ಅಲ್-ಆರಾಫ್ · 86/206
ಅನುವಾದ ಉಚ್ಚಾರಣೆ — ಅಲ್-ಆರಾಫ್
وَلَا تَقۡعُدُواْ بِكُلِّ صِرَٰطٍ تُوعِدُونَ وَتَصُدُّونَ عَن سَبِيلِ ٱللَّهِ مَنۡ ءَامَنَ بِهِۦ وَتَبۡغُونَهَا عِوَجًاۚ وَٱذۡكُرُوٓاْ إِذۡ كُنتُمۡ قَلِيلًا فَكَثَّرَكُمۡۖ وَٱنظُرُواْ كَيۡفَ كَانَ عَٰقِبَةُ ٱلۡمُفۡسِدِينَ  ۝٨٦
Wa laa taq`udoo bikulli siraatin too`idoona wa tasuddoona `an sabeelil laahi man aamana bihee wa abghoonahaa `iwajaa; waz kurooo iz kuntum qaleelan fakassarakum wanzuroo kaifa kaana `aaqibatul mufsideen
📖 ಕನ್ನಡ ಅರ್ಥ
ಇದೀಗ ನಿಮ್ಮಲ್ಲಿನ ಒಂದು ಗುಂಪು, ನನ್ನನ್ನು ಯಾವುದರ ಜೊತೆಗೆ ಕಳಿಸಲಾಗಿದೆಯೋ ಅದನ್ನು ನಂಬುವವರಾಗಿದ್ದಾರೆ, ಹಾಗೂ ಇನ್ನೊಂದು ಗುಂಪು ಅದನ್ನು ನಂಬುತ್ತಿಲ್ಲ – ಅಲ್ಲಾಹನು ನಮ್ಮ ನಡುವೆ ತೀರ್ಪು ನೀಡುವ ತನಕ ಸಹನೆ ವಹಿಸಿರಿ – ಅವನು ಅತ್ಯುತ್ತಮ ತೀರ್ಪು ನೀಡುವವನಾಗಿದ್ದಾನೆ
🎧 ಆಲಿಸಿ

📜 ಆಯತ್ 84-88 — ಅಲ್-ಆರಾಫ್

84وَأَمۡطَرۡنَا عَلَيۡهِم مَّطَرًاۖ فَٱنظُرۡ كَيۡفَ كَانَ عَٰقِبَةُ ٱلۡمُجۡرِمِينَ 
ಹಾಗೆಯೇ ನಾವು ಮದ್‌ಯನ್ ಜನಾಂಗದವರೆಡೆಗೆ ಅವರ ಸಹೋದರ ಶುಐಬ್‌ರನ್ನು ಕಳುಹಿಸಿದೆವು. ಅವರು ಹೇಳಿದರು; ‘‘ನನ್ನ ಜನಾಂಗದವರೇ, ಅಲ್ಲಾಹನನ್ನು ಮಾತ್ರ ಪೂಜಿಸಿರಿ, ಅವನ ಹೊರತು ನಿಮಗೆ ಬೇರೆ ದೇವರಿಲ್ಲ. ಇದೀಗ ನಿಮ್ಮ ಬಳಿಗೆ ನಿಮ್ಮ ಒಡೆಯನ ಕಡೆಯಿಂದ ಸ್ಪಷ್ಟ ಪುರಾವೆಯು ಬಂದಿದೆ. ನೀವಿನ್ನು, ಪರಿಪೂರ್ಣವಾಗಿ ಅಳೆಯಿರಿ ಮತ್ತು ತೂಗಿರಿ. ಜನರಿಗೆ ಅವರ ಸರಕುಗಳನ್ನು ಕಡಿತಗೊಳಿಸಿ ಕೊಡಬೇಡಿ. ಹಾಗೆಯೇ, ಭೂಮಿಯಲ್ಲಿ ಸುಧಾರಣೆಯಾದ ಬಳಿಕ ನೀವು ಅದರಲ್ಲಿ ಅಶಾಂತಿಯನ್ನು ಹಬ್ಬಬೇಡಿ. ನೀವು ನಂಬುವವರಾಗಿದ್ದರೆ, ಈ ಧೋರಣೆಯೇ ನಿಮ್ಮ ಪಾಲಿಗೆ ಉತ್ತಮ.’’
85وَإِلَىٰ مَدۡيَنَ أَخَاهُمۡ شُعَيۡبًاۚ قَالَ يَٰقَوۡمِ ٱعۡبُدُواْ ٱللَّهَ مَا لَكُم مِّنۡ إِلَٰهٍ غَيۡرُهُۥۖ قَدۡ جَآءَتۡكُم بَيِّنَةٌ مِّن رَّبِّكُمۡۖ فَأَوۡفُواْ ٱلۡكَيۡلَ وَٱلۡمِيزَانَ وَلَا تَبۡخَسُواْ ٱلنَّاسَ أَشۡيَآءَهُمۡ وَلَا تُفۡسِدُواْ فِي ٱلۡأَرۡضِ بَعۡدَ إِصۡلَٰحِهَاۚ ذَٰلِكُمۡ خَيۡرٌ لَّكُمۡ إِن كُنتُم مُّؤۡمِنِينَ 
‘‘ನೀವು ಎಲ್ಲ ದಾರಿಗಳಲ್ಲಿ ಕುಳಿತು, ಜನರನ್ನು ಬೆದರಿಸುವವರೂ ಅಲ್ಲಾಹನಲ್ಲಿ ನಂಬಿಕೆ ಇಟ್ಟವರನ್ನು ಅವನ ದಾರಿಯಿಂದ ತಡೆಯುವವರೂ ಆಗಬೇಡಿ ಮತ್ತು ಅದರಲ್ಲಿ ವಕ್ರತೆಯನ್ನು ಹುಡುಕಬೇಡಿ. ನೆನಪಿಸಿಕೊಳ್ಳಿರಿ; ನೀವು ತೀರಾ ಕಡಿಮೆ ಸಂಖ್ಯೆಯಲ್ಲಿದ್ದಾಗ ಅವನು ನಿಮ್ಮ ಸಂಖ್ಯೆಯನ್ನು ಹೆಚ್ಚಿಸಿದನು. ಹಾಗೆಯೇ, ಅಶಾಂತಿ ಹಬ್ಬುವವರ ಗತಿ ಏನಾಯಿತೆಂಬುದನ್ನು ನೋಡಿರಿ.’’
86وَلَا تَقۡعُدُواْ بِكُلِّ صِرَٰطٍ تُوعِدُونَ وَتَصُدُّونَ عَن سَبِيلِ ٱللَّهِ مَنۡ ءَامَنَ بِهِۦ وَتَبۡغُونَهَا عِوَجًاۚ وَٱذۡكُرُوٓاْ إِذۡ كُنتُمۡ قَلِيلًا فَكَثَّرَكُمۡۖ وَٱنظُرُواْ كَيۡفَ كَانَ عَٰقِبَةُ ٱلۡمُفۡسِدِينَ 
ಇದೀಗ ನಿಮ್ಮಲ್ಲಿನ ಒಂದು ಗುಂಪು, ನನ್ನನ್ನು ಯಾವುದರ ಜೊತೆಗೆ ಕಳಿಸಲಾಗಿದೆಯೋ ಅದನ್ನು ನಂಬುವವರಾಗಿದ್ದಾರೆ, ಹಾಗೂ ಇನ್ನೊಂದು ಗುಂಪು ಅದನ್ನು ನಂಬುತ್ತಿಲ್ಲ – ಅಲ್ಲಾಹನು ನಮ್ಮ ನಡುವೆ ತೀರ್ಪು ನೀಡುವ ತನಕ ಸಹನೆ ವಹಿಸಿರಿ – ಅವನು ಅತ್ಯುತ್ತಮ ತೀರ್ಪು ನೀಡುವವನಾಗಿದ್ದಾನೆ
87وَإِن كَانَ طَآئِفَةٌ مِّنكُمۡ ءَامَنُواْ بِٱلَّذِيٓ أُرۡسِلۡتُ بِهِۦ وَطَآئِفَةٌ لَّمۡ يُؤۡمِنُواْ فَٱصۡبِرُواْ حَتَّىٰ يَحۡكُمَ ٱللَّهُ بَيۡنَنَاۚ وَهُوَ خَيۡرُ ٱلۡحَٰكِمِينَ 
ಅವರ ಜನಾಂಗದ ಅಹಂಕಾರಿ ನಾಯಕರು ಹೇಳಿದರು; ಶುಐಬರೇ, ನಿಮ್ಮನ್ನು ಹಾಗೂ ನಿಮ್ಮ ಜೊತೆ (ಸತ್ಯಧರ್ಮದಲ್ಲಿ) ನಂಬಿಕೆ ಇಟ್ಟವರನ್ನು ನಾವು ನಮ್ಮ ನಾಡಿನಿಂದ ಹೊರಕ್ಕೆ ಅಟ್ಟಿ ಬಿಡುವೆವು. ಅಥವಾ (ಅದು ಬೇಡವಾದರೆ) ನೀವು ನಮ್ಮ ಪಂಥಕ್ಕೆ ಮರಳಿಬರಬೇಕು. ಅವರು (ಶುಐಬರು) ಕೇಳಿದರು; ನಮಗೆ ಇಷ್ಟವಿಲ್ಲದಿದ್ದರೂ (ಮರಳಬೇಕೇ)
88۞ قَالَ ٱلۡمَلَأُ ٱلَّذِينَ ٱسۡتَكۡبَرُواْ مِن قَوۡمِهِۦ لَنُخۡرِجَنَّكَ يَٰشُعَيۡبُ وَٱلَّذِينَ ءَامَنُواْ مَعَكَ مِن قَرۡيَتِنَآ أَوۡ لَتَعُودُنَّ فِي مِلَّتِنَاۚ قَالَ أَوَلَوۡ كُنَّا كَٰرِهِينَ 
ಅಲ್ಲಾಹನು ನಿಮ್ಮ ಪಂಥದಿಂದ ನಮ್ಮನ್ನು ರಕ್ಷಿಸಿದ ಬಳಿಕ ನಾವು ಮತ್ತೆ ಅದರೆಡೆಗೆ ಮರಳಿದರೆ ನಾವು ಅಲ್ಲಾಹನ ಮೇಲೆ ಒಂದು ಭಾರೀ ಸುಳ್ಳಾರೋಪವನ್ನು ಹೊರಿಸಿದಂತಾದೀತು. ಹೀಗಿರುತ್ತಾ ನಮ್ಮೊಡೆಯನಾದ ಅಲ್ಲಾಹನೇ ಇಚ್ಛಿಸುವ ತನಕ, ಅದರೆಡೆಗೆ ಮರಳಲು ನಮಗೆ ಸಾಧ್ಯವಿಲ್ಲ. ನಮ್ಮೊಡನೆಯನ ಜ್ಞಾನವು ಎಲ್ಲವನ್ನೂ ಆವರಿಸಿಕೊಂಡಿದೆ. ನಾವು ಅಲ್ಲಾಹನಲ್ಲಿ ಸಂಪೂರ್ಣ ಭರವಸೆ ಇಟ್ಟಿರುವೆವು. ನಮ್ಮೊಡೆಯಾ, ನೀನೀಗ ನಮ್ಮ ಹಾಗೂ ನಮ್ಮ ಜನಾಂಗದ ನಡುವೆ ಸತ್ಯದೊಂದಿಗೆ ತೀರ್ಮಾನ ಮಾಡಿಬಿಡು. ನೀನು ಅತ್ಯುತ್ತಮ ತೀರ್ಮಾನ ಮಾಡುವವನಾಗಿರುವೆ
ಅಲ್-ಆರಾಫ್ಕುರಾನ್ ಸೂಚಿ
206ಆಯತ್
MeccanRevelation
86ಆಯತ್

ಅನುವಾದ — ಅಲ್-ಆರಾಫ್ 86

ಸೂರಾ ಆಯತ್ 86/206 — ಅಲ್-ಆರಾಫ್ الأعراف (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಅಲ್-ಆರಾಫ್ ಆಲಿಸಿ, ಅಲ್-ಆರಾಫ್ ಅನುವಾದ, ಅಲ್-ಆರಾಫ್ mp3, ಅಲ್-ಆರಾಫ್ pdf. ಆಯತ್ 84–88. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Tuesday, August 18, 2026

Don't forget us in your sincere prayers