ಅಲ್-ಆರಾಫ್ · 156/206
ಅನುವಾದ ಉಚ್ಚಾರಣೆ — ಸೂರಾ ಅಲ್-ಆರಾಫ್
۞ وَاكْتُبْ لَنَا فِي هَٰذِهِ الدُّنْيَا حَسَنَةً وَفِي الْآخِرَةِ إِنَّا هُدْنَا إِلَيْكَ ۚ قَالَ عَذَابِي أُصِيبُ بِهِ مَنْ أَشَاءُ ۖ وَرَحْمَتِي وَسِعَتْ كُلَّ شَيْءٍ ۚ فَسَأَكْتُبُهَا لِلَّذِينَ يَتَّقُونَ وَيُؤْتُونَ الزَّكَاةَ وَالَّذِينَ هُم بِآيَاتِنَا يُؤْمِنُونَ ۝١٥٦
Waktub lanaa fee haazi hid dunyaa hasanatanw wa fil Aakhirati innnaa hudnaaa ilaik; qaala `azaabee useebu bihee man ashaaa`u wa rahmatee wasi`at kulla shai`; fasa aktubuhaa lillazeena yattaqoona wa yu`toonaz Zakaata wallazeena hum bi Aayaatinaa yu`minoon
📖 ಕನ್ನಡ ಅರ್ಥ
ಇಹಲೋಕದಲ್ಲೂ ಪರಲೋಕದಲ್ಲೂ ನಮಗಾಗಿ ಒಳಿತನ್ನು ದಾಖಲಿಸು. ನಾವು ನಿನ್ನೆಡೆಗೆ ಮರಳುತ್ತೇವೆ. ಅಲ್ಲಾಹನು ಹೇಳುವನು: ನಾನು ಇಚ್ಛಿಸುವವರ ಮೇಲೆಯೇ ನನ್ನ ಶಿಕ್ಷೆಯನ್ನು ಜಾರಿಗೊಳಿಸುವೆನು ಮತ್ತು ನನ್ನ ಕಾರುಣ್ಯವು ಸರ್ವ ವಸ್ತುಗಳನ್ನು ಆವರಿಸಿಕೊಂಡಿದೆ. ಆದ್ದರಿಂದ ಭಯಪಡುವ, ಝಕಾತ್ ನೀಡುವ ಮತ್ತು ನಮ್ಮ ದೃಷ್ಟಾಂತಗಳಲ್ಲಿ ವಿಶ್ವಾಸವಿಡುವ ಜನರಿಗಾಗಿ ಕಾರುಣ್ಯವನ್ನು ನಾನು ದಾಖಲಿಸಿಡುವೆನು.

🎧 ಆಲಿಸಿ


📜 ಆಯತ್ 154-158 — ಸೂರಾ ಅಲ್-ಆರಾಫ್

154وَلَمَّا سَكَتَ عَن مُّوسَى الْغَضَبُ أَخَذَ الْأَلْوَاحَ ۖ وَفِي نُسْخَتِهَا هُدًى وَرَحْمَةٌ لِّلَّذِينَ هُمْ لِرَبِّهِمْ يَرْهَبُونَ
ಮತ್ತು ಮೂಸಾರವರ ಕೋಪವು ತಣ್ಣಗಾದಾಗ ಆ ಫಲಕಗಳನ್ನು ಎತ್ತಿಕೊಂಡರು ಅವುಗಳಲ್ಲಿ ತಮ್ಮ ಪ್ರಭುವನ್ನು ಭಯಪಡುವ ಜನರಿಗೆ ಮಾರ್ಗದರ್ಶನವೂ, ಕಾರಣ್ಯವೂ ಇತ್ತು.
155وَاخْتَارَ مُوسَىٰ قَوْمَهُ سَبْعِينَ رَجُلًا لِّمِيقَاتِنَا ۖ فَلَمَّا أَخَذَتْهُمُ الرَّجْفَةُ قَالَ رَبِّ لَوْ شِئْتَ أَهْلَكْتَهُم مِّن قَبْلُ وَإِيَّايَ ۖ أَتُهْلِكُنَا بِمَا فَعَلَ السُّفَهَاءُ مِنَّا ۖ إِنْ هِيَ إِلَّا فِتْنَتُكَ تُضِلُّ بِهَا مَن تَشَاءُ وَتَهْدِي مَن تَشَاءُ ۖ أَنتَ وَلِيُّنَا فَاغْفِرْ لَنَا وَارْحَمْنَا ۖ وَأَنتَ خَيْرُ الْغَافِرِينَ
ಮತ್ತು ಮೂಸಾ ತಮ್ಮ ಜನರ ಪೈಕಿ ಎಪ್ಪತ್ತು ಮಂದಿಯನ್ನು ನಮ್ಮ ನಿಶ್ಚಿತ ಸಮಯಕ್ಕಾಗಿ (ತೂರ್ ಪರ್ವತದೆಡೆಗೆ ಹೋಗಲು) ಆರಿಸಿಕೊಂಡರು. ನಂತರ (ಅಲ್ಲಿ ಅವರು ಅಲ್ಲಾಹನನ್ನು ಪ್ರತ್ಯಕ್ಷವಾಗಿ ಕಾಣಲೇಬೇಕೆಂದ ಕಾರಣದಿಂದ) ಭೀಕರವಾದ ಕಂಪನವು ಅವರನ್ನು ಹಿಡಿದು ಬಿಟ್ಟಾಗ ಮೂಸಾ ಹೇಳಿದರು: ನನ್ನ ಪ್ರಭೂ, ನೀನು ಇಚ್ಛಿಸಿದ್ದರೆ ಇದಕ್ಕಿಂತ ಮುಂಚೆಯೇ ಅವರನ್ನು ಮತ್ತು ನನ್ನನ್ನು ನಾಶಗೊಳಿಸಿಬಿಡುತ್ತಿದ್ದೆ. ನಮ್ಮಲ್ಲಿನ ಕೆಲವು ಅವಿವೇಕಿಗಳು ಮಾಡಿದ ಕೃತ್ಯದ ನಿಮಿತ್ತ ನೀನು ನಮ್ಮನ್ನು ನಾಶಗೊಳಿಸುವೆಯಾ? ಇದು ನಿನ್ನ ಒಂದು ಪರೀಕ್ಷೆಯೇ ಆಗಿದೆ. ಇದರ ಮೂಲಕ ನೀನು ಇಚ್ಛಿಸುವವರನ್ನು ಪಥಭ್ರಷ್ಟಗೊಳಿಸುವೆ ಮತ್ತು ನೀನು ಇಚ್ಛಿಸುವವರನ್ನು ಸನ್ಮಾರ್ಗದಲ್ಲಿ ಸೇರಿಸುವೆ. ನೀನೇ ನಮ್ಮ ಕಾರ್ಯಸಾಧಕನಾಗಿರುವೆ. ಹಾಗೆಯೇ ನೀನು ನಮ್ಮನ್ನು ಕ್ಷಮಿಸು ಹಾಗೂ ನಮ್ಮ ಮೇಲೆ ಕಾರುಣ್ಯವನ್ನು ತೋರು. ಕ್ಷಮೆ ನೀಡುವವರಲ್ಲಿ ನೀನು ಅತ್ಯುತ್ತಮನಾಗಿರುವೆ.
156۞ وَاكْتُبْ لَنَا فِي هَٰذِهِ الدُّنْيَا حَسَنَةً وَفِي الْآخِرَةِ إِنَّا هُدْنَا إِلَيْكَ ۚ قَالَ عَذَابِي أُصِيبُ بِهِ مَنْ أَشَاءُ ۖ وَرَحْمَتِي وَسِعَتْ كُلَّ شَيْءٍ ۚ فَسَأَكْتُبُهَا لِلَّذِينَ يَتَّقُونَ وَيُؤْتُونَ الزَّكَاةَ وَالَّذِينَ هُم بِآيَاتِنَا يُؤْمِنُونَ
ಇಹಲೋಕದಲ್ಲೂ ಪರಲೋಕದಲ್ಲೂ ನಮಗಾಗಿ ಒಳಿತನ್ನು ದಾಖಲಿಸು. ನಾವು ನಿನ್ನೆಡೆಗೆ ಮರಳುತ್ತೇವೆ. ಅಲ್ಲಾಹನು ಹೇಳುವನು: ನಾನು ಇಚ್ಛಿಸುವವರ ಮೇಲೆಯೇ ನನ್ನ ಶಿಕ್ಷೆಯನ್ನು ಜಾರಿಗೊಳಿಸುವೆನು ಮತ್ತು ನನ್ನ ಕಾರುಣ್ಯವು ಸರ್ವ ವಸ್ತುಗಳನ್ನು ಆವರಿಸಿಕೊಂಡಿದೆ. ಆದ್ದರಿಂದ ಭಯಪಡುವ, ಝಕಾತ್ ನೀಡುವ ಮತ್ತು ನಮ್ಮ ದೃಷ್ಟಾಂತಗಳಲ್ಲಿ ವಿಶ್ವಾಸವಿಡುವ ಜನರಿಗಾಗಿ ಕಾರುಣ್ಯವನ್ನು ನಾನು ದಾಖಲಿಸಿಡುವೆನು.
157الَّذِينَ يَتَّبِعُونَ الرَّسُولَ النَّبِيَّ الْأُمِّيَّ الَّذِي يَجِدُونَهُ مَكْتُوبًا عِندَهُمْ فِي التَّوْرَاةِ وَالْإِنجِيلِ يَأْمُرُهُم بِالْمَعْرُوفِ وَيَنْهَاهُمْ عَنِ الْمُنكَرِ وَيُحِلُّ لَهُمُ الطَّيِّبَاتِ وَيُحَرِّمُ عَلَيْهِمُ الْخَبَائِثَ وَيَضَعُ عَنْهُمْ إِصْرَهُمْ وَالْأَغْلَالَ الَّتِي كَانَتْ عَلَيْهِمْ ۚ فَالَّذِينَ آمَنُوا بِهِ وَعَزَّرُوهُ وَنَصَرُوهُ وَاتَّبَعُوا النُّورَ الَّذِي أُنزِلَ مَعَهُ ۙ أُولَٰئِكَ هُمُ الْمُفْلِحُونَ
ಅವರು ತಮ್ಮ ಬಳಿಯಿರುವ ತೌರಾತ್‌ನಲ್ಲೂ, ಇಂಜೀಲ್‌ನಲ್ಲೂ ಅವರನ್ನು (ಮುಹಮ್ಮದರನ್ನು) ದಾಖಲಿಸಲ್ಪಟ್ಟಿರುವುದಾಗಿ ಕಾಣುವ ನಿರಕ್ಷರಿಯಾದ ಪೈಗಂಬರರಲ್ಲಿ ವಿಶ್ವಾಸವಿರಿಸುತ್ತಾರೆ. ಅವರು ಅವರಿಗೆ ಒಳಿತಿನ ಆದೇಶ ನೀಡುತ್ತಾರೆ. ಮತ್ತು ಕೆಡುಕುಗಳಿಂದ ತಡೆಯುತ್ತಾರೆ. ಉತ್ತಮ ವಸ್ತುಗಳನ್ನು ಅವರಿಗೆ ಧರ್ಮ ಸಮ್ಮತಗೊಳಿಸುತ್ತಾರೆ ಮತ್ತು ಅಶುದ್ಧ ವಸ್ತುಗಳನ್ನು ಅವರ ಮೇಲೆ ನಿಷಿದ್ಧಗೊಳಿಸುತ್ತಾರೆ. ಅವರ ಮೇಲಿರುವ ಭಾರಗಳನ್ನೂ (ಮೂಡನಂಬಿಕೆ, ಧಾರ್ಮಿಕ ಬಿಕ್ಕಟ್ಟು) ಇಳಿಸುತ್ತಾರೆ ಮತ್ತು ಸಂಕೋಲೆಗಳನ್ನೂ (ಸಿಲುಕಿರುವ ತಪ್ಪು ಸಂಪ್ರದಾಯಗಳನ್ನು) ಬಿಡಿಸುತ್ತಾರೆ. ಇನ್ನು ಯಾರು ಆ ಪೈಗಂಬರರ ಮೇಲೆ ವಿಶ್ವಾಸವಿಡುತ್ತಾರೋ, ಅವರಿಗೆ ಬೆಂಬಲ ನೀಡುತ್ತಾರೋ ಮತ್ತು ಅವರಿಗೆ ಸಹಾಯ ಮಾಡುತ್ತಾರೋ ಮತ್ತು ಅವರ ಜೊತೆ ಇಳಿಸಲಾಗಿರುವ ಪ್ರಕಾಶವನ್ನು ಅನುಸರಿಸುತ್ತಾರೋ ಅಂತಹವರೇ ಯಶಸ್ಸು ಪಡೆಯುವವರಾಗಿರುತ್ತಾರೆ.
158قُلْ يَا أَيُّهَا النَّاسُ إِنِّي رَسُولُ اللَّهِ إِلَيْكُمْ جَمِيعًا الَّذِي لَهُ مُلْكُ السَّمَاوَاتِ وَالْأَرْضِ ۖ لَا إِلَٰهَ إِلَّا هُوَ يُحْيِي وَيُمِيتُ ۖ فَآمِنُوا بِاللَّهِ وَرَسُولِهِ النَّبِيِّ الْأُمِّيِّ الَّذِي يُؤْمِنُ بِاللَّهِ وَكَلِمَاتِهِ وَاتَّبِعُوهُ لَعَلَّكُمْ تَهْتَدُونَ
ಓ ಪೈಗಂಬರರೇ ಹೇಳಿರಿ: ಓ ಜನರೇ, ನಿಮ್ಮೆಲ್ಲರ ಕಡೆಗೆ ಆಕಾಶಗಳ ಮತ್ತು ಭೂಮಿಯ ಆಧಿಪತ್ಯ ಹೊಂದಿರುವ ಅಲ್ಲಾಹನ ಸಂದೇಶ ವಾಹಕನಾಗಿರುವೆನು. ಅವನ ಹೊರತು ಅನ್ಯ ಆರಾಧ್ಯರಿಲ್ಲ. ಅವನೇ ಜೀವ ನೀಡುತ್ತಾನೆ ಮತ್ತು ಮರಣ ನೀಡುತ್ತಾನೆ. ಆದ್ದರಿಂದ ನೀವು ಅಲ್ಲಾಹನ ಮೇಲೂ, ಅವನ ವಚನಗಳಲ್ಲಿ ವಿಶ್ವಾಸವಿಟ್ಟ ನಿರಕ್ಷರಿ ಪೈಗಂಬರರಾದ ಅವನ ಸಂದೇಶವಾಹಕರ ಮೇಲೂ ವಿಶ್ವಾಸವಿರಿಸಿರಿ ಮತ್ತು ಅವರ ಅನುಸರಣೆ ಮಾಡಿರಿ. ಪ್ರಾಯಶಃ ನೀವು ಸನ್ಮಾರ್ಗ ಪಡೆಯಬಹುದು.
ಅಲ್-ಆರಾಫ್ಕುರಾನ್ ಸೂಚಿ
206ಆಯತ್
MeccanRevelation
156ಆಯತ್

ಅನುವಾದ — ಅಲ್-ಆರಾಫ್ 156

ಸೂರಾ ಅಲ್-ಆರಾಫ್ ಆಯತ್ 156 - ಓದಿ, ಆಲಿಸಿ, ಅನುವಾದ, ಕನ್ನಡ : ಇಹಲೋಕದಲ್ಲೂ ಪರಲೋಕದಲ್ಲೂ ನಮಗಾಗಿ ಒಳಿತನ್ನು ದಾಖಲಿಸು. ನಾವು ನಿನ್ನೆಡೆಗೆ ಮರಳುತ್ತೇವೆ. ಅಲ್ಲಾಹನು ಹೇಳುವನು:…

ಸೂರಾ ಆಯತ್ 156/206 — ಸೂರಾ ಅಲ್-ಆರಾಫ್ الأعراف (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಆರಾಫ್ ಆಲಿಸಿ, ಸೂರಾ ಅಲ್-ಆರಾಫ್ ಅನುವಾದ, ಸೂರಾ ಅಲ್-ಆರಾಫ್ mp3, ಸೂರಾ ಅಲ್-ಆರಾಫ್ pdf. ಆಯತ್ 154–158. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Monday, September 7, 2026

Don't forget us in your sincere prayers