ಅತ್-ತೌಬಾ · 112/129
ಅನುವಾದ ಉಚ್ಚಾರಣೆ — ಸೂರಾ ಅತ್-ತೌಬಾ
التَّائِبُونَ الْعَابِدُونَ الْحَامِدُونَ السَّائِحُونَ الرَّاكِعُونَ السَّاجِدُونَ الْآمِرُونَ بِالْمَعْرُوفِ وَالنَّاهُونَ عَنِ الْمُنكَرِ وَالْحَافِظُونَ لِحُدُودِ اللَّهِ ۗ وَبَشِّرِ الْمُؤْمِنِينَ ۝١١٢
At taaa`iboonal `aabidoonal haamidoonas saaa`ihoonar raaki`oonas saajidoonal aamiroona bilma`roofi wannaahoona `anil munkari walhaafizoona lihudoodil laah; wa bashshiril mu`mineen
📖 ಕನ್ನಡ ಅರ್ಥ
ಅವರು ಅಲ್ಲಾಹನೆಡೆಗೆ ಪಶ್ಚಾತ್ತಾಪ ಪಟ್ಟು ಮರಳುವವರು, ಆರಾಧನೆ ಮಾಡುವವರು, ಸ್ತುತಿಸುವವರು, ಉಪವಾಸವನ್ನಾಚರಿಸುವವರು, ತಲೆಬಾಗಿಸುವವರು ಸಾಷ್ಟಾಂಗ ಮಾಡುವವರು, ಒಳಿತುಗಳ ಶಿಕ್ಷಣ ನೀಡುವವರು, ಕೆಡಕು ವಿಚಾರಗಳಿಂದ ತಡೆಯುವವರು ಮತ್ತು ಅಲ್ಲಾಹನ ಮೇರೆಗಳ ಎಚ್ಚರ ವಹಿಸುವವರಾಗಿದ್ದಾರೆ. ಮತ್ತು ಇಂತಹ ಸತ್ಯವಿಶ್ವಾಸಿಗಳಿಗೆ ತಾವು ಶುಭವಾರ್ತೆಯನ್ನು ನೀಡಿರಿ.

🎧 ಆಲಿಸಿ


📜 ಆಯತ್ 110-114 — ಸೂರಾ ಅತ್-ತೌಬಾ

110لَا يَزَالُ بُنْيَانُهُمُ الَّذِي بَنَوْا رِيبَةً فِي قُلُوبِهِمْ إِلَّا أَن تَقَطَّعَ قُلُوبُهُمْ ۗ وَاللَّهُ عَلِيمٌ حَكِيمٌ
ಅವರ ಹೃದಯಗಳು ನುಚ್ಚು ನೂರಾಗುವವರೆಗೂ ಅವರು ನಿರ್ಮಿಸಿದಂತಹ ಈ ಕಟ್ಟಡವು (ಮಸೀದಿ) ಅವರ ಹೃದಯಗಳಲ್ಲಿ ಸದಾ ಸಂಶಯ ಮೂಲವಾಗಿ ಉಳಿಯುವುದು. ಮತ್ತು ಅಲ್ಲಾಹನು ಮಹಾಜ್ಞಾನಿಯೂ, ಯುಕ್ತಿವಂತನೂ ಆಗಿದ್ದಾನೆ.
111۞ إِنَّ اللَّهَ اشْتَرَىٰ مِنَ الْمُؤْمِنِينَ أَنفُسَهُمْ وَأَمْوَالَهُم بِأَنَّ لَهُمُ الْجَنَّةَ ۚ يُقَاتِلُونَ فِي سَبِيلِ اللَّهِ فَيَقْتُلُونَ وَيُقْتَلُونَ ۖ وَعْدًا عَلَيْهِ حَقًّا فِي التَّوْرَاةِ وَالْإِنجِيلِ وَالْقُرْآنِ ۚ وَمَنْ أَوْفَىٰ بِعَهْدِهِ مِنَ اللَّهِ ۚ فَاسْتَبْشِرُوا بِبَيْعِكُمُ الَّذِي بَايَعْتُم بِهِ ۚ وَذَٰلِكَ هُوَ الْفَوْزُ الْعَظِيمُ
ನಿಸ್ಸಂಶಯವಾಗಿಯೂ ಅಲ್ಲಾಹನು ಸತ್ಯವಿಶ್ವಾಸಿಗಳಿಂದ ಅವರ ಜೀವಗಳನ್ನೂ, ಅವರ ಸಂಪತ್ತುಗಳನ್ನೂ ಅವರಿಗೆ ಸ್ವರ್ಗದ ಬದಲಿಗೆ ಖರೀದಿಸಿದ್ದಾನೆ. ಅವರು ಅಲ್ಲಾಹನ ಮಾರ್ಗದಲ್ಲಿ ಯುದ್ಧ ಮಾಡುತ್ತಾರೆ. ಅದರಲ್ಲಿ ಅವರು ಕೊಲ್ಲುತ್ತಾರೆ ಮತ್ತು ಕೊಲ್ಲಲ್ಪಡುತ್ತಾರೆ. ಈ ಬಗ್ಗೆ ತೌರಾತ್‌ನಲ್ಲೂ, ಇಂಜೀಲ್‌ನಲ್ಲೂ ಮತ್ತು ಕುರ್‌ಆನ್‌ನಲ್ಲೂ ಸತ್ಯವಾದ ವಾಗ್ದಾನ ನೀಡಲಾಗಿದೆ ಮತ್ತು ಅಲ್ಲಾಹನಿಗಿಂತ ಹೆಚ್ಚು ತನ್ನ ವಾಗ್ದಾನವನ್ನು ಈಡೇರಿಸುವವನು ಇನ್ನಾರಿದ್ದಾನೆ? ಆದ್ದರಿಂದ ನೀವು ಆತನೊಂದಿಗೆ ಮಾಡಿದ ಈ ವ್ಯವಹಾರದ ವಿಚಾರವಾಗಿ ಸಂತೋಷಪಡಿರಿ ಮತ್ತು ಇದು ಮಹಾ ಯಶಸ್ಸಾಗಿದೆ.
112التَّائِبُونَ الْعَابِدُونَ الْحَامِدُونَ السَّائِحُونَ الرَّاكِعُونَ السَّاجِدُونَ الْآمِرُونَ بِالْمَعْرُوفِ وَالنَّاهُونَ عَنِ الْمُنكَرِ وَالْحَافِظُونَ لِحُدُودِ اللَّهِ ۗ وَبَشِّرِ الْمُؤْمِنِينَ
ಅವರು ಅಲ್ಲಾಹನೆಡೆಗೆ ಪಶ್ಚಾತ್ತಾಪ ಪಟ್ಟು ಮರಳುವವರು, ಆರಾಧನೆ ಮಾಡುವವರು, ಸ್ತುತಿಸುವವರು, ಉಪವಾಸವನ್ನಾಚರಿಸುವವರು, ತಲೆಬಾಗಿಸುವವರು ಸಾಷ್ಟಾಂಗ ಮಾಡುವವರು, ಒಳಿತುಗಳ ಶಿಕ್ಷಣ ನೀಡುವವರು, ಕೆಡಕು ವಿಚಾರಗಳಿಂದ ತಡೆಯುವವರು ಮತ್ತು ಅಲ್ಲಾಹನ ಮೇರೆಗಳ ಎಚ್ಚರ ವಹಿಸುವವರಾಗಿದ್ದಾರೆ. ಮತ್ತು ಇಂತಹ ಸತ್ಯವಿಶ್ವಾಸಿಗಳಿಗೆ ತಾವು ಶುಭವಾರ್ತೆಯನ್ನು ನೀಡಿರಿ.
113مَا كَانَ لِلنَّبِيِّ وَالَّذِينَ آمَنُوا أَن يَسْتَغْفِرُوا لِلْمُشْرِكِينَ وَلَوْ كَانُوا أُولِي قُرْبَىٰ مِن بَعْدِ مَا تَبَيَّنَ لَهُمْ أَنَّهُمْ أَصْحَابُ الْجَحِيمِ
ಬಹುದೇವಾರಾಧಕರು ನರಕಕ್ಕೆ ಅರ್ಹರೆಂಬ ವಿಷಯ ಸ್ಪಷ್ಟವಾದ ಬಳಿಕ ಅವರು ಆಪ್ತಬಂಧುಗಳೇ ಆಗಿದ್ದರು. ಅವರ ಕ್ಷಮೆಗಾಗಿ ಪ್ರಾರ್ಥಿಸುವುದು ಪೈಗಂಬರರಿಗೂ, ಸತ್ಯವಿಶ್ವಾಸಿಗಳಿಗೂ ಯುಕ್ತವಲ್ಲ.
114وَمَا كَانَ اسْتِغْفَارُ إِبْرَاهِيمَ لِأَبِيهِ إِلَّا عَن مَّوْعِدَةٍ وَعَدَهَا إِيَّاهُ فَلَمَّا تَبَيَّنَ لَهُ أَنَّهُ عَدُوٌّ لِّلَّهِ تَبَرَّأَ مِنْهُ ۚ إِنَّ إِبْرَاهِيمَ لَأَوَّاهٌ حَلِيمٌ
ಮತ್ತು ಇಬ್ರಾಹೀಮ್‌ರವರು ತನ್ನ ತಂದೆಗಾಗಿ ಕ್ಷಮೆ ಯಾಚಿಸಿದ್ದು ಕೇವಲ ಅವರು ಅವನೊಂದಿಗೆ ಮಾಡಿದ ವಾಗ್ದಾನದಿಂದಾಗಿತ್ತು. ಅನಂತರ ಅವರಿಗೆ ಅವರ ತಂದೆಯು ಅಲ್ಲಾಹನ ಶತ್ರುವೆಂದು ಸ್ಪಷ್ಟವಾದಾಗ ಅವರು ಆತನಿಂದ ಸಂಪೂರ್ಣವಾಗಿ ಬೇಸರದಿಂದ ಸರಿದುಬಿಟ್ಟರು. ಖಂಡಿತವಾಗಿಯೂ ಇಬ್ರಾಹೀಮರು ಅತ್ಯಂತ ಮೃದು ಹೃದಯಿಯೂ, ಸಹನಾಶೀಲರೂ ಆಗಿದ್ದರು.
ಅತ್-ತೌಬಾಕುರಾನ್ ಸೂಚಿ
129ಆಯತ್
MedinanRevelation
112ಆಯತ್

ಅನುವಾದ — ಅತ್-ತೌಬಾ 112

ಸೂರಾ ಅತ್-ತೌಬಾ ಆಯತ್ 112 - ಓದಿ, ಆಲಿಸಿ, ಅನುವಾದ, ಕನ್ನಡ : ಅವರು ಅಲ್ಲಾಹನೆಡೆಗೆ ಪಶ್ಚಾತ್ತಾಪ ಪಟ್ಟು ಮರಳುವವರು, ಆರಾಧನೆ ಮಾಡುವವರು, ಸ್ತುತಿಸುವವರು, ಉಪವಾಸವನ್ನಾಚರಿಸುವವರು, ತಲೆಬಾಗಿಸುವವರು…

ಸೂರಾ ಆಯತ್ 112/129 — ಸೂರಾ ಅತ್-ತೌಬಾ التوبة (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅತ್-ತೌಬಾ ಆಲಿಸಿ, ಸೂರಾ ಅತ್-ತೌಬಾ ಅನುವಾದ, ಸೂರಾ ಅತ್-ತೌಬಾ mp3, ಸೂರಾ ಅತ್-ತೌಬಾ pdf. ಆಯತ್ 110–114. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Monday, September 7, 2026

Don't forget us in your sincere prayers