📖 0/604 ಓದಿದ ಪುಟಗಳು
📄 403
وَيَسۡتَعۡجِلُونَكَ بِٱلۡعَذَابِ وَلَوۡلَآ أَجَلٌ مُّسَمًّى لَّجَآءَهُمُ ٱلۡعَذَابُۚ وَلَيَأۡتِيَنَّهُم بَغۡتَةً وَهُمۡ لَا يَشۡعُرُونَ ٥٣ يَسۡتَعۡجِلُونَكَ بِٱلۡعَذَابِ وَإِنَّ جَهَنَّمَ لَمُحِيطَةُۢ بِٱلۡكَٰفِرِينَ ٥٤ يَوۡمَ يَغۡشَىٰهُمُ ٱلۡعَذَابُ مِن فَوۡقِهِمۡ وَمِن تَحۡتِ أَرۡجُلِهِمۡ وَيَقُولُ ذُوقُواْ مَا كُنتُمۡ تَعۡمَلُونَ ٥٥ يَٰعِبَادِيَ ٱلَّذِينَ ءَامَنُوٓاْ إِنَّ أَرۡضِي وَٰسِعَةٌ فَإِيَّٰيَ فَٱعۡبُدُونِ ٥٦ كُلُّ نَفۡسٍ ذَآئِقَةُ ٱلۡمَوۡتِۖ ثُمَّ إِلَيۡنَا تُرۡجَعُونَ ٥٧ وَٱلَّذِينَ ءَامَنُواْ وَعَمِلُواْ ٱلصَّٰلِحَٰتِ لَنُبَوِّئَنَّهُم مِّنَ ٱلۡجَنَّةِ غُرَفًا تَجۡرِي مِن تَحۡتِهَا ٱلۡأَنۡهَٰرُ خَٰلِدِينَ فِيهَاۚ نِعۡمَ أَجۡرُ ٱلۡعَٰمِلِينَ ٥٨ ٱلَّذِينَ صَبَرُواْ وَعَلَىٰ رَبِّهِمۡ يَتَوَكَّلُونَ ٥٩ وَكَأَيِّن مِّن دَآبَّةٍ لَّا تَحۡمِلُ رِزۡقَهَا ٱللَّهُ يَرۡزُقُهَا وَإِيَّاكُمۡۚ وَهُوَ ٱلسَّمِيعُ ٱلۡعَلِيمُ ٦٠ وَلَئِن سَأَلۡتَهُم مَّنۡ خَلَقَ ٱلسَّمَٰوَٰتِ وَٱلۡأَرۡضَ وَسَخَّرَ ٱلشَّمۡسَ وَٱلۡقَمَرَ لَيَقُولُنَّ ٱللَّهُۖ فَأَنَّىٰ يُؤۡفَكُونَ ٦١ ٱللَّهُ يَبۡسُطُ ٱلرِّزۡقَ لِمَن يَشَآءُ مِنۡ عِبَادِهِۦ وَيَقۡدِرُ لَهُۥٓۚ إِنَّ ٱللَّهَ بِكُلِّ شَيۡءٍ عَلِيمٌ ٦٢ وَلَئِن سَأَلۡتَهُم مَّن نَّزَّلَ مِنَ ٱلسَّمَآءِ مَآءً فَأَحۡيَا بِهِ ٱلۡأَرۡضَ مِنۢ بَعۡدِ مَوۡتِهَا لَيَقُولُنَّ ٱللَّهُۚ قُلِ ٱلۡحَمۡدُ لِلَّهِۚ بَلۡ أَكۡثَرُهُمۡ لَا يَعۡقِلُونَ ٦٣
29:53
وَيَسۡتَعۡجِلُونَكَ بِٱلۡعَذَابِ وَلَوۡلَآ أَجَلٌ مُّسَمًّى لَّجَآءَهُمُ ٱلۡعَذَابُۚ وَلَيَأۡتِيَنَّهُم بَغۡتَةً وَهُمۡ لَا يَشۡعُرُونَ ٥٣
ಇವರು ನಿಮ್ಮಿಂದ ಯಾತನೆಗೆ ಆತುರ ಪಡುತ್ತಿದ್ದಾರೆ ನಿಶ್ಚಿತ ಕಾಲಾವಧಿಯೇನಾದರೂ ಇಲ್ಲದಿರುತ್ತಿದ್ದರೆ ಕೂಡಲೇ ಅವರ ಬಳಿಗೆ ಯಾತನೆಯು ಬಂದು ಬಿಡುತ್ತಿತ್ತು. ಖಂಡಿತವಾಗಿಯೂ ಅದು ಅವರಲ್ಲಿಗೆ ಅವರು ಊಹಿಸದಿರುವ ಸ್ಥಿತಿಯಲ್ಲೇ ಹಠಾತ್ತನೆ ಬಂದು ಬಿಡುವುದು.
29:54
يَسۡتَعۡجِلُونَكَ بِٱلۡعَذَابِ وَإِنَّ جَهَنَّمَ لَمُحِيطَةُۢ بِٱلۡكَٰفِرِينَ ٥٤
ಇವರು ನಿಮ್ಮಿಂದ ಯಾತನೆಗೆ ಆತುರ ಪಟ್ಟುಕೊಳ್ಳುತ್ತಿದ್ದಾರೆ ನಿಶ್ಚಯವಾಗಿಯು ನರಕವು ಸತ್ಯನಿಷೇಧಿಗಳನ್ನು ಸುತ್ತುವರಿದಿದೆ.
29:55
يَوۡمَ يَغۡشَىٰهُمُ ٱلۡعَذَابُ مِن فَوۡقِهِمۡ وَمِن تَحۡتِ أَرۡجُلِهِمۡ وَيَقُولُ ذُوقُواْ مَا كُنتُمۡ تَعۡمَلُونَ ٥٥
ಅವರ ಮೇಲ್ಗಡೆಯಿಂದಲೂ ಅವರ ಕಾಲಡಿಯಿಂದಲೂ ಯಾತನೆಯು ಅವರನ್ನು ಆವರಿಸುವ ದಿನ, ಅಲ್ಲಾಹನು ಹೇಳುವನು: ಇನ್ನು ನೀವು ನಿಮ್ಮ ಕೃತ್ಯಗಳ ರುಚಿಯನ್ನು ಅನುಭವಿಸಿರಿ.
29:56
يَٰعِبَادِيَ ٱلَّذِينَ ءَامَنُوٓاْ إِنَّ أَرۡضِي وَٰسِعَةٌ فَإِيَّٰيَ فَٱعۡبُدُونِ ٥٦
ಓ ನನ್ನ ಸತ್ಯವಿಶ್ವಾಸಿ ದಾಸರೇ, ನಿಸ್ಸಂಶಯವಾಗಿಯು ನನ್ನ ಭೂಮಿಯು ವಿಶಾಲವಾಗಿದೆ. ಆದ್ದರಿಂದ ನೀವು ನನ್ನನ್ನೇ ಆರಾಧಿಸಿರಿ.
29:57
كُلُّ نَفۡسٍ ذَآئِقَةُ ٱلۡمَوۡتِۖ ثُمَّ إِلَيۡنَا تُرۡجَعُونَ ٥٧
ಪ್ರತಿಯೊಂದು ಜೀವಿಯು ಮರಣದ ರುಚಿ ಸವಿಯಬೇಕಾಗಿದೆ. ತರುವಾಯ ನೀವೆಲ್ಲರೂ ನಮ್ಮೆಡೆಗೇ ಮರಳಿಸಲಾಗುವಿರಿ.
29:58
وَٱلَّذِينَ ءَامَنُواْ وَعَمِلُواْ ٱلصَّٰلِحَٰتِ لَنُبَوِّئَنَّهُم مِّنَ ٱلۡجَنَّةِ غُرَفًا تَجۡرِي مِن تَحۡتِهَا ٱلۡأَنۡهَٰرُ خَٰلِدِينَ فِيهَاۚ نِعۡمَ أَجۡرُ ٱلۡعَٰمِلِينَ ٥٨
ಯಾರು ಸತ್ಯವಿಶ್ವಾಸಿವಿರಿಸಿ ಸತ್ಕರ್ಮಗಳನ್ನು ಕೈಗೊಂಡರೋ ಖಂಡಿತ ನಾವು ಅವರಿಗೆ ಸ್ವರ್ಗೋದ್ಯಾನದ ಉನ್ನತ ಭವನಗಳಲ್ಲಿ ನೆಲೆಸುವೆವು. ಅವುಗಳ ತಳಭಾಗದಲ್ಲಿ ಕಾಲುವೆಗಳು ಹರಿಯುತ್ತಿರುವುವು. ಅವರು ಅಲ್ಲಿ ಶಾಶ್ವತವಾಗಿರುವರು. ಸತ್ಕರ್ಮವೆಸಗುವವರ ಪ್ರತಿಫಲವು ಅದೆಷ್ಟು ಉತ್ತಮವಾದುದು.
29:59
ٱلَّذِينَ صَبَرُواْ وَعَلَىٰ رَبِّهِمۡ يَتَوَكَّلُونَ ٥٩
ಅವರು ಸಹನೆ ವಹಿಸಿದವರು, ತಮ್ಮ ಪ್ರಭುವಿನ ಮೇಲೆ ಭರವಸೆಯನ್ನಿಟ್ಟಿರುವವರು ಆಗಿದ್ದಾರೆ.
29:60
وَكَأَيِّن مِّن دَآبَّةٍ لَّا تَحۡمِلُ رِزۡقَهَا ٱللَّهُ يَرۡزُقُهَا وَإِيَّاكُمۡۚ وَهُوَ ٱلسَّمِيعُ ٱلۡعَلِيمُ ٦٠
ತಮ್ಮ ಆಹಾರವನ್ನು ಹೊತ್ತು ನಡೆಯದ ಅದೆಷ್ಟೋ ಜೀವಿಗಳಿವೆ. ಅಲ್ಲಾಹನು ಅವುಗಳಿಗೂ ಮತ್ತು ನಿಮಗೂ ಆಹಾರ ನೀಡುತ್ತಾನೆ ಮತ್ತು ಅವನು ಸರ್ವವನ್ನಾಲಿಸುವವನು, ಚೆನ್ನಾಗಿ ಅರಿಯುವವನು ಆಗಿದ್ದಾನೆ.
29:61
وَلَئِن سَأَلۡتَهُم مَّنۡ خَلَقَ ٱلسَّمَٰوَٰتِ وَٱلۡأَرۡضَ وَسَخَّرَ ٱلشَّمۡسَ وَٱلۡقَمَرَ لَيَقُولُنَّ ٱللَّهُۖ فَأَنَّىٰ يُؤۡفَكُونَ ٦١
ಭೂಮಿ, ಆಕಾಶಗಳನ್ನು ಸೃಷ್ಟಿಸಿದವನು ಮತ್ತು ಸೂರ್ಯನನ್ನೂ, ಚಂದ್ರನನ್ನೂ ಅಧೀನಗೊಳಿಸಿದವನು ಯಾರೆಂದು ನೀವು ಅವರೊಡನೆ ಕೇಳಿದರೆ ಖಂಡಿತ ಅವರು ಅಲ್ಲಾಹ್ ಎಂದೇ ಉತ್ತರಿಸುತ್ತಾರೆ. ಹಾಗಿದ್ದೂ ಅವರೆತ್ತ ಅಲೆದಾಡಿಸಲಾಗುತ್ತಿದ್ದಾರೆ?
29:62
ٱللَّهُ يَبۡسُطُ ٱلرِّزۡقَ لِمَن يَشَآءُ مِنۡ عِبَادِهِۦ وَيَقۡدِرُ لَهُۥٓۚ إِنَّ ٱللَّهَ بِكُلِّ شَيۡءٍ عَلِيمٌ ٦٢
ಅಲ್ಲಾಹನು ತನ್ನ ದಾಸರ ಪೈಕಿ ತಾನಿಚ್ಛಿಸಿದವರಿಗೆ ಜೀವನಾಧಾರವನ್ನು ವಿಶಾಲಗೊಳಿಸುತ್ತಾನೆ ಹಾಗೂ ತಾನಿಚ್ಛಿಸಿದವರಿಗೆ ಸೀಮಿತಗೊಳಿಸುತ್ತಾನೆ. ನಿಶ್ಚಯವಾಗಿಯು ಅಲ್ಲಾಹನು ಸಕಲ ವಸ್ತುಗಳ ಅರಿವುಳ್ಳವನಾಗಿದ್ದಾನೆ.
29:63
وَلَئِن سَأَلۡتَهُم مَّن نَّزَّلَ مِنَ ٱلسَّمَآءِ مَآءً فَأَحۡيَا بِهِ ٱلۡأَرۡضَ مِنۢ بَعۡدِ مَوۡتِهَا لَيَقُولُنَّ ٱللَّهُۚ قُلِ ٱلۡحَمۡدُ لِلَّهِۚ بَلۡ أَكۡثَرُهُمۡ لَا يَعۡقِلُونَ ٦٣
ನೀವು ಅವರೊಡನೆ ಆಕಾಶದಿಂದ ನೀರನ್ನು ಸುರಿಸಿ ಭೂಮಿಯನ್ನು ಅದರ ನಿರ್ಜೀವದ ನಂತರ ಜೀವಕೊಟ್ಟವನು ಯಾರೆಂದು ಕೇಳಿದರೆ ಖಂಡಿತ ಅವರು ಅಲ್ಲಾಹ್ ಎಂದೇ ಉತ್ತರಿಸುತ್ತಾರೆ. ನೀವು ಹೇಳಿರಿ: ಸರ್ವಸ್ತುತಿಯು ಅಲ್ಲಾಹನಿಗೇ ಮೀಸಲು. ಆದರೆ ಅವರಲ್ಲಿ ಹೆಚ್ಚಿನವರು ಬುದ್ಧಿಶೂನ್ಯರಾಗಿದ್ದಾರೆ.
العربيةEnglishBahasa IndonesiaTürkçeРусскийفارسیFrançaisاردوবাংলাDeutschEspañol中文हिन्दीPortuguêsItalianoภาษาไทยPolskiNederlandsShqipKiswahiliO'zbekதமிழ்MelayuBosanskiSoomaaliAzərbaycanکوردی한국어日本語SvenskaDanskNorskپښتوമലയാളംසිංහලTamazightHausaአማርኛБългарскиТоҷикӣҚазақшаFilipinoسنڌيYorùbáFulfuldeТатарчаئۇيغۇرچەКыргызчаਪੰਜਾਬੀJawaతెలుగుမြန်မာગુજરાતીOromoमराठीTiếng ViệtMalagasyНохчийнWolofދިވެހިಕನ್ನಡУкраїнськаΕλληνικάქართულიខ្មែរدریQafar afMaranaoनेपाली
ಪವಿತ್ರ ಕುರಾನ್
Thursday, August 27, 2026
Don't forget us in your sincere prayers







