📖 0/604 ಓದಿದ ಪುಟಗಳು
📄 505
۞ وَٱذۡكُرۡ أَخَا عَادٍ إِذۡ أَنذَرَ قَوۡمَهُۥ بِٱلۡأَحۡقَافِ وَقَدۡ خَلَتِ ٱلنُّذُرُ مِنۢ بَيۡنِ يَدَيۡهِ وَمِنۡ خَلۡفِهِۦٓ أَلَّا تَعۡبُدُوٓاْ إِلَّا ٱللَّهَ إِنِّيٓ أَخَافُ عَلَيۡكُمۡ عَذَابَ يَوۡمٍ عَظِيمٍ ٢١ قَالُوٓاْ أَجِئۡتَنَا لِتَأۡفِكَنَا عَنۡ ءَالِهَتِنَا فَأۡتِنَا بِمَا تَعِدُنَآ إِن كُنتَ مِنَ ٱلصَّٰدِقِينَ ٢٢ قَالَ إِنَّمَا ٱلۡعِلۡمُ عِندَ ٱللَّهِ وَأُبَلِّغُكُم مَّآ أُرۡسِلۡتُ بِهِۦ وَلَٰكِنِّيٓ أَرَىٰكُمۡ قَوۡمًا تَجۡهَلُونَ ٢٣ فَلَمَّا رَأَوۡهُ عَارِضًا مُّسۡتَقۡبِلَ أَوۡدِيَتِهِمۡ قَالُواْ هَٰذَا عَارِضٌ مُّمۡطِرُنَاۚ بَلۡ هُوَ مَا ٱسۡتَعۡجَلۡتُم بِهِۦۖ رِيحٌ فِيهَا عَذَابٌ أَلِيمٌ ٢٤ تُدَمِّرُ كُلَّ شَيۡءِۭ بِأَمۡرِ رَبِّهَا فَأَصۡبَحُواْ لَا يُرَىٰٓ إِلَّا مَسَٰكِنُهُمۡۚ كَذَٰلِكَ نَجۡزِي ٱلۡقَوۡمَ ٱلۡمُجۡرِمِينَ ٢٥ وَلَقَدۡ مَكَّنَّٰهُمۡ فِيمَآ إِن مَّكَّنَّٰكُمۡ فِيهِ وَجَعَلۡنَا لَهُمۡ سَمۡعًا وَأَبۡصَٰرًا وَأَفۡـِٔدَةً فَمَآ أَغۡنَىٰ عَنۡهُمۡ سَمۡعُهُمۡ وَلَآ أَبۡصَٰرُهُمۡ وَلَآ أَفۡـِٔدَتُهُم مِّن شَيۡءٍ إِذۡ كَانُواْ يَجۡحَدُونَ بِـَٔايَٰتِ ٱللَّهِ وَحَاقَ بِهِم مَّا كَانُواْ بِهِۦ يَسۡتَهۡزِءُونَ ٢٦ وَلَقَدۡ أَهۡلَكۡنَا مَا حَوۡلَكُم مِّنَ ٱلۡقُرَىٰ وَصَرَّفۡنَا ٱلۡأٓيَٰتِ لَعَلَّهُمۡ يَرۡجِعُونَ ٢٧ فَلَوۡلَا نَصَرَهُمُ ٱلَّذِينَ ٱتَّخَذُواْ مِن دُونِ ٱللَّهِ قُرۡبَانًا ءَالِهَةَۢۖ بَلۡ ضَلُّواْ عَنۡهُمۡۚ وَذَٰلِكَ إِفۡكُهُمۡ وَمَا كَانُواْ يَفۡتَرُونَ ٢٨
46:21
۞ وَٱذۡكُرۡ أَخَا عَادٍ إِذۡ أَنذَرَ قَوۡمَهُۥ بِٱلۡأَحۡقَافِ وَقَدۡ خَلَتِ ٱلنُّذُرُ مِنۢ بَيۡنِ يَدَيۡهِ وَمِنۡ خَلۡفِهِۦٓ أَلَّا تَعۡبُدُوٓاْ إِلَّا ٱللَّهَ إِنِّيٓ أَخَافُ عَلَيۡكُمۡ عَذَابَ يَوۡمٍ عَظِيمٍ ٢١
(ಓ ಪೈಗಂಬರರೇ) ನೀವು ಆದ್ ಜನಾಂಗದ ಸಹೋದರ(ಹೂದ್ರನ್ನು) ಸ್ಮರಿಸಿರಿ. ಅವರು 'ಅಹ್ಕಾಫ್'ನಲ್ಲಿದ್ದ ತಮ್ಮ ಜನಾಂಗವನ್ನು ಎಚ್ಚರಿಸಿದ ಸಂದರ್ಭ ನಿಶ್ಚಯವಾಗಿಯು ಅವರಿಗಿಂತ ಮುಂಚೆಯು, ಅವರ ನಂತರವೂ ಮುನ್ನೆಚ್ಚರಿಕೆಗಾ ರರು ಗತಿಸಿದ್ದಾರೆ. ಅವರು ಹೇಳಿದರು; “ನೀವು ಅಲ್ಲಾಹನನ್ನು ಬಿಟ್ಟು ಇತರರನ್ನು ಆರಾಧಿಸಬೇಡಿರಿ. ನಿಸ್ಸಂದೇಹವಾಗಿಯೂ ನಾನು ನಿಮ್ಮ ಮೇಲೆ ಒಂದು ಮಹಾ ದಿನದ ಯಾತನೆಯನ್ನು ಭಯಪಡುತ್ತೇನೆ.
46:22
قَالُوٓاْ أَجِئۡتَنَا لِتَأۡفِكَنَا عَنۡ ءَالِهَتِنَا فَأۡتِنَا بِمَا تَعِدُنَآ إِن كُنتَ مِنَ ٱلصَّٰدِقِينَ ٢٢
ಜನರು ಹೇಳಿದರು; ನಮ್ಮ ಆರಾಧ್ಯರಿಂದ ನಮ್ಮನ್ನು ಅಗಲಿಸಲು ನೀನು ನಮ್ಮ ಬಳಿ ಬಂದಿರುವೆಯಾ ? ನೀನು ಸತ್ಯವಂತನಾಗಿದ್ದರೆ ನೀನು ನಮಗೆ ಎಚ್ಚರಿಕೆ ನೀಡುತ್ತಿರುವ ಆ ಶಿಕ್ಷೆಯನ್ನು ನಮ್ಮ ಮೇಲೆ ತಂದುಬಿಡು.
46:23
قَالَ إِنَّمَا ٱلۡعِلۡمُ عِندَ ٱللَّهِ وَأُبَلِّغُكُم مَّآ أُرۡسِلۡتُ بِهِۦ وَلَٰكِنِّيٓ أَرَىٰكُمۡ قَوۡمًا تَجۡهَلُونَ ٢٣
ಪೈಗಂಬರ್ ಹೂದ್ ಹೇಳಿದರು; ಅದರ ಜ್ಞಾನವು ಅಲ್ಲಾಹನ ಬಳಿ ಮಾತ್ರವಿದೆ. ನಾನು ನನಗೆ ಕೊಟ್ಟು ಕಳುಹಿಸಿರುವ ಸಂದೇಶವನ್ನೇ ನಿಮಗೆ ತಲುಪಿಸುತ್ತಿದ್ದೇನೆ. ಆದರೆ ನಾನು ನಿಮ್ಮನ್ನು ಅವಿವೇಕಿ ಜನಾಂಗವಾಗಿ ಕಾಣುತ್ತಿರುವೆನು.
46:24
فَلَمَّا رَأَوۡهُ عَارِضًا مُّسۡتَقۡبِلَ أَوۡدِيَتِهِمۡ قَالُواْ هَٰذَا عَارِضٌ مُّمۡطِرُنَاۚ بَلۡ هُوَ مَا ٱسۡتَعۡجَلۡتُم بِهِۦۖ رِيحٌ فِيهَا عَذَابٌ أَلِيمٌ ٢٤
ಅನಂತರ ಅವರು ಶಿಕ್ಷೆಯನ್ನು ತಮ್ಮ ಕಣಿವೆಯೆಡೆಗೆ ಬರುತ್ತಿರುವಂತಹ ಒಂದು ಮೋಡವನ್ನಾಗಿ ಕಂಡಾಗ ಹೇಳಿದರು; ಈ ಮೋಡವು ನಮ್ಮ ಮೇಲೆ ಮಳೆಯನ್ನು ವರ್ಷಿಸಲಿದೆ. (ಇಲ್ಲ) ವಸ್ತುತಃ ಈ ಮೋಡವು ನೀವು ಆತುರಪಟ್ಟುಕೊಳ್ಳುತ್ತಿದ್ದಂತಹ ಶಿಕ್ಷೆ ಆಗಿದೆ. ಇದು ಬಿರುಗಾಳಿಯಾಗಿದ್ದು ಅದರಲ್ಲಿ ವೇದನಾಜನಕ ಯಾತನೆಯಿದೆ.
46:25
تُدَمِّرُ كُلَّ شَيۡءِۭ بِأَمۡرِ رَبِّهَا فَأَصۡبَحُواْ لَا يُرَىٰٓ إِلَّا مَسَٰكِنُهُمۡۚ كَذَٰلِكَ نَجۡزِي ٱلۡقَوۡمَ ٱلۡمُجۡرِمِينَ ٢٥
ಆ ಗಾಳಿಯು ತನ್ನ ಪ್ರಭುವಿನ ಅಪ್ಪಣೆಯೊಂದಿಗೆ ಪ್ರತಿಯೊಂದು ವಸ್ತುವನ್ನೂ ನಾಶಮಾಡುವುದು, ಕೊನೆಗೆ ಅವರ ವಸತಿಗಳ ಹೊರತು ಬೇರೇನೂ ಕಾಣಿಸದಂತಹ ಅವರ ಸ್ಥಿತಿಯಾಯಿತು, ಇದೇ ಪ್ರಕಾರ ನಾವು ಅಪರಾಧಿ ಜನರಿಗೆ ಶಿಕ್ಷೆಯನ್ನು ನೀಡುತ್ತೇವೆ.
46:26
وَلَقَدۡ مَكَّنَّٰهُمۡ فِيمَآ إِن مَّكَّنَّٰكُمۡ فِيهِ وَجَعَلۡنَا لَهُمۡ سَمۡعًا وَأَبۡصَٰرًا وَأَفۡـِٔدَةً فَمَآ أَغۡنَىٰ عَنۡهُمۡ سَمۡعُهُمۡ وَلَآ أَبۡصَٰرُهُمۡ وَلَآ أَفۡـِٔدَتُهُم مِّن شَيۡءٍ إِذۡ كَانُواْ يَجۡحَدُونَ بِـَٔايَٰتِ ٱللَّهِ وَحَاقَ بِهِم مَّا كَانُواْ بِهِۦ يَسۡتَهۡزِءُونَ ٢٦
ನಿಜವಾಗಿಯೂ ನಾವು ನಿಮಗೆ ನೀಡಿರÀದಂತಹ ಸಾಮರ್ಥ್ಯಗಳನ್ನು ನಾವು ಅವರಿಗೆ ನೀಡಿದ್ದೆವು ಮತ್ತುನಾವು ಅವರಿಗೆ ಕಿವಿಗಳನ್ನು, ಕಣ್ಣುಗಳನ್ನು ಮತ್ತು ಹೃದಯಗಳನ್ನು ನೀಡಿದ್ದೆವು. ಆದರೆ ಅವರ ಕಿವಿಗಳಾಗಲಿ, ಕಣ್ಣುಗಳಾಗಲಿ, ಅವರ ಹೃದಯಗಳಾಗಲಿ ಅವರಿಗೆ ಯಾವ ಪ್ರಯೋಜನವನ್ನೂ ನೀಡಲಿಲ್ಲ, ಏಕೆಂದರೆ ಅವರು ಅಲ್ಲಾಹನ ಸೂಕ್ತಿಗಳನ್ನು ನಿಷೇಧಿಸುತ್ತಿದ್ದರು ಮತ್ತು ಅವರು ಪರಿಹಾಸ್ಯ ಮಾಡುತ್ತಿದ್ದ ವಸ್ತುವೇ ಅವರನ್ನು ಆವರಿಸಿಬಿಟ್ಟಿತು.
46:27
وَلَقَدۡ أَهۡلَكۡنَا مَا حَوۡلَكُم مِّنَ ٱلۡقُرَىٰ وَصَرَّفۡنَا ٱلۡأٓيَٰتِ لَعَلَّهُمۡ يَرۡجِعُونَ ٢٧
ನಿಶ್ಚಯವಾಗಿಯು ನಾವು ನಿಮ್ಮ ಸುತ್ತಮುತ್ತಲಿನ ನಾಡುಗಳನ್ನು ನಾಶಗೊಳಿಸಿರುತ್ತೇವೆ ಹಾಗು ಅವರು ಮರಳಲೆಂದು ನಾವು ವಿವಿಧ ಶೈಲಿಯಲ್ಲಿ ದೃಷ್ಟಾಂತಗಳನ್ನು ವಿವರಿಸಿಕೊಟ್ಟಿರುವೆವು.
46:28
فَلَوۡلَا نَصَرَهُمُ ٱلَّذِينَ ٱتَّخَذُواْ مِن دُونِ ٱللَّهِ قُرۡبَانًا ءَالِهَةَۢۖ بَلۡ ضَلُّواْ عَنۡهُمۡۚ وَذَٰلِكَ إِفۡكُهُمۡ وَمَا كَانُواْ يَفۡتَرُونَ ٢٨
ಆದರೆ ಅವರು ಅಲ್ಲಾಹನನ್ನು ಬಿಟ್ಟು ದೇವಸಾಮಿಪ್ಯದ ಮಾಧ್ಯಮವನ್ನಾಗಿ ಮಾಡಿಕೊಂಡಿದ್ದ, ಆರಾಧ್ಯರು ಅವರ ಸಹಾಯಕ್ಕೆ ಏಕೆ ಬರಲಿಲ್ಲ ? ಮಾತ್ರವಲ್ಲ ಅವರು ಅವರಿಂದ ಕಣ್ಮರೆಯಾಗಿಬಿಟ್ಟಿದ್ದರು. ವಾಸ್ತವದಲ್ಲಿ ಇದು ಅವರ ಮಿಥ್ಯ ಕಲ್ಪನೆ ಮತ್ತು ಸುಳ್ಳಾರೋಪವಾಗಿತ್ತು.
العربيةEnglishBahasa IndonesiaTürkçeРусскийفارسیFrançaisاردوবাংলাDeutschEspañol中文हिन्दीPortuguêsItalianoภาษาไทยPolskiNederlandsShqipKiswahiliO'zbekதமிழ்MelayuBosanskiSoomaaliAzərbaycanکوردی한국어日本語SvenskaDanskNorskپښتوമലയാളംසිංහලTamazightHausaአማርኛБългарскиТоҷикӣҚазақшаFilipinoسنڌيYorùbáFulfuldeТатарчаئۇيغۇرچەКыргызчаਪੰਜਾਬੀJawaతెలుగుမြန်မာગુજરાતીOromoमराठीTiếng ViệtMalagasyНохчийнWolofދިވެހިಕನ್ನಡУкраїнськаΕλληνικάქართულიខ្មែរدریQafar afMaranaoनेपाली
ಪವಿತ್ರ ಕುರಾನ್
Sunday, August 30, 2026
Don't forget us in your sincere prayers







