ಅಲ್-ಆರಾಫ್ · 158/206
ಅನುವಾದ ಉಚ್ಚಾರಣೆ — ಸೂರಾ ಅಲ್-ಆರಾಫ್
قُلْ يَا أَيُّهَا النَّاسُ إِنِّي رَسُولُ اللَّهِ إِلَيْكُمْ جَمِيعًا الَّذِي لَهُ مُلْكُ السَّمَاوَاتِ وَالْأَرْضِ ۖ لَا إِلَٰهَ إِلَّا هُوَ يُحْيِي وَيُمِيتُ ۖ فَآمِنُوا بِاللَّهِ وَرَسُولِهِ النَّبِيِّ الْأُمِّيِّ الَّذِي يُؤْمِنُ بِاللَّهِ وَكَلِمَاتِهِ وَاتَّبِعُوهُ لَعَلَّكُمْ تَهْتَدُونَ ۝١٥٨
Qul yaaa aiyuhan naasu innee Rasoohul laahi ilaikum jamee`anil lazee lahoo mulkus samaawaati wal ardi laaa ilaaha illaa Huwa yuhyee wa yumeetu fa aaminoo billaahi wa Rasoolihin Nabiyyil ummiy yil lazee yu`minu billaahi wa Kalimaatihee wattabi`oohu la`allakum tahtadoon
📖 ಕನ್ನಡ ಅರ್ಥ
ಓ ಪೈಗಂಬರರೇ ಹೇಳಿರಿ: ಓ ಜನರೇ, ನಿಮ್ಮೆಲ್ಲರ ಕಡೆಗೆ ಆಕಾಶಗಳ ಮತ್ತು ಭೂಮಿಯ ಆಧಿಪತ್ಯ ಹೊಂದಿರುವ ಅಲ್ಲಾಹನ ಸಂದೇಶ ವಾಹಕನಾಗಿರುವೆನು. ಅವನ ಹೊರತು ಅನ್ಯ ಆರಾಧ್ಯರಿಲ್ಲ. ಅವನೇ ಜೀವ ನೀಡುತ್ತಾನೆ ಮತ್ತು ಮರಣ ನೀಡುತ್ತಾನೆ. ಆದ್ದರಿಂದ ನೀವು ಅಲ್ಲಾಹನ ಮೇಲೂ, ಅವನ ವಚನಗಳಲ್ಲಿ ವಿಶ್ವಾಸವಿಟ್ಟ ನಿರಕ್ಷರಿ ಪೈಗಂಬರರಾದ ಅವನ ಸಂದೇಶವಾಹಕರ ಮೇಲೂ ವಿಶ್ವಾಸವಿರಿಸಿರಿ ಮತ್ತು ಅವರ ಅನುಸರಣೆ ಮಾಡಿರಿ. ಪ್ರಾಯಶಃ ನೀವು ಸನ್ಮಾರ್ಗ ಪಡೆಯಬಹುದು.

🎧 ಆಲಿಸಿ


📜 ಆಯತ್ 156-160 — ಸೂರಾ ಅಲ್-ಆರಾಫ್

156۞ وَاكْتُبْ لَنَا فِي هَٰذِهِ الدُّنْيَا حَسَنَةً وَفِي الْآخِرَةِ إِنَّا هُدْنَا إِلَيْكَ ۚ قَالَ عَذَابِي أُصِيبُ بِهِ مَنْ أَشَاءُ ۖ وَرَحْمَتِي وَسِعَتْ كُلَّ شَيْءٍ ۚ فَسَأَكْتُبُهَا لِلَّذِينَ يَتَّقُونَ وَيُؤْتُونَ الزَّكَاةَ وَالَّذِينَ هُم بِآيَاتِنَا يُؤْمِنُونَ
ಇಹಲೋಕದಲ್ಲೂ ಪರಲೋಕದಲ್ಲೂ ನಮಗಾಗಿ ಒಳಿತನ್ನು ದಾಖಲಿಸು. ನಾವು ನಿನ್ನೆಡೆಗೆ ಮರಳುತ್ತೇವೆ. ಅಲ್ಲಾಹನು ಹೇಳುವನು: ನಾನು ಇಚ್ಛಿಸುವವರ ಮೇಲೆಯೇ ನನ್ನ ಶಿಕ್ಷೆಯನ್ನು ಜಾರಿಗೊಳಿಸುವೆನು ಮತ್ತು ನನ್ನ ಕಾರುಣ್ಯವು ಸರ್ವ ವಸ್ತುಗಳನ್ನು ಆವರಿಸಿಕೊಂಡಿದೆ. ಆದ್ದರಿಂದ ಭಯಪಡುವ, ಝಕಾತ್ ನೀಡುವ ಮತ್ತು ನಮ್ಮ ದೃಷ್ಟಾಂತಗಳಲ್ಲಿ ವಿಶ್ವಾಸವಿಡುವ ಜನರಿಗಾಗಿ ಕಾರುಣ್ಯವನ್ನು ನಾನು ದಾಖಲಿಸಿಡುವೆನು.
157الَّذِينَ يَتَّبِعُونَ الرَّسُولَ النَّبِيَّ الْأُمِّيَّ الَّذِي يَجِدُونَهُ مَكْتُوبًا عِندَهُمْ فِي التَّوْرَاةِ وَالْإِنجِيلِ يَأْمُرُهُم بِالْمَعْرُوفِ وَيَنْهَاهُمْ عَنِ الْمُنكَرِ وَيُحِلُّ لَهُمُ الطَّيِّبَاتِ وَيُحَرِّمُ عَلَيْهِمُ الْخَبَائِثَ وَيَضَعُ عَنْهُمْ إِصْرَهُمْ وَالْأَغْلَالَ الَّتِي كَانَتْ عَلَيْهِمْ ۚ فَالَّذِينَ آمَنُوا بِهِ وَعَزَّرُوهُ وَنَصَرُوهُ وَاتَّبَعُوا النُّورَ الَّذِي أُنزِلَ مَعَهُ ۙ أُولَٰئِكَ هُمُ الْمُفْلِحُونَ
ಅವರು ತಮ್ಮ ಬಳಿಯಿರುವ ತೌರಾತ್‌ನಲ್ಲೂ, ಇಂಜೀಲ್‌ನಲ್ಲೂ ಅವರನ್ನು (ಮುಹಮ್ಮದರನ್ನು) ದಾಖಲಿಸಲ್ಪಟ್ಟಿರುವುದಾಗಿ ಕಾಣುವ ನಿರಕ್ಷರಿಯಾದ ಪೈಗಂಬರರಲ್ಲಿ ವಿಶ್ವಾಸವಿರಿಸುತ್ತಾರೆ. ಅವರು ಅವರಿಗೆ ಒಳಿತಿನ ಆದೇಶ ನೀಡುತ್ತಾರೆ. ಮತ್ತು ಕೆಡುಕುಗಳಿಂದ ತಡೆಯುತ್ತಾರೆ. ಉತ್ತಮ ವಸ್ತುಗಳನ್ನು ಅವರಿಗೆ ಧರ್ಮ ಸಮ್ಮತಗೊಳಿಸುತ್ತಾರೆ ಮತ್ತು ಅಶುದ್ಧ ವಸ್ತುಗಳನ್ನು ಅವರ ಮೇಲೆ ನಿಷಿದ್ಧಗೊಳಿಸುತ್ತಾರೆ. ಅವರ ಮೇಲಿರುವ ಭಾರಗಳನ್ನೂ (ಮೂಡನಂಬಿಕೆ, ಧಾರ್ಮಿಕ ಬಿಕ್ಕಟ್ಟು) ಇಳಿಸುತ್ತಾರೆ ಮತ್ತು ಸಂಕೋಲೆಗಳನ್ನೂ (ಸಿಲುಕಿರುವ ತಪ್ಪು ಸಂಪ್ರದಾಯಗಳನ್ನು) ಬಿಡಿಸುತ್ತಾರೆ. ಇನ್ನು ಯಾರು ಆ ಪೈಗಂಬರರ ಮೇಲೆ ವಿಶ್ವಾಸವಿಡುತ್ತಾರೋ, ಅವರಿಗೆ ಬೆಂಬಲ ನೀಡುತ್ತಾರೋ ಮತ್ತು ಅವರಿಗೆ ಸಹಾಯ ಮಾಡುತ್ತಾರೋ ಮತ್ತು ಅವರ ಜೊತೆ ಇಳಿಸಲಾಗಿರುವ ಪ್ರಕಾಶವನ್ನು ಅನುಸರಿಸುತ್ತಾರೋ ಅಂತಹವರೇ ಯಶಸ್ಸು ಪಡೆಯುವವರಾಗಿರುತ್ತಾರೆ.
158قُلْ يَا أَيُّهَا النَّاسُ إِنِّي رَسُولُ اللَّهِ إِلَيْكُمْ جَمِيعًا الَّذِي لَهُ مُلْكُ السَّمَاوَاتِ وَالْأَرْضِ ۖ لَا إِلَٰهَ إِلَّا هُوَ يُحْيِي وَيُمِيتُ ۖ فَآمِنُوا بِاللَّهِ وَرَسُولِهِ النَّبِيِّ الْأُمِّيِّ الَّذِي يُؤْمِنُ بِاللَّهِ وَكَلِمَاتِهِ وَاتَّبِعُوهُ لَعَلَّكُمْ تَهْتَدُونَ
ಓ ಪೈಗಂಬರರೇ ಹೇಳಿರಿ: ಓ ಜನರೇ, ನಿಮ್ಮೆಲ್ಲರ ಕಡೆಗೆ ಆಕಾಶಗಳ ಮತ್ತು ಭೂಮಿಯ ಆಧಿಪತ್ಯ ಹೊಂದಿರುವ ಅಲ್ಲಾಹನ ಸಂದೇಶ ವಾಹಕನಾಗಿರುವೆನು. ಅವನ ಹೊರತು ಅನ್ಯ ಆರಾಧ್ಯರಿಲ್ಲ. ಅವನೇ ಜೀವ ನೀಡುತ್ತಾನೆ ಮತ್ತು ಮರಣ ನೀಡುತ್ತಾನೆ. ಆದ್ದರಿಂದ ನೀವು ಅಲ್ಲಾಹನ ಮೇಲೂ, ಅವನ ವಚನಗಳಲ್ಲಿ ವಿಶ್ವಾಸವಿಟ್ಟ ನಿರಕ್ಷರಿ ಪೈಗಂಬರರಾದ ಅವನ ಸಂದೇಶವಾಹಕರ ಮೇಲೂ ವಿಶ್ವಾಸವಿರಿಸಿರಿ ಮತ್ತು ಅವರ ಅನುಸರಣೆ ಮಾಡಿರಿ. ಪ್ರಾಯಶಃ ನೀವು ಸನ್ಮಾರ್ಗ ಪಡೆಯಬಹುದು.
159وَمِن قَوْمِ مُوسَىٰ أُمَّةٌ يَهْدُونَ بِالْحَقِّ وَبِهِ يَعْدِلُونَ
ಮತ್ತು ಮೂಸಾರವರ ಜನತೆಯ ಪೈಕಿ ಸತ್ಯಕ್ಕನುಗುಣವಾಗಿ ಮಾರ್ಗದರ್ಶನ ನೀಡುವ ಮತ್ತು ಅದರ ಪ್ರಕಾರ ನ್ಯಾಯವನ್ನೂ ಪಾಲಿಸುವ ಒಂದು ಪಂಗಡವಿತ್ತು.
160وَقَطَّعْنَاهُمُ اثْنَتَيْ عَشْرَةَ أَسْبَاطًا أُمَمًا ۚ وَأَوْحَيْنَا إِلَىٰ مُوسَىٰ إِذِ اسْتَسْقَاهُ قَوْمُهُ أَنِ اضْرِب بِّعَصَاكَ الْحَجَرَ ۖ فَانبَجَسَتْ مِنْهُ اثْنَتَا عَشْرَةَ عَيْنًا ۖ قَدْ عَلِمَ كُلُّ أُنَاسٍ مَّشْرَبَهُمْ ۚ وَظَلَّلْنَا عَلَيْهِمُ الْغَمَامَ وَأَنزَلْنَا عَلَيْهِمُ الْمَنَّ وَالسَّلْوَىٰ ۖ كُلُوا مِن طَيِّبَاتِ مَا رَزَقْنَاكُمْ ۚ وَمَا ظَلَمُونَا وَلَٰكِن كَانُوا أَنفُسَهُمْ يَظْلِمُونَ
ಮತ್ತು ನಾವು ಅವರನ್ನು ಹನ್ನೆರಡು ಗೋತ್ರಗಳಲ್ಲಿ ವಿಂಗಡಿಸಿ ಪ್ರತ್ಯೇಕ ಪಂಗಡಗಳನ್ನಾಗಿ ಮಾಡಿದೆವು. ಮೂಸಾರವರೊಂದಿಗೆ ಅವನ ಜನತೆಯು ನೀರನ್ನು ಕೇಳಿದಾಗ ನಾವು ಅವರಿಗೆ ಆದೇಶ ನೀಡಿದೆವು ತನ್ನ ಬೆತ್ತದಿಂದ ಆ ಬಂಡೆಯ ಮೇಲೆ ಹೊಡಯಿರೆಂದು, ಆಗ ಅದರಿಂದ ಹನ್ನೆರಡು ಚಿಲುಮೆಗಳು ಹೊರಬಂದವು. ಪ್ರತಿಯೊಂದು ಪಂಗಡವು ತಮ್ಮ ಕುಡಿಯುವ ಘಟಕವನ್ನು ಅರಿತುಕೊಂಡಿತು ಮತ್ತು ನಾವು ಅವರ ಮೇಲೆ ಮೋಡದ ನೆರಳನ್ನು ನೀಡಿದೆವು ಮತ್ತು ಅವರಿಗೆ ಮನ್ನಃ(ಸಿಹಿಪದಾರ್ಥ) ಹಾಗೂ ಲಾವಕ್ಕಿಗಳನ್ನು ಇಳಿಸಿಕೊಟ್ಟೆವು ಮತ್ತು ನಾವು ನಿಮಗೆ ನೀಡಿರುವ ಶುದ್ಧ ವಸ್ತುಗಳನ್ನು ತಿನ್ನಿರಿ ಎಂದೆವು ಮತ್ತು ಅವರು ನಮ್ಮ ಮೇಲೆ ಅಕ್ರಮವೇನೂ ಎಸಗಲಿಲ್ಲ. ಅವರು ಸ್ವತಃ ತಮ್ಮ ಮೇಲೆಯೇ ಅಕ್ರ‍್ರಮವೆಸಗುತ್ತಿದ್ದರು.
ಅಲ್-ಆರಾಫ್ಕುರಾನ್ ಸೂಚಿ
206ಆಯತ್
MeccanRevelation
158ಆಯತ್

ಅನುವಾದ — ಅಲ್-ಆರಾಫ್ 158

ಸೂರಾ ಅಲ್-ಆರಾಫ್ ಆಯತ್ 158 - ಓದಿ, ಆಲಿಸಿ, ಅನುವಾದ, ಕನ್ನಡ : ಓ ಪೈಗಂಬರರೇ ಹೇಳಿರಿ: ಓ ಜನರೇ, ನಿಮ್ಮೆಲ್ಲರ ಕಡೆಗೆ ಆಕಾಶಗಳ ಮತ್ತು ಭೂಮಿಯ…

ಸೂರಾ ಆಯತ್ 158/206 — ಸೂರಾ ಅಲ್-ಆರಾಫ್ الأعراف (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಆರಾಫ್ ಆಲಿಸಿ, ಸೂರಾ ಅಲ್-ಆರಾಫ್ ಅನುವಾದ, ಸೂರಾ ಅಲ್-ಆರಾಫ್ mp3, ಸೂರಾ ಅಲ್-ಆರಾಫ್ pdf. ಆಯತ್ 156–160. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Tuesday, September 8, 2026

Don't forget us in your sincere prayers