ಅತ್-ತೌಬಾ · 39/129
ಅನುವಾದ ಉಚ್ಚಾರಣೆ — ಸೂರಾ ಅತ್-ತೌಬಾ
إِلَّا تَنفِرُوا يُعَذِّبْكُمْ عَذَابًا أَلِيمًا وَيَسْتَبْدِلْ قَوْمًا غَيْرَكُمْ وَلَا تَضُرُّوهُ شَيْئًا ۗ وَاللَّهُ عَلَىٰ كُلِّ شَيْءٍ قَدِيرٌ ۝٣٩
Illaa tanfiroo yu`az zibkum `azaaban aleemanw wa yastabdil qawman ghairakum wa laa tadurroohu shai`aa; wal laahu `alaa kulli shai`in Qadeer
📖 ಕನ್ನಡ ಅರ್ಥ
ನೀವು (ಅತ್ಯಾಚಾರದ ವಿರುದ್ಧ) ಹೋರಾಡದಿದ್ದರೆ ಅಲ್ಲಾಹನು ನಿಮಗೆ ವೇದನಾಜನಕ ಶಿಕ್ಷೆಯನ್ನು ನೀಡುವನು ಮತ್ತು ನಿಮ್ಮ ಹೊರತಾದ ಬೇರೆ ಜನಾಂಗವನ್ನು ನಿಮ್ಮ ಬದಲಿಗೆ ತರುವನು (ಅವರು ಆಜ್ಞಾನುಸರಣಿಗಳಾಗಿರುವರು). ನೀವು ಅಲ್ಲಾಹನಿಗೆ ಯಾವುದೇ ನಷ್ಟವನ್ನುಂಟು ಮಾಡಲಾರಿರಿ. ಅಲ್ಲಾಹನು ಸಕಲ ಸಂಗತಿಗಳ ಮೇಲೆ ಸಾಮರ್ಥ್ಯವುಳ್ಳವನಾಗಿದ್ದಾನೆ.

🎧 ಆಲಿಸಿ


📜 ಆಯತ್ 37-41 — ಸೂರಾ ಅತ್-ತೌಬಾ

37إِنَّمَا النَّسِيءُ زِيَادَةٌ فِي الْكُفْرِ ۖ يُضَلُّ بِهِ الَّذِينَ كَفَرُوا يُحِلُّونَهُ عَامًا وَيُحَرِّمُونَهُ عَامًا لِّيُوَاطِئُوا عِدَّةَ مَا حَرَّمَ اللَّهُ فَيُحِلُّوا مَا حَرَّمَ اللَّهُ ۚ زُيِّنَ لَهُمْ سُوءُ أَعْمَالِهِمْ ۗ وَاللَّهُ لَا يَهْدِي الْقَوْمَ الْكَافِرِينَ
ಆದರಣೀಯ ತಿಂಗಳುಗಳನ್ನು ಹಿಂದೆ ಮುಂದೆ ಮಾಡುವುದು ಸತ್ಯನಿಷೇಧದಲ್ಲಿ ಹೆಚ್ಚಳವಾಗಿದೆ. ತನ್ಮೂಲಕ ಸತ್ಯನಿಷೇಧಿಗಳು ಪಥ ಭ್ರಷ್ಟತೆಗೊಳಿಸಲೆಂದಾಗಿದೆ. ಮತ್ತು ಒಂದು ವರ್ಷ ಒಂದು ಆದರಣಿಯ ತಿಂಗಳನ್ನು ಧರ್ಮಸಮ್ಮತಗೊಳಿಸುತ್ತಾರೆ. ಮತ್ತೊಂದು ವರ್ಷ ಅದನ್ನು ನಿಷಿದ್ಧಗೊಳಿಸುತ್ತಾರೆ. ಅಲ್ಲಾಹನು ಪವಿತ್ರಗೊಳಿಸಿದ ಮಾಸವನ್ನು ಗಣನೆಯಲ್ಲಿ ಸರಿಹೊಂದಿಸಿ ಅನಂತರ ಅವರು ಅಲ್ಲಾಹನು ನಿಷಿದ್ಧಗೊಳಿಸಿದುದನ್ನು ಧರ್ಮ ಸಮ್ಮತಗೊಳಿಸಲೆಂದಾಗಿದೆ. ಅವರ ದುಷ್ಕರ್ಮಗಳನ್ನು ಅವರಿಗೆ ಮನಮೋಹಕಗೊಳಿಸಲಾಗಿದೆ. ಮತ್ತು ಸತ್ಯನಿಷೇಧಿ ಜನತೆಯನ್ನು ಅಲ್ಲಾಹನು ಸನ್ಮಾರ್ಗದಲ್ಲಿ ಮುನ್ನಡೆಸುವುದಿಲ್ಲ.
38يَا أَيُّهَا الَّذِينَ آمَنُوا مَا لَكُمْ إِذَا قِيلَ لَكُمُ انفِرُوا فِي سَبِيلِ اللَّهِ اثَّاقَلْتُمْ إِلَى الْأَرْضِ ۚ أَرَضِيتُم بِالْحَيَاةِ الدُّنْيَا مِنَ الْآخِرَةِ ۚ فَمَا مَتَاعُ الْحَيَاةِ الدُّنْيَا فِي الْآخِرَةِ إِلَّا قَلِيلٌ
ಓ ಸತ್ಯವಿಶ್ವಾಸಿಗಳೇ, ನಿಮಗೇನಾಗಿ ಬಿಟ್ಟಿದೆ? ‘ಅಲ್ಲಾಹನ ಮಾರ್ಗದಲ್ಲಿ (ಅನ್ಯಾಯ ವಿರುದ್ಧ) ಹೋರಡಿರಿ' ಎಂದು ನಿಮ್ಮೊಂದಿಗೆ ಹೇಳಲಾದರೆ ನೀವು ಭೂಮಿಗೆ ಅಂಟಿಕೊಳ್ಳುತ್ತೀರಿ! ಪರಲೋಕದ ಬದಲಿಗೆ ಐಹಿಕ ಜೀವನವನ್ನು ನೆಚ್ಚಿಕೊಂಡಿದ್ದೀರಾ? ತಿಳಿಯಿರಿ! ಐಹಿಕ ಜೀವನವು ಪರಲೋಕದ ಮುಂದೆ ಅತಿತುಚ್ಛವಾಗಿದೆ.
39إِلَّا تَنفِرُوا يُعَذِّبْكُمْ عَذَابًا أَلِيمًا وَيَسْتَبْدِلْ قَوْمًا غَيْرَكُمْ وَلَا تَضُرُّوهُ شَيْئًا ۗ وَاللَّهُ عَلَىٰ كُلِّ شَيْءٍ قَدِيرٌ
ನೀವು (ಅತ್ಯಾಚಾರದ ವಿರುದ್ಧ) ಹೋರಾಡದಿದ್ದರೆ ಅಲ್ಲಾಹನು ನಿಮಗೆ ವೇದನಾಜನಕ ಶಿಕ್ಷೆಯನ್ನು ನೀಡುವನು ಮತ್ತು ನಿಮ್ಮ ಹೊರತಾದ ಬೇರೆ ಜನಾಂಗವನ್ನು ನಿಮ್ಮ ಬದಲಿಗೆ ತರುವನು (ಅವರು ಆಜ್ಞಾನುಸರಣಿಗಳಾಗಿರುವರು). ನೀವು ಅಲ್ಲಾಹನಿಗೆ ಯಾವುದೇ ನಷ್ಟವನ್ನುಂಟು ಮಾಡಲಾರಿರಿ. ಅಲ್ಲಾಹನು ಸಕಲ ಸಂಗತಿಗಳ ಮೇಲೆ ಸಾಮರ್ಥ್ಯವುಳ್ಳವನಾಗಿದ್ದಾನೆ.
40إِلَّا تَنصُرُوهُ فَقَدْ نَصَرَهُ اللَّهُ إِذْ أَخْرَجَهُ الَّذِينَ كَفَرُوا ثَانِيَ اثْنَيْنِ إِذْ هُمَا فِي الْغَارِ إِذْ يَقُولُ لِصَاحِبِهِ لَا تَحْزَنْ إِنَّ اللَّهَ مَعَنَا ۖ فَأَنزَلَ اللَّهُ سَكِينَتَهُ عَلَيْهِ وَأَيَّدَهُ بِجُنُودٍ لَّمْ تَرَوْهَا وَجَعَلَ كَلِمَةَ الَّذِينَ كَفَرُوا السُّفْلَىٰ ۗ وَكَلِمَةُ اللَّهِ هِيَ الْعُلْيَا ۗ وَاللَّهُ عَزِيزٌ حَكِيمٌ
ನೀವು ಪೈಗಂಬರರಿಗೆ ಸಹಾಯ ಮಾಡದಿದ್ದರೆ ತಿಳಿದುಕೊಳ್ಳಿರಿ: ಅಲ್ಲಾಹನು ಅವರಿಗೆ ಸತ್ಯನಿಷೇಧಿಗಳು ಅವರನ್ನು (ಮಕ್ಕಾದಿಂದ) ಗಡಿಪಾರು ಮಾಡಿದ ಸಂದರ್ಭದಲ್ಲಿ ಸಹಾಯ ಮಾಡಿದ್ದನು, ಅವರು (ವಲಸೆ ಹೋಗುವ) ಆ ಇಬ್ಬರಲ್ಲಿ ಒಬ್ಬರಾಗಿದ್ದರು ಅವರಿಬ್ಬರೂ (ಮುಹಮ್ಮದ್ ಮತ್ತು ಅಬೂಬಕ್ಕರ್) ಗುಹೆಯಲ್ಲಿದ್ದ ಸಂದರ್ಭದಲ್ಲಿ ಅವರು ತನ್ನ ಸಂಗಡಿಗರೊAದಿಗೆ (ಅಬೂಬಕ್ಕರ್‌ರವರಿಗೆ) 'ವ್ಯಥೆಪಡಬೇಡ, ಖಂಡಿತ ಅಲ್ಲಾಹನು ನಮ್ಮ ಜೊತೆಗಿದ್ದಾನೆ' ಎಂದು ಹೇಳಿದರು. ಹೀಗೆ ಅಲ್ಲಾಹನು ಅವರ ಮೇಲೆ ತನ್ನ ಕಡೆಯಿಂದ ಶಾಂತಿಯನ್ನು ಇಳಿಸಿದನು. ನೀವು ಕಾಣದಂತಹ (ಮಲಕ್‌ಗಳ) ಸೈನ್ಯಗಳೊಂದಿಗೆ ಅವರ ಸಹಾಯ ಮಾಡಿದನು. ಸತ್ಯನಿಷೇಧಿಗಳ ಮಾತನ್ನು ನಿಂದ್ಯಗೊಳಿಸಿದನು ಮತ್ತು ಅಲ್ಲಾಹನ ವಚನವೇ ಅತ್ಯುನ್ನತವೂ, ಪ್ರಬಲವೂ ಅಗಿದೆ. ಅಲ್ಲಾಹನು ಪ್ರತಾಪಶಾಲಿಯೂ, ಯುಕ್ತಿವಂತನೂ ಆಗಿದ್ದಾನೆ.
41انفِرُوا خِفَافًا وَثِقَالًا وَجَاهِدُوا بِأَمْوَالِكُمْ وَأَنفُسِكُمْ فِي سَبِيلِ اللَّهِ ۚ ذَٰلِكُمْ خَيْرٌ لَّكُمْ إِن كُنتُمْ تَعْلَمُونَ
ನೀವು (ಸತ್ಯವಿಶ್ವಾಸಿಗಳೇ) ಅನುಕೂಲ ಸ್ಥಿತಿಯಲ್ಲಿದ್ದರೂ, ಅನಾನುಕೂಲ ಸ್ಥಿತಿಯಲ್ಲಿದ್ದರೂ ಹೊರಡಿರಿ ಮತ್ತು ಅಲ್ಲಾಹನ ಮಾರ್ಗದಲ್ಲಿ ನಿಮ್ಮ ತನು ಮನ ಧನಗಳಿಂದ ಸತ್ಯಕ್ಕಾಗಿ ಹೋರಾಡಿರಿ. ಇದುವೇ ನಿಮಗೆ ಉತ್ತಮವಾಗಿರುತ್ತದೆ. ನೀವು ಅರಿಯುವವರಾಗಿದ್ದರೆ.
ಅತ್-ತೌಬಾಕುರಾನ್ ಸೂಚಿ
129ಆಯತ್
MedinanRevelation
39ಆಯತ್

ಅನುವಾದ — ಅತ್-ತೌಬಾ 39

ಸೂರಾ ಅತ್-ತೌಬಾ ಆಯತ್ 39 - ಓದಿ, ಆಲಿಸಿ, ಅನುವಾದ, ಕನ್ನಡ : ನೀವು (ಅತ್ಯಾಚಾರದ ವಿರುದ್ಧ) ಹೋರಾಡದಿದ್ದರೆ ಅಲ್ಲಾಹನು ನಿಮಗೆ ವೇದನಾಜನಕ ಶಿಕ್ಷೆಯನ್ನು ನೀಡುವನು ಮತ್ತು…

ಸೂರಾ ಆಯತ್ 39/129 — ಸೂರಾ ಅತ್-ತೌಬಾ التوبة (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅತ್-ತೌಬಾ ಆಲಿಸಿ, ಸೂರಾ ಅತ್-ತೌಬಾ ಅನುವಾದ, ಸೂರಾ ಅತ್-ತೌಬಾ mp3, ಸೂರಾ ಅತ್-ತೌಬಾ pdf. ಆಯತ್ 37–41. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Tuesday, September 8, 2026

Don't forget us in your sincere prayers