📖 0/604 ಓದಿದ ಪುಟಗಳು
📄 19
ಅಲ್-ಬಕರಾ

ಅಲ್-ಬಕರಾ

2:120
وَلَن تَرۡضَىٰ عَنكَ ٱلۡيَهُودُ وَلَا ٱلنَّصَٰرَىٰ حَتَّىٰ تَتَّبِعَ مِلَّتَهُمۡۗ قُلۡ إِنَّ هُدَى ٱللَّهِ هُوَ ٱلۡهُدَىٰۗ وَلَئِنِ ٱتَّبَعۡتَ أَهۡوَآءَهُم بَعۡدَ ٱلَّذِي جَآءَكَ مِنَ ٱلۡعِلۡمِ مَا لَكَ مِنَ ٱللَّهِ مِن وَلِيٍّ وَلَا نَصِيرٍ ١٢٠
ಇನ್ನು, ಯಹೂದಿಗಳಾಗಲಿ, ಕ್ರೈಸ್ತರಾಗಲಿ, ನೀವು ಅವರ ಮಾರ್ಗವನ್ನು ಅನುಸರಿಸುವ ತನಕವೂ ಅವರು ನಿಮ್ಮಿಂದ ಸಂತುಷ್ಟರಾಗಲಾರರು. ‘‘ಅಲ್ಲಾಹನ ಮಾರ್ಗದರ್ಶನವೇ ನೈಜ ಮಾರ್ಗದರ್ಶನವಾಗಿದೆ’’ ಎಂದು (ಅವರೊಡನೆ) ಹೇಳಿರಿ. ಒಂದು ವೇಳೆ ನಿಮ್ಮ ಬಳಿಗೆ (ಸತ್ಯದ) ಜ್ಞಾನವು ಬಂದ ಬಳಿಕವೂ ನೀವು ಆ ಜನರ ಅಪೇಕ್ಷೆಗಳನ್ನು ಅನುಸರಿಸಿದರೆ, ಅಲ್ಲಾಹನೆದುರು ನಿಮಗೆ ಯಾವ ಆಪ್ತರೂ ಸಹಾಯಕರೂ ಇರಲಾರರು
2:121
ٱلَّذِينَ ءَاتَيۡنَٰهُمُ ٱلۡكِتَٰبَ يَتۡلُونَهُۥ حَقَّ تِلَاوَتِهِۦٓ أُوْلَٰٓئِكَ يُؤۡمِنُونَ بِهِۦۗ وَمَن يَكۡفُرۡ بِهِۦ فَأُوْلَٰٓئِكَ هُمُ ٱلۡخَٰسِرُونَ ١٢١
ನಾವು ಯಾರಿಗೆ ಗ್ರಂಥವನ್ನು ನೀಡಿರುವೆವೋ ಅವರು ಅದನ್ನು ಓದಬೇಕಾದ ರೀತಿಯಲ್ಲಿ ಓದುತ್ತಾರೆ (ಮತ್ತು) ಅವರು ಅದನ್ನು ನಂಬುತ್ತಾರೆ. ಇನ್ನು, ಅದನ್ನು ಯಾರು ತಿರಸ್ಕರಿಸುವರೋ ಅವರೇ ನಿಜವಾಗಿ ನಷ್ಟಕ್ಕೊಳಗಾಗುವವರು
2:122
يَٰبَنِيٓ إِسۡرَٰٓءِيلَ ٱذۡكُرُواْ نِعۡمَتِيَ ٱلَّتِيٓ أَنۡعَمۡتُ عَلَيۡكُمۡ وَأَنِّي فَضَّلۡتُكُمۡ عَلَى ٱلۡعَٰلَمِينَ ١٢٢
ಇಸ್ರಾಈಲರ ಸಂತತಿಗಳೇ, ನಾನು ನಿಮಗೆ ನೀಡಿದ ಅನುಗ್ರಹವನ್ನು ಮತ್ತು ಜಗತ್ತಿನ ಎಲ್ಲರೆದುರು ನಿಮಗೆ ಶ್ರೇಷ್ಠತೆ ನೀಡಿದ್ದನ್ನು ಸ್ಮರಿಸಿರಿ
2:123
وَٱتَّقُواْ يَوۡمًا لَّا تَجۡزِي نَفۡسٌ عَن نَّفۡسٍ شَيۡـًٔا وَلَا يُقۡبَلُ مِنۡهَا عَدۡلٌ وَلَا تَنفَعُهَا شَفَٰعَةٌ وَلَا هُمۡ يُنصَرُونَ ١٢٣
ಮತ್ತು ಯಾರಿಗೂ ಯಾರಿಂದಲೂ ಯಾವುದೇ ಪ್ರಯೋಜನವಾಗದ ಹಾಗೂ ಯಾರಿಂದಲೂ ಪರಿಹಾರ ಧನ ಸ್ವೀಕರಿಸಲಾಗದ, ಯಾರಿಗೂ ಯಾರದೇ ಶಿಫಾರಸ್ಸಿನಿಂದ ಲಾಭವಾಗದ ಮತ್ತು ಅವರಿಗೆ (ಅಪರಾಧಿಗಳಿಗೆ) ಯಾವುದೇ ಸಹಾಯ ಸಿಗಲಾರದ ಆ ದಿನದ ಬಗ್ಗೆ ಎಚ್ಚರವಾಗಿರಿ
2:124
۞ وَإِذِ ٱبۡتَلَىٰٓ إِبۡرَٰهِـۧمَ رَبُّهُۥ بِكَلِمَٰتٍ فَأَتَمَّهُنَّۖ قَالَ إِنِّي جَاعِلُكَ لِلنَّاسِ إِمَامًاۖ قَالَ وَمِن ذُرِّيَّتِيۖ قَالَ لَا يَنَالُ عَهۡدِي ٱلظَّٰلِمِينَ ١٢٤
ಮತ್ತು ಇಬ್ರಾಹೀಮರನ್ನು ಅವರ ಒಡೆಯನು (ಅಲ್ಲಾಹನು) ಕೆಲವು ಆದೇಶಗಳ ಮೂಲಕ ಪರೀಕ್ಷೆಗೆ ಒಳಪಡಿಸಿದಾಗ, ಅವರು ಅವುಗಳನ್ನು ಪೂರ್ಣವಾಗಿ ಪಾಲಿಸಿದರು. (ಅಲ್ಲಾಹನು ಅವರೊಡನೆ) ‘‘ನಾನು ನಿಮ್ಮನ್ನು ಎಲ್ಲ ಮಾನವರ ನಾಯಕನಾಗಿ ನೇಮಿಸಲಿದ್ದೇನೆ’’ ಎಂದಾಗ ಅವರು ‘‘ಮತ್ತು ನನ್ನ ಸಂತತಿಯವರನ್ನೂ (ನಾಯಕರಾಗಿಸುವೆಯಾ?)’’ ಎಂದು ಕೇಳಿದರು. ಆಗ ಅವನು (ಅಲ್ಲಾಹನು) ‘‘ನನ್ನ ವಾಗ್ದಾನವು ಅಕ್ರಮಿಗಳಿಗೆ ಅನ್ವಯವಾಗುವುದಿಲ್ಲ’’ ಎಂದನು
2:125
وَإِذۡ جَعَلۡنَا ٱلۡبَيۡتَ مَثَابَةً لِّلنَّاسِ وَأَمۡنًا وَٱتَّخِذُواْ مِن مَّقَامِ إِبۡرَٰهِـۧمَ مُصَلًّىۖ وَعَهِدۡنَآ إِلَىٰٓ إِبۡرَٰهِـۧمَ وَإِسۡمَٰعِيلَ أَن طَهِّرَا بَيۡتِيَ لِلطَّآئِفِينَ وَٱلۡعَٰكِفِينَ وَٱلرُّكَّعِ ٱلسُّجُودِ ١٢٥
ನಾವು ಆ ಭವನ (ಕಅಬ)ವನ್ನು ಜನರಿಗಾಗಿ, ಪರಸ್ಪರ ಒಟ್ಟು ಸೇರುವ ಹಾಗೂ ಸುರಕ್ಷಿತ ಸ್ಥಳವಾಗಿ ಮಾಡಿದೆವು. ಇಬ್ರಾಹೀಮರು ನಿಂತ ಸ್ಥಾನವನ್ನು ನೀವು ನಮಾಝಿನ ಸ್ಥಳವಾಗಿ ಬಳಸಿರಿ (ಎಂದು ನಾವು ಆದೇಶಿಸಿದ್ದೆವು). ಮತ್ತು ತವಾಫ್ (ಪ್ರದಕ್ಷಿಣೆ) ಮಾಡುವವರು, ‘ಇಅ್ತಿಕಾಫ್’ ಮಾಡುವವರು, ಬಾಗುವವರು ಹಾಗೂ ಸಾಷ್ಟಾಂಗವೆರಗುವವರಿಗಾಗಿ ನನ್ನ ಭವನವನ್ನು ನಿರ್ಮಲವಾಗಿಡಬೇಕೆಂದು ನಾವು ಇಬ್ರಾಹೀಮ್ ಮತ್ತು ಇಸ್ಮಾಈಲರಿಗೆ ಆದೇಶ ನೀಡಿದ್ದೆವು
2:126
وَإِذۡ قَالَ إِبۡرَٰهِـۧمُ رَبِّ ٱجۡعَلۡ هَٰذَا بَلَدًا ءَامِنًا وَٱرۡزُقۡ أَهۡلَهُۥ مِنَ ٱلثَّمَرَٰتِ مَنۡ ءَامَنَ مِنۡهُم بِٱللَّهِ وَٱلۡيَوۡمِ ٱلۡأٓخِرِۚ قَالَ وَمَن كَفَرَ فَأُمَتِّعُهُۥ قَلِيلًا ثُمَّ أَضۡطَرُّهُۥٓ إِلَىٰ عَذَابِ ٱلنَّارِۖ وَبِئۡسَ ٱلۡمَصِيرُ ١٢٦
ಮತ್ತು ಇಬ್ರಾಹೀಮರು ‘‘ನನ್ನೊಡೆಯಾ! ಈ ನಗರವನ್ನು ಶಾಂತಿಧಾಮವಾಗಿ ಮಾಡು ಮತ್ತು ಇಲ್ಲಿಯವರ ಪೈಕಿ ಅಲ್ಲಾಹನಲ್ಲಿ ಹಾಗೂ ಪರಲೋಕದಲ್ಲಿ ನಂಬಿಕೆ ಇಟ್ಟಿರುವವರಿಗೆ, ವಿವಿಧ ಫಲಗಳನ್ನು ಆಹಾರವಾಗಿ ನೀಡು’’ ಎಂದು ಪ್ರಾರ್ಥಿಸಿದಾಗ, ಅವನು (ಅಲ್ಲಾಹನು) ಹೇಳಿದನು; ‘‘ಅಲ್ಪ ಕಾಲಕ್ಕಾಗಿ (ಇಹಲೋಕದ ಮಟ್ಟಿಗೆ) ನಾನು ಅದನ್ನೆಲ್ಲಾ ಧಿಕ್ಕಾರಿಗೂ ಕೊಡುವೆನು. ಆದರೆ ಆ ಬಳಿಕ ಆತನನ್ನು ಎಳೆದೊಯ್ದು ನರಕದ ಶಿಕ್ಷೆಗೆ ತುತ್ತಾಗಿಸುವೆನು. ಅದು ತೀರಾ ಕೆಟ್ಟ ನೆಲೆಯಾಗಿದೆ.’’
العربيةEnglishBahasa IndonesiaTürkçeРусскийفارسیFrançaisاردوবাংলাDeutschEspañol中文हिन्दीPortuguêsItalianoภาษาไทยPolskiNederlandsShqipKiswahiliO'zbekதமிழ்MelayuBosanskiSoomaaliAzərbaycanکوردی한국어日本語SvenskaDanskNorskپښتوമലയാളംසිංහලTamazightHausaአማርኛБългарскиТоҷикӣҚазақшаFilipinoسنڌيYorùbáFulfuldeТатарчаئۇيغۇرچەКыргызчаਪੰਜਾਬੀJawaతెలుగుမြန်မာગુજરાતીOromoमराठीTiếng ViệtMalagasyНохчийнWolofދިވެހިಕನ್ನಡУкраїнськаΕλληνικάქართულიខ្មែរدریQafar afMaranaoनेपाली
ಪವಿತ್ರ ಕುರಾನ್
Wednesday, August 19, 2026
Don't forget us in your sincere prayers







