📖 0/604 ಓದಿದ ಪುಟಗಳು
📄 9
ಅಲ್-ಬಕರಾ

ಅಲ್-ಬಕರಾ

2:58
وَإِذۡ قُلۡنَا ٱدۡخُلُواْ هَٰذِهِ ٱلۡقَرۡيَةَ فَكُلُواْ مِنۡهَا حَيۡثُ شِئۡتُمۡ رَغَدًا وَٱدۡخُلُواْ ٱلۡبَابَ سُجَّدًا وَقُولُواْ حِطَّةٌ نَّغۡفِرۡ لَكُمۡ خَطَٰيَٰكُمۡۚ وَسَنَزِيدُ ٱلۡمُحۡسِنِينَ ٥٨
ಮತ್ತು ನಾವು ಹೇಳಿದೆವು; ‘‘ಈ ನಾಡನ್ನು (ಜೆರುಸಲೇಮನ್ನು) ಪ್ರವೇಶಿಸಿರಿ ಹಾಗೂ ನಿಮ್ಮಿಚ್ಛೆಯಂತೆ, ಅದರ ಯಾವುದೇ ಭಾಗದಿಂದ ಧಾರಾಳ ಉಣ್ಣಿರಿ ಹಾಗೂ ವಿನಯಪೂರ್ವಕ ಬಾಗಿಕೊಂಡು ಅದರ ದ್ವಾರದೊಳಗೆ ಪ್ರವೇಶಿಸಿರಿ ಮತ್ತು ‘ಹಿತ್ತಃ’ (ನಮ್ಮನ್ನು ಕ್ಷಮಿಸು) ಎಂದು ಹೇಳುತ್ತಲಿರಿ – ನಾವು ನಿಮ್ಮ ಪಾಪಗಳನ್ನು ಕ್ಷಮಿಸಿಬಿಡುವೆವು ಮತ್ತು ನಾವು ಸತ್ಕರ್ಮಿಗಳಿಗೆ ಮತ್ತಷ್ಟು ನೀಡುವೆವು’’
2:59
فَبَدَّلَ ٱلَّذِينَ ظَلَمُواْ قَوۡلًا غَيۡرَ ٱلَّذِي قِيلَ لَهُمۡ فَأَنزَلۡنَا عَلَى ٱلَّذِينَ ظَلَمُواْ رِجۡزًا مِّنَ ٱلسَّمَآءِ بِمَا كَانُواْ يَفۡسُقُونَ ٥٩
ಆದರೆ ಅಕ್ರಮಿಗಳು, ತಮಗೆ ಹೇಳಲಾಗಿದ್ದ ಮಾತನ್ನು ಬೇರೆಯೇ ಮಾತಾಗಿ ಬದಲಿಸಿಕೊಂಡರು. ಕೊನೆಗೆ ನಾವು ಅಕ್ರಮಿಗಳ ಅವಿಧೇಯತೆಯ ಫಲವಾಗಿ ಅವರ ಮೇಲೆ ಆಕಾಶದಿಂದ ಒಂದು ಶಿಕ್ಷೆಯನ್ನು ಇಳಿಸಿದೆವು
2:60
۞ وَإِذِ ٱسۡتَسۡقَىٰ مُوسَىٰ لِقَوۡمِهِۦ فَقُلۡنَا ٱضۡرِب بِّعَصَاكَ ٱلۡحَجَرَۖ فَٱنفَجَرَتۡ مِنۡهُ ٱثۡنَتَا عَشۡرَةَ عَيۡنًاۖ قَدۡ عَلِمَ كُلُّ أُنَاسٍ مَّشۡرَبَهُمۡۖ كُلُواْ وَٱشۡرَبُواْ مِن رِّزۡقِ ٱللَّهِ وَلَا تَعۡثَوۡاْ فِي ٱلۡأَرۡضِ مُفۡسِدِينَ ٦٠
ಮತ್ತು ಮೂಸಾ ತಮ್ಮ ಜನಾಂಗಕ್ಕಾಗಿ ನೀರನ್ನು ಬೇಡಿದಾಗ ನಾವು, ‘‘ನಿಮ್ಮ ಊರುಗೋಲಿನಿಂದ ಆ ಬಂಡೆಗೆ ಹೊಡೆಯಿರಿ’’ ಎಂದೆವು. ಅದರಿಂದ ಹನ್ನೆರಡು ಚಿಲುಮೆಗಳು ಹೊರಟವು. ಎಲ್ಲ ಜನರು (ಎಲ್ಲ ಗೋತ್ರದವರು) ತಾವು ನೀರು ಪಡೆಯಬೇಕಾದ ಸ್ಥಳವನ್ನು ಗುರುತಿಸಿಕೊಂಡರು – ‘‘ಅಲ್ಲಾಹನು ಏನನ್ನು ಅನುಗ್ರಹಿಸಿರುವನೋ ಅದರಿಂದ ಉಣ್ಣಿರಿ ಹಾಗೂ ಕುಡಿಯಿರಿ ಮತ್ತು ಭೂಮಿಯಲ್ಲಿ ಅಶಾಂತಿ ಹರಡುವವರಾಗಿ ತಿರುಗಬೇಡಿ’’ (ಎಂದು ಆಗ ನಿಮಗೆ ಆದೇಶಿಸಲಾಗಿತ್ತು)
2:61
وَإِذۡ قُلۡتُمۡ يَٰمُوسَىٰ لَن نَّصۡبِرَ عَلَىٰ طَعَامٍ وَٰحِدٍ فَٱدۡعُ لَنَا رَبَّكَ يُخۡرِجۡ لَنَا مِمَّا تُنۢبِتُ ٱلۡأَرۡضُ مِنۢ بَقۡلِهَا وَقِثَّآئِهَا وَفُومِهَا وَعَدَسِهَا وَبَصَلِهَاۖ قَالَ أَتَسۡتَبۡدِلُونَ ٱلَّذِي هُوَ أَدۡنَىٰ بِٱلَّذِي هُوَ خَيۡرٌۚ ٱهۡبِطُواْ مِصۡرًا فَإِنَّ لَكُم مَّا سَأَلۡتُمۡۗ وَضُرِبَتۡ عَلَيۡهِمُ ٱلذِّلَّةُ وَٱلۡمَسۡكَنَةُ وَبَآءُو بِغَضَبٍ مِّنَ ٱللَّهِۚ ذَٰلِكَ بِأَنَّهُمۡ كَانُواْ يَكۡفُرُونَ بِـَٔايَٰتِ ٱللَّهِ وَيَقۡتُلُونَ ٱلنَّبِيِّـۧنَ بِغَيۡرِ ٱلۡحَقِّۚ ذَٰلِكَ بِمَا عَصَواْ وَّكَانُواْ يَعۡتَدُونَ ٦١
ಮತ್ತು (ಸ್ಮರಿಸಿರಿ), ‘‘ಓ ಮೂಸಾ, ಒಂದೇ ಆಹಾರದಲ್ಲಿ ತೃಪ್ತಿಪಟ್ಟುಕೊಳ್ಳಲು ನಮ್ಮಿಂದಾಗದು. ನೀವಿನ್ನು ನಮಗಾಗಿ, ಭೂಮಿಯಲ್ಲಿ ಬೆಳೆಯುವ ಹಸಿರು ತರಕಾರಿ, ಸೌತೆ, ಗೋಧಿ, ತೊಗರಿ, ಈರುಳ್ಳಿ (ಇತ್ಯಾದಿ)ಗಳನ್ನು ಒದಗಿಸಬೇಕೆಂದು ನಿಮ್ಮ ದೇವರನ್ನು ಪ್ರಾರ್ಥಿಸಿರಿ’’- ಎಂದು ನೀವು ಹೇಳಿದ್ದಿರಿ. ಆಗ ಅವರು (ಮೂಸಾ) ‘‘ನೀವೇನು ಶ್ರೇಷ್ಠವಾದ ವಸ್ತುಗಳ ಬದಲಿಗೆ ಕೆಳಸ್ತರದ ವಸ್ತುಗಳನ್ನು ಅಪೇಕ್ಷಿಸುವಿರಾ? ಹಾಗಾದರೆ, ನೀವು (ಯಾವುದಾದರೂ ಬೇರೆ) ನಗರಕ್ಕೆ ಹೊರಟು ಹೋಗಿರಿ, ನೀವು ಬೇಡಿದ್ದು ಅಲ್ಲಿ ನಿಮಗೆ ಸಿಗುವುದು’’ಎಂದಿದ್ದರು. ಕೊನೆಗೆ ಅಪಮಾನ ಹಾಗೂ ದಾರಿದ್ರಗಳು ಅವರನ್ನು (ಇಸ್ರಾಈಲರ ಸಂತತಿಗಳನ್ನು) ಆವರಿಸಿಕೊಂಡವು ಮತ್ತು ಅವರು ಅಲ್ಲಾಹನ ಕ್ರೋಧಕ್ಕೆ ಪಾತ್ರರಾಗಿ ಬಿಟ್ಟರು. ಅದು, ಅವರು ಅಲ್ಲಾಹನ ಪುರಾವೆಗಳನ್ನು ಧಿಕ್ಕರಿಸಿದ ಮತ್ತು ಅನ್ಯಾಯವಾಗಿ ಪ್ರವಾದಿಗಳನ್ನು ಕೊಂದುಬಿಟ್ಟ (ಕೃತ್ಯದ) ಫಲವಾಗಿತ್ತು. ಹಾಗೆಯೇ ಅದು, ಅವರ ಅವಿಧೇಯತೆಯ ಹಾಗೂ ಎಲ್ಲೆ ಮೀರಿದ ನಡವಳಿಕೆಯ ಪರಿಣಾಮವಾಗಿತ್ತು
العربيةEnglishBahasa IndonesiaTürkçeРусскийفارسیFrançaisاردوবাংলাDeutschEspañol中文हिन्दीPortuguêsItalianoภาษาไทยPolskiNederlandsShqipKiswahiliO'zbekதமிழ்MelayuBosanskiSoomaaliAzərbaycanکوردی한국어日本語SvenskaDanskNorskپښتوമലയാളംසිංහලTamazightHausaአማርኛБългарскиТоҷикӣҚазақшаFilipinoسنڌيYorùbáFulfuldeТатарчаئۇيغۇرچەКыргызчаਪੰਜਾਬੀJawaతెలుగుမြန်မာગુજરાતીOromoमराठीTiếng ViệtMalagasyНохчийнWolofދިވެހިಕನ್ನಡУкраїнськаΕλληνικάქართულიខ្មែរدریQafar afMaranaoनेपाली
ಪವಿತ್ರ ಕುರಾನ್
Wednesday, August 19, 2026
Don't forget us in your sincere prayers







