ಸೂರಾ ಅರ್-ರಾದ್ pdf — ಡೌನ್ಲೋಡ್ (ಕನ್ನಡ)
ಸೂರಾ ಅರ್-ರಾದ್ pdf ಕನ್ನಡ — ಡೌನ್ಲೋಡ್ ಸೂರಾ ಅರ್-ರಾದ್ ಅನುವಾದ. ಅರ್-ರಾದ್ (Medinan) 43 ಆಯತ್.
Related
- ಅರ್-ರಾದ್ ಅನುವಾದಕನ್ನಡ
- ಅರ್-ರಾದ್ mp3ಆಲಿಸಿ
- Quran Index ಕನ್ನಡ114
More ಸೂರಾ PDF
ಸೂರಾ ಅರ್-ರಾದ್

ﭑﭒﭓﭔﭕﭖﭗﭘﭙﭚﭛﭜﭝﭞﭟﭠﭡﭢ
ಭೂಮಿಯಲ್ಲಿ ಪರಸ್ಪರ ನಿಕಟವಾಗಿರುವ ಹಲವು (ವಿಭಿನ್ನ) ಭಾಗಗಳಿವೆ. ದ್ರಾಕ್ಷಾ ತೋಟಗಳು ಹಾಗೂ ಹೊಲಗಳಿವೆ. ಕವಲೊಡೆದ ಮತ್ತು ಕವಲೊಡೆಯದ ಖರ್ಜೂರದ ಗಿಡಗಳಿವೆ. ಅವುಗಳಿಗೆಲ್ಲಾ ನೀರು ಒಂದೇ ಮೂಲದಿಂದ ಒದಗುತ್ತದೆ. ಆದರೆ ರುಚಿಯ ದೃಷ್ಟಿಯಿಂದ ನಾವು ಕೆಲವು ಫಲಗಳಿಗೆ ಮತ್ತೆ ಕೆಲವು ಫಲಗಳಿಗಿಂತ ಹೆಚ್ಚಿನ ಶ್ರೇಷ್ಠತೆಯನ್ನು ನೀಡಿರುತ್ತೇವೆ. ಆಲೋಚಿಸುವವರಿಗೆ ಖಂಡಿತ ಇದರಲ್ಲಿ ಪಾಠಗಳಿವೆ
ﭣﭤﭥﭦﭧﭨﭩﭪﭫﭬﭭﭮﭯﭰﭱﭲﭳﭴﭵﭶﭷﭸﭹﭺﭻﭼﭽﭾﭿﮀﮁ
ನಿಮಗೆ ಅಚ್ಚರಿ ಪಡಬೇಕಿದ್ದರೆ, ‘‘ನಾವು ಮಣ್ಣಾದ ಬಳಿಕ ನಮ್ಮನ್ನು ಮತ್ತೆ ಹೊಸದಾಗಿ ಸೃಷ್ಟಿಸಲಾಗುವುದೇ?’’ ಎಂಬ ಅವರ ಮಾತು ಅಚ್ಚರಿಗೆ ಯೋಗ್ಯವಾಗಿದೆ. ಅವರೇ, ತಮ್ಮ ಒಡೆಯನನ್ನು ಧಿಕ್ಕರಿಸಿದವರು. ಅವರೇ, ತಮ್ಮ ಕೊರಳುಗಳಲ್ಲಿ ನೊಗಗಳಿರುವವರು ಮತ್ತು ಅವರೇ ನರಕದವರು. ಅವರು ಸದಾಕಾಲ ಅದರಲ್ಲೇ ಇರುವರು
ﮂﮃﮄﮅﮆﮇﮈﮉﮊﮋﮌﮍﮎﮏﮐﮑﮒﮓﮔﮕﮖﮗﮘﮙﮚﮛﮜﮝ
(ದೂತರೇ,) ಅವರು ನಿಮ್ಮ ಬಳಿ, ಒಳಿತಿಗಿಂತ ಮುನ್ನ ಕೆಡುಕಿಗಾಗಿ ಆತುರ ಪಡುತ್ತಾರೆ. ಹಲವು ಪಾಠದಾಯಕ ಉದಾಹರಣೆಗಳು ಅವರಿಗಿಂತ ಹಿಂದೆ ಗತಿಸಿವೆ. ಖಂಡಿತವಾಗಿಯೂ ನಿಮ್ಮ ಒಡೆಯನು ಮಾನವರ ಅಕ್ರಮದ ಹೊರತಾಗಿಯೂ ಅವರನ್ನು ಕ್ಷಮಿಸುವವನಾಗಿದ್ದಾನೆ. ಹಾಗೆಯೇ, ಖಂಡಿತವಾಗಿಯೂ ನಿಮ್ಮ ಒಡೆಯನು ತೀವ್ರವಾಗಿ ದಂಡಿಸುವವನಾಗಿದ್ದಾನೆ
ﮞﮟﮠﮡﮢﮣﮤﮥﮦﮧﮨﮩﮪﮫﮬﮭﮮﮯﮰﮱﯓﯔﯕﯖﯗﯘﯙﯚﯛ
‘‘ಅವನ ಒಡೆಯನ ಕಡೆಯಿಂದ ಅವನ ಬಳಿಗೆ ಯಾವುದೇ ಪುರಾವೆ ಇಳಿದು ಬಂದಿಲ್ಲವೇಕೆ?’’ ಎಂದು ಧಿಕ್ಕಾರಿಗಳು ಕೇಳುತ್ತಾರೆ. ನಿಜವಾಗಿ, ನೀವು ಎಚ್ಚರಿಸುವವರಾಗಿರುವಿರಿ ಮತ್ತು ಪ್ರತಿಯೊಂದು ಜನಾಂಗಕ್ಕೂ ಮಾರ್ಗದರ್ಶಿ ಗಳಿರುತ್ತಾರೆ
ﯜﯝﯞﯟﯠﯡﯢﯣﯤﯥﯦﯧﯨﯩﯪﯫﯬﯭﯮﯯﯰﯱﯲﯳﯴﯵﯶﯷﯸﯹﯺ
ಪ್ರತಿಯೊಬ್ಬ ಹೆಣ್ಣು ತನ್ನ ಹೊಟ್ಟೆಯಲ್ಲಿ ಏನನ್ನು ಹೊತ್ತಿರುವಳು ಮತ್ತು ಗರ್ಭಗಳಲ್ಲಿ ಅರಳುತ್ತಿರುವುದೇನು ಹಾಗೂ ಮುದುಡುತ್ತಿರುವುದೇನು ಎಂಬುದನ್ನು ಅಲ್ಲಾಹನು ಬಲ್ಲನು. ಅವನ ಬಳಿ ಪ್ರತಿಯೊಂದಕ್ಕೂ ಒಂದು ಪ್ರಮಾಣವು ನಿಶ್ಚಿತವಾಗಿದೆ
ﭑﭒﭓﭔﭕﭖﭗﭘﭙﭚﭛﭜﭝﭞﭟﭠﭡﭢﭣﭤﭥﭦﭧ
ಗುಪ್ತವಾಗಿರುವ ಹಾಗೂ ಬಹಿರಂಗವಾಗಿರುವ ಎಲ್ಲವನ್ನೂ ಅವನು ಬಲ್ಲನು. ಅವನು ಎಲ್ಲರಿಗಿಂತಲೂ ದೊಡ್ಡವನು ಮತ್ತು ಸದಾ ಉನ್ನತನು
ﭨﭩﭪﭫﭬﭭﭮﭯﭰﭱﭲﭳﭴﭵﭶﭷﭸﭹ
ನಿಮ್ಮಲ್ಲಿ ಗುಟ್ಟಾಗಿ ಮಾತನಾಡುವವನಿರಲಿ, ಜೋರಾಗಿ ಮಾತನಾಡುವವನಿರಲಿ, ಇರುಳಲ್ಲಿ ಅಡಗಿಕೊಂಡವನಿರಲಿ, ಹಗಲಲ್ಲಿ ನಡೆದಾಡುತ್ತಿರುವವನಿರಲಿ – (ಅಲ್ಲಾಹನ ಮಟ್ಟಿಗೆ) ಅವರೆಲ್ಲರೂ ಸಮಾನರು
ﭺﭻﭼﭽﭾﭿﮀﮁﮂﮃﮄﮅﮆﮇﮈﮉﮊ
ಅಲ್ಲಾಹನ ಅಪ್ಪಣೆಯಂತೆ, ಸರದಿ ಪ್ರಕಾರ ಬಂದು ಅವನನ್ನು (ಮಾನವನನ್ನು) ರಕ್ಷಿಸುವ, ಕಾವಲುಗಾರರು ಅವನ ಮುಂದೆಯೂ ಹಿಂದೆಯೂ ಸದಾ ಇರುತ್ತಾರೆ. ಒಂದು ಸಮುದಾಯವು ಸ್ವತಃ ತನ್ನ ಸ್ಥಿತಿಯನ್ನು ಬದಲಿಸುವ ತನಕ, ಅಲ್ಲಾಹನು ಅದರ ಸ್ಥಿತಿಯನ್ನು ಖಂಡಿತ ಬದಲಿಸುವುದಿಲ್ಲ. ಇನ್ನು ಅಲ್ಲಾಹನು ಒಂದು ಸಮುದಾಯಕ್ಕೆ ಕೇಡನ್ನು ಬಗೆದರೆ, ಅದನ್ನು ನಿವಾರಿಸಬಲ್ಲವರು ಯಾರೂ ಇಲ್ಲ ಮತ್ತು ಅವರಿಗೆ ಅವನ ಹೊರತು ಬೇರಾರೂ ಸಹಾಯಕರಿಲ್ಲ
ﮋﮌﮍﮎﮏﮐ
ನಿಮಗೆ ಭಯದ ಮತ್ತು ನಿರೀಕ್ಷೆಯ ಮಿಂಚನ್ನು ತೋರಿಸುವವನು ಮತ್ತು ಭಾರವಾದ ಮೋಡವನ್ನು ಚಲಿಸುವವನು ಅವನೇ
ﮑﮒﮓﮔﮕﮖﮗﮘﮙﮚﮛﮜﮝﮞﮟ
ಗುಡುಗು ಅವನ (ಅಲ್ಲಾಹನ) ಪಾವಿತ್ರವನ್ನು ಜಪಿಸುತ್ತಾ ಅವನ ಗುಣಗಾನ ಮಾಡುತ್ತದೆ. ಮಲಕ್ಗಳೂ ಭಕ್ತಿಯೊಂದಿಗೆ ( ಇದನ್ನೇ ಮಾಡುತ್ತಿರುತ್ತಾರೆ). ಅವನೇ, ಅಬ್ಬರಿಸುವ ಸಿಡಿಲನ್ನು ಕಳಿಸುತ್ತಾನೆ ಮತ್ತು ತಾನಿಚ್ಛಿಸಿದವರ ಮೇಲೆ ಅದನ್ನು ಬೀಳಿಸುತ್ತಾನೆ. ಅವರು (ಧಿಕ್ಕಾರಿಗಳು) ಅಲ್ಲಾಹನ ವಿಷಯದಲ್ಲಿ ಜಗಳಾಡುತ್ತಾರೆ. ಅವನು ಬಹಳ ಕಠೋರವಾಗಿ ಹಿಡಿಯುವವನಾಗಿದ್ದಾನೆ
ﮠﮡﮢﮣﮤﮥﮦﮧﮨﮩﮪﮫﮬﮭﮮﮯﮰﮱﯓﯔﯕﯖﯗﯘﯙﯚﯛﯜﯝﯞﯟﯠﯡﯢﯣﯤﯥﯦﯧ
ಅವನನ್ನು (ಅಲ್ಲಾಹನನ್ನು) ಪ್ರಾರ್ಥಿಸುವುದು ಮಾತ್ರ ಸರಿ. ಅವರು ಅವನ ಹೊರತು ಬೇರೆ ಯಾರನ್ನೆಲ್ಲಾ ಪ್ರಾರ್ಥಿಸುತ್ತಾರೋ ಅವರು ಯಾರೂ ಅವರಿಗೆ ಯಾವ ಉತ್ತರವನ್ನೂ ನೀಡುವುದಿಲ್ಲ. (ಅವರ ಅವಸ್ಥೆಯು) ನೀರು ತನ್ನ ಬಾಯಿಗೆ ತಲುಪಬೇಕೆಂದು ನೀರಿನೆಡೆಗೆ ಕೈಚಾಚಿ ನಿಂತವನಂತಿದೆ. ನೀರು ಎಂದೂ ಅವನ ಬಳಿಗೆ ತಲುಪುವುದಿಲ್ಲ. ಧಿಕ್ಕಾರಿಗಳ ಎಲ್ಲ ಪ್ರಾರ್ಥನೆಗಳು ದಿಕ್ಕೆಟ್ಟು ಹೋಗುತ್ತವೆ
ﯨﯩﯪﯫﯬﯭﯮﯯﯰﯱ
ಆಕಾಶಗಳಲ್ಲಿ ಹಾಗೂ ಭೂಮಿಯಲ್ಲಿರುವ ಎಲ್ಲವೂ ಮತ್ತು ಅವುಗಳ ನೆರಳುಗಳೂ ತಮ್ಮಿಚ್ಛೆಯಿಂದ ಅಥವಾ ಅನಿವಾರ್ಯವಾಗಿ ಮುಂಜಾನೆ ಹಾಗೂ ಸಂಜೆ ಅಲ್ಲಾಹನಿಗೆ ಸಾಷ್ಟಾಂಗ ವಂದಿಸುತ್ತಿವೆ
ﯲﯳﯴﯵﯶﯷﯸﯹﯺﯻﯼﯽﯾﯿﰀﰁﰂﰃﰄﰅ
(ದೂತರೇ,) ‘‘ಆಕಾಶಗಳ ಹಾಗೂ ಭೂಮಿಯ ಒಡೆಯನು ಯಾರು? ಎಂದು ಕೇಳಿರಿ. ‘‘ಅಲ್ಲಾಹನು’’ ಎಂದು ಹೇಳಿರಿ. ‘‘ನೀವೇನು ಅವನನ್ನು ಬಿಟ್ಟು, ನಿಮಗೆ ಯಾವುದೇ ಲಾಭವನ್ನಾಗಲಿ ನಷ್ಟವನ್ನಾಗಲಿ ಮಾಡಲಾಗದವರನ್ನು ನಿಮ್ಮ ಪೋಷಕರಾಗಿಸಿಕೊಂಡಿರುವಿರಾ?’’ ಎಂದು ಕೇಳಿರಿ. ‘‘ಕಾಣುವವನು ಮತ್ತು ಕುರುಡನು ಸಮಾನರೇ? ಅಥವಾ ಕತ್ತಲುಗಳು ಮತ್ತು ಬೆಳಕು ಸಮನಾಗಬಲ್ಲವೇ? ಸೃಷ್ಟಿ ಕಾರ್ಯದ ಕುರಿತು (ಯಾವುದನ್ನು ಯಾರು ಸೃಷ್ಟಿಸಿದ್ದೆಂದು) ಅವರಿಗೆ ಗೊಂದಲವಾಗುವುದಕ್ಕೆ, ಅವರು ಅಲ್ಲಾಹನ ಪಾಲುದಾರೆಂದು ನಂಬಿಕೊಂಡಿರುವವರು, ಅವನು ಸೃಷ್ಟಿಸಿದಂತೆ (ಏನನ್ನಾದರೂ) ಸೃಷ್ಟಿಸಿದ್ದಾರೆಯೇ? ಹೇಳಿರಿ; ಅಲ್ಲಾಹನೇ ಎಲ್ಲ ವಸ್ತುಗಳ ಸೃಷ್ಟಿಕರ್ತನು ಮತ್ತು ಅವನು ಅನನ್ಯನೂ ಪ್ರಬಲನೂ ಆಗಿದ್ದಾನೆ
ﭑﭒﭓﭔﭕﭖﭗﭘﭙﭚﭛﭜﭝﭞﭟﭠﭡﭢﭣﭤﭥﭦﭧﭨﭩﭪﭫﭬﭭﭮ
ಅವನು ಆಕಾಶದಿಂದ ನೀರನ್ನು ಸುರಿಸಿದನು. ಅದರಿಂದ ನದಿ ನಾಲೆಗಳು ತಮ್ಮ ಪ್ರಮಾಣಕ್ಕನುಸಾರ ತುಂಬಿ ಹರಿಯತೊಡಗಿದವು. ಈ ವೇಳೆ (ಮೇಲ್ಮಟ್ಟದಲ್ಲಿದ್ದ) ಉಬ್ಬಿದ ನೊರೆಯನ್ನು ಪ್ರವಾಹವು ಒಯ್ದು ಬಿಟ್ಟಿತು. ಜನರು ಆಭರಣಗಳನ್ನು ಅಥವಾ ಇತರ ಸಾಧನಗಳನ್ನು ತಯಾರಿಸಲೆಂದು ಬೆಂಕಿಯಲ್ಲಿ ಕುದಿಸುವ ವಸ್ತುಗಳಲ್ಲೂ ಇಂತಹದೇ ನೊರೆ ಹೊಮ್ಮುತ್ತದೆ. ಇದೇರೀತಿ ಅಲ್ಲಾಹನು ಸತ್ಯ-ಮಿಥ್ಯಗಳನ್ನು ಉದಾಹರಣೆಯೊಂದಿಗೆ ಸ್ಪಷ್ಟ ಪಡಿಸುತ್ತಾನೆ. ನೊರೆಯು ಆರಿ ತೊಲಗಿ ಹೋಗುತ್ತದೆ. ಆದರೆ ಮಾನವರಿಗೆ ಉಪಯುಕ್ತವಾದುದು ಭೂಮಿಯಲ್ಲಿ ಸ್ಥಿರಗೊಳ್ಳುತ್ತದೆ. ಹೀಗೆ ಅಲ್ಲಾಹನು ಉದಾಹರಣೆಗಳನ್ನು ನೀಡುತ್ತಾನೆ
ﭯﭰﭱﭲﭳﭴﭵﭶﭷﭸﭹﭺﭻ
ತಮ್ಮ ಒಡೆಯನ ಆದೇಶ ಪಾಲಿಸಿದವರಿಗೆ ಹಿತವಿದೆ. ಅತ್ತ, ಅವನ ಆದೇಶಗಳನ್ನು ಉಲ್ಲಂಘಿಸಿದವರ ಬಳಿ, ಭೂಮಿಯಲ್ಲಿರುವುದೆಲ್ಲವೂ ಇದ್ದು, ಹೆಚ್ಚುವರಿಯಾಗಿ ಮತ್ತೆ ಅಷ್ಟೇ ಇದ್ದು, ಅದನ್ನೆಲ್ಲಾ ಅವರು ಪರಿಹಾರವಾಗಿ ನೀಡಿದರೂ, ಅವರ ವಿಚಾರಣೆಯ ಫಲಿತಾಂಶವು ತುಂಬಾ ಕೆಟ್ಟದಾಗಿರುವುದು. ನರಕವೇ ಅವರ ನೆಲೆಯಾಗಿರುವುದು ಮತ್ತು ಅದು ತುಂಬಾ ಕೆಟ್ಟ ವಾಸಸ್ಥಾನವಾಗಿದೆ
ﭼﭽﭾﭿﮀﮁﮂﮃﮄﮅﮆﮇﮈﮉﮊﮋﮌﮍﮎﮏﮐﮑﮒﮓﮔﮕﮖﮗﮘﮙﮚﮛﮜﮝﮞﮟﮠﮡﮢﮣﮤﮥﮦﮧﮨﮩﮪﮫﮬﮭ
(ದೂತರೇ,) ನಿಮ್ಮ ಒಡೆಯನ ಕಡೆಯಿಂದ ನಿಮ್ಮ ಬಳಿಗೆ ಸತ್ಯ ಸಂದೇಶವನ್ನು ಇಳಿಸಿಕೊಡಲಾಗಿದೆ ಎಂಬುದನ್ನು ಬಲ್ಲ ವ್ಯಕ್ತಿಯು ಕುರುಡನಂತಾಗಲು ಸಾಧ್ಯವೇ? ನಿಜಕ್ಕೂ ಬುದ್ಧಿಯುಳ್ಳವರು ಮಾತ್ರ ಉಪದೇಶವನ್ನು ಸ್ವೀಕರಿಸುತ್ತಾರೆ
ﮮﮯﮰﮱﯓﯔﯕﯖﯗﯘﯙﯚﯛﯜﯝﯞﯟﯠﯡﯢﯣﯤﯥﯦﯧﯨﯩﯪﯫﯬﯭﯮﯯﯰﯱﯲﯳﯴﯵﯶﯷﯸﯹﯺﯻﯼﯽﯾ
ಅವರು ಅಲ್ಲಾಹನ ಜೊತೆಗಿನ ಕರಾರನ್ನು ಪಾಲಿಸುತ್ತಾರೆ ಹಾಗೂ ಅವರು ಒಪ್ಪಂದವನ್ನು ಮುರಿಯುವುದಿಲ್ಲ
ﯿﰀﰁﰂﰃﰄﰅﰆﰇﰈﰉﰊﰋﰌﰍﰎﰏﰐﰑﰒﰓﰔﰕﰖﰗﰘﰙﰚﰛﰜﰝ
ಅಲ್ಲಾಹನು ರಕ್ಷಿಸಬೇಕೆಂದು ಅದೇಶಿಸಿರುವ ಬಾಂಧವ್ಯಗಳನ್ನು ಅವರು ರಕ್ಷಿಸುತ್ತಾರೆ. ಅವರು ತಮ್ಮ ಒಡೆಯನ ಭಯ ಭಕ್ತಿ ಉಳ್ಳವರಾಗಿರುತ್ತಾರೆ ಮತ್ತು ಭಯಾನಕ ವಿಚಾರಣೆಯ ಕುರಿತು ಭೀತರಾಗಿರುತ್ತಾರೆ
ﭑﭒﭓﭔﭕﭖﭗﭘﭙﭚﭛﭜﭝﭞﭟﭠﭡﭢ
ಇನ್ನು, ತಮ್ಮ ಒಡೆಯನ ಮೆಚ್ಚುಗೆಗಾಗಿ ಸಹನಶೀಲರಾಗಿರುವವರು, ನಮಾಝ್ ಅನ್ನು ಪಾಲಿಸುವವರು, ತಮಗೆ ನಾವು ನೀಡಿರುವ ಸಂಪತ್ತಿನಿಂದ ಗುಟ್ಟಾಗಿಯೂ ಬಹಿರಂಗವಾಗಿಯೂ ಖರ್ಚುಮಾಡುವವರು ಮತ್ತು ಒಳಿತಿನ ಮೂಲಕ ಕೆಡುಕನ್ನು ನಿವಾರಿಸುವವರು – ಅವರಿಗಾಗಿಯೇ ಇದೆ, ಪರಲೋಕದ ಮನೆ
ﭣﭤﭥﭦﭧﭨﭩﭪ
ಅವರು ಶಾಶ್ವತ ತೋಟಗಳನ್ನು ಪ್ರವೇಶಿಸುವರು. ಹಾಗೆಯೇ ಅವರ ತಂದೆ – ತಾತಂದಿರು, ಪತ್ನಿಯರು ಮತ್ತು ಸಂತತಿಗಳ ಪೈಕಿ ಸಜ್ಜನರಾಗಿದ್ದವರು ಮತ್ತು ಮಲಕ್ಗಳು ಎಲ್ಲ ಬಾಗಿಲುಗಳಿಂದ ಅವರ ಬಳಿಗೆ ಬರುವರು
ﭫﭬﭭﭮﭯﭰﭱﭲﭳﭴﭵﭶﭷﭸ
‘‘ನೀವು ತೋರಿದ ಸಹನೆಗಾಗಿ ನಿಮಗೆ ಶಾಂತಿ ಸಿಗಲಿ’’ ಎನ್ನುತ್ತಾ (ಅವರು ಬರುವರು). ಪರಲೋಕದ ಆ ಮನೆಯು ಬಹಳ ಶ್ರೇಷ್ಠವಾಗಿರುವುದು
ﭹﭺﭻﭼﭽﭾﭿﮀﮁﮂﮃﮄﮅﮆﮇﮈﮉﮊﮋﮌ
ಇನ್ನು, ಅಲ್ಲಾಹನ ಜೊತೆಗೆ ಮಾಡಿದ ಕರಾರನ್ನು ಪಕ್ವಗೊಳಿಸಿದ ಬಳಿಕ ಉಲ್ಲಂಘಿಸುವವರು ಹಾಗೂ ಅಲ್ಲಾಹನು ರಕ್ಷಿಸಬೇಕೆಂದು ಆದೇಶಿಸಿರುವ ಬಾಂಧವ್ಯಗಳನ್ನು ಮುರಿಯುವವರು ಮತ್ತು ಭೂಮಿಯಲ್ಲಿ ಅಶಾಂತಿ ಹರಡುವವರು – ಅವರೇ ಶಾಪಕ್ಕೆ ತುತ್ತಾಗುವವರು. ಅವರಿಗೆ ತೀರಾ ಕೆಟ್ಟ ನೆಲೆ ಸಿಗುವುದು
ﮍﮎﮏﮐﮑﮒﮓﮔﮕﮖﮗﮘﮙﮚﮛﮜﮝ
ಅಲ್ಲಾಹನು ತಾನಿಚ್ಛಿಸಿದವರ ಪಾಲಿಗೆ ಆದಾಯವನ್ನು ವಿಸ್ತರಿಸುತ್ತಾನೆ ಮತ್ತು ಸಂಕುಚಿತಗೊಳಿಸುತ್ತಾನೆ. ಅವರು ಈ ಲೋಕದ ಬದುಕಿನಲ್ಲೇ ಸಂತುಷ್ಟರಾಗಿದ್ದಾರೆ. ನಿಜವಾಗಿ, ಪರಲೋಕದೆದುರು ಈ ಲೋಕವು ತೀರಾ ಕ್ಷುಲ್ಲಕ ಸೊತ್ತಾಗಿದೆ
ﮞﮟﮠﮡﮢﮣﮤﮥﮦ
‘‘ಅವನ ಒಡೆಯನ ಕಡೆಯಿಂದ ಅವನಿಗೆ ಯಾವುದೇ ಪುರಾವೆಯು ಇಳಿದು ಬಂದಿಲ್ಲವೇಕೆ?’’ ಎಂದು ಧಿಕ್ಕಾರಿಗಳು ಕೇಳುತ್ತಾರೆ. ಹೇಳಿರಿ; ಖಂಡಿತವಾಗಿಯೂ ಅಲ್ಲಾಹನು, ತಾನಿಚ್ಛಿಸಿದವರನ್ನು ದಾರಿಗೆಡಿಸುತ್ತಾನೆ ಮತ್ತು ಅವನು ತನ್ನ ಕುರಿತು ಒಲವು ಉಳ್ಳವರಿಗೆ ತನ್ನೆಡೆಗಿರುವ ದಾರಿಯನ್ನು ತೋರುತ್ತಾನೆ
ﮧﮨﮩﮪﮫﮬﮭﮮﮯﮰﮱﯓﯔﯕﯖﯗﯘﯙﯚﯛﯜﯝﯞﯟ
ಅವರು ಸತ್ಯದಲ್ಲಿ ನಂಬಿಕೆ ಉಳ್ಳವರಾಗಿರುತ್ತಾರೆ ಮತ್ತು ಅವರ ಮನಸ್ಸುಗಳು ಅಲ್ಲಾಹನ ನೆನಪಿನಲ್ಲಿ ಸಂತೃಪ್ತಿಯನ್ನು ಪಡೆದಿರುತ್ತವೆ. ನಿಮಗೆ ತಿಳಿದಿರಲಿ – ಮನಸ್ಸಿನ ಸಂತೃಪ್ತ್ತಿಯು ಅಲ್ಲಾಹನನ್ನು ನೆನಪಿಸುವುದರಲ್ಲೇ ಇದೆ
ﯠﯡﯢﯣﯤﯥﯦﯧﯨﯩﯪﯫﯬﯭﯮﯯﯰﯱ
ಸತ್ಯದಲ್ಲಿ ನಂಬಿಕೆ ಉಳ್ಳವರು ಮತ್ತು ಸತ್ಕರ್ಮ ಮಾಡುವವರಿಗೆ ಶುಭವಾರ್ತೆ ಇದೆ ಮತ್ತು ಅವರಿಗೆ ಶ್ರೇಷ್ಠ ನೆಲೆ ಸಿಗಲಿವೆ
ﯲﯳﯴﯵﯶﯷﯸﯹﯺﯻﯼﯽﯾﯿﰀﰁﰂﰃﰄﰅﰆ
(ದೂತರೇ,) ಈ ರೀತಿ, ನಾವು ದಿವ್ಯವಾಣಿಯ ಮೂಲಕ ನಿಮ್ಮೆಡೆಗೆ ಕಳುಹಿಸಿದ್ದನ್ನು ನೀವು ಅವರಿಗೆ ಓದಿ ಕೇಳಿಸಬೇಕೆಂದು ನಾವು ನಿಮ್ಮನ್ನು ಒಂದು ಸಮುದಾಯದೆಡೆಗೆ ಕಳಿಸಿರುವೆವು. ಅವರಿಗಿಂತ ಹಿಂದೆ ಹಲವು ಸಮುದಾಯಗಳು ಗತಿಸಿವೆ. ಅವರಂತು ಆ ಪರಮ ದಯಾಳುವನ್ನೇ ಧಿಕ್ಕರಿಸುತ್ತಿದ್ದಾರೆ. ಹೇಳಿರಿ; ಅವನೇ ನನ್ನ ಒಡೆಯನು. ಅವನಲ್ಲದೆ ಬೇರೆ ದೇವರಿಲ್ಲ. ನಾನು ಅವನಲ್ಲೇ ಭರವಸೆ ಇಟ್ಟಿರುವೆನು. ಕೊನೆಗೆ ಅವನೆಡೆಗೇ (ಎಲ್ಲರೂ) ಮರಳಬೇಕಾಗಿದೆ
ﰇﰈﰉﰊﰋﰌﰍﰎﰏﰐﰑﰒﰓ
ಒಂದು ವೇಳೆ ಈ ಕುರ್ಆನ್ನಿಂದಾಗಿ ಪರ್ವತಗಳು ಚಲಿಸಲಾರಂಭಿಸಿದ್ದರೆ, ಭೂಮಿಯು ಛಿದ್ರವಾಗಿದ್ದರೆ, ಅಥವಾ ಶವಗಳು ಮಾತನಾಡತೊಡಗಿದ್ದರೆ – ಆಗಲೂ ಅವರು ನಂಬುತ್ತಿರಲಿಲ್ಲ. ನಿಜವಾಗಿ ಅಧಿಕಾರವೆಲ್ಲವೂ ಅಲ್ಲಾಹನಿಗೇ ಸೇರಿದೆ. ಅಲ್ಲಾಹನು ಬಯಸಿದ್ದರೆ, ಎಲ್ಲ ಮಾನವರನ್ನೂ ಸನ್ಮಾರ್ಗದಲ್ಲಿ ನಡೆಸಿ ಬಿಡುತ್ತಿದ್ದನು ಎಂಬ ಮಾಹಿತಿಯಿಂದ ವಿಶ್ವಾಸಿಗಳಿಗೆ ನೆಮ್ಮದಿಸಿಗಲಿಲ್ಲವೇ? ಧಿಕ್ಕಾರಿಗಳ ಕರ್ಮಗಳ ಫಲವಾಗಿ, ಅಲ್ಲಾಹನ ಮಾತು ಈಡೇರುವ ತನಕ, ಅವರ ಮೇಲೆ ಅಥವಾ ಅವರ ನಿವಾಸಗಳ ಅಕ್ಕ ಪಕ್ಕದಲ್ಲಿ ತೀವ್ರ ವಿಪತ್ತುಗಳು ಎರಗುತ್ತಲೇ ಇರುವವು . ಖಂಡಿತವಾಗಿಯೂ ಅಲ್ಲಾಹನು ತಾನು ಕೊಟ್ಟ ಮಾತನ್ನು ಮೀರುವುದಿಲ್ಲ
ﭑﭒﭓﭔﭕﭖﭗﭘﭙ
(ದೂತರೇ,) ನಿಮಗಿಂತ ಹಿಂದಿನ ದೂತರನ್ನೂ ಗೇಲಿ ಮಾಡಲಾಗಿದೆ. ನಾನು ಧಿಕ್ಕಾರಿಗಳಿಗೆ ಅವಕಾಶ ನೀಡಿದೆನು. ಆ ಬಳಿಕ ಅವರನ್ನು (ಶಿಕ್ಷಿಸಲಿಕ್ಕಾಗಿ) ಹಿಡಿದುಕೊಂಡೆನು. ಹೇಗಿತ್ತು ನನ್ನ ದಂಡನೆ
ﭚﭛﭜﭝﭞﭟﭠﭡﭢﭣﭤﭥﭦﭧﭨﭩﭪﭫﭬﭭﭮﭯﭰﭱﭲﭳﭴﭵﭶﭷ
(ಅವನು) ಪ್ರತಿಯೊಬ್ಬ ಜೀವಿಯು ಏನೆಲ್ಲಾ ಮಾಡುತ್ತಿರುವನೆಂದು ಸದಾ ಮೇಲ್ವಿಚಾರಣೆ ನಡೆಸುತ್ತಿರುವವನು. ಇಷ್ಟಿದ್ದೂ ಅವರು ಅಲ್ಲಾಹನಿಗೆ ಪಾಲುದಾರರನ್ನು ಆರೋಪಿಸುತ್ತಿದ್ದಾರೆ. ಹೇಳಿರಿ; ನೀವು ಅವರ ಹೆಸರುಗಳನ್ನಾದರೂ ತಿಳಿಸಿರಿ. ನೀವೇನು, ಭೂಮಿಯಲ್ಲಿ ಅವನಿಗೆ (ಅಲ್ಲಾಹನಿಗೆ) ತಿಳಿದೇ ಇಲ್ಲದ ವಿಷಯವೊಂದನ್ನು ಅವನಿಗೆ ತಿಳಿಸುತ್ತಿರುವಿರಾ! ಅಥವಾ ನೀವು ಕೇವಲ ಮಾತಿನ ಮಟ್ಟಿಗೆ (ಹಾಗೆ) ಹೇಳುತ್ತಿರುವಿರಾ? ನಿಜವಾಗಿ ಧಿಕ್ಕಾರಿಗಳ ಪಾಲಿಗೆ ಅವರ ವಂಚನೆಯನ್ನು ಚಂದಗಾಣಿಸಿ ಕೊಡಲಾಗಿದೆ ಮತ್ತು ಅವರನ್ನು ಸರಿದಾರಿಯಿಂದ ತಡೆದಿಡಲಾಗಿದೆ. ಯಾರನ್ನು ಅಲ್ಲಾಹನು ದಾರಿಗೆಡಿಸಿದನೋ ಅವರಿಗೆ ದಾರಿ ತೋರಬಲ್ಲವರು ಯಾರೂ ಇಲ್ಲ
ﭸﭹﭺﭻﭼﭽﭾﭿﮀﮁﮂﮃﮄﮅﮆﮇﮈﮉﮊﮋﮌﮍﮎﮏﮐﮑﮒﮓﮔﮕﮖﮗﮘﮙﮚﮛﮜﮝﮞﮟﮠﮡﮢﮣﮤﮥﮦﮧﮨﮩﮪﮫﮬﮭﮮﮯ
ಅವರಿಗೆ ಈಲೋಕದ ಬದುಕಿನಲ್ಲೂ ಶಿಕ್ಷೆ ಇದೆ. ಇನ್ನು ಪರಲೋಕದ ಶಿಕ್ಷೆಯಂತೂ ತುಂಬಾ ಕಠಿಣವಾಗಿರುವುದು ಮತ್ತು ಅವರನ್ನು ಅಲ್ಲಾಹನಿಂದ ರಕ್ಷಿಸ ಬಲ್ಲವರು ಯಾರೂ ಇಲ್ಲ
ﮰﮱﯓﯔﯕﯖﯗﯘﯙﯚﯛﯜﯝﯞﯟ
ಧರ್ಮನಿಷ್ಠರಿಗೆ ವಾಗ್ದಾನ ಮಾಡಲಾಗಿರುವ ಸ್ವರ್ಗದ ಸ್ವರೂಪ (ಹೀಗಿರುವುದು); ಅದರ ತಳದಲ್ಲಿ ನದಿಗಳು ಹರಿಯುತ್ತಿರುವವು. ಅದರ ಫಲಗಳು ಮತ್ತು ಅದರ ನೆರಳು ಶಾಶ್ವತವಾಗಿರುವುದು. ಹೀಗಿರುವುದು, ಧರ್ಮನಿಷ್ಠರ ಅಂತಿಮ ಗತಿ. ಇನ್ನು, (ನರಕದ) ಬೆಂಕಿಯೇ ಧಿಕ್ಕಾರಿಗಳ ಅಂತಿಮ ಗತಿಯಾಗಿರುವುದು
ﯠﯡﯢﯣﯤﯥﯦﯧﯨﯩﯪﯫﯬﯭﯮﯯﯰﯱﯲﯳﯴﯵﯶﯷﯸﯹﯺﯻﯼﯽﯾﯿﰀﰁﰂﰃﰄﰅﰆﰇﰈﰉﰊﰋ
ನಾವು ಯಾರಿಗೆ ಗ್ರಂಥವನ್ನು ನೀಡಿರುವೆವೋ ಅವರು, ನಿಮಗೆ ಇಳಿಸಿಕೊಡಲಾಗಿರುವ ಸಂದೇಶದ ಕುರಿತು ಸಂತೋಷ ಪಡುತ್ತಾರೆ. ಇದರ ಕೆಲವು ಭಾಗಗಳನ್ನು ತಿರಸ್ಕರಿಸುವ ಕೆಲವು ಪಂಗಡಗಳೂ ಇವೆ. ಹೇಳಿರಿ; ನನಗಂತು, ನಾನು ಅಲ್ಲಾಹನನ್ನೇ ಪೂಜಿಸಬೇಕು ಮತ್ತು ಅವನ ಜೊತೆ ಯಾರನ್ನೂ ಪಾಲುಗೊಳಿಸಬಾರದು ಎಂದು ಆದೇಶಿಸಲಾಗಿದೆ. ನಾನು ಅವನ ಕಡೆಗೇ ಆಮಂತ್ರಿಸುತ್ತೇನೆ ಮತ್ತು ನಾನು ಅವನಲ್ಲಿಗೇ ಮರಳಲಿದ್ದೇನೆ
ﰌﰍﰎﰏﰐﰑﰒﰓﰔﰕﰖﰗﰘﰙﰚﰛﰜ
ಇದೇ ರೀತಿ ನಾವು ಈ ಕುರ್ಆನ್ಅನ್ನು ಅರಬೀ ಭಾಷೆಯಲ್ಲಿರುವ ಆದೇಶದ ರೂಪದಲ್ಲಿ ಇಳಿಸಿರುವೆವು. ನಿಮ್ಮ ಬಳಿಗೆ ಜ್ಞಾನವು ಬಂದ ಬಳಿಕವೂ ನೀವು ಅವರ ಅಪೇಕ್ಷೆಗಳನ್ನು ಅನುಸರಿಸಿದರೆ ನಿಮಗೆ ಅಲ್ಲಾಹನೆದುರು ಸಹಾಯಕರಾಗಿ ಮತ್ತು ರಕ್ಷಕರಾಗಿ ಯಾರೂ ಸಿಗಲಾರರು
ﭑﭒﭓﭔﭕﭖﭗﭘﭙﭚﭛﭜﭝﭞﭟﭠﭡﭢﭣﭤﭥﭦﭧﭨﭩ
ನಿಮಗಿಂತ ಹಿಂದೆಯೂ ನಾವು ದೂತರನ್ನು ಕಳಿಸಿದ್ದೆವು ಮತ್ತು ಅವರಿಗೆ ಮಡದಿಯರನ್ನೂ ಮಕ್ಕಳನ್ನೂ ನೀಡಿದ್ದೆವು. ಅಲ್ಲಾಹನ ಅನುಮತಿ ಇಲ್ಲದೆ ಯಾವುದೇ ಪುರಾವೆಯನ್ನು ತರಲು ಯಾವ ದೂತನಿಗೂ ಸಾಧ್ಯವಿಲ್ಲ. ಎಲ್ಲದಕ್ಕೂ ಒಂದು ಕಾಲವು ನಿಶ್ಚಿತವಾಗಿದೆ
ﭪﭫﭬﭭﭮﭯﭰﭱﭲﭳﭴﭵﭶﭷﭸﭹﭺﭻﭼﭽﭾﭿﮀﮁﮂﮃﮄﮅﮆ
ಅಲ್ಲಾಹನು ತಾನಿಚ್ಛಿಸಿದ್ದನ್ನು ಅಳಿಸಿ ಬಿಡುತ್ತಾನೆ ಮತ್ತು (ತಾನಿಚ್ಛಿಸಿದ್ದನ್ನು) ಉಳಿಸುತ್ತಾನೆ. ಗ್ರಂಥಗಳ ಮಾತೆಯು (ಮೂಲ ಗ್ರಂಥವು) ಅವನ ಬಳಿ ಇದೆ
ﮇﮈﮉﮊﮋﮌﮍﮎﮏﮐﮑﮒﮓﮔﮕﮖﮗﮘﮙﮚﮛ
(ದೂತರೇ,) ನಾವು ಅವರಿಗೆ ಮುನ್ನೆಚ್ಚರಿಕೆ ನೀಡುತ್ತಿರುವ ಶಿಕ್ಷೆಯ ಒಂದಂಶವನ್ನು (ನಿಮ್ಮ ಜೀವನಾವಧಿಯಲ್ಲೇ) ನಿಮಗೆ ತೋರಿಸಬಹುದು ಅಥವಾ ನಿಮ್ಮನ್ನು ನಾವು ಮೃತರಾಗಿಸಬಹುದು. ಏನಿದ್ದರೂ ನಿಮ್ಮ ಮೇಲಿರುವುದು (ಸತ್ಯವನ್ನು) ತಲುಪಿಸುವ ಹೊಣೆ ಮಾತ್ರ. ವಿಚಾರಣೆಯ ಹೊಣೆಯು ನಮ್ಮ ಮೇಲಿದೆ
ﮜﮝﮞﮟﮠﮡﮢﮣﮤﮥﮦﮧﮨﮩﮪﮫﮬﮭﮮﮯﮰﮱﯓﯔ
ನಾವು (ಅವರ ಪಾಲಿಗೆ) ಭೂಮಿಯನ್ನು ಅದರ ಎಲ್ಲ ಮೂಲೆಗಳಿಂದಲೂ ಮುದುಡಿಸುತ್ತಿರುವುದನ್ನು ಅವರು ಕಾಣುತ್ತಿಲ್ಲವೇ? ಅಲ್ಲಾಹನು ಆದೇಶಿಸುತ್ತಾನೆ. ಅವನ ಆದೇಶವನ್ನು ಹಿಂದಿಕ್ಕಬಲ್ಲವರು ಯಾರೂ ಇಲ್ಲ. ಅವನು ಬಹಳ ವೇಗವಾಗಿ ವಿಚಾರಣೆ ಮುಗಿಸುತ್ತಾನೆ
ﯕﯖﯗﯘﯙﯚﯛﯜﯝﯞ
ಅವರಿಗಿಂತ ಹಿಂದಿನವರೂ ಯೋಜನೆಗಳನ್ನು ರೂಪಿಸಿದ್ದಾರೆ. ಅಂತಿಮವಾಗಿ ಎಲ್ಲ ಯೋಜನೆಗಳೂ ಅಲ್ಲಾಹನಿಗೇ ಸೇರಿವೆ. ಪ್ರತಿಯೊಬ್ಬರೂ ಏನನ್ನು ಸಂಪಾದಿಸುತ್ತಿದ್ದಾರೆ ಎಂಬುದು ಅವನಿಗೆ ತಿಳಿದಿದೆ. ಪರಲೋಕದ ಸದ್ಗತಿಯು ಯಾರಿಗೆ ಸಿಗುವುದು ಎಂಬುದನ್ನು ಧಿಕ್ಕಾರಿಗಳು ಬೇಗನೇ ತಿಳಿಯುವರು
ﯟﯠﯡﯢﯣﯤﯥﯦﯧﯨﯩﯪﯫﯬ
(ದೂತರೇ,) ನೀವು ದೂತರಲ್ಲ ಎಂದು ಧಿಕ್ಕಾರಿಗಳು ಹೇಳುತ್ತಾರೆ. ಹೇಳಿರಿ; ನನ್ನ ಹಾಗೂ ನಿಮ್ಮ ನಡುವೆ ಸಾಕ್ಷಿಯಾಗಿ ಅಲ್ಲಾಹನು ಸಾಕು ಮತ್ತು ಗ್ರಂಥದ ಜ್ಞಾನ ಉಳ್ಳವನು ಸಾಕು
ﯭﯮﯯﯰﯱﯲﯳﯴﯵﯶﯷﯸﯹﯺﯻﯼﯽﯾﯿ
ಅಲಿಫ್, ಲಾಮ್, ರಾ. (ದೂತರೇ,) ಇದು, ನಿಮಗೆ ನಾವು ಇಳಿಸಿಕೊಟ್ಟಿರುವ ಗ್ರಂಥ. ನೀವು ಮಾನವರನ್ನು ಅವರ ಒಡೆಯನ ಆದೇಶದಂತೆ, ಕತ್ತಲುಗಳಿಂದ ಹೊರತಂದು ಬೆಳಕಿನೆಡೆಗೆ ನಡೆಸಬೇಕೆಂದು (ಹಾಗೂ) ಅತ್ಯಂತ ಪ್ರಬಲನೂ ಹೊಗಳಿಕೆಗೆ ಅರ್ಹನೂ ಆಗಿರುವಾತನ (ಅಲ್ಲಾಹನ) ಮಾರ್ಗದತ್ತ ನಡೆಸಬೇಕೆಂದು (ಇದನ್ನು ಕಳಿಸಲಾಗಿದೆ)
ﰀﰁﰂﰃﰄﰅﰆﰇﰈﰉﰊﰋﰌﰍﰎﰏﰐﰑﰒﰓﰔ
ಆಕಾಶಗಳಲ್ಲಿ ಮತ್ತು ಭೂಮಿಯಲ್ಲಿ ಇರುವ ಎಲ್ಲವೂ ಅಲ್ಲಾಹನಿಗೇ ಸೇರಿದೆ. ಇನ್ನು, ಧಿಕ್ಕಾರಿಗಳಿಗೆ ಕಠೋರ ಶಿಕ್ಷೆಯ ಮೂಲಕ ವಿನಾಶವಿದೆ
ﭑﭒﭓﭔﭕﭖﭗﭘﭙﭚﭛﭜﭝﭞﭟﭠﭡ
ಅವರು ಪರಲೋಕಕ್ಕಿಂತ ಹೆಚ್ಚಾಗಿ ಈ ಲೋಕದ ಬದುಕನ್ನು ಪ್ರೀತಿಸುತ್ತಾರೆ, (ಜನರನ್ನು) ಅಲ್ಲಾಹನ ಮಾರ್ಗದಿಂದ ತಡೆಯುತ್ತಾರೆ ಮತ್ತು ಅದರಲ್ಲಿ ವಕ್ರತೆಯನ್ನು ಹುಡುಕುತ್ತಿರುತ್ತಾರೆ. ಅವರು ದುರ್ಮಾರ್ಗದಲ್ಲಿ ಬಹುದೂರ ಸಾಗಿಬಿಟ್ಟಿದ್ದಾರೆ
ಪವಿತ್ರ ಕುರಾನ್
Tuesday, August 18, 2026
Don't forget us in your sincere prayers







