📖 0/604 ಓದಿದ ಪುಟಗಳು
📄 72
وَمَآ أَصَٰبَكُمۡ يَوۡمَ ٱلۡتَقَى ٱلۡجَمۡعَانِ فَبِإِذۡنِ ٱللَّهِ وَلِيَعۡلَمَ ٱلۡمُؤۡمِنِينَ ١٦٦ وَلِيَعۡلَمَ ٱلَّذِينَ نَافَقُواْۚ وَقِيلَ لَهُمۡ تَعَالَوۡاْ قَٰتِلُواْ فِي سَبِيلِ ٱللَّهِ أَوِ ٱدۡفَعُواْۖ قَالُواْ لَوۡ نَعۡلَمُ قِتَالًا لَّٱتَّبَعۡنَٰكُمۡۗ هُمۡ لِلۡكُفۡرِ يَوۡمَئِذٍ أَقۡرَبُ مِنۡهُمۡ لِلۡإِيمَٰنِۚ يَقُولُونَ بِأَفۡوَٰهِهِم مَّا لَيۡسَ فِي قُلُوبِهِمۡۚ وَٱللَّهُ أَعۡلَمُ بِمَا يَكۡتُمُونَ ١٦٧ ٱلَّذِينَ قَالُواْ لِإِخۡوَٰنِهِمۡ وَقَعَدُواْ لَوۡ أَطَاعُونَا مَا قُتِلُواْۗ قُلۡ فَٱدۡرَءُواْ عَنۡ أَنفُسِكُمُ ٱلۡمَوۡتَ إِن كُنتُمۡ صَٰدِقِينَ ١٦٨ وَلَا تَحۡسَبَنَّ ٱلَّذِينَ قُتِلُواْ فِي سَبِيلِ ٱللَّهِ أَمۡوَٰتَۢاۚ بَلۡ أَحۡيَآءٌ عِندَ رَبِّهِمۡ يُرۡزَقُونَ ١٦٩ فَرِحِينَ بِمَآ ءَاتَىٰهُمُ ٱللَّهُ مِن فَضۡلِهِۦ وَيَسۡتَبۡشِرُونَ بِٱلَّذِينَ لَمۡ يَلۡحَقُواْ بِهِم مِّنۡ خَلۡفِهِمۡ أَلَّا خَوۡفٌ عَلَيۡهِمۡ وَلَا هُمۡ يَحۡزَنُونَ ١٧٠ ۞ يَسۡتَبۡشِرُونَ بِنِعۡمَةٍ مِّنَ ٱللَّهِ وَفَضۡلٍ وَأَنَّ ٱللَّهَ لَا يُضِيعُ أَجۡرَ ٱلۡمُؤۡمِنِينَ ١٧١ ٱلَّذِينَ ٱسۡتَجَابُواْ لِلَّهِ وَٱلرَّسُولِ مِنۢ بَعۡدِ مَآ أَصَابَهُمُ ٱلۡقَرۡحُۚ لِلَّذِينَ أَحۡسَنُواْ مِنۡهُمۡ وَٱتَّقَوۡاْ أَجۡرٌ عَظِيمٌ ١٧٢ ٱلَّذِينَ قَالَ لَهُمُ ٱلنَّاسُ إِنَّ ٱلنَّاسَ قَدۡ جَمَعُواْ لَكُمۡ فَٱخۡشَوۡهُمۡ فَزَادَهُمۡ إِيمَٰنًا وَقَالُواْ حَسۡبُنَا ٱللَّهُ وَنِعۡمَ ٱلۡوَكِيلُ ١٧٣
3:166
وَمَآ أَصَٰبَكُمۡ يَوۡمَ ٱلۡتَقَى ٱلۡجَمۡعَانِ فَبِإِذۡنِ ٱللَّهِ وَلِيَعۡلَمَ ٱلۡمُؤۡمِنِينَ ١٦٦
ಎರಡು ಸೈನ್ಯಗಳು ಪರಸ್ಪರ ಎದುರುಗೊಂಡ ದಿನ ನಿಮಗೆ ಬಾಧಿಸಿದೆಲ್ಲವೂ ಅಲ್ಲಾಹನ ಅಪ್ಪಣೆಯಿಂದಾಗಿದೆ. ಇದೇಕೆಂದರೆ ಅಲ್ಲಾಹನು ಸತ್ಯವಿಶ್ವಾಸಿಗಳನ್ನು ಪ್ರತ್ಯಕ್ಷವಾಗಿ ಅರಿತುಕೊಳ್ಳಲೆಂದಾಗಿದೆ.
3:167
وَلِيَعۡلَمَ ٱلَّذِينَ نَافَقُواْۚ وَقِيلَ لَهُمۡ تَعَالَوۡاْ قَٰتِلُواْ فِي سَبِيلِ ٱللَّهِ أَوِ ٱدۡفَعُواْۖ قَالُواْ لَوۡ نَعۡلَمُ قِتَالًا لَّٱتَّبَعۡنَٰكُمۡۗ هُمۡ لِلۡكُفۡرِ يَوۡمَئِذٍ أَقۡرَبُ مِنۡهُمۡ لِلۡإِيمَٰنِۚ يَقُولُونَ بِأَفۡوَٰهِهِم مَّا لَيۡسَ فِي قُلُوبِهِمۡۚ وَٱللَّهُ أَعۡلَمُ بِمَا يَكۡتُمُونَ ١٦٧
ಮತ್ತು ಕಪಟವಿಶ್ವಾಸಿಗಳನ್ನು ಅರಿತುಕೊಳ್ಳಲೆಂದಾಗಿದೆ. 'ಬನ್ನಿರಿ, ಅಲ್ಲಾಹನ ಮಾರ್ಗದಲ್ಲಿ ಯುದ್ಧ ಮಾಡಿರಿ ಅಥವಾ ಸತ್ಯನಿಷೇಧಿಗಳನ್ನು ದೂರಮಾಡಿರಿ' ಎಂದು ಅವರಿಗೆ ಹೇಳಲಾದರೆ ಅವರು ಹೇಳುತ್ತಾರೆ. ನಮಗೆ ಯುದ್ಧ ಮಾಡುವುದು ಗೊತ್ತಿರುತ್ತಿದ್ದರೆ ಖಂಡಿತ ನಾವು ನಿಮ್ಮ ಜೊತೆ ನಡೆಯುತ್ತಿದ್ದೆವು. ಅಂದು ಅವರು ಸತ್ಯವಿಶ್ವಾಸಕ್ಕಿಂತಲು ಹೆಚ್ಚಾಗಿ ಸತ್ಯನಿಷೇಧಕ್ಕೆ ನಿಕಟವಾಗಿದ್ದರು. ಅವರು ತಮ್ಮ ಮನಸ್ಸಿನಲ್ಲಿ ಇಲ್ಲದಿರುವುದನ್ನು ತಮ್ಮ ಬಾಯಿಯಿಂದ ಹೇಳುತ್ತಾರೆ. ಅವರು ಬಚ್ಚಿಡುತ್ತಿರುವುದನ್ನು ಅಲ್ಲಾಹನು ಚೆನ್ನಾಗಿ ಅರಿಯುತ್ತಾನೆ.
3:168
ٱلَّذِينَ قَالُواْ لِإِخۡوَٰنِهِمۡ وَقَعَدُواْ لَوۡ أَطَاعُونَا مَا قُتِلُواْۗ قُلۡ فَٱدۡرَءُواْ عَنۡ أَنفُسِكُمُ ٱلۡمَوۡتَ إِن كُنتُمۡ صَٰدِقِينَ ١٦٨
ಅವರು ಸ್ವತಃ (ಮನೆಗಳಲ್ಲಿ) ಕುಳಿತುಕೊಂಡು (ಯುದ್ಧಕ್ಕೆ ಹೋದ) ತಮ್ಮ ಸಹೋದರರ ಕುರಿತು 'ಅವರು ನಮ್ಮ ಮಾತು ಕೇಳಿರುತ್ತಿದ್ದರೆ ಕೊಲೆಗೀಡಾಗುತ್ತಿರಲಿಲ್ಲ' ಎಂದು ಹೇಳಿದವರಾಗಿದ್ದಾರೆ. ನೀವು ನಿಮ್ಮ ಮಾತಿನಲ್ಲಿ ಸತ್ಯಸಂಧರಾಗಿದ್ದರೆ ಸ್ವತಃ ನಿಮ್ಮಿಂದ ಮರಣವನ್ನು ತಡೆದು ಕೊಳ್ಳಿರಿ ಎಂದು ನೀವು ಹೇಳಿರಿ.
3:169
وَلَا تَحۡسَبَنَّ ٱلَّذِينَ قُتِلُواْ فِي سَبِيلِ ٱللَّهِ أَمۡوَٰتَۢاۚ بَلۡ أَحۡيَآءٌ عِندَ رَبِّهِمۡ يُرۡزَقُونَ ١٦٩
ಅಲ್ಲಾಹುವಿನ ಮಾರ್ಗದಲ್ಲಿ ಹುತಾತ್ಮರಾದವರನ್ನು ನೀವು ಎಂದೂ ಮೃತಪಟ್ಟರೆಂದು ಭಾವಿಸಬೇಡಿರಿ. ಏಕೆಂದರೆ ಅವರು ತಮ್ಮ ಪ್ರಭುವಿನ ಬಳಿ ಜೀವಂತವಾಗಿದ್ದಾರೆ. ಮತ್ತು ಅನ್ನಾಧಾರವನ್ನು ಪಡೆಯುತ್ತಿದ್ದಾರೆ.
3:170
فَرِحِينَ بِمَآ ءَاتَىٰهُمُ ٱللَّهُ مِن فَضۡلِهِۦ وَيَسۡتَبۡشِرُونَ بِٱلَّذِينَ لَمۡ يَلۡحَقُواْ بِهِم مِّنۡ خَلۡفِهِمۡ أَلَّا خَوۡفٌ عَلَيۡهِمۡ وَلَا هُمۡ يَحۡزَنُونَ ١٧٠
ಅಲ್ಲಾಹನು ತನ್ನ ಅನುಗ್ರಹದಿಂದ ಅವರಿಗೆ ದಯಪಾಲಿಸಿರುವುದರಲ್ಲಿ ಸಂತುಷ್ಟರಾಗಿರುವರು ಮತ್ತು ತಮ್ಮೊಂದಿಗೆ ಇಲ್ಲಿಯ ವರೆಗೆ ಬಂದು ಸೇರದಿರುವ ತಮ್ಮ ಹಿಂದೆಯೇ (ಭೂಲೋಕದಲ್ಲಿ) ಇರುವ ವಿಶ್ವಾಸಿಗಳ ಕುರಿತು ಅವರಿಗೆ ಯಾವುದೇ ಭಯವಿಲ್ಲ ಹಾಗೂ ದುಃಖವಿಲ್ಲವೆಂದು ಅವರು (ಹುತಾತ್ಮರು) ಹರ್ಷ ಪ್ರಕಟಿಸುತ್ತಾರೆ.
3:171
۞ يَسۡتَبۡشِرُونَ بِنِعۡمَةٍ مِّنَ ٱللَّهِ وَفَضۡلٍ وَأَنَّ ٱللَّهَ لَا يُضِيعُ أَجۡرَ ٱلۡمُؤۡمِنِينَ ١٧١
ಅಲ್ಲಾºನ ಅನುಗ್ರಹ ಮತ್ತು ಔದಾರ್ಯದಿಂದಾಗಿ ಖಂಡಿತವಾಗಿಯೂ ಅಲ್ಲಾಹನು ಸತ್ಯವಿಶ್ವಾಸಿಗಳ ಪ್ರತಿಫಲವನ್ನು ವ್ಯರ್ಥಗೊಳಿಸುವುದಿಲ್ಲವೆಂದು ಅವರು ಸಂತೃಪ್ತರಾಗಿರುತ್ತಾರೆ.
3:172
ٱلَّذِينَ ٱسۡتَجَابُواْ لِلَّهِ وَٱلرَّسُولِ مِنۢ بَعۡدِ مَآ أَصَابَهُمُ ٱلۡقَرۡحُۚ لِلَّذِينَ أَحۡسَنُواْ مِنۡهُمۡ وَٱتَّقَوۡاْ أَجۡرٌ عَظِيمٌ ١٧٢
ಅವರು ತಮಗೆ ಗಾಯವಾದ ಬಳಿಕವೂ ಅಲ್ಲಾಹ್ ಮತ್ತು ಸಂದೇಶವಾಹಕರ ಕರೆಗೆ ಓಗೊಟ್ಟವರಾಗಿದ್ದಾರೆ. ಅವರ ಪೈಕಿ ಯಾರು ಸತ್ಕರ್ಮಗೈಯ್ಯುತ್ತಾರೋ ಮತ್ತು ಭಯಭಕ್ತಿ ಪಾಲಿಸುತ್ತಾರೋ ಅವರಿಗೆ ಮಹಾಪ್ರತಿಫಲವಿದೆ.
3:173
ٱلَّذِينَ قَالَ لَهُمُ ٱلنَّاسُ إِنَّ ٱلنَّاسَ قَدۡ جَمَعُواْ لَكُمۡ فَٱخۡشَوۡهُمۡ فَزَادَهُمۡ إِيمَٰنًا وَقَالُواْ حَسۡبُنَا ٱللَّهُ وَنِعۡمَ ٱلۡوَكِيلُ ١٧٣
ಸತ್ಯನಿಷೇಧಿಗಳು (ಖುರೈಷರು) ನಿಮ್ಮ ವಿರುದ್ಧ ಯುದ್ಧಕ್ಕಾಗಿ ಸಂಘಟಿತರಾಗಿದ್ದಾರೆ ನೀವು ಅವರನ್ನು ಭಯಪಡಿರಿ ಎಂದು ಜನರು ಸತ್ಯವಿಶ್ವಾಸಿಗಳಿಗೆ ಹೇಳಿದಾಗ ಈ ಮಾತು ಅವರ ವಿಶ್ವಾಸವನ್ನು ಇನ್ನಷ್ಟು ಹೆಚ್ಚಿಸಿತು ಮತ್ತು ನಮಗೆ ಅಲ್ಲಾಹನು ಸಾಕು. ಮತ್ತು ಅತ್ಯುತ್ತಮ ಕಾರ್ಯಸಾಧಕನು ಅವನೇ ಆಗಿದ್ದಾನೆಂದು ಅವರು ಹೇಳಿದರು.
العربيةEnglishBahasa IndonesiaTürkçeРусскийفارسیFrançaisاردوবাংলাDeutschEspañol中文हिन्दीPortuguêsItalianoภาษาไทยPolskiNederlandsShqipKiswahiliO'zbekதமிழ்MelayuBosanskiSoomaaliAzərbaycanکوردی한국어日本語SvenskaDanskNorskپښتوമലയാളംසිංහලTamazightHausaአማርኛБългарскиТоҷикӣҚазақшаFilipinoسنڌيYorùbáFulfuldeТатарчаئۇيغۇرچەКыргызчаਪੰਜਾਬੀJawaతెలుగుမြန်မာગુજરાતીOromoमराठीTiếng ViệtMalagasyНохчийнWolofދިވެހިಕನ್ನಡУкраїнськаΕλληνικάქართულიខ្មែរدریQafar afMaranaoनेपाली
ಪವಿತ್ರ ಕುರಾನ್
Friday, August 21, 2026
Don't forget us in your sincere prayers







