ಸೂರಾ ಸಬಾ ಅರೇಬಿಕ್ ಮತ್ತು ಕನ್ನಡ
ಸೂರಾ ಸಬಾ ಸಂಪೂರ್ಣ ಕನ್ನಡ ಅನುವಾದ, ಉಚ್ಚಾರಣೆ ಮತ್ತು ಆಡಿಯೋ ಪಠಣದೊಂದಿಗೆ ಓದಿ. ಪ್ರತಿ ಆಯತ್ನ ಅರ್ಥ. (54 ಆಯತ್ — مكية). ಸಬಾ ಆಲಿಸಿ, ಸಬಾ ಅನುವಾದ, ಸಬಾ mp3, ಸಬಾ pdf.ಸೂರಾ ಸಬಾ ಓದಿ ಮತ್ತು ಆಲಿಸಿ
🎧 ಆಯತ್
M
Mishary Rashid Alafasy
✓
Mishary Rashid Alafasy
✓
M
Mahmoud Khalil Al-Husary
✓
Mahmoud Khalil Al-Husary
✓
A
Abdurrahman As-Sudais
✓
Abdurrahman As-Sudais
✓
M
Mohamed Siddiq Al-Minshawi
✓
Mohamed Siddiq Al-Minshawi
✓
A
Abdul Basit Abdul Samad
✓
Abdul Basit Abdul Samad
✓
A
Ali Al-Hudhaify
✓
Ali Al-Hudhaify
✓
A
Ahmed ibn Ali al-Ajamy
✓
Ahmed ibn Ali al-Ajamy
✓
A
Abu Bakr Ash-Shaatree
✓
Abu Bakr Ash-Shaatree
✓
M
Muhammad Ayyoub
✓
Muhammad Ayyoub
✓
A
Abdullah Basfar
✓
Abdullah Basfar
✓
A
Abdullah Al-Juhani
✓
Abdullah Al-Juhani
✓
M
Maher Al Muaiqly
✓
Maher Al Muaiqly
✓
—
x1
الْحَمْدُ لِلَّهِ الَّذِي لَهُ مَا فِي السَّمَاوَاتِ وَمَا فِي الْأَرْضِ وَلَهُ الْحَمْدُ فِي الْآخِرَةِ ۚ وَهُوَ الْحَكِيمُ الْخَبِيرُ ١
📖 ಅನುವಾದ
ಆಯತ್ 1
ಏನೆಲ್ಲಾ ಭೂಮಿಯೊಳಗೆ ಹೋಗುತ್ತದೆ ಮತ್ತು ಏನೆಲ್ಲಾ ಅದರಿಂದ ಹೊರಬರುತ್ತದೆ ಎಂಬುದನ್ನು ಹಾಗೂ ಆಕಾಶದಿಂದ ಏನೆಲ್ಲಾ ಇಳಿಯುತ್ತದೆ ಹಾಗೂ ಏನೆಲ್ಲಾ ಅದರೊಳಕ್ಕೆ ಏರಿ ಹೋಗುತ್ತದೆ ಎಂಬುದನ್ನು ಅವನು ಚೆನ್ನಾಗಿ ಬಲ್ಲನು ಮತ್ತು ಅವನು ಕರುಣಾಳುವೂ ಕ್ಷಮಾಶೀಲನೂ ಆಗಿರುವನು
يَعْلَمُ مَا يَلِجُ فِي الْأَرْضِ وَمَا يَخْرُجُ مِنْهَا وَمَا يَنزِلُ مِنَ السَّمَاءِ وَمَا يَعْرُجُ فِيهَا ۚ وَهُوَ الرَّحِيمُ الْغَفُورُ ٢
📖 ಅನುವಾದ
ಆಯತ್ 2
ಧಿಕ್ಕಾರಿಗಳು, ‘‘ನಮ್ಮ ಪಾಲಿಗೆ ಲೋಕಾಂತ್ಯದ ಕ್ಷಣ ಎಂದೂ ಬರಲಾರದು‘‘ ಎನ್ನುತ್ತಾರೆ. ನೀವು ಹೇಳಿರಿ; ಯಾಕಿಲ್ಲ ? ನನ್ನೊಡೆಯನಾಣೆ, ಅದು ಖಂಡಿತ ನಿಮ್ಮ ಮೇಲೆ ಬಂದೆರಗುವುದು. ಅವನು ಎಲ್ಲ ಗುಪ್ತ ವಿಷಯಗಳನ್ನೂ ಬಲ್ಲವನು. ಆಕಾಶಗಳಲ್ಲಾಗಲಿ ಭೂಮಿಯಲ್ಲಾಗಲಿ ಇರುವ ಒಂದು ಅಣು ಗಾತ್ರದ ವಸ್ತು ಕೂಡಾ ಅವನಿಂದ ಮರೆಯಾಗಿರುವುದಿಲ್ಲ. ಇನ್ನು, ಅದಕ್ಕಿಂತ ಸಣ್ಣ ಅಥವಾ ದೊಡ್ಡ ಯಾವ ವಿಷಯವೂ ಒಂದು ಸ್ಪಷ್ಟ ಗ್ರಂಥದಲ್ಲಿ ದಾಖಲಾಗದೆ ಉಳಿದಿರುವುದಿಲ್ಲ
وَقَالَ الَّذِينَ كَفَرُوا لَا تَأْتِينَا السَّاعَةُ ۖ قُلْ بَلَىٰ وَرَبِّي لَتَأْتِيَنَّكُمْ عَالِمِ الْغَيْبِ ۖ لَا يَعْزُبُ عَنْهُ مِثْقَالُ ذَرَّةٍ فِي السَّمَاوَاتِ وَلَا فِي الْأَرْضِ وَلَا أَصْغَرُ مِن ذَٰلِكَ وَلَا أَكْبَرُ إِلَّا فِي كِتَابٍ مُّبِينٍ ٣
📖 ಅನುವಾದ
ಆಯತ್ 3
ನಂಬಿದವರಿಗೆ ಮತ್ತು ಸತ್ಕರ್ಮಗಳನ್ನು ಮಾಡಿದವರಿಗೆ ಅವನು (ಅಲ್ಲಾಹನು) ಪ್ರತಿಫಲ ನೀಡುವನು. ಅವರಿಗೆ ಕ್ಷಮೆ ಮತ್ತು ಗೌರವಾನ್ವಿತ ಸಂಪನ್ನತೆ ಪ್ರಾಪ್ತವಾಗಲಿದೆ
لِّيَجْزِيَ الَّذِينَ آمَنُوا وَعَمِلُوا الصَّالِحَاتِ ۚ أُولَٰئِكَ لَهُم مَّغْفِرَةٌ وَرِزْقٌ كَرِيمٌ ٤
📖 ಅನುವಾದ
ಆಯತ್ 4
ನಮ್ಮ ವಚನಗಳನ್ನು ಕೀಳಾಗಿ ಕಾಣಿಸಲು ಹೆಣಗುತ್ತಿರುವವರಿಗೆ ತೀರಾ ಕಠೋರ ಶಿಕ್ಷೆ ಸಿಗಲಿದೆ
وَالَّذِينَ سَعَوْا فِي آيَاتِنَا مُعَاجِزِينَ أُولَٰئِكَ لَهُمْ عَذَابٌ مِّن رِّجْزٍ أَلِيمٌ ٥
📖 ಅನುವಾದ
ಆಯತ್ 5
ನಿಮ್ಮ ಒಡೆಯನ ಕಡೆಯಿಂದ ನಿಮಗೆ ಇಳಿಸಿಕೊಡಲಾಗಿರುವ ಸಂದೇಶವೇ ಸತ್ಯ ಮತ್ತು ಅದು, ಆ ಪ್ರಬಲ ಪ್ರಶಂಸಾರ್ಹನ (ಅಲ್ಲಾಹನ) ಮಾರ್ಗದೆಡೆಗೆ ಮುನ್ನಡೆಸುತ್ತದೆ ಎಂಬುದನ್ನು ಜ್ಞಾನ ಪ್ರಾಪ್ತವಾಗಿರುವವರು ಕಾಣುತ್ತಿದ್ದಾರೆ
وَيَرَى الَّذِينَ أُوتُوا الْعِلْمَ الَّذِي أُنزِلَ إِلَيْكَ مِن رَّبِّكَ هُوَ الْحَقَّ وَيَهْدِي إِلَىٰ صِرَاطِ الْعَزِيزِ الْحَمِيدِ ٦
📖 ಅನುವಾದ
ಆಯತ್ 6
ಧಿಕ್ಕಾರಿಗಳು (ಗೇಲಿ ಮಾಡುತ್ತಾ) ಹೇಳುತ್ತಾರೆ; ‘‘ನಾವು ನಿಮಗೆ ಒಬ್ಬ ವ್ಯಕ್ತಿಯನ್ನು ಪರಿಚಯಿಸಬೇಕೇ? ನೀವು ಸಂಪೂರ್ಣವಾಗಿ ಛಿದ್ರರಾದ ಬಳಿಕ ನಿಮ್ಮನ್ನು ಮತ್ತೆ ಹೊಸದಾಗಿ ಜೀವಂತಗೊಳಿಸಲಾಗುವುದು ಎಂದು ಅವನು ನಿಮ್ಮನ್ನು ಎಚ್ಚರಿಸುತ್ತಾನೆ’’
وَقَالَ الَّذِينَ كَفَرُوا هَلْ نَدُلُّكُمْ عَلَىٰ رَجُلٍ يُنَبِّئُكُمْ إِذَا مُزِّقْتُمْ كُلَّ مُمَزَّقٍ إِنَّكُمْ لَفِي خَلْقٍ جَدِيدٍ ٧
📖 ಅನುವಾದ
ಆಯತ್ 7
‘‘ಅವನು ಅಲ್ಲಾಹನ ಮೇಲೆ ಸುಳ್ಳಾರೋಪ ಹೊರಿಸುತ್ತಿದ್ದಾನೆ. ಅಥವಾ ಅವನಿಗೆ ಹುಚ್ಚು ಹಿಡಿದಿದೆ’’. ನಿಜವಾಗಿ, ಪರಲೋಕದಲ್ಲಿ ನಂಬಿಕೆ ಇಲ್ಲದವರು ಶಿಕ್ಷೆಗೆ ಗುರಿಯಾಗುವರು ಮತ್ತು ಅವರು ಸಂಪೂರ್ಣ ದಾರಿಗೆಟ್ಟಿರುವರು
أَفْتَرَىٰ عَلَى اللَّهِ كَذِبًا أَم بِهِ جِنَّةٌ ۗ بَلِ الَّذِينَ لَا يُؤْمِنُونَ بِالْآخِرَةِ فِي الْعَذَابِ وَالضَّلَالِ الْبَعِيدِ ٨
📖 ಅನುವಾದ
ಆಯತ್ 8
ಅವರೇನು, ಅವರ ಮುಂದೆಯೂ ಅವರ ಹಿಂದೆಯೂ ಇರುವ ಆಕಾಶವನ್ನು ಹಾಗೂ ಭೂಮಿಯನ್ನು ನೋಡುವುದಿಲ್ಲವೇ? ನಾವು ಬಯಸಿದರೆ ಅವರನ್ನು ಭೂಮಿಯೊಳಗೆ ಹೂತು ಬಿಡಬಲ್ಲೆವು ಅಥವಾ ಆಕಾಶದ ಒಂದು ತುಂಡನ್ನು ಅವರ ಮೇಲೆ ಬೀಳಿಸಬಲ್ಲೆವು. ಖಂಡಿತವಾಗಿಯೂ ಇದರಲ್ಲಿ, (ದೇವರೆಡೆಗೆ) ಒಲವು ತೋರುವ ಪ್ರತಿಯೊಬ್ಬ ದಾಸನಿಗೆ ಪಾಠವಿದೆ
أَفَلَمْ يَرَوْا إِلَىٰ مَا بَيْنَ أَيْدِيهِمْ وَمَا خَلْفَهُم مِّنَ السَّمَاءِ وَالْأَرْضِ ۚ إِن نَّشَأْ نَخْسِفْ بِهِمُ الْأَرْضَ أَوْ نُسْقِطْ عَلَيْهِمْ كِسَفًا مِّنَ السَّمَاءِ ۚ إِنَّ فِي ذَٰلِكَ لَآيَةً لِّكُلِّ عَبْدٍ مُّنِيبٍ ٩
📖 ಅನುವಾದ
ಆಯತ್ 9
ನಾವು ದಾವೂದರಿಗೆ ನಮ್ಮ ಕಡೆಯಿಂದ ವಿಶೇಷ ಅನುಗ್ರಹವನ್ನು ಕರುಣಿಸಿದ್ದೆವು. ಪರ್ವತಗಳೇ, ಅವನ ಜೊತೆಗೂಡಿ ಕೀರ್ತನೆ ಮಾಡಿರಿ (ಎಂದು ಆದೇಶಿಸಲಾಗಿತ್ತು) ಮತ್ತು ಪಕ್ಷಿಗಳಿಗೂ (ಹಾಗೆಂದು ಆದೇಶಿಸಲಾಗಿತ್ತು) ಮತ್ತು ನಾವು ಉಕ್ಕನ್ನು ಅವರ ಪಾಲಿಗೆ ಮೃದುವಾಗಿಸಿದ್ದೆವು
۞ وَلَقَدْ آتَيْنَا دَاوُودَ مِنَّا فَضْلًا ۖ يَا جِبَالُ أَوِّبِي مَعَهُ وَالطَّيْرَ ۖ وَأَلَنَّا لَهُ الْحَدِيدَ ١٠
📖 ಅನುವಾದ
ಆಯತ್ 10
ವಿಶಾಲ ಕವಚಗಳನ್ನು ರಚಿಸಿರಿ ಹಾಗೂ ಕುಣಿಕೆಗಳನ್ನು ಸಂತುಲಿತವಾಗಿ ಜೋಡಿಸಿರಿ ಮತ್ತು ನೀವು ಸತ್ಕರ್ಮಗಳನ್ನು ಮಾಡಿರಿ. ನೀವು ಮಾಡುವ ಎಲ್ಲವನ್ನೂ ನಾನು ಖಂಡಿತ ನೋಡುತ್ತಿರುತ್ತೇನೆ (ಎಂದು ಅವರೊಡನೆ ಹೇಳಲಾಗಿತ್ತು)
أَنِ اعْمَلْ سَابِغَاتٍ وَقَدِّرْ فِي السَّرْدِ ۖ وَاعْمَلُوا صَالِحًا ۖ إِنِّي بِمَا تَعْمَلُونَ بَصِيرٌ ١١
📖 ಅನುವಾದ
ಆಯತ್ 11
ಹಾಗೆಯೇ, ನಾವು ಸುಲೈಮಾನರ ಪಾಲಿಗೆ ಗಾಳಿಯನ್ನು ವಿಧೇಯಗೊಳಿಸಿದೆವು – ಅದರ ಬೆಳಗ್ಗಿನ ಗುರಿ ಒಂದು ತಿಂಗಳಷ್ಟು ದೂರ ಮತ್ತು ಸಂಜೆಯ ಗುರಿ ಒಂದು ತಿಂಗಳಷ್ಟು ದೂರವಿತ್ತು. ನಾವು ಅವರಿಗಾಗಿ ತಾಮ್ರದ ಧಾರೆಯನ್ನು ಹರಿಸಿದೆವು ಮತ್ತು ಕೆಲವು ಜಿನ್ನ್ಗಳು ಅವರ ಒಡೆಯನ (ಅಲ್ಲಾಹನ) ಆದೇಶದಂತೆ ಅವರೆದುರು ಕೆಲಸ ಮಾಡುತ್ತಿದ್ದವು. ಅವರ ಪೈಕಿ ನಮ್ಮ ಆದೇಶವನ್ನು ಮೀರಿ ನಡೆದವರಿಗೆ ನಾವು ನರಕಾಗ್ನಿಯ ರುಚಿಯನ್ನು ಉಣಿಸುವೆವು
وَلِسُلَيْمَانَ الرِّيحَ غُدُوُّهَا شَهْرٌ وَرَوَاحُهَا شَهْرٌ ۖ وَأَسَلْنَا لَهُ عَيْنَ الْقِطْرِ ۖ وَمِنَ الْجِنِّ مَن يَعْمَلُ بَيْنَ يَدَيْهِ بِإِذْنِ رَبِّهِ ۖ وَمَن يَزِغْ مِنْهُمْ عَنْ أَمْرِنَا نُذِقْهُ مِنْ عَذَابِ السَّعِيرِ ١٢
📖 ಅನುವಾದ
ಆಯತ್ 12
ಅವು (ಆ ಜಿನ್ನ್ಗಳು) ಅವರು (ಸುಲೈಮಾನರು) ಬಯಸಿದಂತೆ ಅವರಿಗಾಗಿ, ಬೃಹತ್ ಕಟ್ಟಡಗಳನ್ನೂ ಪ್ರತಿಮೆಗಳನ್ನೂ, ಕೊಳಗಳಂತಹ ಹರಿವಾಣಗಳನ್ನೂ ಸ್ಥಿರವಾಗಿರುವ ಬೃಹತ್ ಪಾಕಪಾತ್ರೆಗಳನ್ನೂ ನಿರ್ಮಿಸಿ ಕೊಡುತ್ತಿದ್ದವು. ದಾವೂದರ ಸಂತತಿಗಳೇ, ನೀವು ಕೃತಜ್ಞರಾಗಿ, ಸತ್ಕರ್ಮಗಳನ್ನು ಮಾಡಿರಿ. ನನ್ನ ದಾಸರಲ್ಲಿ ಕೆಲವರು ಮಾತ್ರ ಕೃತಜ್ಞರು
يَعْمَلُونَ لَهُ مَا يَشَاءُ مِن مَّحَارِيبَ وَتَمَاثِيلَ وَجِفَانٍ كَالْجَوَابِ وَقُدُورٍ رَّاسِيَاتٍ ۚ اعْمَلُوا آلَ دَاوُودَ شُكْرًا ۚ وَقَلِيلٌ مِّنْ عِبَادِيَ الشَّكُورُ ١٣
📖 ಅನುವಾದ
ಆಯತ್ 13
ಕೊನೆಗೆ ನಾವು ಅವರಿಗೆ (ಸುಲೈಮಾನರಿಗೆ) ಮರಣವನ್ನು ವಿಧಿಸಿದೆವು. ಗೆದ್ದಲುಗಳು ಅವರ ದಂಡವನ್ನು ತಿಂದು ಬಿಡುವವರೆಗೂ ಅವುಗಳಿಗೆ (ಜಿನ್ನ್ಗಳಿಗೆ), ಅವರ ಮರಣದ ಕುರಿತು ತಿಳಿದೇ ಇರಲಿಲ್ಲ. ಅದು ಬಿದ್ದು ಬಿಟ್ಟಾಗ, ಅವುಗಳಿಗೆ ವಿಷಯ ತಿಳಿಯಿತು. ಒಂದು ವೇಳೆ ಅವುಗಳಿಗೆ ಅಜ್ಞಾತ ವಿಷಯಗಳ ಜ್ಞಾನ ಇದ್ದಿದ್ದರೆ, ಅವು ಆ ರೀತಿ ಅಪಮಾನಕಾರಿ ಶಿಕ್ಷೆಗೆ ತುತ್ತಾಗುತ್ತಿರಲಿಲ್ಲ
فَلَمَّا قَضَيْنَا عَلَيْهِ الْمَوْتَ مَا دَلَّهُمْ عَلَىٰ مَوْتِهِ إِلَّا دَابَّةُ الْأَرْضِ تَأْكُلُ مِنسَأَتَهُ ۖ فَلَمَّا خَرَّ تَبَيَّنَتِ الْجِنُّ أَن لَّوْ كَانُوا يَعْلَمُونَ الْغَيْبَ مَا لَبِثُوا فِي الْعَذَابِ الْمُهِينِ ١٤
📖 ಅನುವಾದ
ಆಯತ್ 14
ಸಬಾ ಜನಾಂಗದವರಿಗಾಗಿ ಅವರ ನಾಡಿನಲ್ಲೇ ಒಂದು ಪಾಠವಿತ್ತು. ಅಲ್ಲಿ ಎರಡು ತೋಟಗಳಿದ್ದುವು. ಒಂದು ಬಲಭಾಗದಲ್ಲಿ ಮತ್ತು ಇನ್ನೊಂದು ಎಡಭಾಗದಲ್ಲಿ. ನಿಮ್ಮ ಒಡೆಯನ ಕಡೆಯಿಂದ ದಯಪಾಲಿಸಲಾಗಿರುವ ಆಹಾರವನ್ನು ಉಣ್ಣಿರಿ ಮತ್ತು ಅವನಿಗೆ ಕೃತಜ್ಞತೆ ಸಲ್ಲಿಸಿರಿ. ಪಾವನ ನಗರ ಮತ್ತು ಕ್ಷಮಾಶೀಲ ಒಡೆಯ
لَقَدْ كَانَ لِسَبَإٍ فِي مَسْكَنِهِمْ آيَةٌ ۖ جَنَّتَانِ عَن يَمِينٍ وَشِمَالٍ ۖ كُلُوا مِن رِّزْقِ رَبِّكُمْ وَاشْكُرُوا لَهُ ۚ بَلْدَةٌ طَيِّبَةٌ وَرَبٌّ غَفُورٌ ١٥
📖 ಅನುವಾದ
ಆಯತ್ 15
ಆದರೆ ಅವರು ಕಡೆಗಣಿಸಿದರು. ಆಗ ನಾವು ಅವರ ಮೇಲೆ ಪ್ರವಾಹವನ್ನು ಎರಗಿಸಿದೆವು ಮತ್ತು ನಾವು ಅವರ ಎರಡೂ ತೋಟಗಳನ್ನು ಕಹಿಯಾದ ಫಲಗಳು, ಮುಳ್ಳು ಗಿಡಗಳು ಮತ್ತು ತೀರಾ ಕಡಿಮೆ ಫಲ ನೀಡುವ ಕೆಲವು ಮರಗಳು ಮಾತ್ರ ಇರುವ ತೋಟಗಳಾಗಿ ಮಾರ್ಪಡಿಸಿ ಬಿಟ್ಟೆವು
فَأَعْرَضُوا فَأَرْسَلْنَا عَلَيْهِمْ سَيْلَ الْعَرِمِ وَبَدَّلْنَاهُم بِجَنَّتَيْهِمْ جَنَّتَيْنِ ذَوَاتَيْ أُكُلٍ خَمْطٍ وَأَثْلٍ وَشَيْءٍ مِّن سِدْرٍ قَلِيلٍ ١٦
📖 ಅನುವಾದ
ಆಯತ್ 16
ಅದು ಅವರ ಕೃತಘ್ನತೆಯ ಕಾರಣ ನಾವು ಅವರಿಗೆ ನೀಡಿದ ಶಿಕ್ಷೆ. ನಾವೇನು ಕೃತಘ್ನರ ಹೊತರು ಬೇರೆ ಯಾರನ್ನಾದರೂ (ಈರೀತಿ) ಶಿಕ್ಷಿಸುತ್ತೇವೆಯೇ
ذَٰلِكَ جَزَيْنَاهُم بِمَا كَفَرُوا ۖ وَهَلْ نُجَازِي إِلَّا الْكَفُورَ ١٧
📖 ಅನುವಾದ
ಆಯತ್ 17
ಮುಂದೆ ನಾವು, ಅವರ ಹಾಗೂ ನಾವು ಸಮೃದ್ಧಗೊಳಿಸಿರುವ ನಾಡುಗಳ ನಡುವೆ, ಎದ್ದು ಕಾಣುವಂತಹ (ಸುಂದರ, ಸಂಪನ್ನ) ನಾಡುಗಳನ್ನು ನೆಲೆಸಿದೆವು ಮತ್ತು ಅವುಗಳನ್ನು ಸಂಚಾರದ ಹಾದಿಯಾಗಿಸಿದೆವು. (ಇಲ್ಲಿ) ನೀವು ಇರುಳಲ್ಲೂ ಹಗಲಲ್ಲೂ ನಿರ್ಭಯವಾಗಿ ಸಂಚರಿಸಿರಿ (ಎಂದು ಅವರಿಗೆ ಸೂಚಿಸಲಾಗಿತ್ತು)
وَجَعَلْنَا بَيْنَهُمْ وَبَيْنَ الْقُرَى الَّتِي بَارَكْنَا فِيهَا قُرًى ظَاهِرَةً وَقَدَّرْنَا فِيهَا السَّيْرَ ۖ سِيرُوا فِيهَا لَيَالِيَ وَأَيَّامًا آمِنِينَ ١٨
📖 ಅನುವಾದ
ಆಯತ್ 18
ಆದರೆ ಅವರು, ‘‘ನಮ್ಮೊಡೆಯಾ, ನಮ್ಮ ಪ್ರಯಾಣದ ಗುರಿಗಳ ನಡುವಣ ಅಂತರವನ್ನು ಹೆಚ್ಚಿಸು’’ ಎಂದು ಪ್ರಾರ್ಥಿಸಿದರು. ಹೀಗೆ ಅವರು ತಮ್ಮ ಮೇಲೆ ತಾವೇ ಅಕ್ರಮವೆಸಗಿದರು. ಕೊನೆಗೆ ನಾವು ಅವರನ್ನು ಕಥೆಗಳಾಗಿಸಿ ಬಿಟ್ಟೆವು ಮತ್ತು ನಾವು ಅವರನ್ನು ಸಂಪೂರ್ಣ ವಿಚ್ಛಿದ್ರಗೊಳಿಸಿ ಬಿಟ್ಟೆವು. ಪ್ರತಿಯೊಬ್ಬ ಸಹನಶೀಲ, ಕೃತಜ್ಞನಿಗೆ ಇದರಲ್ಲಿ ಖಂಡಿತ ಪಾಠವಿದೆ
فَقَالُوا رَبَّنَا بَاعِدْ بَيْنَ أَسْفَارِنَا وَظَلَمُوا أَنفُسَهُمْ فَجَعَلْنَاهُمْ أَحَادِيثَ وَمَزَّقْنَاهُمْ كُلَّ مُمَزَّقٍ ۚ إِنَّ فِي ذَٰلِكَ لَآيَاتٍ لِّكُلِّ صَبَّارٍ شَكُورٍ ١٩
📖 ಅನುವಾದ
ಆಯತ್ 19
ಶೈತಾನನು ಅವರ ಕುರಿತಂತೆ ತನ್ನ ನಿರೀಕ್ಷೆ ನಿಜವಾದುದನ್ನು ಕಂಡನು. ವಿಶ್ವಾಸಿಗಳ ಒಂದು ಗುಂಪಿನ ಹೊರತು ಉಳಿದೆಲ್ಲರೂ ಅವನನ್ನು ಹಿಂಬಾಲಿಸಿದರು
وَلَقَدْ صَدَّقَ عَلَيْهِمْ إِبْلِيسُ ظَنَّهُ فَاتَّبَعُوهُ إِلَّا فَرِيقًا مِّنَ الْمُؤْمِنِينَ ٢٠
📖 ಅನುವಾದ
ಆಯತ್ 20
ನಿಜವಾಗಿ ಅವನಿಗೆ (ಶೈತಾನನಿಗೆ) ಅವರ ಮೇಲೆ ನಿಯಂತ್ರಣವೇನೂ ಇರಲಿಲ್ಲ. ನಾವಂತು ಪರಲೋಕದಲ್ಲಿ ನಂಬಿಕೆ ಉಳ್ಳವರು ಯಾರು ಮತ್ತು ಆ ಕುರಿತು ಸಂದೇಹ ಉಳ್ಳವರು ಯಾರು ಎಂಬುದನ್ನು ಮಾತ್ರ ತಿಳಿಯ ಬಯಸಿದ್ದೆವು. ನಿಮ್ಮ ಒಡೆಯನೇ ಎಲ್ಲ ವಸ್ತುಗಳ ರಕ್ಷಕನು
وَمَا كَانَ لَهُ عَلَيْهِم مِّن سُلْطَانٍ إِلَّا لِنَعْلَمَ مَن يُؤْمِنُ بِالْآخِرَةِ مِمَّنْ هُوَ مِنْهَا فِي شَكٍّ ۗ وَرَبُّكَ عَلَىٰ كُلِّ شَيْءٍ حَفِيظٌ ٢١
📖 ಅನುವಾದ
ಆಯತ್ 21
ಹೇಳಿರಿ; ಅಲ್ಲಾಹನ ಹೊರತು ನೀವು (ದೇವರೆಂದು) ನಂಬಿಕೊಂಡಿರುವವರನ್ನೆಲ್ಲಾ ಪ್ರಾರ್ಥಿಸಿ ನೋಡಿರಿ. ಆಕಾಶಗಳಲ್ಲಾಗಲಿ ಭೂಮಿಯಲ್ಲಾಗಲಿ ಒಂದು ಅಣುಗಾತ್ರದ ವಸ್ತುವಿಗೂ ಅವರು ಮಾಲಕರಲ್ಲ. ಅವೆರಡರಲ್ಲೂ ಅವರಿಗೆ ಯಾವ ಪಾಲೂ ಇಲ್ಲ ಮತ್ತು ಅವರಲ್ಲಿ ಯಾರೂ ಸಹಾಯಕರಲ್ಲ
قُلِ ادْعُوا الَّذِينَ زَعَمْتُم مِّن دُونِ اللَّهِ ۖ لَا يَمْلِكُونَ مِثْقَالَ ذَرَّةٍ فِي السَّمَاوَاتِ وَلَا فِي الْأَرْضِ وَمَا لَهُمْ فِيهِمَا مِن شِرْكٍ وَمَا لَهُ مِنْهُم مِّن ظَهِيرٍ ٢٢
📖 ಅನುವಾದ
ಆಯತ್ 22
ಅವನು ಅನುಮತಿಸಿದವರ ಹೊರತು ಬೇರೆ ಯಾರ ಶಿಫಾರಸ್ಸೂ ಅವನ ಬಳಿ ಉಪಯುಕ್ತವಾಗದು. ಎಷ್ಟೆಂದರೆ, (ಮಲಕ್ಗಳು ಕೂಡಾ) ತಮ್ಮ ಮನದ ಆತಂಕವು ತೊಲಗಿದಾಗ, ‘‘ನಿಮ್ಮೊಡೆಯನು ಏನಂದನು?’’ ಎಂದು ಕೇಳುವರು. ಅವರು (ಇತರ ಮಲಕ್ಗಳು), ‘‘ಅವನು ಸತ್ಯವನ್ನೇ ಹೇಳಿರುವನು ಮತ್ತು ಅವನು ಶ್ರೇಷ್ಠನೂ ಉನ್ನತನೂ ಆಗಿರುವನು’’ ಎನ್ನುವರು
وَلَا تَنفَعُ الشَّفَاعَةُ عِندَهُ إِلَّا لِمَنْ أَذِنَ لَهُ ۚ حَتَّىٰ إِذَا فُزِّعَ عَن قُلُوبِهِمْ قَالُوا مَاذَا قَالَ رَبُّكُمْ ۖ قَالُوا الْحَقَّ ۖ وَهُوَ الْعَلِيُّ الْكَبِيرُ ٢٣
📖 ಅನುವಾದ
ಆಯತ್ 23
‘‘ಆಕಾಶಗಳಿಂದಲೂ ಭೂಮಿಯಿಂದಲೂ ನಿಮಗೆ ಆಹಾರವನ್ನು ಒದಗಿಸುವವನು ಯಾರು?’’ ಎಂದು ಕೇಳಿರಿ. ಮತ್ತು ಹೇಳಿರಿ: ‘‘ಅಲ್ಲಾಹನು. ಇನ್ನು, ಒಂದೋ ನಾವು ಮಾತ್ರ ಅಥವಾ ನೀವು ಮಾತ್ರ (ನಮ್ಮಿಬ್ಬರಲ್ಲಿ ಒಬ್ಬರು ಮಾತ್ರ) ಸನ್ಮಾರ್ಗದಲ್ಲಿರುವರು ಅಥವಾ (ನಮ್ಮಿಬ್ಬರಲ್ಲಿ ಒಬ್ಬರು ಮಾತ್ರ) ಸ್ಪಷ್ಟವಾಗಿ ದಾರಿಗೆಟ್ಟಿರುವರು’’
۞ قُلْ مَن يَرْزُقُكُم مِّنَ السَّمَاوَاتِ وَالْأَرْضِ ۖ قُلِ اللَّهُ ۖ وَإِنَّا أَوْ إِيَّاكُمْ لَعَلَىٰ هُدًى أَوْ فِي ضَلَالٍ مُّبِينٍ ٢٤
📖 ಅನುವಾದ
ಆಯತ್ 24
ಹೇಳಿರಿ; ನಾವು ಮಾಡಿದ ಅಪರಾಧಗಳ ಕುರಿತು ನಿಮ್ಮನ್ನು ಪ್ರಶ್ನಿಸಲಾಗದು ಮತ್ತು ನಿಮ್ಮ ಕರ್ಮಗಳ ಕುರಿತು ನಮ್ಮನ್ನು ವಿಚಾರಿಸಲಾಗದು
قُل لَّا تُسْأَلُونَ عَمَّا أَجْرَمْنَا وَلَا نُسْأَلُ عَمَّا تَعْمَلُونَ ٢٥
📖 ಅನುವಾದ
ಆಯತ್ 25
ಹೇಳಿರಿ; ನಮ್ಮೊಡೆಯನು ನಮ್ಮನ್ನು ಒಂದೆಡೆ ಸೇರಿಸುವನು ಮತ್ತು ನಮ್ಮ ನಡುವೆ ನ್ಯಾಯೋಚಿತವಾಗಿ ತೀರ್ಮಾನ ಮಾಡುವನು. ಅವನು ಅರಿವುಳ್ಳ ತೀರ್ಪುಗಾರ ನಾಗಿದ್ದಾನೆ
قُلْ يَجْمَعُ بَيْنَنَا رَبُّنَا ثُمَّ يَفْتَحُ بَيْنَنَا بِالْحَقِّ وَهُوَ الْفَتَّاحُ الْعَلِيمُ ٢٦
📖 ಅನುವಾದ
ಆಯತ್ 26
ಹೇಳಿರಿ; ನೀವು ಅವನ (ಅಲ್ಲಾಹನ) ಜೊತೆ ಸೇರಿಸಿ, ಅವನ ಪಾಲುದಾರರಾಗಿಸಿ ಬಿಟ್ಟವರನ್ನು ನನಗೆ ತೋರಿಸಿರಿ. ಇಲ್ಲ! (ಅವರು ಯಾರೂ ಅವನ ಪಾಲುದಾರರಲ್ಲ). ನಿಜವಾಗಿ, ಅಲ್ಲಾಹನು ಪ್ರಬಲನೂ ಯುಕ್ತಿವಂತನೂ ಆಗಿದ್ದಾನೆ
قُلْ أَرُونِيَ الَّذِينَ أَلْحَقْتُم بِهِ شُرَكَاءَ ۖ كَلَّا ۚ بَلْ هُوَ اللَّهُ الْعَزِيزُ الْحَكِيمُ ٢٧
📖 ಅನುವಾದ
ಆಯತ್ 27
(ದೂತರೇ,) ಖಂಡಿತವಾಗಿಯೂ ನಾವು ನಿಮ್ಮನ್ನು ಶುಭವಾರ್ತೆ ನೀಡುವವರಾಗಿ ಹಾಗೂ ಎಚ್ಚರಿಸುವವರಾಗಿ, ಸಂಪೂರ್ಣ ಮಾನವ ಕುಲದೆಡೆಗೆ ಕಳುಹಿಸಿರುವೆವು. ಆದರೆ ಮಾನವರಲ್ಲಿ ಹೆಚ್ಚಿನವರು ತಿಳಿದಿಲ್ಲ
وَمَا أَرْسَلْنَاكَ إِلَّا كَافَّةً لِّلنَّاسِ بَشِيرًا وَنَذِيرًا وَلَٰكِنَّ أَكْثَرَ النَّاسِ لَا يَعْلَمُونَ ٢٨
📖 ಅನುವಾದ
ಆಯತ್ 28
ಮತ್ತು ಅವರು, ‘‘ನೀವು ಸತ್ಯವಂತರಾಗಿದ್ದರೆ, ಆ ವಾಗ್ದಾನಿತ ದಿನವು ಬರುವುದು ಯಾವಾಗ?’’ ಎಂದು ಕೇಳುತ್ತಾರೆ
وَيَقُولُونَ مَتَىٰ هَٰذَا الْوَعْدُ إِن كُنتُمْ صَادِقِينَ ٢٩
📖 ಅನುವಾದ
ಆಯತ್ 29
ಹೇಳಿರಿ; ನಿಮಗೆ ವಾಗ್ದಾನ ಮಾಡಲಾಗಿರುವ ದಿನವು ನಿಶ್ಚಿತವಾಗಿದೆ. ಅದನ್ನು ಒಂದು ಕ್ಷಣದ ಮಟ್ಟಿಗೂ ಮುಂದೂಡಲು ಅಥವಾ ಹಿಂದೂಡಲು ನಿಮಗೆ ಸಾಧ್ಯವಿಲ್ಲ
قُل لَّكُم مِّيعَادُ يَوْمٍ لَّا تَسْتَأْخِرُونَ عَنْهُ سَاعَةً وَلَا تَسْتَقْدِمُونَ ٣٠
📖 ಅನುವಾದ
ಆಯತ್ 30
ಮತ್ತು ಧಿಕ್ಕಾರಿಗಳು, ನಾವು ಈ ಕುರ್ಆನನ್ನಾಗಲಿ ಇದಕ್ಕಿಂತ ಹಿಂದಿನ ಗ್ರಂಥಗಳನ್ನಾಗಲಿ ನಂಬುವುದಿಲ್ಲ ಎನ್ನುತ್ತಾರೆ. ಆ ಅಕ್ರಮಿಗಳನ್ನು ಅವರ ಒಡೆಯನ ಮುಂದೆ ನಿಲ್ಲಿಸಲಾಗುವ ದೃಶ್ಯವನ್ನು ನೀವು ನೋಡುವಂತಿದ್ದರೆ ಎಷ್ಟು ಚೆನ್ನಾಗಿತ್ತು! (ಅಂದು) ಅವರಲ್ಲಿ ಪ್ರತಿಯೊಬ್ಬನೂ ತನ್ನ ಮಾತನ್ನು ಇನ್ನೊಬ್ಬರ ಮೇಲೆ ಆರೋಪಿಸುವನು. ಅಂದು ಮರ್ದಿತರು ಅಹಂಕಾರಿಗಳೊಡನೆ, ‘‘ನೀವು ಇಲ್ಲದೆ ಇದ್ದಿದ್ದರೆ ನಾವು ವಿಶ್ವಾಸಿಗಳಾಗಿರುತ್ತಿದ್ದೆವು’’ ಎನ್ನುವರು
وَقَالَ الَّذِينَ كَفَرُوا لَن نُّؤْمِنَ بِهَٰذَا الْقُرْآنِ وَلَا بِالَّذِي بَيْنَ يَدَيْهِ ۗ وَلَوْ تَرَىٰ إِذِ الظَّالِمُونَ مَوْقُوفُونَ عِندَ رَبِّهِمْ يَرْجِعُ بَعْضُهُمْ إِلَىٰ بَعْضٍ الْقَوْلَ يَقُولُ الَّذِينَ اسْتُضْعِفُوا لِلَّذِينَ اسْتَكْبَرُوا لَوْلَا أَنتُمْ لَكُنَّا مُؤْمِنِينَ ٣١
📖 ಅನುವಾದ
ಆಯತ್ 31
ಆಗ ಅಹಂಕಾರಿಗಳು ಮರ್ದಿತರೊಡನೆ, ‘‘ನಿಮ್ಮ ಬಳಿಗೆ ಮಾರ್ಗದರ್ಶನವು ಬಂದಿದ್ದಾಗ, ನಾವೇನು ನಿಮ್ಮನ್ನು ಅದರಿಂದ ತಡೆದು ನಿಲ್ಲಿಸಿದ್ದೆವೇ? ನಿಜವಾಗಿ, ನೀವೇ ಅಪರಾಧಿಗಳಾಗಿದ್ದಿರಿ’’ ಎನ್ನುವರು
قَالَ الَّذِينَ اسْتَكْبَرُوا لِلَّذِينَ اسْتُضْعِفُوا أَنَحْنُ صَدَدْنَاكُمْ عَنِ الْهُدَىٰ بَعْدَ إِذْ جَاءَكُم ۖ بَلْ كُنتُم مُّجْرِمِينَ ٣٢
📖 ಅನುವಾದ
ಆಯತ್ 32
ಮತ್ತು (ಇದಕ್ಕುತ್ತರವಾಗಿ) ಮರ್ದಿತರು, ಅಹಂಕಾರಿಗಳೊಡನೆ, ‘‘(ನೀವು) ಇರುಳಲ್ಲೂ ಹಗಲಲ್ಲೂ ಸಂಚುಗಳನ್ನು ಹೂಡುತ್ತಾ, ನಾವು ಅಲ್ಲಾಹನನ್ನು ಧಿಕ್ಕರಿಸಬೇಕೆಂದೂ ಇತರರನ್ನು ಅವನ ಜೊತೆ ಪಾಲುಗೊಳಿಸಬೇಕೆಂದೂ ನಮಗೆ ಆದೇಶಿಸುತ್ತಿದ್ದಿರಿ’’ ಎನ್ನುವರು. ಶಿಕ್ಷೆಯನ್ನು ಕಂಡಾಗ ಅವರೆಲ್ಲಾ ತಮ್ಮ ಪರಿತಾಪವನ್ನು ಬಚ್ಚಿಡುವರು ಮತ್ತು ನಾವು, ಧಿಕ್ಕಾರಿಗಳ ಕೊರಳಿಗೆ ಸರಪಣಿಗಳನ್ನು ಹಾಕಿ ಬಿಡುವೆವು. ಅವರಿಗೆ ಅವರ ಕರ್ಮಗಳ ಪ್ರತಿಫಲವಲ್ಲದೆ ಬೇರೇನಾದರೂ ಸಿಗಲುಂಟೇ
وَقَالَ الَّذِينَ اسْتُضْعِفُوا لِلَّذِينَ اسْتَكْبَرُوا بَلْ مَكْرُ اللَّيْلِ وَالنَّهَارِ إِذْ تَأْمُرُونَنَا أَن نَّكْفُرَ بِاللَّهِ وَنَجْعَلَ لَهُ أَندَادًا ۚ وَأَسَرُّوا النَّدَامَةَ لَمَّا رَأَوُا الْعَذَابَ وَجَعَلْنَا الْأَغْلَالَ فِي أَعْنَاقِ الَّذِينَ كَفَرُوا ۚ هَلْ يُجْزَوْنَ إِلَّا مَا كَانُوا يَعْمَلُونَ ٣٣
📖 ಅನುವಾದ
ಆಯತ್ 33
ನಾವು ಎಚ್ಚರಿಸುವವರನ್ನು ಕಳಿಸಿರುವ ಪ್ರತಿಯೊಂದು ನಾಡಿನಲ್ಲೂ ಅಲ್ಲಿನ ಶ್ರೀಮಂತರು, ‘‘ನಿಮ್ಮ ಜೊತೆ ಕಳಿಸಲಾಗಿರುವುದನ್ನು (ಸತ್ಯ ಸಂದೇಶವನ್ನು) ನಾವು ತಿರಸ್ಕರಿಸುತ್ತೇವೆ’’ ಎಂದೇ ಹೇಳಿರುವರು
وَمَا أَرْسَلْنَا فِي قَرْيَةٍ مِّن نَّذِيرٍ إِلَّا قَالَ مُتْرَفُوهَا إِنَّا بِمَا أُرْسِلْتُم بِهِ كَافِرُونَ ٣٤
📖 ಅನುವಾದ
ಆಯತ್ 34
ಹಾಗೆಯೇ ಅವರು, ‘‘ನಾವು (ನಿಮಗಿಂತ) ಹೆಚ್ಚಿನ ಸಂಪತ್ತು ಹಾಗೂ ಸಂತಾನ ಉಳ್ಳವರು. ನಾವು ಖಂಡಿತ ಶಿಕ್ಷೆಗೆ ಗುರಿಯಾಗಲಾರೆವು’’ ಎಂದಿರುವರು
وَقَالُوا نَحْنُ أَكْثَرُ أَمْوَالًا وَأَوْلَادًا وَمَا نَحْنُ بِمُعَذَّبِينَ ٣٥
📖 ಅನುವಾದ
ಆಯತ್ 35
ಹೇಳಿರಿ; ನನ್ನೊಡೆಯನು ತಾನಿಚ್ಛಿಸಿದವರಿಗೆ ಆದಾಯವನ್ನು ವಿಸ್ತಾರಗೊಳಿಸುತ್ತಾನೆ ಮತ್ತು ತಾನಿಚ್ಛಿಸಿದವರಿಗೆ ಅದನ್ನು ಸೀಮಿತ ಗೊಳಿಸಿ ಬಿಡುತ್ತಾನೆ. ಆದರೆ ಜನರಲ್ಲಿ ಹೆಚ್ಚಿನವರು ತಿಳಿದಿಲ್ಲ
قُلْ إِنَّ رَبِّي يَبْسُطُ الرِّزْقَ لِمَن يَشَاءُ وَيَقْدِرُ وَلَٰكِنَّ أَكْثَرَ النَّاسِ لَا يَعْلَمُونَ ٣٦
📖 ಅನುವಾದ
ಆಯತ್ 36
ನಮ್ಮ ದೃಷ್ಟಿಯಲ್ಲಿ ನಿಮ್ಮ ಸಂಪತ್ತಾಗಲಿ ನಿಮ್ಮ ಸಂತಾನಗಳಾಗಲಿ ಸ್ಥಾನಮಾನದಲ್ಲಿ ನಿಮ್ಮನ್ನು ನಮಗೆ ಹತ್ತಿರಗೊಳಿಸಿ ಬಿಡುವುದಿಲ್ಲ. ವಿಶ್ವಾಸಿಗಳು ಮತ್ತು ಸತ್ಕಾರ್ಯಗಳನ್ನು ಮಾಡಿದವರು ಮಾತ್ರ (ನಮಗೆ ಹತ್ತಿರವಿರುತ್ತಾರೆ). ಅವರಿಗೆ, ಅವರು ಮಾಡಿದ್ದ ಕರ್ಮಗಳಿಗಿಂತ ದುಪ್ಪಟ್ಟು ಪ್ರತಿಫಲ ಸಿಗಲಿದೆ ಮತ್ತು ಅವರು (ಸ್ವರ್ಗದಲ್ಲಿ) ಮೇಲಂತಸ್ತುಗಳಲ್ಲಿ ನೆಮ್ಮದಿಯಾಗಿರುವರು
وَمَا أَمْوَالُكُمْ وَلَا أَوْلَادُكُم بِالَّتِي تُقَرِّبُكُمْ عِندَنَا زُلْفَىٰ إِلَّا مَنْ آمَنَ وَعَمِلَ صَالِحًا فَأُولَٰئِكَ لَهُمْ جَزَاءُ الضِّعْفِ بِمَا عَمِلُوا وَهُمْ فِي الْغُرُفَاتِ آمِنُونَ ٣٧
📖 ಅನುವಾದ
ಆಯತ್ 37
ನಮ್ಮ ವಚನಗಳನ್ನು ಸೋಲಿಸಲು ಶ್ರಮಿಸುವವರೇ ಶಿಕ್ಷೆಗೆ ತುತ್ತಾಗುವವರಾಗಿದ್ದಾರೆ
وَالَّذِينَ يَسْعَوْنَ فِي آيَاتِنَا مُعَاجِزِينَ أُولَٰئِكَ فِي الْعَذَابِ مُحْضَرُونَ ٣٨
📖 ಅನುವಾದ
ಆಯತ್ 38
ಹೇಳಿರಿ; ನನ್ನೊಡೆಯನು ತನ್ನ ದಾಸರ ಪೈಕಿ ತಾನಿಚ್ಛಿಸಿದವರಿಗೆ ಆದಾಯವನ್ನು ವಿಸ್ತಾರಗೊಳಿಸುತ್ತಾನೆ ಮತ್ತು ತಾನಿಚ್ಛಿಸಿದವರಿಗೆ ಅದನ್ನು ಸೀಮಿತ ಗೊಳಿಸಿ ಬಿಡುತ್ತಾನೆ. ನೀವು ಸತ್ಕಾರ್ಯದಲ್ಲಿ ಮಾಡುವ ಪ್ರತಿಯೊಂದು ಖರ್ಚಿಗೂ ಅವನು ಪ್ರತಿಫಲ ನೀಡುವನು. ಅವನು ಅತ್ಯುತ್ತಮ ಅನ್ನದಾತನಾಗಿದ್ದಾನೆ
قُلْ إِنَّ رَبِّي يَبْسُطُ الرِّزْقَ لِمَن يَشَاءُ مِنْ عِبَادِهِ وَيَقْدِرُ لَهُ ۚ وَمَا أَنفَقْتُم مِّن شَيْءٍ فَهُوَ يُخْلِفُهُ ۖ وَهُوَ خَيْرُ الرَّازِقِينَ ٣٩
📖 ಅನುವಾದ
ಆಯತ್ 39
ಒಂದು ದಿನ, ಅವನು ಅವರೆಲ್ಲರನ್ನೂ ಒಂದೆಡೆ ಸೇರಿಸುವನು ಮತ್ತು ‘‘ಅವರು ಆರಾಧಿಸುತ್ತಿದ್ದುದು ನಿಮ್ಮನ್ನೇ?’’ ಎಂದು ಮಲಕ್ಗಳೊಡನೆ ಕೇಳುವನು
وَيَوْمَ يَحْشُرُهُمْ جَمِيعًا ثُمَّ يَقُولُ لِلْمَلَائِكَةِ أَهَٰؤُلَاءِ إِيَّاكُمْ كَانُوا يَعْبُدُونَ ٤٠
📖 ಅನುವಾದ
ಆಯತ್ 40
ಅವರು ಹೇಳುವರು; ‘‘ನೀನು ಪಾವನನು ಮತ್ತು ನಮ್ಮ ಪೋಷಕನು ನೀನೇ ಹೊರತು, ಅವರೇನಲ್ಲ. ನಿಜವಾಗಿ ಅವರು ಜಿನ್ನ್ಗಳನ್ನು ಪೂಜಿಸುತ್ತಿದ್ದರು ಮತ್ತು ಅವರಲ್ಲಿ ಹೆಚ್ಚಿನವರು ಅವುಗಳನ್ನೇ ನಂಬಿಕೊಂಡಿದ್ದರು’’
قَالُوا سُبْحَانَكَ أَنتَ وَلِيُّنَا مِن دُونِهِم ۖ بَلْ كَانُوا يَعْبُدُونَ الْجِنَّ ۖ أَكْثَرُهُم بِهِم مُّؤْمِنُونَ ٤١
📖 ಅನುವಾದ
ಆಯತ್ 41
ಹೀಗೆ, ಇಂದು ನಿಮ್ಮಲ್ಲಿ ಯಾರಿಗೂ ಪರಸ್ಪರರಿಗೆ ಯಾವುದೇ ಲಾಭವನ್ನಾಗಲಿ ಹಾನಿಯನ್ನಾಗಲಿ ಮಾಡುವ ಸಾಮರ್ಥ್ಯವಿಲ್ಲ. ಅಕ್ರಮ ವೆಸಗಿದವರೊಡನೆ ನಾವು, ‘‘ನೀವು ಧಿಕ್ಕರಿಸಿದ್ದರ ಫಲವಾಗಿ ಇಂದು ಬೆಂಕಿಯ ಶಿಕ್ಷೆಯನ್ನು ಸವಿಯಿರಿ’’ ಎನ್ನುವೆವು
فَالْيَوْمَ لَا يَمْلِكُ بَعْضُكُمْ لِبَعْضٍ نَّفْعًا وَلَا ضَرًّا وَنَقُولُ لِلَّذِينَ ظَلَمُوا ذُوقُوا عَذَابَ النَّارِ الَّتِي كُنتُم بِهَا تُكَذِّبُونَ ٤٢
📖 ಅನುವಾದ
ಆಯತ್ 42
ಅವರಿಗೆ, ಬಹಳ ಸ್ಪಷ್ಟವಾಗಿರುವ ನಮ್ಮ ವಚನಗಳನ್ನು ಓದಿ ಕೇಳಿಸಲಾದಾಗ ಅವರು, ‘‘ಈ ವ್ಯಕ್ತಿ ನಿಮ್ಮನ್ನು, ನಿಮ್ಮ ಪೂರ್ವಜರು ಆರಾಧಿಸುತ್ತಿದ್ದವುಗಳಿಂದ ತಡೆದು ದೂರವಿಡಲು ಬಯಸುತ್ತಾನೆ’’ ಎನ್ನುತ್ತಾರೆ. ಮತ್ತು ಅವರು ‘‘ಇದು ಕೇವಲ ಕಟ್ಟುಕತೆಯಲ್ಲದೆ ಬೇರೇನೂ ಅಲ್ಲ’’ ಎನ್ನುತ್ತಾರೆ. ಇನ್ನು ಸತ್ಯವು ತಮ್ಮ ಬಳಿಗೆ ಬಂದಾಗ, ಧಿಕ್ಕಾರಿಗಳು ಅದರ ಕುರಿತು ‘‘ಇದು ಸ್ಪಷ್ಟವಾದ ಇಂದ್ರಜಾಲವೇ ಹೊರತು ಬೇರೇನೂ ಅಲ್ಲ’’ ಎನ್ನುತ್ತಾರೆ
وَإِذَا تُتْلَىٰ عَلَيْهِمْ آيَاتُنَا بَيِّنَاتٍ قَالُوا مَا هَٰذَا إِلَّا رَجُلٌ يُرِيدُ أَن يَصُدَّكُمْ عَمَّا كَانَ يَعْبُدُ آبَاؤُكُمْ وَقَالُوا مَا هَٰذَا إِلَّا إِفْكٌ مُّفْتَرًى ۚ وَقَالَ الَّذِينَ كَفَرُوا لِلْحَقِّ لَمَّا جَاءَهُمْ إِنْ هَٰذَا إِلَّا سِحْرٌ مُّبِينٌ ٤٣
📖 ಅನುವಾದ
ಆಯತ್ 43
(ದೂತರೇ,) ನಾವು ಅವರಿಗೆ, ಅವರು ಓದುವಂತಹ ಯಾವುದೇ ಗ್ರಂಥವನ್ನು ನೀಡಿಲ್ಲ ಮತ್ತು ನಿಮಗಿಂತ ಮುಂಚೆ ಅವರೆಡೆಗೆ ಯಾವುದೇ ಎಚ್ಚರಿಸುವವನನ್ನೂ ಕಳುಹಿಸಿಲ್ಲ
وَمَا آتَيْنَاهُم مِّن كُتُبٍ يَدْرُسُونَهَا ۖ وَمَا أَرْسَلْنَا إِلَيْهِمْ قَبْلَكَ مِن نَّذِيرٍ ٤٤
📖 ಅನುವಾದ
ಆಯತ್ 44
ಇವರ ಹಿಂದಿನವರೂ ಧಿಕ್ಕರಿಸಿದ್ದರು ಮತ್ತು ಅವರಿಗೆ ನಾವು ನೀಡಿದ್ದಕ್ಕೆ ಹೋಲಿಸಿದರೆ ಇವರು ಅದರ ಹತ್ತರಲ್ಲೊಂದಂಶವನ್ನೂ ಪಡೆದಿಲ್ಲ. ಅವರು ನನ್ನ ದೂತರನ್ನು ತಿರಸ್ಕರಿಸಿದರು. ಕೊನೆಗೆ, ಹೇಗಿತ್ತು ನನ್ನ ಶಿಕ್ಷೆ
وَكَذَّبَ الَّذِينَ مِن قَبْلِهِمْ وَمَا بَلَغُوا مِعْشَارَ مَا آتَيْنَاهُمْ فَكَذَّبُوا رُسُلِي ۖ فَكَيْفَ كَانَ نَكِيرِ ٤٥
📖 ಅನುವಾದ
ಆಯತ್ 45
(ದೂತರೇ,) ಹೇಳಿರಿ; ನಾನು ನಿಮಗೆ ಕೇವಲ ಒಂದು ವಿಷಯವನ್ನು ಬೋಧಿಸುತ್ತೇನೆ. ನೀವು ಇಬ್ಬಿಬ್ಬರಾಗಿಯೂ ಒಬ್ಬೊಬ್ಬರಾಗಿಯೂ ಅಲ್ಲಾಹನಿಗಾಗಿ ನಿಂತು ಚಿಂತನೆ ನಡೆಸಿರಿ. ಈ ನಿಮ್ಮ ಸಂಗಾತಿಗೆ (ದೇವದೂತರಿಗೆ) ಹುಚ್ಚೇನೂ ಇಲ್ಲ. ಅವರು, ಘೋರ ಶಿಕ್ಷೆಯು ಬಂದು ಬಿಡುವ ಮುನ್ನ ನಿಮ್ಮನ್ನು ಎಚ್ಚರಿಸುವವರು ಮಾತ್ರ
۞ قُلْ إِنَّمَا أَعِظُكُم بِوَاحِدَةٍ ۖ أَن تَقُومُوا لِلَّهِ مَثْنَىٰ وَفُرَادَىٰ ثُمَّ تَتَفَكَّرُوا ۚ مَا بِصَاحِبِكُم مِّن جِنَّةٍ ۚ إِنْ هُوَ إِلَّا نَذِيرٌ لَّكُم بَيْنَ يَدَيْ عَذَابٍ شَدِيدٍ ٤٦
📖 ಅನುವಾದ
ಆಯತ್ 46
(ದೂತರೇ,) ಹೇಳಿರಿ; ನಾನು ನಿಮ್ಮಿಂದ ಯಾವುದೇ ಪ್ರತಿಫಲವನ್ನು ಕೇಳುತ್ತಿಲ್ಲ. ಅದು ನಿಮಗೇ ಇರಲಿ. ನನ್ನ ಪತ್ರಿಫಲವು ಕೇವಲ ಅಲ್ಲಾಹನ ಬಳಿ ಇದೆ. ಅವನು ಎಲ್ಲದಕ್ಕೂ ಸಾಕ್ಷಿಯಾಗಿದ್ದಾನೆ
قُلْ مَا سَأَلْتُكُم مِّنْ أَجْرٍ فَهُوَ لَكُمْ ۖ إِنْ أَجْرِيَ إِلَّا عَلَى اللَّهِ ۖ وَهُوَ عَلَىٰ كُلِّ شَيْءٍ شَهِيدٌ ٤٧
📖 ಅನುವಾದ
ಆಯತ್ 47
ಹೇಳಿರಿ; ಖಂಡಿತವಾಗಿಯೂ ನನ್ನ ಒಡೆಯನೇ ಸತ್ಯಕ್ಕೆ ಪ್ರಾಬಲ್ಯ ನೀಡುತ್ತಾನೆ. ಅವನು ಎಲ್ಲ ಗುಪ್ತ ವಿಷಯಗಳ ಜ್ಞಾನಿಯಾಗಿದ್ದಾನೆ
قُلْ إِنَّ رَبِّي يَقْذِفُ بِالْحَقِّ عَلَّامُ الْغُيُوبِ ٤٨
📖 ಅನುವಾದ
ಆಯತ್ 48
ಹೇಳಿರಿ; ಸತ್ಯವು ಬಂದು ಬಿಟ್ಟಿದೆ. ಇನ್ನು ಮಿಥ್ಯವು ಏನನ್ನೂ ಆರಂಭಿಸಲಿಕ್ಕಾಗಲಿ, ಪುನರಾರಂಭಿಸಲಿಕ್ಕಾಗಲಿ ಅಶಕ್ತವಾಗಿದೆ
قُلْ جَاءَ الْحَقُّ وَمَا يُبْدِئُ الْبَاطِلُ وَمَا يُعِيدُ ٤٩
📖 ಅನುವಾದ
ಆಯತ್ 49
ಹೇಳಿರಿ; ಒಂದು ವೇಳೆ ನಾನು ದಾರಿ ತಪ್ಪಿದ್ದರೆ, ನನ್ನ ದಾರಿಗೇಡಿತನದ ನಷ್ಟವನ್ನೂ ನಾನೇ ಅನುಭವಿಸುವೆನು. ಇನ್ನು ನಾನು ಸರಿದಾರಿಯಲ್ಲಿದ್ದರೆ, ನನ್ನ ಒಡೆಯನ ಕಡೆಯಿಂದ ನನಗೆ ನೀಡಲಾಗಿರುವ ದಿವ್ಯ ಸಂದೇಶವೇ ಅದಕ್ಕೆ ಕಾರಣವಾಗಿದೆ. ಅವನು ಖಂಡಿತ ಎಲ್ಲವನ್ನೂ ಕೇಳುವವನು ಹಾಗೂ (ಎಲ್ಲರ) ಸಮೀಪ ಇರುವವನಾಗಿದ್ದಾನೆ
قُلْ إِن ضَلَلْتُ فَإِنَّمَا أَضِلُّ عَلَىٰ نَفْسِي ۖ وَإِنِ اهْتَدَيْتُ فَبِمَا يُوحِي إِلَيَّ رَبِّي ۚ إِنَّهُ سَمِيعٌ قَرِيبٌ ٥٠
📖 ಅನುವಾದ
ಆಯತ್ 50
ನೀವು ಆ ದೃಶ್ಯವನ್ನು ಕಾಣುವಂತಿರಬೇಕಿತ್ತು. ಅವರು (ಧಿಕ್ಕಾರಿಗಳು) ತೀರಾ ಭಯಗ್ರಸ್ತರಾಗಿರುವರು. ಆದರೆ ತಪ್ಪಿಸಿಕೊಳ್ಳಲು ಅವರಿಗೆ ಸಾಧ್ಯವಾಗದು. ಹತ್ತಿರದ ಒಂದು ಪ್ರದೇಶದಲ್ಲೇ ಅವರು ಸಿಕ್ಕಿ ಬೀಳುವರು
وَلَوْ تَرَىٰ إِذْ فَزِعُوا فَلَا فَوْتَ وَأُخِذُوا مِن مَّكَانٍ قَرِيبٍ ٥١
📖 ಅನುವಾದ
ಆಯತ್ 51
ಆಗ ಅವರು, ನಾವು ಇದನ್ನು ನಂಬಿದೆವು ಎನ್ನುವರು. ಆದರೆ ಅಷ್ಟು ದೂರ ಹೋದ ಬಳಿಕ ಅವರಿಗೆಲ್ಲಿರುವುದು, ಆಶ್ರಯ
وَقَالُوا آمَنَّا بِهِ وَأَنَّىٰ لَهُمُ التَّنَاوُشُ مِن مَّكَانٍ بَعِيدٍ ٥٢
📖 ಅನುವಾದ
ಆಯತ್ 52
ಈ ಹಿಂದೆ ಅವರು ಇದನ್ನು ಧಿಕ್ಕರಿಸಿದ್ದರು ಮತ್ತು ದೂರ ನಿಂತು ಗುಪ್ತವಾಗಿ (ಈ ಕುರಿತು) ಏನೇನೋ ಮಾತುಗಳನ್ನಾಡುತ್ತಿದ್ದರು
وَقَدْ كَفَرُوا بِهِ مِن قَبْلُ ۖ وَيَقْذِفُونَ بِالْغَيْبِ مِن مَّكَانٍ بَعِيدٍ ٥٣
📖 ಅನುವಾದ
ಆಯತ್ 53
ಗತಕಾಲದ ಅವರ ಕುಲಬಾಂಧವರಿಗೆ ಮಾಡಿದಂತೆ, ಇದೀಗ ಅವರ ಹಾಗೂ ಅವರ ಬಯಕೆಗಳ ನಡುವೆ ತೆರೆಯನ್ನು ಎಳೆದು ಬಿಡಲಾಗುವುದು. ಅವರು ಭಾರೀ ಸಂಶಯದಲ್ಲಿದ್ದರು
وَحِيلَ بَيْنَهُمْ وَبَيْنَ مَا يَشْتَهُونَ كَمَا فُعِلَ بِأَشْيَاعِهِم مِّن قَبْلُ ۚ إِنَّهُمْ كَانُوا فِي شَكٍّ مُّرِيبٍ ٥٤
📖 ಅನುವಾದ
ಆಯತ್ 54
ಎಲ್ಲ ಹೊಗಳಿಕೆಗಳು ಅಲ್ಲಾಹನಿಗೆ. ಆಕಾಶಗಳನ್ನು ಹಾಗೂ ಭೂಮಿಯನ್ನು ನಿರ್ಮಿಸಿದವನು (ಮತ್ತು) ತಲಾ ಎರಡು, ಮೂರು ಹಾಗೂ ನಾಲ್ಕು ರೆಕ್ಕೆಗಳಿರುವ ಮಲಕ್ಗಳನ್ನು ದೂತರಾಗಿ ಕಳಿಸಿದವನು ಅವನೇ. ಅವನು ತನ್ನ ಸೃಷ್ಟಿಯಲ್ಲಿ ತಾನಿಚ್ಛಿಸಿದ್ದನ್ನು ಹೆಚ್ಚಿಸುತ್ತಾನೆ. ಅಲ್ಲಾಹನು ಖಂಡಿತ ಎಲ್ಲವನ್ನೂ ಮಾಡಬಲ್ಲವನಾಗಿದ್ದಾನೆ
ಓದಿ ಸೂರಾ ಸಬಾ ಕನ್ನಡ ಅನುವಾದ – ಪಠಣ ಮತ್ತು ಆಡಿಯೋ
ಪವಿತ್ರ ಕುರಾನ್
Tuesday, August 18, 2026
Don't forget us in your sincere prayers

