ಅತ್-ತೌಬಾ · 44/129
ಅನುವಾದ ಉಚ್ಚಾರಣೆ — ಸೂರಾ ಅತ್-ತೌಬಾ
لَا يَسْتَأْذِنُكَ الَّذِينَ يُؤْمِنُونَ بِاللَّهِ وَالْيَوْمِ الْآخِرِ أَن يُجَاهِدُوا بِأَمْوَالِهِمْ وَأَنفُسِهِمْ ۗ وَاللَّهُ عَلِيمٌ بِالْمُتَّقِينَ ۝٤٤
Laa yastaazinukal lazeena yu`minoona billaahi wal Yawmil Aakhiri ai yujaa hidoo bi amwaalihim wa anfusihim; wallaahu `aleemum bilmut taqeen
📖 ಕನ್ನಡ ಅರ್ಥ
ಅಲ್ಲಾಹನಲ್ಲೂ, ಅಂತ್ಯದಿನದಲ್ಲೂ ವಿಶ್ವಾಸವಿಡುವವರು ತಮ್ಮ ತನು, ಮನ, ಧನಗಳಿಂದ ಹೋರಾಟ ಮಾಡದಿರಲು ನಿಮ್ಮೊಂದಿಗೆ ಅನುಮತಿಯನ್ನು ಕೇಳಲಾರರು ಮತ್ತು ಅಲ್ಲಾಹನು ಭಯಭಕ್ತಿ ಪಾಲಿಸುವವರನ್ನು ಚೆನ್ನಾಗಿ ಅರಿತಿದ್ದಾನೆ.

🎧 ಆಲಿಸಿ


📜 ಆಯತ್ 42-46 — ಸೂರಾ ಅತ್-ತೌಬಾ

42لَوْ كَانَ عَرَضًا قَرِيبًا وَسَفَرًا قَاصِدًا لَّاتَّبَعُوكَ وَلَٰكِن بَعُدَتْ عَلَيْهِمُ الشُّقَّةُ ۚ وَسَيَحْلِفُونَ بِاللَّهِ لَوِ اسْتَطَعْنَا لَخَرَجْنَا مَعَكُمْ يُهْلِكُونَ أَنفُسَهُمْ وَاللَّهُ يَعْلَمُ إِنَّهُمْ لَكَاذِبُونَ
ಇನ್ನು ಶೀಘ್ರವೇ ಲಾಭ ಸಿಗುತ್ತಿದ್ದರೆ ಮತ್ತು ಪ್ರಯಾಣವು ಸುಗಮವಾಗಿರುತ್ತಿದ್ದರೆ. ಖಂಡಿತವಾಗಿಯೂ ಕಪಟಿಗಳು ನಿಮ್ಮನ್ನು ಅನುಸರಿಸುತ್ತಿದ್ದರು. ಆದರೆ ಅವರ ಮೇಲೆ ಸುದೀರ್ಘತೆಯು ಪ್ರಯಾಸಕರವಾಗಿ ಬಿಟ್ಟಿತು. ಅವರು 'ನಮ್ಮಲ್ಲಿ ಸಾಮರ್ಥ್ಯವಿರುತ್ತಿದ್ದರೆ ನಾವು ಖಂಡಿತವಾಗಿಯು ನಿಮ್ಮ ಜೊತೆ ಹೊರಟು ಬರುತ್ತಿದ್ದೆವು ಎಂದು ಅಲ್ಲಾಹನ ಮೇಲೆ ಆಣೆ ಹಾಕಿ ನೆಪ ಹೂಡುತ್ತಾ (ದುರ್ಬಲರೊಂದಿಗೆ)ಹೇಳುತ್ತಾರೆ. ಅವರು ಸ್ವತಃ ತಮ್ಮನ್ನು ನಾಶಕ್ಕೀಡು ಮಾಡುತ್ತಿದ್ದಾರೆ. ಖಂಡಿತವಾಗಿಯು ಅವರು ಸುಳ್ಳರೆಂದು ಅಲ್ಲಾಹನಿಗೆ ಚೆನ್ನಾಗಿ ತಿಳಿದಿದೆ.
43عَفَا اللَّهُ عَنكَ لِمَ أَذِنتَ لَهُمْ حَتَّىٰ يَتَبَيَّنَ لَكَ الَّذِينَ صَدَقُوا وَتَعْلَمَ الْكَاذِبِينَ
ಓ ಪೈಗಂಬರರೇ ಅಲ್ಲಾಹನು ನಿಮ್ಮನ್ನು ಮನ್ನಿಸಲಿ. ನಿಮ್ಮ ಮುಂದೆ ಸತ್ಯಸಂಧರು ಯಾರೆಂದು ಪ್ರಕಟವಾಗುವುದಕ್ಕೆ ಮೊದಲೇ ಮತ್ತು ನೀವು ಸುಳ್ಳರನ್ನು ಗುರುತಿಸಿಕೊಳ್ಳುವ ಮೊದಲೇ ಅವರಿಗೇಕೆ (ಕಪಟಿಗಳಿಗೆ)ಅನುಮತಿ ನೀಡಿದಿರಿ?
44لَا يَسْتَأْذِنُكَ الَّذِينَ يُؤْمِنُونَ بِاللَّهِ وَالْيَوْمِ الْآخِرِ أَن يُجَاهِدُوا بِأَمْوَالِهِمْ وَأَنفُسِهِمْ ۗ وَاللَّهُ عَلِيمٌ بِالْمُتَّقِينَ
ಅಲ್ಲಾಹನಲ್ಲೂ, ಅಂತ್ಯದಿನದಲ್ಲೂ ವಿಶ್ವಾಸವಿಡುವವರು ತಮ್ಮ ತನು, ಮನ, ಧನಗಳಿಂದ ಹೋರಾಟ ಮಾಡದಿರಲು ನಿಮ್ಮೊಂದಿಗೆ ಅನುಮತಿಯನ್ನು ಕೇಳಲಾರರು ಮತ್ತು ಅಲ್ಲಾಹನು ಭಯಭಕ್ತಿ ಪಾಲಿಸುವವರನ್ನು ಚೆನ್ನಾಗಿ ಅರಿತಿದ್ದಾನೆ.
45إِنَّمَا يَسْتَأْذِنُكَ الَّذِينَ لَا يُؤْمِنُونَ بِاللَّهِ وَالْيَوْمِ الْآخِرِ وَارْتَابَتْ قُلُوبُهُمْ فَهُمْ فِي رَيْبِهِمْ يَتَرَدَّدُونَ
ನಿಮ್ಮೊಂದಿಗೆ ಅನುಮತಿಯನ್ನು ಕೇಳುವವರು ಅಲ್ಲಾಹನಲ್ಲಾಗಲೀ, ಅಂತ್ಯದಿನದಲ್ಲಾಗಲೀ ವಿಶ್ವಾಸವಿಡದವರು ಮಾತ್ರರಾಗಿರುವರು. ಅವರ ಹೃದಯಗಳು ಸಂಶಯಗ್ರಸ್ತವಾಗಿವೆ ಮತ್ತು ಅವರು ತಮ್ಮ ಸಂದೇಹದಲ್ಲೇ ಅಲೆದಾಡುತ್ತಿದ್ದಾರೆ.
46۞ وَلَوْ أَرَادُوا الْخُرُوجَ لَأَعَدُّوا لَهُ عُدَّةً وَلَٰكِن كَرِهَ اللَّهُ انبِعَاثَهُمْ فَثَبَّطَهُمْ وَقِيلَ اقْعُدُوا مَعَ الْقَاعِدِينَ
ಇನ್ನು ಅವರ ಉದ್ದೇಶವು ಸಮರಕ್ಕಾಗಿ ಹೊರಡುವುದಾಗಿದ್ದರೆ ಅವರು ಅದಕ್ಕೆ ಬೇಕಾದ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದ್ದರು. ಆದರೆ ಅಲ್ಲಾಹನಿಗೆ ಅವರು ಹೊರಡುವುದು ಇಷ್ಟವಿರಲಿಲ್ಲ. ಆದ್ದರಿಂದ ಅವನು ಅವರನ್ನು (ಅವರ ಕಾಪಟ್ಯದ ನಿಮಿತ್ತ) ಸೋಮಾರಿಗಳನ್ನಾಗಿಸಿ ತಡೆದುಬಿಟ್ಟನು ಮತ್ತು ಹೇಳಲಾಯಿತು: ನೀವು ಕುಳಿತುಬಿಟ್ಟವರೊಂದಿಗೆ (ದುರ್ಬಲರೊಂದಿಗೆ) ಕುಳಿತು ಬಿಡಿರಿ.
ಅತ್-ತೌಬಾಕುರಾನ್ ಸೂಚಿ
129ಆಯತ್
MedinanRevelation
44ಆಯತ್

ಅನುವಾದ — ಅತ್-ತೌಬಾ 44

ಸೂರಾ ಅತ್-ತೌಬಾ ಆಯತ್ 44 - ಓದಿ, ಆಲಿಸಿ, ಅನುವಾದ, ಕನ್ನಡ : ಅಲ್ಲಾಹನಲ್ಲೂ, ಅಂತ್ಯದಿನದಲ್ಲೂ ವಿಶ್ವಾಸವಿಡುವವರು ತಮ್ಮ ತನು, ಮನ, ಧನಗಳಿಂದ ಹೋರಾಟ ಮಾಡದಿರಲು ನಿಮ್ಮೊಂದಿಗೆ…

ಸೂರಾ ಆಯತ್ 44/129 — ಸೂರಾ ಅತ್-ತೌಬಾ التوبة (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅತ್-ತೌಬಾ ಆಲಿಸಿ, ಸೂರಾ ಅತ್-ತೌಬಾ ಅನುವಾದ, ಸೂರಾ ಅತ್-ತೌಬಾ mp3, ಸೂರಾ ಅತ್-ತೌಬಾ pdf. ಆಯತ್ 42–46. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Monday, September 7, 2026

Don't forget us in your sincere prayers