ಅಲ್-ಅನ್ಆಮ್ · 54/165
ಅನುವಾದ ಉಚ್ಚಾರಣೆ — ಸೂರಾ ಅಲ್-ಅನ್ಆಮ್
وَإِذَا جَاءَكَ الَّذِينَ يُؤْمِنُونَ بِآيَاتِنَا فَقُلْ سَلَامٌ عَلَيْكُمْ ۖ كَتَبَ رَبُّكُمْ عَلَىٰ نَفْسِهِ الرَّحْمَةَ ۖ أَنَّهُ مَنْ عَمِلَ مِنكُمْ سُوءًا بِجَهَالَةٍ ثُمَّ تَابَ مِن بَعْدِهِ وَأَصْلَحَ فَأَنَّهُ غَفُورٌ رَّحِيمٌ ۝٥٤
Wa izaa jaaa`akal lazeena yu`minoona bi Aayaatinaa faqul salaamun `alaikum kataba Rabbukum `alaa nafsihir rahmata annahoo man `amila minkum sooo`am bijahaalatin summa taaba mim ba`dihee wa aslaha fa annahoo Ghafoorur Raheem
📖 ಕನ್ನಡ ಅರ್ಥ
ಮತ್ತು ನಮ್ಮ ದೃಷ್ಟಾಂತಗಳಲ್ಲಿ ವಿಶ್ವಾಸವಿಡುವವರು ನಿಮ್ಮ ಬಳಿಗೆ ಬಂದರೆ ಹೇಳಿರಿ: ನಿಮ್ಮ ಮೇಲೆ ಶಾಂತಿಯಿರಲಿ. ನಿಮ್ಮ ಪ್ರಭು ಕರುಣೆತೋರುವುದನ್ನು ತನ್ನ ಮೇಲೆ ಕಡ್ಡಾಯಗೊಳಿಸಿದ್ದಾನೆ. ಅಂದರೆ ನಿಮ್ಮ ಪೈಕಿ ಯಾರಾದರೂ ಅಜ್ಞಾನದಿಂದ ದುಷ್ಕೃತ್ಯವನ್ನು ಮಾಡಿದರೆ, ತರುವಾಯ ಅವನು ಅದರ ಬಳಿಕ ಪಶ್ಚಾತ್ತಾಪ ಪಟ್ಟರೆ ಮತ್ತು ಸುಧಾರಣೆ ಮಾಡಿಕೊಂಡರೆ ಅಲ್ಲಾಹನು ಅತ್ಯಧಿಕ ಕ್ಷಮಿಸುವವನು, ಕರುಣಾನಿಧಿÀಯು ಆಗಿದ್ದಾನೆ.

🎧 ಆಲಿಸಿ


📜 ಆಯತ್ 52-56 — ಸೂರಾ ಅಲ್-ಅನ್ಆಮ್

52وَلَا تَطْرُدِ الَّذِينَ يَدْعُونَ رَبَّهُم بِالْغَدَاةِ وَالْعَشِيِّ يُرِيدُونَ وَجْهَهُ ۖ مَا عَلَيْكَ مِنْ حِسَابِهِم مِّن شَيْءٍ وَمَا مِنْ حِسَابِكَ عَلَيْهِم مِّن شَيْءٍ فَتَطْرُدَهُمْ فَتَكُونَ مِنَ الظَّالِمِينَ
ತಮ್ಮ ಪ್ರಭುವಿನ ಸಂತೃಪ್ತಿಯನ್ನು ಬಯಸಿ ಮುಂಜಾನೆಯಲ್ಲೂ, ಮುಸ್ಸಂಜೆಯಲ್ಲೂ, ಅವನನ್ನು ಕರೆದು ಪ್ರಾರ್ಥಿಸುವವರನ್ನು ನೀವು ದೂರಕ್ಕಟ್ಟಬೇಡಿರಿ. ಅವರ ವಿಚಾರಣೆಯ ಹೊಣೆ ನಿಮ್ಮ ಮೇಲಿಲ್ಲ. ನಿಮ್ಮ ವಿಚಾರಣೆಯ ಹೊಣೆ ಅವರ ಮೇಲಿಲ್ಲ. ಆದುದರಿಂದ ನೀವು ಅವರನ್ನು ದೂರಗಟ್ಟಿದರೆ ಅಕ್ರಮಿಗಳಲ್ಲಿ ಸೇರಿ ಬಿಡುವಿರಿ.
53وَكَذَٰلِكَ فَتَنَّا بَعْضَهُم بِبَعْضٍ لِّيَقُولُوا أَهَٰؤُلَاءِ مَنَّ اللَّهُ عَلَيْهِم مِّن بَيْنِنَا ۗ أَلَيْسَ اللَّهُ بِأَعْلَمَ بِالشَّاكِرِينَ
ಹೀಗೆ ನಾವು ಕೆಲವರನ್ನು ಇತರ ಕೆಲವರ ಮೂಲಕ ಪರೀಕ್ಷೆಗೊಳಪಡಿಸಿದೆವು. ಇದು ನಮ್ಮೆಲ್ಲರ ನಡುವೆ ಅಲ್ಲಾಹನು ಅನುಗ್ರಹಿಸಿದ್ದು ಇವರ ಮೇಲೆಯೇ? ಎಂದು ಸರದಾರರು ಹೇಳಲೆಂದಾಗಿದೆ. ಕೃತಜ್ಞತೆ ತೋರುವವರನ್ನು ಅಲ್ಲಾಹನು ಬಹಳ ಚೆನ್ನಾಗಿ ಅರಿಯುವನಲ್ಲವೇ?
54وَإِذَا جَاءَكَ الَّذِينَ يُؤْمِنُونَ بِآيَاتِنَا فَقُلْ سَلَامٌ عَلَيْكُمْ ۖ كَتَبَ رَبُّكُمْ عَلَىٰ نَفْسِهِ الرَّحْمَةَ ۖ أَنَّهُ مَنْ عَمِلَ مِنكُمْ سُوءًا بِجَهَالَةٍ ثُمَّ تَابَ مِن بَعْدِهِ وَأَصْلَحَ فَأَنَّهُ غَفُورٌ رَّحِيمٌ
ಮತ್ತು ನಮ್ಮ ದೃಷ್ಟಾಂತಗಳಲ್ಲಿ ವಿಶ್ವಾಸವಿಡುವವರು ನಿಮ್ಮ ಬಳಿಗೆ ಬಂದರೆ ಹೇಳಿರಿ: ನಿಮ್ಮ ಮೇಲೆ ಶಾಂತಿಯಿರಲಿ. ನಿಮ್ಮ ಪ್ರಭು ಕರುಣೆತೋರುವುದನ್ನು ತನ್ನ ಮೇಲೆ ಕಡ್ಡಾಯಗೊಳಿಸಿದ್ದಾನೆ. ಅಂದರೆ ನಿಮ್ಮ ಪೈಕಿ ಯಾರಾದರೂ ಅಜ್ಞಾನದಿಂದ ದುಷ್ಕೃತ್ಯವನ್ನು ಮಾಡಿದರೆ, ತರುವಾಯ ಅವನು ಅದರ ಬಳಿಕ ಪಶ್ಚಾತ್ತಾಪ ಪಟ್ಟರೆ ಮತ್ತು ಸುಧಾರಣೆ ಮಾಡಿಕೊಂಡರೆ ಅಲ್ಲಾಹನು ಅತ್ಯಧಿಕ ಕ್ಷಮಿಸುವವನು, ಕರುಣಾನಿಧಿÀಯು ಆಗಿದ್ದಾನೆ.
55وَكَذَٰلِكَ نُفَصِّلُ الْآيَاتِ وَلِتَسْتَبِينَ سَبِيلُ الْمُجْرِمِينَ
ಹೀಗೆ ಅಪರಾಧಿಗಳ ಮಾರ್ಗವು (ವರ್ತನೆ) ಬಹಿರಂಗವಾಗಲೆAದು ನಾವು ದೃಷ್ಟಾಂತಗಳನ್ನು ವಿವರಿಸಿಕೊಡುತ್ತೇವೆ.
56قُلْ إِنِّي نُهِيتُ أَنْ أَعْبُدَ الَّذِينَ تَدْعُونَ مِن دُونِ اللَّهِ ۚ قُل لَّا أَتَّبِعُ أَهْوَاءَكُمْ ۙ قَدْ ضَلَلْتُ إِذًا وَمَا أَنَا مِنَ الْمُهْتَدِينَ
ಹೇಳಿರಿ: ಅಲ್ಲಾಹನ ಹೊರತು ನೀವು ಕರೆದು ಪ್ರಾರ್ಥಿಸುತ್ತಿರುವವರನ್ನು ಆರಾಧಿಸುವುದನ್ನು ನನಗೆ ನಿಷೇಧಿಸಲಾಗಿದೆ. ಹೇಳಿರಿ: ನಾನು ನಿಮ್ಮ ಸ್ವೇಚ್ಛೆಗಳನ್ನು ಅನುಸರಿಸುವುದಿಲ್ಲ. ಹಾಗೆ ಮಾಡಿದರೆ ನಾನು ಮಾರ್ಗ ಭ್ರಷ್ಟನಾಗುವೆನು ಮತ್ತು ಸನ್ಮಾರ್ಗ ಪ್ರಾಪ್ತರಲ್ಲಿ ಸೇರಿದವನಾಗಲಾರನು.
ಅಲ್-ಅನ್ಆಮ್ಕುರಾನ್ ಸೂಚಿ
165ಆಯತ್
MeccanRevelation
54ಆಯತ್

ಅನುವಾದ — ಅಲ್-ಅನ್ಆಮ್ 54

ಸೂರಾ ಅಲ್-ಅನ್ಆಮ್ ಆಯತ್ 54 - ಓದಿ, ಆಲಿಸಿ, ಅನುವಾದ, ಕನ್ನಡ : ಮತ್ತು ನಮ್ಮ ದೃಷ್ಟಾಂತಗಳಲ್ಲಿ ವಿಶ್ವಾಸವಿಡುವವರು ನಿಮ್ಮ ಬಳಿಗೆ ಬಂದರೆ ಹೇಳಿರಿ: ನಿಮ್ಮ ಮೇಲೆ…

ಸೂರಾ ಆಯತ್ 54/165 — ಸೂರಾ ಅಲ್-ಅನ್ಆಮ್ الأنعام (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಅನ್ಆಮ್ ಆಲಿಸಿ, ಸೂರಾ ಅಲ್-ಅನ್ಆಮ್ ಅನುವಾದ, ಸೂರಾ ಅಲ್-ಅನ್ಆಮ್ mp3, ಸೂರಾ ಅಲ್-ಅನ್ಆಮ್ pdf. ಆಯತ್ 52–56. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Monday, September 7, 2026

Don't forget us in your sincere prayers