಖಂಡಿತವಾಗಿಯೂ ಅಲ್ಲಾಹನು ಅವರಿಗೆ ಅತ್ಯುಗ್ರ ಯಾತನೆಯನ್ನು ನೀಡುವವನಾಗಿದ್ದಾನೆ.
5مَا قَطَعْتُم مِّن لِّينَةٍ أَوْ تَرَكْتُمُوهَا قَائِمَةً عَلَىٰ أُصُولِهَا فَبِإِذْنِ اللَّهِ وَلِيُخْزِيَ الْفَاسِقِينَ
ನೀವು ಖರ್ಜೂರ ಮರವನ್ನು ಕಡಿದಿದ್ದೂ ಅಥವ ಅವುಗಳನ್ನು ಅವುಗಳ ಕಾಂಡಗಳಲ್ಲಿ ಉಳಿಯಬಿಟ್ಟಿದ್ದೂ ಎಲ್ಲವೂ ಅಲ್ಲಾಹನ ಅಪ್ಪಣೆಯ ಮೇರೆಗೆ ಆಗಿತ್ತು ಹಾಗೂ ಇದು ಧಿಕ್ಕಾರಿಗಳನ್ನು ಅಲ್ಲಾಹನು ಅಪಮಾನಿಸಲೆಂದೂ ಆಗಿತ್ತು.
6وَمَا أَفَاءَ اللَّهُ عَلَىٰ رَسُولِهِ مِنْهُمْ فَمَا أَوْجَفْتُمْ عَلَيْهِ مِنْ خَيْلٍ وَلَا رِكَابٍ وَلَٰكِنَّ اللَّهَ يُسَلِّطُ رُسُلَهُ عَلَىٰ مَن يَشَاءُ ۚ وَاللَّهُ عَلَىٰ كُلِّ شَيْءٍ قَدِيرٌ
ಅಲ್ಲಾಹನು ಯಹೂದರಿಂದ ಪಡೆದು ತನ್ನ ಸಂದೇಶವಾಹಕರ ವಶಕ್ಕೆ ಕೊಟ್ಟಿರುವ ಸಂಪತ್ತಿಗಾಗಿ, ನೀವು ಕುದುರೆಗಳನ್ನಾಗಲಿ, ಒಂಟೆಗಳನ್ನಾಗಲಿ ಓಡಿಸಲಿಲ್ಲ. ಆದರೆ ಅಲ್ಲಾಹನು ತನ್ನ ಸಂದೇಶವಾಹಕರನ್ನು ತಾನಿಚ್ಛಿಸಿದವರ ಮೇಲೆ ಅಧಿಕಾರವನ್ನು ಕೊಡುತ್ತಾನೆ. ಅಲ್ಲಾಹನು ಸಕಲ ವಿಷಯಗಳ ಮೇಲೆ ಸಾಮರ್ಥ್ಯ ಉಳ್ಳವನಾಗಿದ್ದಾನೆ.
ಅಲ್-ಹಶ್ರ್ಕುರಾನ್ ಸೂಚಿ
24ಆಯತ್
MedinanRevelation
4ಆಯತ್

ಅನುವಾದ — ಅಲ್-ಹಶ್ರ್ 4

ಸೂರಾ ಅಲ್-ಹಶ್ರ್ ಆಯತ್ 4 - ಓದಿ, ಆಲಿಸಿ, ಅನುವಾದ, ಕನ್ನಡ : ಇದೇಕೆಂದರೆ ಅವರು ಅಲ್ಲಾಹನನ್ನೂ. ಅವನ ಸಂದೇಶವಾಹಕರನ್ನೂ ವಿರೋಧಿಸಿದುದರ ನಿಮಿತ್ತವಾಗಿದೆ, ಮತ್ತು ಯಾರು ಅಲ್ಲಾಹನನ್ನು…

ಸೂರಾ ಆಯತ್ 4/24 — ಸೂರಾ ಅಲ್-ಹಶ್ರ್ الحشر (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಹಶ್ರ್ ಆಲಿಸಿ, ಸೂರಾ ಅಲ್-ಹಶ್ರ್ ಅನುವಾದ, ಸೂರಾ ಅಲ್-ಹಶ್ರ್ mp3, ಸೂರಾ ಅಲ್-ಹಶ್ರ್ pdf. ಆಯತ್ 2–6. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Monday, September 7, 2026

Don't forget us in your sincere prayers